ಮೈಸೂರು: ಡೆಂಗ್ಯೂ ಕಾಯಿಲೆ ದೂರದ ಕುಕ್ಕರಳ್ಳಿ ಕೆರೆಯಲ್ಲೋ, ನೀರಿನಲ್ಲೋ ಉದ್ಭವ ವಾಗುವುದಿಲ್ಲ. ಅದು ನಮ್ಮ ನಡುವೆಯೇ ಹರಡುತ್ತದೆ. ಹಾಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ಮೈಸೂರು ವಿವಿ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಎಂ.ಎಸ್ ಬಸವರಾಜು ಹೇಳಿದರು. ಕರ್ನಾಟಕ ಕಿಡ್ನಿ ಹೆಲ್ತ್ ಫೌಂಡೇಷನ್ ಟ್ರಸ್ಟ್, ಮಹಾ ಜನ ಪ್ರಥಮ ದರ್ಜೆ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಲಿಂಗ, ಸಂಸ್ಕøತಿ, ಸಾರ್ವಜನಿಕರ ಆರೋಗ್ಯ -ಉದಯೋನ್ಮುಖ ದೃಷ್ಟಿಕೋನಗಳು’ ಎಂಬ ವಿಷಯದ ಎರಡು ದಿನಗಳÀ ಕಾರ್ಯಾಗಾರವನ್ನು…
ಸಿದ್ದಾರ್ಥ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷರಾಗಿ ಎಂ.ಸುರೇಶ್ಗೌಡ
February 12, 2019ಮೈಸೂರು: ಮೈಸೂರಿನ ಸಿದ್ದಾರ್ಥ ಸ್ಪೋಟ್ರ್ಸ್ ಕ್ಲಬ್ನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಎಂ.ಸುರೇಶ್ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಉಪಾಧ್ಯಕ್ಷರಾಗಿ ಆರ್.ಈರಣ್ಣ, ಗೌರವ ಕಾರ್ಯದರ್ಶಿ ಯಾಗಿ ಎಸ್.ನಾಗರಾಜು(ಬುಲೆಟ್), ಜಂಟಿ ಕಾರ್ಯದರ್ಶಿಯಾಗಿ ಎಸ್. ನಾಗರಾಜು (ಸಕ್ಕರೆ), ಖಜಾಂಚಿಯಾಗಿ ಹೆಚ್.ಎಸ್.ಪುಟ್ಟಸ್ವಾಮಿ ಚುನಾಯಿತ ರಾಗಿದ್ದಾರೆ. ನಿರ್ದೇಶಕರಾಗಿ ವಿ.ವೆಂಕ ಟೇಶ್, ಬಿ.ಎಸ್.ಅಶೋಕ್, ಎಂ.ಆರ್. ನಾಗರಾಜು(ಅಕ್ಕಿ), ಎನ್.ಜೆ.ನಾಗ ರಾಜು(ಲಾವಣ್ಯ), ಡಾ.ರಾಮಚಂದ್ರ, ಇ.ಎಸ್.ಷಡಕ್ಷರಿ ಚುನಾಯಿತರಾಗಿದ್ದಾರೆ ಎಂದು ಕ್ಲಬ್ನ ವ್ಯವಸ್ಥಾಪಕ ಡಿ.ಕೆ. ವಿನಯ್ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಸಿಎಂ ಕೆಲವರ `ಪಂಚಿಂಗ್ ಬ್ಯಾಗ್’ ಆಗಿದ್ದಾರೆ
February 11, 2019ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಹುಬ್ಬಳ್ಳಿಯಲ್ಲಿ ಇಂದು ಲೋಕಸಭಾ ಚುನಾವಣೆ ಪಾಂಚಜನ್ಯ ಮೊಳಗಿದ್ದು, ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು `ಪಂಚಿಂಗ್ ಬ್ಯಾಗ್’ ಎಂದು ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯ ಕೆಎಲ್ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಇಂದು ಸಂಜೆ ನಡೆದ ಬಿಜೆಪಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತ ನಾಡಿದ ಅವರು, ತಮ್ಮ 25 ನಿಮಿಷಗಳ ಭಾಷಣ ದಲ್ಲಿ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಹರಿಯಾ ಯ್ದರು. ಕರ್ನಾಟಕ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾರ್ಯಾರದೋ ಪಂಚಿಂಗ್ ಬ್ಯಾಗ್ ಆಗಿದ್ದಾರೆ. ಅವರಿಗೆ ಪ್ರತೀ…
ಮೈಸೂರಲ್ಲಿ ಧಾರಾಕಾರ ಮಳೆ
February 11, 2019ಮೈಸೂರು: ಭಾನುವಾರ ರಾತ್ರಿ ದಿಢೀರ್ ಸುರಿದ ಗುಡುಗು, ಗಾಳಿ ಸಹಿತ ಭಾರೀ ಮಳೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಜನಜೀವನ ಅಸ್ತವ್ಯಸ್ತ ಗೊಂಡು, ವಾಹನ ಸವಾರರ ಓಡಾಟಕ್ಕೆ ತೀವ್ರ ತೊಂದರೆಯಾಯಿತು. ವರ್ಷಾರಂಭದಲ್ಲಿ ಸುರಿದ ಮೊದಲ ಅಕಾಲಿಕ ಮಳೆಯಾಗಿರುವುದು ವಿಶೇಷ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಮಳೆಯಾಗಿದೆ. ಆದರೆ, ಮೈಸೂರು ನಗರದ ಅರಮನೆ ಸುತ್ತಮುತ್ತ, ಕೆ.ಆರ್. ವೃತ್ತ, ಅಗ್ರಹಾರ, ವಿದ್ಯಾರಣ್ಯಪುರಂ, ರಾಮಕೃಷ್ಣ ನಗರ, ಶಾರದಾದೇವಿ ನಗರ, ಬೋಗಾದಿ 2ನೇ ಹಂತ, ರಾಜೀವ್ ನಗರ, ರಮಾಬಾಯಿ ನಗರ,…
ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ
February 11, 2019ಮೈಸೂರು:ಮೈಸೂರು ವಿಶ್ವವಿದ್ಯಾ ನಿಲಯ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಆರಂಭವಾದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿ ಆಯೋಜಿಸಲಾಗಿದ್ದ `ಶೈಕ್ಷಣಿಕ ಉತ್ಸವ’ಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪ ಡಿಸಲಾಗಿದ್ದ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಭಾನುವಾರ ಅದ್ಧೂರಿ ತೆರೆಬಿದ್ದಿತು. ಮೈಸೂರು ಹಾಗೂ ಸುತ್ತಮುತ್ತಲಿನ ಹಲವಾರು ಶಿಕ್ಷಣ ಸಂಸ್ಥೆಗಳ ಮಳಿಗೆ ಯಲ್ಲಿ ಶಿಶುವಿಹಾರದಿಂದ ಸ್ನಾತಕೋತ್ತರ ಪದವಿ ಉನ್ನತ ಶಿಕ್ಷಣ(ಕೆಜಿ-ಪಿಜಿ)ದವರೆಗೂ ಭರಪೂರ ಶೈಕ್ಷಣಿಕ ಮಾಹಿತಿ ನೀಡಲಾಯಿತು. ಶಿಕ್ಷಣ ಸಂಸ್ಥೆಗಳಲ್ಲಿರುವ ಸೌಲಭ್ಯ, ಕೋರ್ಸ್ಗಳು,…
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗಾಗಿ ಎಐಸಿಸಿ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹ
February 11, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗಾಗಿ ಎಐಸಿಸಿ ಉಸ್ತು ವಾರಿಗಳು ಇಂದು ಮೈಸೂರಿನ ರೈಲ್ವೆ ನಿಲ್ದಾಣ ಬಳಿ ಇರುವ ಕಾಂಗ್ರೆಸ್ ಕಚೇರಿ ಯಲ್ಲಿ ಅಭಿಪ್ರಾಯ ಸಂಗ್ರಹಿಸಿದರು. ಲೋಕಸಭಾ ಚುನಾವಣೆಯ ಕರ್ನಾ ಟಕ ಉಸ್ತುವಾರಿಗಳಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಣಿಕ್ ಠಾಕೂರ್ ಮತ್ತು ಕಾರ್ಯದರ್ಶಿ ವಿಶ್ವನಾಥನ್ ಅವರುಗಳು ಇಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷದ ಎಲ್ಲಾ ಘಟಕ ಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಮುಖಂ ಡರ ಸಭೆ ಕರೆದು ಅಭ್ಯರ್ಥಿ…
8 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ
February 11, 2019ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಜಿಲ್ಲೆಯ ವಿವಿಧೆಡೆ 8.06 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿದರು. ಮೈಸೂರು ತಾಲೂಕಿನ ಶ್ರೀರಾಂಪುರ ರಿಂಗ್ರಸ್ತೆ ಬಳಿ ಕೊಟಗೇರಿ-ಬಾವಲಿ ಹೆದ್ದಾರಿ 33ರ ಸಂಪರ್ಕ ರಸ್ತೆ 192.90 ಕಿ.ಮೀ.ನಿಂದ 195ರವರೆಗೆ 4.60 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 125 ಲಕ್ಷ ರೂ. ವೆಚ್ಚದಲ್ಲಿ ಮಹದೇವಪುರ ಗ್ರಾಮ ದಿಂದ ಮಾನಂದವಾಡಿ ರಸ್ತೆ ಮೂಲಕ ಶ್ರೀರಾಂಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿ, 176 ಲಕ್ಷ…
ಕನಿಷ್ಠ ವೇತನ ಜಾರಿಗೆ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಆಗ್ರಹ
February 11, 2019ಮೈಸೂರು: ದುಡಿ ತಕ್ಕೆ ತಕ್ಕಂತೆ ಇಲ್ಲದ ಗೌರವಧನವನ್ನು ರದ್ದು ಗೊಳಿಸಿ, ಕನಿಷ್ಟ ವೇತನ ಮಾಸಿಕ ರೂ. 21,000 ನೀಡಬೇಕು. ಅಕ್ಷರ ದಾಸೋಹ ಯೋಜನೆಯ ಕಾರ್ಯಕರ್ತೆಯರಾದ ಅಡುಗೆಯವರು ಮತ್ತು ಸಹಾಯಕರನ್ನು ಖಾಯಂಗೊಳಿಸಬೇಕು. ಅಲ್ಲಿಯವರೆಗೆ ಇಂಡಿಯನ್ ಲೇಬರ್ ಆರ್ಗನೈಸೇಷನ್ ನಿಗದಿಪಡಿಸಿದ ಕನಿಷ್ಟ ವೇತನದಂತೆ ಜೀವನ ಯೋಗ್ಯ ವೇತನ ಜಾರಿ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಷ್ಟು ಅಡುಗೆ ತಯಾರಕರು ಮತ್ತು ಸಹಾಯಕರನ್ನು ನೇಮಕ ಮಾಡಬೇಕು. ಅಡುಗೆ ತಯಾರಕರು ಮತ್ತು ಸಹಾಯಕರಿಗೆ ಸಾಮಾಜಿಕ ಭದ್ರತೆಯೊಂ ದಿಗೆ ಆರೋಗ್ಯ ರಕ್ಷಣೆ,…
ಜಯದೇವ ಹೃದ್ರೋಗ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿದೆ
February 11, 2019ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಎಲ್ಲಾ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಸಿಬ್ಬಂದಿ ಸೌಲಭ್ಯದ ಯಾವುದೇ ಕೊರತೆ ಇಲ್ಲ ಎಂದು ಜಯ ದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಯದೇವ ಆಸ್ಪತ್ರೆ ಕಳೆದ 10 ವರ್ಷಗಳಲ್ಲಿ ಶೇ.500 ರಷ್ಟು ಪ್ರಗತಿ ಸಾಧಿಸಿದ್ದು, ಹೃದ್ರೋಗ ಕ್ಷೇತ್ರದಲ್ಲಿ ಭಾರತದ ಭೂಪಟದಲ್ಲಿ ಮೊದಲನೇ ಸ್ಥಾನದಲ್ಲಿದೆ. ಜಯದೇವ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಹಾಗೂ ಸಿಬ್ಬಂದಿ…
ಸ್ವಚ್ಛ ದಂತ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಉಚಿತ ದಂತ ಚಿಕಿತ್ಸೆ
February 11, 2019ಮೈಸೂರು: ಸ್ವಚ್ಛ ದಂತ ಅಭಿಯಾನದಡಿ ಮೈಸೂರಿನ ಕುಕ್ಕರ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಯಿತು. ಮೈಸೂರಿನ ಅನಿ ಫೌಂಡೇಷನ್, ಮೈಸೂರು ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ದಂತ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸ್ವಚ್ಛ ದಂತ ಅಭಿಯಾನ ಹಮ್ಮಿಕೊಂಡಿತ್ತು. ಅನಿ ಫೌಂಡೇಷನ್ ಮುಖ್ಯಸ್ಥೆ ದಂತ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ಎನ್.ಅನುಶ್ರೀ, ದಂತ ವೈದ್ಯರೊಂದಿಗೆ ಎಲ್ಲಾ ತರಗತಿಗಳಿಗೆ ತೆರಳಿ ಹಲ್ಲು ಉಜ್ಜುವ ವಿಧಾನ, ಸಂರಕ್ಷಣೆ, ಬಳಸುವ ಪೇಸ್ಟ್…










