ಮೈಸೂರು: ಪ್ರಥಮ ಸ್ವಚ್ಛನಗರಿ ಎಂಬ ಬಿರುದನ್ನು ಮತ್ತೆ ಪಡೆಯಲು ಹವಣಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆಯು, ನಾಗರಿಕರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಇದೀಗ ಎಲ್ಇಡಿ ಡಿಸ್ಪ್ಲೇ ಬೋರ್ಡ್ಗಳಿಗೆ ಮೊರೆ ಹೋಗಿದೆ. ಎಲೆಕ್ಟ್ರಾನಿಕ್ ಎಲ್ಇಡಿ ವೀಡಿಯೋ ವಾಲ್ (ಎಲ್ಇಡಿ ಡಿಸ್ಪ್ಲೇ ಬೋರ್ಡ್) ಗಳ ಮೂಲಕ ಸ್ವಚ್ಛತೆ ಕಾಪಾಡುವ ಬಗ್ಗೆ ದೃಶ್ಯಗಳನ್ನು ಪ್ರದರ್ಶಿಸಿ ಜನರಿಗೆ ಮನವರಿಕೆ ಮಾಡಲು ನಗರ ಪಾಲಿ ಕೆಯು ಪ್ರಯತ್ನಿಸುತ್ತಿದೆ. ಕೆಆರ್ಎಸ್ ರಸ್ತೆಯ ಒಂಟಿ ಕೊಪ್ಪಲು ಸರ್ಕಲ್, ರೈಲು ನಿಲ್ದಾಣ ಬಳಿ ಜಗಜೀವನ ರಾಮ್ ಸರ್ಕಲ್, ರಾಮಸ್ವಾಮಿ…
ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡದಿದ್ದರೆ ಬಜೆಟ್ ಅಧಿವೇಶನ ನಡೆಯಲು ಬಿಡಲ್ಲ
January 24, 2019ಬೆಂಗಳೂರು: ವಿಧಾನಸೌಧದಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ಪಡೆಯದಿದ್ದರೆ, ಬಜೆಟ್ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿರುವುದು ದಾಖಲೆ ಸಹಿತ ಸಿಕ್ಕಿಬಿದ್ದಿದ್ದರೂ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದರು. ಕಾಣದ ಕೈಗಳು ಸಚಿವರ ರಕ್ಷಣೆಗೆ ಮುಂದಾಗಿವೆ. ಇದಕ್ಕೆ ಮುಖ್ಯಮಂತ್ರಿ ಎಚ್.ಡಿ….
ಫೆ.17ರಿಂದ ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಕುಂಭಮೇಳ
January 24, 2019ಮೈಸೂರು: ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 17 ರಿಂದ ಮೂರು ದಿನ ನಡೆಯುವ ಕುಂಭಮೇಳ ಕಾರ್ಯಕ್ರಮವನ್ನು ಉತ್ತರಪ್ರದೇಶ ಪ್ರಯಾಗ್ ರಾಜ್ನಲ್ಲಿ ನಡೆಯುವ ಕುಂಭಮೇಳ ಮಾದರಿ ಅದ್ಧೂರಿಯಾಗಿ ಆಚರಿಸಿ, ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಕುಂಭಮೇಳ ಕುರಿತು ಬುಧವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಕಾವೇರಿ, ಕಪಿಲಾ, ಸ್ಫಟಿಕ ಸರೋ ವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ…
ಗ್ರಾಮೀಣಾಭಿವೃದ್ಧಿಗೆ ಕೇಂದ್ರದ ಅನುದಾನ ಸರಿಯಾದ ಸಮಯಕ್ಕೆ ದೊರೆಯುತ್ತಿಲ್ಲ
January 24, 2019ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕೇಂದ್ರ ಸರ್ಕಾರ ನೀಡ ಬೇಕಿರುವ ಅನುದಾನವನ್ನು ಸರಿಯಾದ ವೇಳೆಗೆ ಬಿಡುಗಡೆ ಮಾಡುತ್ತಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ದೂರಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಬುಧವಾರ ನಡೆದ ಜಿಪಂ ಸಿಇಓ ಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ದಿಂದ ಕುಡಿಯುವ ನೀರು ಪೂರೈಕೆ ಮತ್ತು ನರೇಗಾ ಯೋಜನೆಯಡಿ ಸಾಕಷ್ಟು ಅನುದಾನ ಬರಬೇಕಿದೆ. ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ಶೇ.75:25 ಅನುಪಾತದಡಿ ಅನು…
ಮೂಗೂರಿನಲ್ಲಿ ವಿಜೃಂಭಣೆಯ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ
January 24, 2019ಮೂಗೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಸುಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದಿವ್ಯ ಮಹಾಬ್ರಹ್ಮ ರಥೋತ್ಸವ ಹಾಗೂ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಮಂಗಳವಾರ ಸಂಜೆ 7 ಗಂಟೆಗೆ ದೇವಾಲಯದ ಆವರಣದಲ್ಲಿ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ಹೂವಿನ ಪಲ್ಲಕ್ಕಿಯಲ್ಲಿ ಶ್ರೀ ತ್ರಿಪುರ ಸುಂದರಿ ಅಮ್ಮನವರ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯ ಮೇಳ, ವೀರಗಾಸೆ ಹಾಗೂ ಡೊಳ್ಳುಕುಣಿತದೊಂದಿಗೆ ಹೊರಟ ಮೆರವಣಿಗೆ ಮಾಡಲಾಯಿತು. ರಥ ಬೀದಿ, ಬಂಡಿ ಬೀದಿ…
ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಸ್ಪಂದಿಸಿ
January 23, 2019ಮೈಸೂರು: ಬೇಸಿಗೆ ಆರಂಭವಾಗಿರುವುದರಿಂದ ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಸ್ಪಂದಿಸ ಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇ ಗೌಡ ಅವರು ಇಲಾಖೆ ಅಧಿಕಾರಿಗಳಿಗೆ ಇಂದಿಲ್ಲಿ ತಾಕೀತು ಮಾಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳೊಂದಿ ಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ರಾಜ್ಯ ದಲ್ಲಿ ಗ್ರಾಮೀಣ ಭಾಗದ ಜನರು…
ಸುಭಾಷ್ ಚಂದ್ರ ಬೋಸರ ವಿಚಾರಧಾರೆ ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕಿಲ್ಲ ಭವಿಷ್ಯ
January 23, 2019ಮೈಸೂರು: ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರಧಾರೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೃಷ್ಣ ಅಭಿಪ್ರಾಯಪಟ್ಟರು. ಮೈಸೂರು ಮಾನಸಗಂಗೋತ್ರಿಯ ಮೈಸೂರು ವಿವಿ ಗ್ರಂಥಾಲಯದಲ್ಲಿ ಮೈಸೂರು ವಿವಿ, ನೇತಾಜಿ ಜನ್ಮ ಶತ ಮಾನೋತ್ಸವ ಸಮಿತಿ ಜಂಟಿ ಆಶ್ರಯ ದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 122ನೇ ಜನ್ಮ ಶತಾಬ್ಧಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಭಾಷ್ ಚಂದ್ರ ಬೋಸ್ ಅವರು ಯುವ ಜನರ…
ಮೈಸೂರು ಸಂಚಾರ ಠಾಣೆ ಪೊಲೀಸರಿಂದ ಆಟೋರಿಕ್ಷಾ ತಪಾಸಣೆ ಅಭಿಯಾನ
January 23, 2019ಮೈಸೂರು: ಅನುಚಿತ ವರ್ತನೆ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ, ಕರೆದಲ್ಲಿಗೆ ಬರದಿರುವ ಹಾಗೂ ಸಂಚಾರ ನಿಯಮ ಉಲ್ಲಂಘಿಸುವ ಆಟೋ ರಿಕ್ಷಾ ಚಾಲಕರಿಗೆ ಪಾಠ ಕಲಿಸಲು ಮುಂದಾಗಿರುವ ನಗರ ಸಂಚಾರ ಪೊಲೀಸರು ಬುಧವಾರ ಮೈಸೂರಿನಲ್ಲಿ ವಿಶೇಷ ಅಭಿಯಾನ ಕೈಗೊಂಡು ನೂರಾರು ಆಟೋರಿಕ್ಷಾಗಳ ತಪಾಸಣೆ ನಡೆಸಿ, ನಿಯಮ ಉಲ್ಲಂಘಿಸಿದ ಚಾಲಕರಿಂದ ದಂಡ ವಸೂಲಿ ಮಾಡಿದರು. ಸಾರ್ವಜನಿಕ ವಲಯದಿಂದ ಹಲವಾರು ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲೆಡೆ ಸಂಚಾರ ಪೊಲೀಸರು ಏಕಕಾಲಕ್ಕೆ ಅಭಿಯಾನ ಆರಂಭಿಸಿ, ಆಟೋ ರಿಕ್ಷಾಗಳನ್ನು ತಪಾಸಣೆ ಮಾಡಿದರು. ಈ…
ಮೂರು ವಾರ್ಡ್ಗಳಲ್ಲಿ 95 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಮದಾಸ್ ಚಾಲನೆ
January 23, 2019ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಬುಧವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ಮೂರು ವಾರ್ಡ್ಗಳಲ್ಲಿ ಒಟ್ಟು 95 ಲಕ್ಷ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 52ನೇ ವಾರ್ಡ್ನಲ್ಲಿ ಜೆ.ಸಿ.ನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದ ರಸ್ತೆಗಳಿಗೆ 45 ಲಕ್ಷ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿ, 51ನೇ ವಾರ್ಡ್ ಎಂ.ಜಿ.ರಸ್ತೆಯಲ್ಲಿ 5.5 ಲಕ್ಷ ರೂ. ವೆಚ್ಚದಲ್ಲಿ ಜೆಎಸ್ಎಸ್ ಆಸ್ಪತ್ರೆ ಬಳಿ ಎಲೆತೋಟದ ಹತ್ತಿರ ಚರಂಡಿ ನಿರ್ಮಾಣ ಮತ್ತು 62ನೇ ವಾರ್ಡ್ನಲ್ಲಿ ಜೆ.ಪಿ.ನಗರ ಕಂದಾಯ ಕಾಲೋನಿಯಲ್ಲಿ…
ಕೆರೆ ಒತ್ತುವರಿ: 25 ಎಕರೆ ತೆರವು
January 23, 2019ಮೈಸೂರು: ಸರ್ಕಾರಿ ಭೂಮಿ ಹಾಗೂ ಕೆರೆ ಒತ್ತುವರಿ ವಿರುದ್ಧ ಜಿಲ್ಲಾಡಳಿತ ಸಮರ ಮುಂದುವರೆಸಿದ್ದು, ಬುಧವಾರ ಮೈಸೂರು ತಾಲೂಕು ಜಯ ಪುರ ಹೋಬಳಿ ಮದ್ದೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ವಡವನ ಕಟ್ಟೆಯ ಒತ್ತುವರಿ ತೆರವು ಗೊಳಿಸಿ, ಕೆರೆ ಭೂಮಿಯನ್ನು ರಕ್ಷಿಸಿದರು. ಮೈಸೂರು ತಹಶೀಲ್ದಾರ್ ಟಿ.ರಮೇಶ್ ಬಾಬು ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಾ ಚರಣೆ ನಡೆಸಿ, ವಡವನ ಕಟ್ಟೆಗೆ ಸೇರಿದ ಭೂಮಿಯನ್ನು 15 ಮಂದಿ ರೈತರು ಒತ್ತು ವರಿ ಮಾಡಿಕೊಂಡಿದ್ದ 25 ಎಕರೆ ಕೆರೆ…










