ಮೈಸೂರು: ಮೈಸೂ ರಿನ ಹಲವು ಸಂಘ-ಸಂಸ್ಥೆಗಳು ಇಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಗೌರವ ಪೂರ್ವಕವಾಗಿ ಆಚರಿಸಿದರೆ, ನಗರದ ಎನ್ಟಿಎಂಎಸ್ ಶಾಲಾ ಆವ ರಣದಲ್ಲಿರುವ ವಿವೇಕಾನಂದರು ತಂಗಿದ್ದ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮ ಇಲ್ಲ. ದೇಶದಾದ್ಯಂತ ಸ್ವಾಮಿ ವಿವೇಕಾನಂದ ಜನ್ಮ ದಿನವನ್ನು ಇಂದು ಯುವ ಜನರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಎಲ್ಲೆಡೆ ವಿವೇಕಾನಂದರಿಗೆ ಗೌರವ ಸಲ್ಲಿಸಲಾಗಿದೆ. ವಿವೇಕಾನಂದರು ಒಮ್ಮೆ ಮೈಸೂರಿಗೆ ಬಂದು ಎನ್ಟಿಎಂಎಸ್ ಶಾಲೆಗೆ ಹೊಂದಿ ಕೊಂಡಂತಿರುವ ನಿರಂಜನ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿ ವಿವೇಕ ಸ್ಮಾರಕ ನಿರ್ಮಿಸಲುದ್ದೇಶಿ…
ಗುಡಿ-ಗೋಪುರ ಕಟ್ಟುವುದಕ್ಕಿಂತ ಬಡ ಪ್ರತಿಭೆಗಳ ಗೌರವಿಸುವುದು ಉತ್ತಮ ಕಾರ್ಯ
January 13, 2019ಮೈಸೂರು: ಗುಡಿ-ಗೋಪುರ ಕಟ್ಟಿಸುವುದಕ್ಕಿಂತ ಬಡತನದಲ್ಲಿ ಸಾಧನೆಗೈದ ಪ್ರತಿಭೆಗಳನ್ನು ಗೌರವಿಸು ವುದೇ ಉತ್ತಮ ಕಾರ್ಯ ಎಂದು ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಕದಂಬ ರಂಗ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯುವ ವಿಜ್ಞಾನಿ ಡ್ರೋನ್ ಪ್ರತಾಪ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಬಡ ಕುಟುಂಬದಲ್ಲಿ ಜನಿಸಿ ಸಾಧನೆಗೈದ ಪ್ರತಿಭೆಗಳನ್ನು ಗೌರವಿಸುವುದು ಸರ್ಕಾರ ಹಾಗೂ ಸಮಾಜದ ಆದ್ಯ ಕರ್ತವ್ಯ ಎಂದು ತಿಳಿಸಿದರು. ಪ್ರತಾಪ್ ಒಬ್ಬ ಯುವ ವಿಜ್ಞಾನಿಯಾಗಿ ರಾಜ್ಯ…
ಹುಣಸೂರು ಆಸ್ಪತ್ರೆ ಅವ್ಯವಸ್ಥೆಗಳ ಮಹಾಕೂಪ: ಜಿಪಂ ಪ್ರಭಾರ ಅಧ್ಯಕ್ಷ ಕೋಪ
January 13, 2019ಅಧಿಕಾರ ಸ್ವೀಕರಿಸಿದ ಬಳಿಕ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ, ಹಾಸ್ಟೆಲ್ ಪರಿಶೀಲನೆ ಹುಣಸೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಹಾಸ್ಟೆಲ್ಗಳಿಗೆ ದಿಢೀರ್ ಭೇಟಿ ನೀಡಿದ ಜಿಪಂ ಪ್ರಭಾರ ಅಧ್ಯಕ್ಷ ಸಾ.ರಾ.ನಂದೀಶ್ ಅಲ್ಲಿನ ಅವ್ಯವಸ್ಥೆ ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಗುರುವಾರ ರಾತ್ರಿ ಸಾ.ರಾ.ನಂದೀಶ್, ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ದರ್ಶನ ಮಾಡಿಸಿದರು. ಬಳಿಕ ಗಿರಿಜನ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ನ…
ಸರಗೂರಲ್ಲಿ ರಾಗಿ ಮೆದೆಗೆ ಬೆಂಕಿ: ಒಂದು ಮೆದೆ ಭಸ್ಮ
January 13, 2019ಸರಗೂರು: ಸರಗೂರು ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಗಿ ಮೆದೆಯೊಂದು ಬೆಂಕಿಯಲ್ಲಿ ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು, ಅಂಬೇಡ್ಕರ್ ಯುವಕ ಸಂಘದವರು ಹಾಗೂ ಆಟೋ ಚಾಲಕರು ನೀರು ಸುರಿದು ಬೆಂಕಿ ಆರಿಸಲು ಯತ್ನಿಸಿದರು. ಬೆಂಕಿ ಮತ್ತಷ್ಟು ಹೆಚ್ಚಾದ ಕಾರಣ ಅಗ್ನಿಶಾಮಕದಳದವರಿಗೆ ಕರೆ ಮಾಡಿದರು. ಆಗ್ನಿಶಾಮಕ ದಳದ ಸಿಬ್ಬಂದಿ ಬರುವ ವೇಳೆಗಾಗಲೇ ಎರಡು ರಾಗಿ ಮೆದೆಗಳಲ್ಲಿ ಒಂದು ಮೆದೆ ಪೂರ್ಣ ಸುಟ್ಟು ಹೋಗಿದೆ. ಘಟನೆ ಅಕಸ್ಮಿಕವೋ ಅಥವಾ ಕಿಡಿಗೇಡಿನ ಕೃತ್ಯವೋ ಎಂಬುದು ಇನ್ನಷ್ಟೇತಿಳಿಯಬೇಕಾಗಿದೆ. ವಿವರ:…
ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ, ಮೂವರ ಸೆರೆ
January 13, 2019ಮೈಸೂರು: ಸ್ಪಾವೊಂದರ ಮೇಲೆ ಶುಕ್ರವಾರ ದಾಳಿ ನಡೆಸಿದ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ ಕೊಲ್ಕತ್ತಾ ಮೂಲದ ಇಬ್ಬರು ಮಹಿಳೆಯ ರನ್ನು ರಕ್ಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಯಡತಾಳು ಗ್ರಾಮದ ಎಂ.ಡಿ. ರಘುನಂದ, ಬೆಂಗಳೂರಿನ ಮೂಡ್ಲು ಪಾಳ್ಯದ ಗೋವಿಂದ ಹಾಗೂ ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ಗ್ರಾಮದ ಮಧುಕುಮಾರ್ ಬಂಧಿತರು. ಮೈಸೂರಿನ ಲಷ್ಕರ್ ಠಾಣಾ ವ್ಯಾಪ್ತಿಯ ಹೋಟೆಲ್ ಮೈಸೂರು ಕಾಂಪ್ಲೆಕ್ಸ್ ಕಟ್ಟಡದ ಸ್ಪಾವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಬಾಡಿ ಮಸಾಜ್ ಮಾಡುವ ನೆಪದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದುದು…
ಸೀತೆ ಆಹಾರ ಕ್ರಮದ ಬಗ್ಗೆ ವಿವಾದಿತ ಹೇಳಿಕೆ: ಕಲೈ ಸೆಲ್ವಿ ವಿರುದ್ಧ ಪೊಲೀಸರಿಗೆ ದೂರು
January 13, 2019ಮೈಸೂರು: ಶ್ರೀರಾಮನ ಕುರಿತು ವಿವಾದಿತ ಹೇಳಿಕೆಗಳ ಬೆನ್ನಲ್ಲೇ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಪೆರಿಯಾರ್ ಚಿಂತಕಿ ಕಲೈ ಸೆಲ್ವಿ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸೀತೆ ಬಗ್ಗೆ ನಿಂಧನಾತ್ಮಕ ಹೇಳಿಕೆ ನೀಡುವ ಮೂಲಕ ಬಹುಜನರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮಸೇನೆ ಮೈಸೂರು ನಗರ ಘಟಕದ ಅಧ್ಯಕ್ಷ ಎಂ. ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ. ನಗರದ ಕಲಾಮಂದಿದರ ಕಿರು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಕಲೈ ಸೆಲ್ವಿ ಭಾಗವಹಿಸಿ,…
ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ
January 12, 2019ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ವರ್ತನೆಯಿಂದ ತೀವ್ರ ಬೇಸರಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲು ಸಿದ್ಧ ವಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ನಂತರ ಕಾಂಗ್ರೆಸ್ ಶಾಸಕರು ನಡೆದುಕೊಳ್ಳುತ್ತಿರುವ ರೀತಿ, ಬಹಿರಂಗ ಹೇಳಿಕೆಗಳು ಮುಖ್ಯಮಂತ್ರಿ ಅವರ ಮನಸ್ಸನ್ನು ಘಾಸಿಗೊಳಿಸಿವೆ. ಜೊತೆಗೆ ಆಡಳಿತದ ಎಲ್ಲಾ ವಿಚಾರಗಳಲ್ಲೂ ಪರೋಕ್ಷ ವಾಗಿ ಸಿದ್ದರಾಮಯ್ಯ ಮೂಗು ತೂರಿಸುತ್ತಿರು ವುದು ಅಸಹನೀಯ…
ಕೊಡಗು ಪ್ರವಾಸಿ ಉತ್ಸವಕ್ಕೆ ಸಾರಾ ಚಾಲನೆ
January 12, 2019ಮಡಿಕೇರಿ: ಕೊಡಗು ಪ್ರವಾಸಿ ಉತ್ಸವ ಹಾಗೂ 3 ದಿನಗಳ ಕಾಲ ಹಮ್ಮಿ ಕೊಂಡಿರುವ `ಫಲಪುಷ್ಪ ಪ್ರದರ್ಶನ’ಕ್ಕೆ ರಾಜ್ಯ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಶುಕ್ರವಾರ ಇಲ್ಲಿ ಚಾಲನೆ ನೀಡಿದರು. ನಂತರ ಪಟ್ಟಣದ ನೈಸರ್ಗಿಕ ಸೊಬಗಿನ ರಾಜಾಸೀಟ್ ನಲ್ಲಿ ಹೂವುಗಳಿಂದ ಅಲಂಕೃತವಾಗಿದ್ದ ಕಾವೇರಿ ಮಾತೆಯ ಪ್ರತಿಮೆಗೆ ಪುಷ್ಪಾ ರ್ಚನೆ ನೆರವೇರಿಸಿ, ಉದ್ಯಾನದೊಳಗೆ ವಿಹರಿಸಿದ ಸಚಿವರು ವಿವಿಧ ಕಲಾಕೃತಿ ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕೃತಿ ವಿಕೋಪದಿಂದ ಸಂತ್ರಸ್ತ ವಾಗಿದ್ದ…
ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ
January 12, 2019ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ಜೆಡಿಎಸ್ ಬಲ ಪ್ರದರ್ಶನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿಯಲಿದ್ದಾರೆ. ಇದುವರೆಗೂ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಮಾತ್ರ ಹೊಸದಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿತ್ತು. ಆದರೆ ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಚುನಾವಣಾ ಕಣಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ನಿಖಿಲ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಸ್ಥಳೀಯ…
ಇರ್ವಿನ್ ರಸ್ತೆಯ 3 ಕಟ್ಟಡ ನೆಲಸಮಕ್ಕೆ ಹೈಕೋರ್ಟ್ ತಡೆ
January 12, 2019ಮೈಸೂರು: ಅಗಲೀಕರಣ ಹಾಗೂ ಅಭಿವೃದ್ಧಿಗೊಳ್ಳು ತ್ತಿರುವ ಮೈಸೂರಿನ ಇರ್ವಿನ್ ರಸ್ತೆಯ ಮೂರು ಕಟ್ಟಡಗಳ ತೆರವಿಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಇರ್ವಿನ್ ರಸ್ತೆ ಉಳಿಸಿ ಹೋರಾಟ ಸಮಿತಿಯ ತಾಜ್ ಮೊಹಮ್ಮದ್ ಖಾನ್ ತಿಳಿಸಿದ್ದಾರೆ. ಇರ್ವಿನ್ ರಸ್ತೆಯ ವಕ್ಫ್ ಕಮಿಟಿ ಆಶ್ರಯದ ಜಮ್ಮಾ ಮಸೀದಿ ಕಟ್ಟಡ, ಚಿತ್ರಾಸ್ ಆಸ್ಪತ್ರೆ ಹಾಗೂ ಪ್ರಸಾದ್ ನರ್ಸಿಂಗ್ ಹೋಂ ಕಟ್ಟಡ ಗಳ ಭಾಗಶಃ ನೆಲಸಮಗೊಳಿಸುವುದಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಡಾ.ಸಿದ್ದಪ್ಪ ಸುನಿಲ್ ದತ್ ಯಾದವ್ ತಡೆಯಾಜ್ಞೆ ನೀಡಿದ್ದಾರೆ ಎಂದು ತಾಜ್ ಮೊಹಮ್ಮದ್ ಖಾನ್…