ಮೈಸೂರು: ನಂಜನಗೂಡು ತಾಲೂಕಿನ ಕೂಡ್ಲಾ ಪುರ ಗ್ರಾಮ ಪಂಚಾಯ್ತಿಗೆ ಸೇರಿದ ಹುಣಸನಾಳು ಗ್ರಾಮದ ಬಳಿ ಗ್ರಾಮಸ್ಥರ ವಿರೋಧದ ನಡುವೆಯೂ ಅಕ್ರಮ ಮದ್ಯ ದಂಗಡಿ ತೆರೆಯಲಾಗುತ್ತಿದ್ದು, ಇದನ್ನು ವಿರೋಧಿಸಿದವರು ಹಾಗೂ ಚಳುವಳಿಗಾರರನ್ನು ಪೊಲೀಸ್ ಬಲ ಪ್ರಯೋಗಿಸಿ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಹೀಗಾಗಿ ನಮಗೆ ಗ್ರಾಮದಲ್ಲಿರಲು ಸಾಧ್ಯವಾಗದೇ ಪೊಲೀಸರ ಭಯದಿಂದ ಕಾಲ ಕಳೆಯುವಂತಾಗಿದೆ ಎಂದು ಕೂಡ್ಲಾಪುರ ಗ್ರಾ.ಪಂ. ಅಧ್ಯಕ್ಷ ಸಿದ್ದರಾಜು ಆತಂಕ ವ್ಯಕ್ತಪಡಿಸಿದ್ದಾರೆ. ಹುಣಸವಾಳು ಗ್ರಾಮದ ಬಳಿ ಮದ್ಯದಂಗಡಿ ತೆರೆಯದಂತೆ ಕಳೆದ ಡಿ.2ರಂದು ಗ್ರಾಮಸ್ಥರು, ರೈತ ಸಂಘಟನೆ, ಹಲವು ಪ್ರಗತಿಪರ…
ಮೈಸೂರಲ್ಲಿ ಪೊಲೀಸರ `ಆಪರೇಷನ್ ಹಾಕ್’
December 29, 2018ಮೈಸೂರು: ಹೊಸ ವರ್ಷಾಚರಣೆ ಅಂಗವಾಗಿ ಮುಂಜಾಗ್ರತೆ ವಹಿಸಿರುವ ಪೊಲೀಸರು, ಗುರುವಾರ ಮೈಸೂರಿನ ಹೋಟೆಲ್ ಮತ್ತು ಲಾಡ್ಜ್ಗಳಲ್ಲಿ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದರು. ಪೊಲೀಸ್ ಕಮೀಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರ ಸೂಚನೆಯಂತೆ ಡಿಸಿಪಿ ಡಾ.ವಿಕ್ರಂ ವಿ.ಅಮಟೆ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮೈಸೂರು ನಗರದಾದ್ಯಂತ ಪೊಲೀಸರು `ಆಪರೇಷನ್ ಹಾಕ್’ (ಔಠಿeಡಿಚಿಣioಟಿ ಊಚಿತಿಞ) ಕಾರ್ಯಾಚರಣೆ ನಡೆಸಿದರು. ಭಯೋತ್ಪಾದಕರು, ಸುಪಾರಿ ಕಿಲ್ಲರ್ಗಳು, ಗ್ಯಾಂಗ್ಗಳು, ವಿದೇಶೀಯರ ಅಕ್ರಮ ವಾಸ್ತವ್ಯಗಳಂತಹ ಚಟುವಟಿಕೆಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಶೇಷ ತಂಡದ ಪೊಲೀಸರು,…
ಖದೀಮನ ಸೆರೆ : 6 ಮೊಬೈಲ್ಗಳ ವಶ
December 29, 2018ಮೈಸೂರು: ಮೈಸೂ ರಿನ ವಿವಿಧ ಸ್ಥಳಗಳಲ್ಲಿ ಮೊಬೈಲ್ ಫೋನ್ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೈಸೂರಿನ ರಾಮಕೃಷ್ಣನಗರ ನಿವಾಸಿ ನಟರಾಜು ಅವರ ಮಗ ಸುನಿಲ್(27) ಬಂಧಿತನಾಗಿದ್ದು, ಆತನಿಂದ 93000 ರೂ. ಬೆಲೆ ಬಾಳುವ 6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿವಿಧೆಡೆ ನಡೆದುಕೊಂಡು ಹೋಗುವವರಿಂದ ಬೈಕ್ನಲ್ಲಿ ಬಂದು ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದ ಆತ, ಅಂಗಡಿಗಳಲ್ಲೂ ಕಳವು ಮಾಡುತ್ತಿದ್ದ. ಗುರುವಾರ ಜಯಲಕ್ಷ್ಮೀಪುರಂನ ಕಾಳಿದಾಸ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀ ಸರು ಸುನಿಲ್ನನ್ನು ಬಂಧಿಸಿ ಕೃತ್ಯಕ್ಕೆ ಬಳಸು…
39 ಮಂದಿ ಸೆರೆ; 9 ಲೀ. ಮದ್ಯ, 21 ಸಿಲಿಂಡರ್, 25,890 ರೂ. ನಗದು ವಶ
December 29, 2018ಮೈಸೂರು: ಅಪರಾಧ ಮಾಸಾಚರಣೆ ಅಂಗವಾಗಿ ಮೈಸೂರು ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, 39 ಮಂದಿ ಆರೋಪಿಗಳನ್ನು ಬಂಧಿಸಿ, 9 ಲೀಟರ್ ಮದ್ಯ, 21 ಸಿಲಿಂಡರ್ಗಳು ಹಾಗೂ 25,890 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಚಾಮುಂಡಿಬೆಟ್ಟ ತಪ್ಪಲಿನಲ್ಲಿ ಗಾಂಜಾ ಸೇವಿಸುತ್ತಿದ್ದ ರಘು, ಉಮೇಶ, ವಿಜಿ ಎಂಬುವರನ್ನು ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರಲ್ಲದೆ, ತಾವರೆಕಟ್ಟೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಹರೀಶ ಎಂಬುವವನನ್ನು ಬಂಧಿಸಿದ್ದಾರೆ. ಚಾಮುಂಡಿಬೆಟ್ಟ ಪಾದದ ಬಳಿಯಲ್ಲಿ ಜೂಜಾಟ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿ ಅವರಿಂದ 1,460 ರೂ.ಗಳನ್ನು…
ಸೋಮವಾರಪೇಟೆ, ಮಡಿಕೇರಿಯಲ್ಲಿ ಭಗವಾನ್ ವಿರುದ್ಧ ದೂರು ದಾಖಲು
December 29, 2018ಸೋಮವಾರಪೇಟೆ: ಶ್ರೀರಾಮನ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿ ಸಿರುವ ಸಾಹಿತಿ ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಇಲ್ಲಿನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಭಗವಾನ್ ಹಿಂದೂಗಳ ಪೂಜನೀಯ ದೇವರುಗಳನ್ನು ಕೀಳುಮಟ್ಟದಲ್ಲಿ ಬಿಂಬಿ ಸಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳ ಬೇಕು. ತಪ್ಪಿದಲ್ಲಿ ತೀವ್ರ ಪ್ರತಿಭಟನೆ ನಡೆಸ ಲಾಗುವುದು ಎಂದು ಬಿಜೆಪಿ ಯುವ…
ಭಗವಾನ್ಗೆ ಚಾಟಿ ಬೀಸಿದ ನಟ ಜಗ್ಗೇಶ್
December 29, 2018ಮೈಸೂರು: ತಮ್ಮ ಪುಸ್ತಕದಲ್ಲಿ ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿರುವ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹಿರಿಯ ನಟ ಜಗ್ಗೇಶ್ ಹರಿಹಾಯ್ದಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿರುವ ಭಗವಾನ್ಗೆ ಸಿಎಂ ಕುಮಾರ್ ಸ್ವಾಮಿ ಬುದ್ಧಿ ಹೇಳಬೇಕೆಂದು ವಿನಂತಿಸಿದ್ದಾರೆ. ಇಂದು ಸೆಲ್ಫಿ ವಿಡಿಯೋದಲ್ಲಿ ಮಾತನಾಡಿರುವ ಜಗ್ಗೇಶ್, ಭಗವಾನ್ ವಿಕೃತ ಮನಸ್ಸಿನಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕೋಟ್ಯಾಂತರ ಹಿಂದೂಗಳ ಭಾವನೆ ಗಳಿಗೆ ಧಕ್ಕೆ ತರುತ್ತಿದ್ದಾರೆ. ನಿಮ್ಮ ಈ ನೀಚ ಹೇಳಿಕೆಗಳನ್ನು ನಿಲ್ಲಿಸಿ ಎಂದಿರುವ ಜಗ್ಗೇಶ್, ನಿಮ್ಮ…
ಲೋಕಸಭೆಯಲ್ಲಿ ಐತಿಹಾಸಿಕ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕಾರ
December 28, 2018ನವದೆಹಲಿ: ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ಐತಿ ಹಾಸಿಕ ತ್ರಿವಳಿ ತಲಾಖ್ ಮಸೂದೆ ಗುರುವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತ್ರಿವಳಿ ತಲಾಖ್ ಮಸೂದೆ ಯನ್ನು ಮಂಡಿಸಿದರು. ಸುದೀರ್ಘ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ವಿಧೇಯಕದ ಪರವಾಗಿ 245 ಮತ ಹಾಗೂ ವಿಧೇಯಕದ ವಿರುದ್ಧವಾಗಿ ಕೇವಲ 11 ಮತ ಚಲಾವಣೆಯಾದವು. ತ್ರಿವಳಿ ತಲಾಖ್ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್…
ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
December 28, 2018ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಹಣ ಬಿಡುಗಡೆ ಮುಂತಾದವುಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಲಾಗಿದೆ. ಈ ಯೋಜನೆಯು 67 ಟಿಎಂಸಿ ಸಾಮಥ್ರ್ಯ ಹೊಂದಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ಸುಪ್ರೀಂ ಕೋರ್ಟ್ ಹಂಚಿಕೆ…
ಮೈಸೂರು ಪಾಲಿಕೆ ವಾಹನಗಳಿಂದ ಡೀಸೆಲ್ ಕದ್ದು ಮಾರಾಟ
December 28, 2018ಮೈಸೂರು: ಮೈಸೂರು ನಗರಪಾಲಿಕೆ ವಾಹನಗಳ ಡೀಸೆಲ್ ಕಳ್ಳತನ ಮಾಡಿ ಮಾರಾಟ ಮಾಡ ಲಾಗುತ್ತಿದೆ ಎಂದು ನಗರಪಾಲಿಕೆ ವಿರೋಧ ಪಕ್ಷ(ಬಿಜೆಪಿ)ದ ನಾಯಕ ಬಿ.ವಿ.ಮಂಜುನಾಥ್, ಕೌನ್ಸಿಲ್ ಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ನಗರಪಾಲಿಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಗುರುವಾರ ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಪಾಲಿಕೆ ವಾಹನಗಳಿಂದ ಡೀಸೆಲ್ ಕಳ್ಳತನವಾಗುತ್ತಿದೆ ಎಂದು ಹಲವು ವರ್ಷಗಳಿಂದ ದೂರು ಕೇಳಿಬರುತ್ತಿತ್ತು. ಇದಕ್ಕೆ ಪೂರಕವಾಗಿ ನಂಜನಗೂಡು ರಸ್ತೆಯಿಂದ ಹೆಚ್.ಡಿ.ಕೋಟೆ ರಸ್ತೆಯನ್ನು ಜೆ.ಪಿ.ನಗರದ ಮಾರ್ಗವಾಗಿ ಸಂಪರ್ಕಿಸುವ ರಸ್ತೆಯಲ್ಲಿ…
ಜನನ-ಮರಣ ಪತ್ರ ಇನ್ನು `ಇ-ಜನ್ಮ’ದಲ್ಲಿ ಸುಲಭ ಲಭ್ಯ
December 28, 2018ಮೈಸೂರು: ಮೈಸೂರಿನಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಸುಲಭ ವಾಗಿ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರದ `ಇ-ಜನ್ಮ’ ಆನ್ಲೈನ್ ಸೇವೆ ಇನ್ನು 15 ದಿನಗಳಲ್ಲಿ ಆರಂಭವಾಗಲಿದ್ದು, ಯಾವ ವಲಯ ಕಚೇರಿಯಲ್ಲಾದರೂ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯು ವವರು ಅನುಭವಿಸುವ ಯಾತನೆಯನ್ನು ಸದಸ್ಯ ಮ.ವಿ.ರಾಂಪ್ರಸಾದ್, ಕೌನ್ಸಿಲ್ ಸಭೆ ಮುಂದಿಟ್ಟರು. ಜನನ ಮತ್ತು ಮರಣ ನೋಂದಣಿ ವಿಭಾಗದ ಬಳಿ ನೂರಾರು ಮಂದಿ ಕಾದು ನಿಲ್ಲುತ್ತಾರೆ. ಕೆಲಸಗಾರರ ಸಂಖ್ಯೆಯೂ ಕಡಿಮೆಯಿದೆ. ಆಗಾಗ್ಗೆ…