ನವದೆಹಲಿ: ಕಾಂಗ್ರೆಸ್ ಸಂಸದರ ನಿಯೋಗ ನವದೆಹಲಿಯಲ್ಲಿಂದು ಕೇಂದ್ರ ಬುಡಕಟ್ಟು ಖಾತೆ ಸಚಿವ ಜುಯಲ್ ಹೊರಮ್ ಅವರನ್ನು ಭೇಟಿಯಾಗಿ ಪರಿವಾರ ಮತ್ತು ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿತು. ಸಂಸದÀ ಆರ್.ಧ್ರುವನಾರಾಯಣ್, ವಿ.ಎಸ್.ಉಗ್ರಪ್ಪ, ಡಿಕೆ ಸುರೇಶ್, ಚಂದ್ರಪ್ಪ, ಶಾಸಕ ರಘುಮೂರ್ತಿ ನಿಯೋಗದಲ್ಲಿದ್ದರು. ಈ ಬಗ್ಗೆ ಮಾತನಾಡಿದ ಸಂಸದ ಧ್ರುವನಾರಾಯಣ್ ರಾಜ್ಯದಲ್ಲಿ 12 ಲಕ್ಷದಷ್ಟು ಜನಸಂಖ್ಯೆಯಿರುವ ಪರಿವಾರ ಮತ್ತು ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಳೆದ 34 ವರ್ಷಗಳಿಂದ ಒತ್ತಾಯ ಮಾಡಲಾಗುತ್ತಿದೆ. ಇತರೆ ಸಮುದಾಯಗಳಿಗೆ…
ತಾಯಿ-ಮಗುವಿನ ಆರೋಗ್ಯದ ಕುರಿತು ಬೀದಿ ನಾಟಕ
December 21, 2018ಬೈಲಕುಪ್ಪೆ: ತಾಯಿ ಮತ್ತು ಮಗುವಿನ ಆರೋಗ್ಯ ಹಾಗೂ ಸ್ವಚ್ಛತೆ ಬಗ್ಗೆ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಪಂ ವತಿಯಿಂದ ಅನಿಕೇತನ ಕಲಾ ತಂಡದವರು ಅರಿವು ಕಾರ್ಯಕ್ರಮ ನಡೆಸಿದರು. ಕಣಗಾಲು ಗ್ರಾಮದ ಸರ್ಕಲ್ನಲ್ಲಿ ಆರೋಗ್ಯ ಕೇಂದ್ರದ ಡಾ.ಸುಜಾತಲಕ್ಷ್ಮಿ ನೇತೃತ್ವದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಹಾಗೂ ಸ್ವಚ್ಛತೆ ಬಗ್ಗೆ ಬೀದಿನಾಟಕ ಪ್ರದರ್ಶಿಸಿ ಅರಿವು ಮೂಡಿಸಿದರು. ಡಾ.ಸುಜಾತಲಕ್ಷ್ಮಿ ಮಾತನಾಡಿ ಗರ್ಭಿಣಿಯರು ಆರೋಗ್ಯದ ಬಗ್ಗೆ ಎಚ್ಚರವಹಿಸಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ತಾಯಂದಿರು ಆಗಾಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಸಲಹೆ…
ಕಂದಾಯ ಇಲಾಖೆ ಸಿಬ್ಬಂದಿಗೆ ಕಾನೂನು ಅರಿವು
December 21, 2018ನಂಜನಗೂಡು: ನಂಜನ ಗೂಡು ಕಂದಾಯ ಇಲಾಖೆಯ ಸಿಬ್ಬಂದಿಗೆ ಪ್ರಸ್ತುತ ಇಂದು ಬಹಳ ಪ್ರಮುಖವಾಗಿ ತಿಳಿಯಲೇಬೇಕಾದ ಸರ್ಕಾರದ ಯೋಜನೆ ಮತ್ತು ಅನುಸರಿಸಬೇಕಾದ ಹಲವಾರು ಕಾನೂನಿನ ಕ್ರಮಗಳ ಬಗ್ಗೆ ತಿಳಿಸುವ ಹಿನ್ನಲೆ ಯಲ್ಲಿ ಕಾನೂನು ಅರಿವು ನೆರವು ಕಾರ್ಯ ಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾ ಧೀಶರಾದ ಎಸ್.ಕೆ.ಒಂಟಿಗೋಡಿಯವರು ತಿಳಿಸಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಹಮ್ಮಿಕೊಂಡಿದ್ದ…
ನೂತನ ಕೇಬಲ್ ದರ ಖಂಡಿಸಿ ಮೈಸೂರಲ್ಲಿ ಕೇಬಲ್ ಆಪರೇಟರ್ಗಳ ಪ್ರತಿಭಟನೆ
December 21, 2018ಮೈಸೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿ ಕಾರ (ಟ್ರಾಯ್) ಜಾರಿಗೆ ತಂದಿರುವ ಅವೈಜ್ಞಾನಿಕವಾದ ನೂತನ ಕೇಬಲ್ ದರ ಪಟ್ಟಿ ಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ಕೇಬಲ್ ಟಿವಿ ಆಪರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು. ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ನಂತರ ಪ್ರತಿಭಟನೆ ಆರಂಭಿಸಿದ ಕೇಬಲ್ ಆಪರೇಟರ್ಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಕಾನೂನು ರೂಪಿಸದಿದ್ದರೂ ಟ್ರಾಯ್ ಹೊಸ ನಿಯಮ ಜಾರಿಗೆ…
ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿ ವಿಧಿ ವಿಜ್ಞಾನ ವಸ್ತು ಪ್ರದರ್ಶನ ಆರಂಭ
December 20, 2018ಮೈಸೂರು: ಅಪರಾಧಗಳು ಮತ್ತು ತನಿಖೆಗೆ ಸಹಕಾರಿ ಯಾಗುವ 3 ದಿನಗಳ ವಿಧಿ ವಿಜ್ಞಾನ ವಸ್ತು ಪ್ರದರ್ಶನ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿ ಇಂದಿನಿಂದ ಆರಂಭವಾಗಿದೆ.ಜೆಎಸ್ಎಸ್ ವೈದ್ಯಕೀಯ ಮಹಾ ವಿದ್ಯಾಲಯದ ವಿಧಿ ವಿಜ್ಞಾನ ಮತ್ತು ಮೆಡಿ ಸಿನ್ ವಿಭಾಗದ ವತಿಯಿಂದ ಏರ್ಪಡಿಸಿ ರುವ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ತೆರೆದಿರುವ ವಸ್ತು ಪ್ರದರ್ಶನಕ್ಕೆ ಉಚಿತ ಪ್ರವೇಶವಿದೆ. ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದಿಂದ ವಸ್ತು…
ಅನಧಿಕೃತ ತಂಬಾಕು ಬೆಳೆಗಾರರಿಗೂ ಲೈಸೆನ್ಸ್ ಕಲ್ಪಿಸಿ
December 20, 2018ಮೈಸೂರು: ಕರ್ನಾಟಕ ದಲ್ಲಿ ಅನಧಿಕೃತವಾಗಿ ವಿಎಫ್ಸಿ ತಂಬಾಕು ಬೆಳೆಯುತ್ತಿರುವ ಕೃಷಿಕರೆಲ್ಲರಿಗೂ ಅಧಿಕೃತ ಲೈಸೆನ್ಸ್ ನೀಡುವಂತೆ ಕೇಂದ್ರ ವಾಣಿಜ್ಯ ಸಚಿವ ಸುರೇಶ್ ಪ್ರಭು ಅವರಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಇದೇ ಡಿ.17ರಂದು ಕೇಂದ್ರ ವಾಣಿಜ್ಯ ಸಚಿವರನ್ನು ದೆಹಲಿಯ ಅವರ ಕಚೇರಿ ಯಲ್ಲಿ ಭೇಟಿ ಮಾಡಿದ ಸಂಸದರು, ನಾನು ಒಬ್ಬ ಸಂಸದನಾಗಿ `ಅಧಿಕೃತ’ ತಂಬಾಕು ಬೆಳೆಗಾರರನ್ನಷ್ಟೇ ಅಲ್ಲ, `ಅನಧಿಕೃತ’ ತಂಬಾಕು ಬೆಳೆಗಾರರನ್ನೂ ಪ್ರತಿನಿಧಿಸುತ್ತೇನೆ. ನನ್ನ ಕ್ಷೇತ್ರ ಸೇರಿದಂತೆ ಕರ್ನಾಟಕದಲ್ಲಿನ ಅನಧಿಕೃತ ತಂಬಾಕು ಬೆಳೆಗಾರರ ಸಂಖ್ಯೆ 26,019ರಷ್ಟಿದೆ….
ರಾತ್ರಿ 8ರ ನಂತರ ಪೆಟ್ರೋಲ್ ಬಂಕ್ಗಳು ಬಂದ್
December 20, 2018ಮೈಸೂರು: ಸಮಾಜಘಾತುಕ ಕಿಡಿಗೇಡಿಗಳಿಂದ ಪೆಟ್ರೋಲ್ ಬಂಕ್ಗಳ ಸಿಬ್ಬಂದಿ ಮೇಲೆ ಪದೇ ಪದೆ ಹಲ್ಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಜೀವನಕ್ಕೆ ಭದ್ರತೆ ಇಲ್ಲದ ಕಾರಣ ಇನ್ನು ಮುಂದೆ ರಾತ್ರಿ 8ರ ನಂತರ ಪೆಟ್ರೋಲ್ ಬಂಕ್ಗಳನ್ನು ಮುಚ್ಚಲಾಗು ವುದು ಎಂದು ಫೆಡರೇಷನ್ ಆಫ್ ಮೈಸೂರು ಪೆಟ್ರೋಲಿಯಂ ಟ್ರೇಡರ್ಸ್ ಎಚ್ಚರಿಕೆ ನೀಡಿದೆ. ಫೆಡರೇಷನ್ ಆಫ್ ಮೈಸೂರು ಪೆಟ್ರೋ ಲಿಯಂ ಟ್ರೇಡರ್ಸ್ನ ಅಧ್ಯಕ್ಷ ಬಸವೇಗೌಡ ಬುಧವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಡಿ.15ರಂದು ಮಧ್ಯರಾತ್ರಿ 12.45ರ ಸಮಯದಲ್ಲಿ…
ಕಾಳಮ್ಮ ಕೆಂಪರಾಮಯ್ಯಗೆ `ಬಯಸದೇ ಬಂದ ಭಾಗ್ಯ’!
December 20, 2018ಮೈಸೂರು: ಮೈಸೂರು ತಾಲೂಕು ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿ ಸಿದ್ದ ಜೆಡಿಎಸ್ಗೆ ತೀವ್ರ ಮುಖಭಂಗ ಉಂಟಾಗಿದ್ದು, ಸ್ವಪಕ್ಷ ಜೆಡಿಎಸ್ ವಿರುದ್ಧವೇ ಸೆಟೆದು ನಿಂತಿದ್ದ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಅವರು ಮುಂದಿನ ಎರಡು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ. ಮೈಸೂರು ತಾಲೂಕು ಪಂಚಾಯಿತಿ ಗದ್ದುಗೆ ಹಿಡಿ ದಿದ್ದ ಜೆಡಿಎಸ್ ಮೊದಲ ಅವಧಿಗೆ ಕಾಳಮ್ಮ ಕೆಂಪರಾಮಯ್ಯ ಅವರನ್ನು ಅಧ್ಯಕ್ಷೆಯಾಗಿ ಹಾಗೂ ಎನ್.ಬಿ.ಮಂಜು ಅವ ರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿತ್ತು. ಒಪ್ಪಂದ ಪ್ರಕಾರ 2016ರ ಮೇ 21ರಂದು ಅಧಿಕಾರದ ಚುಕ್ಕಾಣಿ…
ರಫೇಲ್ ವಿಚಾರದಲ್ಲಿ ಕೋರ್ಟ್ಗೆ ಕೇಂದ್ರದಿಂದ ಸುಳ್ಳು ಮಾಹಿತಿ ಕೇಂದ್ರ ಮಾಜಿ ಸಚಿವ ಎಂ.ಎಂ. ಪಲ್ಲಂರಾಜು ಆರೋಪ
December 20, 2018ಮೈಸೂರು: ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಪ್ಪು ಮಾಹಿತಿ ನೀಡಿದ್ದು, ದೇಶದ ಜನತೆಯನ್ನು ದಿಕ್ಕು ತಪ್ಪಿಸುವ ಸಂಚು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಸತ್ಯಾಸತ್ಯತೆ ಕಂಡು ಹಿಡಿಯಲು ಜಂಟಿ ಸದನ ಸಮಿತಿ ರಚಿಸಬೇಕು ಎಂದು ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಘಟಕದ ವಕ್ತಾರ ಎಂ.ಎಂ. ಪಲ್ಲಂರಾಜು ಒತ್ತಾಯಿಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಸುಳ್ಳು ಮಾಹಿತಿಯುಳ್ಳ…
ಡಿ.23ರಂದು ಕೆ.ಎಸ್.ಪುಟ್ಟಣ್ಣಯ್ಯ ಹುಟ್ಟುಹಬ್ಬ, ಪ್ರತಿಮೆ ಅನಾವರಣ
December 20, 2018ಮೈಸೂರು: ವಿಶ್ವ ರೈತ ದಿನಾಚರಣೆ ಹಾಗೂ ರೈತ ಹೋರಾಟಗಾರ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 11 ಗಂಟೆಗೆ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಕೊಪ್ಪಲು ಗ್ರಾಮದಲ್ಲಿ ದಿ. ಪುಟ್ಟಣ್ಣಯ್ಯ ಪುತ್ಥಳಿ ಅನಾವರಣ ಹಾಗೂ ಪ್ರಶಸ್ತಿ ಪ್ರದಾನ ಸಮಾ ರಂಭ ಹಮ್ಮಿಕೊಂಡಿರುವುದಾಗಿ ಕೆ.ಎಸ್.ಪುಟ್ಟಣ್ಣಯ್ಯ ಅಭಿ ಮಾನಿ ಬಳಗದ ವೈ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೃಷ್ಣಶಿಲೆಯಲ್ಲಿ ಮೂಡಿರುವ ಪುಟ್ಟಣ್ಣಯ್ಯರ ಪುತ್ಥಳಿ ಯನ್ನು ಗ್ರಾಮದ ಶಾಲಾ ಕಟ್ಟಡದ ಮುಂದೆ ಅನಾವರಣಗೊಳಿಸಲಾಗುವುದು…