ಮೈಸೂರು: ಅಶೋಕಪುರಂ ರೈಲ್ವೆ ಸ್ಟೇಷನ್ಗೆ ಹೊಂದಿಕೊಂಡಂತೆ ಜೆಪಿ ನಗರ ಬಳಿ ರೈಲ್ವೆ ಇಲಾಖೆ ಜಾಗದಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ 11 ತಾತ್ಕಾಲಿಕ ಅಂಗಡಿ ನಿರ್ಮಾಣಗಳನ್ನು ಇಂದು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಜೆಪಿ ನಗರ ಬಳಿ ರೈಲ್ವೇ ಹಳಿ ಪಕ್ಕದಲ್ಲಿ 11 ತಾತ್ಕಾಲಿಕ ಅಂಗಡಿಗಳು ತಲೆ ಎತ್ತಿದ್ದರಿಂದ ರೈಲ್ವೇ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದರಿಂದ ಅವುಗಳನ್ನು ತೆರವುಗೊಳಿಸಲು ರೈಲ್ವೇ ಇಂಜಿನಿಯರ್ಗಳು ಹಾಗೂ ಆರ್ಪಿಎಫ್ ಅಧಿಕಾರಿಗಳ ತಂಡ ರಚಿಸಿ ನಿರ್ಮಾಣಗಳನ್ನು ನೆಲಸಮಗೊಳಿಸಲಾಯಿತು ಎಂದು ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಡಾ….
ಇಸ್ರೇಲ್ ಮಾದರಿ ಬೇಸಾಯಕ್ಕೆ ಉತ್ತೇಜನ
December 20, 2018ಬೆಳಗಾವಿ: ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಇಸ್ರೇಲ್ ತಂತ್ರಜ್ಞಾನ ಆಧಾರಿತ ಬೇಸಾಯ ಕ್ರಮಕ್ಕೆ ಉತ್ತೇಜನ ನೀಡಲು ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ. ಮುಂಗಡ ಪತ್ರದಲ್ಲಿ ಘೋಷಿಸಿರುವಂತೆ ರಾಜ್ಯದ ಕೆಲವು ಭಾಗಗಳಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ಕೃಷಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಅಲ್ಪ ನೀರು ಬಳಸಿ ಹೆಚ್ಚು ಬೆಳೆ ತೆಗೆಯುವ ಪದ್ಧತಿ ಜಾರಿಗೆ ತರುವುದಲ್ಲದೆ, ಮಾರು ಕಟ್ಟೆಯಲ್ಲಿ ರೈತನ ಶ್ರಮಕ್ಕೆ ತಕ್ಕ ಬೆಲೆ ಕೊಡಿಸುವ ಯೋಜನೆಗೂ ಸಮ್ಮತಿ ದೊರೆತಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1ರಿಂದ…
ಸಾಲೂರು ಮಠದ ಕಿರಿಯ ಸ್ವಾಮೀಜಿ ಪೊಲೀಸ್ ವಶಕ್ಕೆ
December 19, 2018ಕೊಳ್ಳೇಗಾಲ: ಸುಳವಾಡಿ ಕಿಚ್ಗುತ್ ಮಾರಮ್ಮನ ದೇವಸ್ಥಾನ ದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿದ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಇಂದು ಮಧ್ಯರಾತ್ರಿ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ತನಿಖೆಗಾಗಿ ಕರೆದೊಯ್ದಿದ್ದಾರೆ. ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಮತ್ತು ಚಾಮರಾಜನಗರ ಜಿಲ್ಲಾ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಇಂದು ಇಡೀ ದಿನ ಕೊಳ್ಳೇಗಾಲದ ಡಿವೈಎಸ್ಪಿ ಕಚೇರಿಯಲ್ಲೇ ಇದ್ದು, ಆರೋಪಿಗಳ ತನಿಖೆ ನಡೆಸಿದ್ದರು. ಸುಳವಾಡಿ ಮಾರಮ್ಮ…
ಮೈತ್ರಿ ಸರ್ಕಾರದ ವಿರುದ್ಧ ಮಿತ್ರ ಶಾಸಕರ ಆಕ್ರೋಶ
December 19, 2018ಬೆಳಗಾವಿ: ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನ್ಯಾಯವಾಗುತ್ತಿದೆ ಎಂಬ ಗುರುತರ ಆರೋಪ ಇಂದಿಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವರಿಂದ ವ್ಯಕ್ತವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಶಾಸಕರಿಂದ ಅಸಮಾಧಾನಗಳ ಸುರಿಮಳೆಯಾಯಿತು. ಅಸಮಾಧಾನ ಹೊರ ಹಾಕಿದ ಶಾಸಕ ಕೆ.ಸಿ.ಕೊಂಡಯ್ಯ, ಸಂಪುಟದಲ್ಲಿ ಸ್ಥಾನ ನೀಡಿಕೆ ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರ ಮನವಿಗಳಿಗೆ ಬೆಲೆ ಸಿಗುತ್ತಿಲ್ಲ, ಅನು ದಾನ ನೀಡಿಕೆಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು…
ಬಿಡಾಡಿ ಹುಚ್ಚು ಕುದುರೆಗಳ ದಾಳಿಗೆ ಮೈಸೂರಲ್ಲಿ ಬಡ ಮಹಿಳೆ ಬಲಿ
December 19, 2018ಮೈಸೂರು: ಬಿಡಾಡಿ ಹುಚ್ಚು ಕುದುರೆಗಳ ದಾಳಿಗೆ, ಮನೆ ಮನೆಗೆ ಹೋಗಿ ಸೊಪ್ಪು ಮಾರುವ ಬಡ ಮಹಿಳೆ ಬಲಿಯಾದ ಘಟನೆ ಮೈಸೂರಿನ ಗಾಯತ್ರಿಪುರಂನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೈಸೂರಿನ ಉದಯಗಿರಿ ಠಾಣಾ ವ್ಯಾಪ್ತಿಯ ಮುನೇಶ್ವರನಗರದ ಮದೀನ ಮಸೀದಿ ಬಳಿ ನಿವಾಸಿ ಲೇಟ್ ಎಂ.ಆರ್.ಕೂಸಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಮ್ಮ (55), ಹುಚ್ಚು ಕುದುರೆಗಳ ದಾಳಿಗೊಳಗಾಗಿ ಸ್ಥಳದಲ್ಲೇ ಮೃತಪಟ್ಟವರು. ಸೊಪ್ಪು ಮಾರುವ ಅವರು ಇಂದು ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಗಾಯತ್ರಿಪುರಂ 1ನೇ ಹಂತ (ನಾರ್ತ್ ಆಫ್ ಗಾಯತ್ರಿಪುರಂ)ದ…
ಡಿ.22ಕ್ಕೆ ಸಚಿವ ಸಂಪುಟ ವಿಸ್ತರಣೆ
December 19, 2018ಬೆಳಗಾವಿ: ಕಾಂಗ್ರೆಸ್-ಜಾ.ದಳ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇದೇ ಡಿ.22ರಂದು ಸಂಜೆ 5ಕ್ಕೆ ನಡೆಯುವುದು ಖಚಿತವಾಗಿದೆ. ಬೆಳಗಾವಿಯಲ್ಲಿ ಮಂಗಳವಾರ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಂಪುಟ ವಿಸ್ತರಣೆ ವಿಚಾ ರವೂ ಪ್ರಧಾನವಾಗಿ ಪ್ರಸ್ತಾಪವಾಯಿತು. ಈ ಮೊದಲೇ ನಿಗದಿಯಾದಂತೆ ಡಿ.22 ರಂದು ಸಂಪುಟ ವಿಸ್ತರಣೆಗೆ ನಿರ್ಧ ರಿಸಲಾಗಿದೆ. ಸಭೆ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿ.22ರಂದು ಸಂಪುಟಕ್ಕೆ ಹೊಸಬರ…
ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ
December 19, 2018ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟ ವಾಗಿದೆ. ಮಾರ್ಚ್ 1ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 1 : ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 : ಎನ್.ಎಸ್.ಕ್ಯೂ.ಎಫ್, ಮಾರ್ಚ್ 5 : ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್ 6 : ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್ 7 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 8 : ಉರ್ದು, ಸಂಸ್ಕೃತ, ಮಾರ್ಚ್ 9 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 11…
ಟಿಪ್ಪರ್ ಡಿಕ್ಕಿ: ಮೂವರ ಸಾವು
December 19, 2018ಮಂಡ್ಯ: ಶ್ರೀರಂಗಪಟ್ಟಣ ಹಾಗೂ ಮದ್ದೂರು ಸಮೀಪದ ಶಿವ ಪುರದ ಬಳಿ ಮಂಗಳವಾರ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಟಿಪ್ಪರ್ಗೆ ಮೂವರು ಬೈಕ್ ಸವಾರರು ಬಲಿಯಾಗಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸಂಭವಿ ಸಿದ ಅಪಘಾತದಲ್ಲಿ ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಸಲ್ಮಾನ್(24) ಹಾಗೂ ಕೆಸರೆ ನಿವಾಸಿ ಇನಾಯತ್ (20), ಶಿವಪುರದ ಬಳಿ ನಡೆದ ಅಪಘಾತದಲ್ಲಿ ವಳಗೆರೆಹಳ್ಳಿ ಗ್ರಾಮದ ತೇಜೋಮೂರ್ತಿ(40) ಮೃತಪಟ್ಟಿದ್ದಾರೆ. ಘಟನೆ-1: ಶ್ರೀರಂಗಪಟ್ಟಣ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್ ಹಾಗೂ ಇನಾಯತ್ ಮಂಗಳವಾರ ಮಧ್ಯಾಹ್ನ ಊಟಕ್ಕೆಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಎಸ್ಆರ್ಟಿಸಿ…
ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ, ಸ್ವಚ್ಛತೆಯ ಬದ್ಧತೆಗೆ ಪ್ರೇರಣೆ
December 19, 2018ಮೈಸೂರು: ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಕಾಯ್ದುಕೊಳ್ಳುವ ಸಂಬಂಧ ಶಾಲಾ ವಿದ್ಯಾರ್ಥಿಗಳನ್ನು ತೊಡ ಗಿಸಲು ಮೈಸೂರು ಗ್ರಾಹಕರ ಪರಿಷತ್ತು (ಎಂಜಿಪಿ) `ಪರಿಸರ ಶಾಲಾ ವಾರ್ಡನ್’ ವಿನೂತನ ಯೋಜನೆಯನ್ನು ರೂಪಿಸಿದ್ದು, ಇದನ್ನು ಮೈಸೂರು ನಗರದ ವಿವಿಧ ಶಾಲೆ ಗಳಿಗೆ ಎಂಜಿಪಿ ಪರಿಚಯಿಸುತ್ತಿದೆ. ಶಾಲಾ ಮಕ್ಕಳು ಸೃಜನಾತ್ಮಕವಾಗಿ ಪರಿ ಸರ ಸಂರಕ್ಷಣೆ ಹಾಗೂ ಸ್ವಚ್ಛತೆಗೆ ತಮ್ಮದೇ ಆಲೋಚನೆಯಲ್ಲಿ ಪಾಲ್ಗೊಳ್ಳುವ ಎಂಜಿ ಪಿಯ ವಿಭಿನ್ನ ಪರಿಕಲ್ಪನೆಯ ಈ ಯೋಜ ನೆಗೆ ಮೈಸೂರಿನ ಕೌಟಿಲ್ಯ ವಿದ್ಯಾಲಯದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ…
ಮೈಸೂರಿನ ದೇವಾಲಯಗಳಲ್ಲಿ ಭಕ್ತಾದಿಗಳಿಂದ ದೇವರ ದರ್ಶನ, ವಿಶೇಷ ಪೂಜೆ
December 19, 2018ಮೈಸೂರು: ವೈಕುಂಠ ಏಕಾದಶಿ ಅಂಗವಾಗಿ ಇಂದು ಮೈಸೂ ರಿನ ಹಲವು ದೇವಸ್ಥಾನಗಳಲ್ಲಿ ಭಕ್ತರು ಶ್ರೀ ವೆಂಕಟೇಶ್ವರ ದರ್ಶನ ಪಡೆದು ಪುನೀತರಾದರು. ಮುಂಜಾನೆ 4ರಿಂದ ತಡ ರಾತ್ರಿವರೆಗೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಧನುರ್ಮಾಸದಲ್ಲಿ ಬರುವ ವೈಕುಂಠ ಏಕಾದಶಿ ದಿನವಾದ ಇಂದು ಸ್ವರ್ಗದ ಬಾಗಿಲು ತೆರೆಯಲಿದೆ ಎಂಬ ಪ್ರತೀತಿ ಇದೆ. ಈ ದಿನ ಶ್ರೀ ವೆಂಕಟೇಶ್ವರನ ದರ್ಶನ ಮಾಡಿದರೆ ಮೋಕ್ಷ ಪ್ರಾಪ್ತಿ ಯಾಗಲಿದೆ ಎಂಬ ನಂಬಿಕೆ ಜನಸಮು ದಾಯದಲ್ಲಿರುವುದರಿಂದ ಎಲ್ಲಾ ದೇವಾ…