ಮೈಸೂರು: ನಮ್ಮವರಿಂದಲೇ ನಮ್ಮ ಧರ್ಮದ ಮೇಲೆ ಆಕ್ರಮಣ, ಅಪಚಾರ ನಡೆಯುತ್ತಿದೆ. ನಮ್ಮವರಿಂದಲೇ ನಮ್ಮ ಹಿಂದೂ ಸಂಸ್ಕೃತಿಗೆ ಹೆಚ್ಚು ಅಪಾಯವಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ಶನಿವಾರ ಎರಡು ದಿನಗಳ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ….
ಗಾಬರಿಗೊಂಡ ವಿದ್ಯಾರ್ಥಿನಿಯರ ನೂಕು ನುಗ್ಗಲು: 48 ಮಂದಿಗೆ ಗಾಯ
December 16, 2018ಮೈಸೂರು: ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಗಾಬರಿ ಗೊಂಡ ವಿದ್ಯಾರ್ಥಿನಿಯರು ಹೊರ ಓಡಿ ಬರುವಾಗ ನೂಕು ನುಗ್ಗಲು ಉಂಟಾಗಿ, ಮೆಟ್ಟಿಲ ಮೇಲಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಂಟಿಕೊಪ್ಪಲು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಸಾರ್ವಜನಿಕ ವಿದ್ಯಾರ್ಥಿನಿಲಯದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಈ ವಿದ್ಯಾರ್ಥಿನಿಲಯದಲ್ಲಿ 270ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 13 ಮಂದಿಯನ್ನು ಡಿಆರ್ಎಂ ಆಸ್ಪತ್ರೆ, 20 ಮಂದಿಯನ್ನು ಬೃಂದಾವನ ಆಸ್ಪತ್ರೆಗೆ ದಾಖಲಿಸಿದ್ದು, ಬಿಂದು ಎಂಬ ವಿದ್ಯಾರ್ಥಿನಿಗೆ ಐಸಿಯುನಲ್ಲಿ…
ಕೆ.ಆರ್.ಆಸ್ಪತ್ರೆಯಲ್ಲಿ ಅಸ್ವಸ್ಥರು, ಸಂಬಂಧಿಕರ ರೋಧನ
December 16, 2018ಮೈಸೂರು: ಸುಳವಾಡಿ ಘಟನೆಯಿಂದ ಅಸ್ವಸ್ಥ ರಾದವರಿಗೆ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿ ನಿರತರಾಗಿರು ವುದರಿಂದ 2ನೇ ದಿನವಾದ ಇಂದೂ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಒಳ ಹಾಗೂ ಹೊರ ರೋಗಿಗಳಿಗೆ ತೊಂದರೆಯಾಯಿತು. ಏಕ ಕಾಲದಲ್ಲಿ ಸುಮಾರು 100ಕ್ಕೂ ಹೆಚ್ಚು ಅಸ್ವಸ್ಥರು ಬಂದ ಕಾರಣ ಅವರಿಗೆ ತುರ್ತು ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿರುವುದರಿಂದ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ (ಕಲ್ಲು ಕಟ್ಟಡ), ಐಪಿಡಿ-ಓಪಿಡಿ ಬ್ಲಾಕ್ (ಜಯದೇವ ಹೃದ್ರೋಗವಿದ್ದ ಕಟ್ಟಡ), ಕಿವಿ-ಮೂಗು-ಗಂಟಲು ವಿಭಾಗಗಳಲ್ಲಿ ಒಳ ರೋಗಿಗಳಾಗಿರುವವರನ್ನು ನೋಡಿ ಕೊಳ್ಳಲು ನರ್ಸ್ಗಳಾಗಲೀ, ರೌಂಡ್ಸ್ ಮಾಡುವ ವೈದ್ಯರುಗಳಿಲ್ಲದೇ…
ಕಿಚ್ಗುತ್ ಮಾರಮ್ಮ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲ್ಲ
December 16, 2018ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್ಗುತ್ ಮಾರಮ್ಮ ದೇಗುಲ ಮುಜರಾಯಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ಸ್ವಷ್ಟಪಡಿಸಿದರು. ವಿಷಮಿಶ್ರಿತ ಪ್ರಸಾದ ಸೇವನೆ ಪ್ರಕರಣದಲ್ಲಿ ಅಸ್ವಸ್ಥ ಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿರುವವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಥ ಪ್ರಕರಣಗಳು ರಾಜ್ಯದಲ್ಲಿ ನಡೆದಿರುವುದು ಇದೇ ಮೊದಲು. ಆದ್ದರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಅನ್ನಸಂತರ್ಪಣೆ ನಡೆಯುವ ದೇಗುಲಗಳಲ್ಲಿ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೆ ಕಿಚ್ಗುತ್…
ಇತರರು ದ್ವೇಷಿಸುವುದಾದರೆ ಬ್ರಾಹ್ಮಣ ಧರ್ಮಕ್ಕೆ ಭಾಷಾ, ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ
December 16, 2018ಮೈಸೂರು: ಹಿಂದೂ ಧರ್ಮವನ್ನು ಇತರೆ ಸಮು ದಾಯಗಳು ದ್ವೇಷಿಸುವುದಾದರೆ, ಈ ಧರ್ಮವನ್ನು ಬ್ರಾಹ್ಮಣರಿಗೆ ಸೀಮಿತಗೊಳಿಸಿ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಕರಾಮುವಿವಿ ಕುಲ ಸಚಿವ ಹಾಗೂ ನಿರ್ದೇಶಕ (ಪ್ರವೇಶಾತಿ) ಹಾಗೂ ಹಿರಿಯ ವಿದ್ವಾಂಸ ಡಾ.ಶೆಲ್ವಪಿಳೈ ಅಯ್ಯಂಗಾರ್ ಒತ್ತಾಯಿಸಿದರು. ಮೈಸೂರು-ನಂಜನಗೂಡು ರಸ್ತೆಯಲ್ಲಿ ರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾವೇಶ-2018ರ ಯುವ ಗೋಷ್ಠಿಯನ್ನು ಉದ್ಘಾಟಿಸಿ, ಅವರು ಮಾತ ನಾಡಿದರು. ಇತ್ತೀಚೆಗೆ…
ಫ್ಲೈಓವರ್ ಉದ್ಘಾಟನೆ ಮತ್ತೆ ಮುಂದೂಡಿಕೆ
December 16, 2018ಮೈಸೂರು: ಹಿನಕಲ್ ಬಳಿ ನಿರ್ಮಿಸಿರುವ ಫ್ಲೈಓವರ್ ಅನ್ನು ಉದ್ಘಾ ಟಿಸುವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ. ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು, ನಾಳೆ (ಡಿ.16) ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿ ಸಾರ್ವಜನಿಕರಿಗೆ ಸಂಚಾರ ಮುಕ್ತಗೊಳಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಬೇರೆ ಕಾರ್ಯ ಒತ್ತಡದಲ್ಲಿರು ವುದರಿಂದ ನಾಳೆ (ಡಿ.16) ಬದಲು ಮುಂದಿನ ಭಾನುವಾರ (ಡಿ.23)ಕ್ಕೆ ಮುಂದೂಡಲಾಗಿದೆ ಎಂದು ಸಂಸದರ ಕಚೇರಿ ಮೂಲಗಳು ತಿಳಿಸಿವೆ. ಈ ಹಿಂದೆ ಎರಡು ಬಾರಿ ಫ್ಲೈಓವರ್ ಉದ್ಘಾಟನೆಗೆ…
ಪ್ರತಿಭಟನೆ ಕೈಬಿಟ್ಟ ದೇವಾಲಯಗಳ ಪುರೋಹಿತರು, ನೌಕರರು
December 16, 2018ಮೈಸೂರು: ಚಾಮುಂಡಿಬೆಟ್ಟ ಸೇರಿದಂತೆ ಅರಮನೆಯ ದೇವಾಲಯಗಳ ಪುರೋಹಿತರು ಹಾಗೂ ನೌಕರರು, ಮುಜರಾಯಿ ಸಚಿವ ರಾಜಶೇಖರ ಪಾಟೀಲ್ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದಾರೆ. ಸರ್ಕಾರ 6ನೇ ವೇತನ ಜಾರಿ, ಹೆಚ್ಚುವರಿ ತುಟ್ಟಿಭತ್ಯೆ ಸಹಿತ ಖಾಯಂ ಆದೇಶ, ವಾರ್ಷಿಕ ಬೋನಸ್, ತಾತ್ಕಾಲಿಕ ನೌಕರರ ಖಾಯಂ ಮಾತಿ, ಮೃತಪಟ್ಟ ನೌಕರರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ, ಸಿಬ್ಬಂದಿಗಳಿಗೂ ವೈದ್ಯಕೀಯ ಸೌಲಭ್ಯ, ನೌಕರರು ಮೃತಪಟ್ಟರೆ 5 ಲಕ್ಷ ರೂ. ಪರಿಹಾರ, ಚಾಮುಂಡೇಶ್ವರಿ ದೇವಾಲಯದ ನೌಕರರ ವೇತನವನ್ನು ಬೆಟ್ಟದಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್…
ಹುಟ್ಟುಹಬ್ಬದ ದಿನದಂದೇ ಸಾವನ್ನಪ್ಪಿದ ಬಾಲಕ ಪ್ರೀತಂ
December 16, 2018ಮೈಸೂರು: ತನ್ನ ಆರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಬಾಲಕ ಹುಟ್ಟಿದ ಶುಕ್ರ ವಾರದಂದೇ ಸಾವನ್ನಪ್ಪಿದ ಮನಕಲುಕುವ ಘಟನೆ ನಿನ್ನೆ (ಡಿ.14) ನಡೆದಿದೆ. ಹನೂರು ತಾಲೂಕಿನ ಸುಳವಾಡಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ. ದೇವಸ್ಥಾನ ಗೋಪುರ ಉದ್ಘಾಟನೆ ವೇಳೆ ವಿತರಿಸಿದ ಪ್ರಸಾದ(ಅನ್ನಸಂತರ್ಪಣೆ) ತಿಂದು ಸಾವನ್ನಪ್ಪಿದ 11 ಮಂದಿ ಪೈಕಿ ಕೊಳ್ಳೇಗಾಲ ತಾಲೂಕಿನ ಬಿದರಳ್ಳಿ ಗ್ರಾಮದ ಷಣ್ಮುಗ ಅವರ ಮಗ ಪ್ರೀತಂ(6) ಸಹ ಒಬ್ಬ. ಘಟನೆ ಯಲ್ಲಿ ತೀವ್ರವಾಗಿ ಅಸ್ವಸ್ಥನಾಗಿ ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕ…
ಮೈಸೂರಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ
December 16, 2018ಮೈಸೂರು: ಮೈಸೂರಿನಲ್ಲಿ 3 ದಿನಗಳ 17ನೇ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2018 ಇಂದು ಆರಂಭವಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರ ಕಚೇರಿ ಸಂಯುಕ್ತಾಶ್ರಯದಲ್ಲಿ ಶನಿವಾರ ಮಾನಸ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆರಂಭವಾದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್ ಉದ್ಘಾಟಿಸಿದರು. ಶಾಸಕ…
`ವಿಷ’ ಪ್ರಸಾದ ಸೇವನೆ 12ಕ್ಕೂ ಅಧಿಕ ಮಂದಿ ಸಾವು 70ಕ್ಕೂ ಅಧಿಕ ಮಂದಿ ಅಸ್ವಸ್ಥ
December 15, 2018ಹನೂರು ಬಳಿ ಅರಣ್ಯದಂಚಿನ ಮಾರಿಗುಡಿಯಲ್ಲಿ ದುರಂತ ವೈಯಕ್ತಿಕ ವೈಷಮ್ಯದಿಂದ ವಿಷವಿಕ್ಕಿದ ಕಿರಾತಕರು ದೇವಸ್ಥಾನ ಆಡಳಿತ ಮಂಡಳಿಯ ಇಬ್ಬರು ಪೊಲೀಸ್ ವಶಕ್ಕೆ ಪ್ರಸಾದದಿಂದ ಕಾಗೆ, ನಾಯಿ ಮಾರಣಹೋಮ ಮೈಸೂರು ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಳ್ಳೇಗಾಲ, ಕಾಮಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಅಸ್ವಸ್ಥರಿಗೆ ಸರ್ಕಾರಿ ವೆಚ್ಚದಲ್ಲೇ ಚಿಕಿತ್ಸೆ ಮೈಸೂರಿಗೆ ದೌಡಾಯಿಸಿದ ಸಿಎಂ ಕುಮಾರಸ್ವಾಮಿ ಇಂದು ಮೈಸೂರಿಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹನೂರು: ಕಾಪಾಡು ತಾಯೇ ಎಂದು ಮಾರಿ ಮೊರೆ…