ಬೈಲಕುಪ್ಪೆ: ಪಿ.ಡಿ.ಓ. ಮಂಜುನಾಥ್ರ ಸರ್ವಾಧಿಕಾರ ಧೋರಣೆ ಖಂಡಿಸಿ ಬೆಣಗಾಲು ಗ್ರಾಮಸ್ಥರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಕಾರ್ಯನಿರ್ವಾಹಣಾಧಿಕಾರಿ ಶೃತಿ ಅವರು ಭೇಟಿ ನೀಡಿ ಧರಣಿ ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿರಿಯಾಪಟ್ಟಣ ತಾಲೂಕು ಬೆಣಗಾಲು ಗ್ರಾಪಂ ಕಚೇರಿಗೆ ಬೀಗ ಹಾಕಿ ಪಿಡಿಓ ಮಂಜುನಾಥ ಅವರನ್ನುಕೂಡಲೆ ವರ್ಗಾಯಿಸುವಂತೆ ಗ್ರಾಮಸ್ಥರು ಧರಣಿ ಪ್ರಾರಂಭಿಸಿದ್ದರು. ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಕಾರ್ಯನಿರ್ವಾಹಣಾಧಿಕಾರಿ ಶೃತಿ ಭೇಟಿನೀಡಿ ಧರಣಿಯನ್ನು ಕೈಬಿಟ್ಟು, ಒಂದು ವಾರ ಕಾಲಾವಕಾಶ ಕೊಡಿ. ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿ, ಪ್ರತಿಭಟನಾ ನಿರತರನ್ನು ಮನವೊಲಿಸಿದರು. ಸಾಕ್ಷಿ ನಾಶವಾಗದಂತೆ…
ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
December 15, 2018ನಂಜನಗೂಡು: ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಶಿರಮಳ್ಳಿ ಸಮೀಪದ ಕಂಬದ ಕೊಲ್ಲಿ ಶನಿದೇವರ ಗುಡಿಯ ಬಳಿ ನಡೆದಿದೆ. ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ನಾಲ್ವರು ಯುವಕರಲ್ಲಿ ಶಿರಮಳ್ಳಿ ಗ್ರಾಮದ ರಾಜು(23), ನಾಗೇಂದ್ರ(24) ಸ್ಥಳದಲ್ಲೇ ಮೃತಪಟ್ಟಿದ್ದು, ಆದೇ ಗ್ರಾಮ ಭರತ್ಕುಮಾರ್(19) ಕೈ ಮುರಿತಕ್ಕೊಳಗಾಗಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಮಾದೇವಶೆಟ್ಟಿ ಪುತ್ರ ಕುಮಾರ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಬೆಂಗಳೂರಿನ…
ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅವಕಾಶ
December 15, 2018ಹುಣಸೂರು: ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಸರ್ಕಾರದಿಂದ ರೈತರಿಂದ ನಮೂನೆ-57ರಲ್ಲಿ ಅರ್ಜಿ ಆಹ್ವಾನಿಸಿದ್ದು, 2019ರ ಮಾ.16ರೊಳಗೆ ಸೂಕ್ತ ದಾಖಲೆಯೊಂದಿಗೆ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ್ ಪಿ.ಸಿ.ಮೋಹನ್ ತಿಳಿಸಿದ್ದಾರೆ. ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಸುತ್ತೋಲೆಯಂತೆ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಹಲವಾರು ಮಾರ್ಗ ಸೂಚಿಗಳನ್ನು ಪ್ರಕಟಿಸಲಾಗಿದ್ದು, ಅರ್ಹ ರೈತರು ತಾಲೂಕು ಕಚೇರಿ ಭೇಟಿ…
ಡಿ.17ಕ್ಕೆ `ದುಬಾರಿ’ `ಬಾಲನಿನಾದ’ ಕೃತಿ ಬಿಡುಗಡೆ
December 15, 2018ಮೈಸೂರು: ಲೇಖಕ ಡಾ.ಪ್ರಸನ್ನ ಹೆಗಡೆ ಅವರ `ದುಬಾರಿ’ ಹಾಗೂ `ಬಾಲ ನಿನಾದ’ ಕೃತಿಗಳ ಬಿಡುಗಡೆ ಸಮಾ ರಂಭವನ್ನು ಡಿ.17ರಂದು ಹಮ್ಮಿ ಕೊಳ್ಳಲಾ ಗಿದೆ ಎಂದು ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಹಿರಿಮರಳಿ ಧರ್ಮರಾಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಞಾನವರ್ಧಿನಿ ಎಜುಕೇಷನಲ್ ಟ್ರಸ್ಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ವಿಚಾರ ವೇದಿಕೆ, ಭೂಮಿಗಿರಿ ಪ್ರಕಾಶನದ ಸಂಯುಕ್ತಾಶ್ರಯದಲ್ಲಿ ಕೃತಿಗಳ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ ಎಂದರು. ಅಂದು ಬೆಳಿಗ್ಗೆ 10ಕ್ಕೆ ಮೈಸೂರಿನ ಕಲಾ…
ನಾಳೆ ಮೈಸೂರು ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ
December 15, 2018ಮೈಸೂರು: ಸಿರಾಫಿಲ್ಸ್ ಮೀಡಿಯಾ ಅಂಡ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಣ್ಣ ಉದ್ಯಮಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಉದ್ಯಮಿಗಳಿಗೆ `ಮೈಸೂರು ಎಕ್ಸಲೆನ್ಸ್ ಆವಾರ್ಡ್’ ಪ್ರದಾನ ಸಮಾರಂಭವನ್ನು ಡಿ.16ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಿಇಓ ದೀಪಕ್ ಟಾಟರ್ ಜೈನ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮೈಸೂರು ಮೂಲದ 35 ಸಣ್ಣ ಉದ್ಯಮಿಗಳಿಗೆ ವಿವಿಧ ವಿಭಾಗದಲ್ಲಿ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು…
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಸೇವಾ ಭದ್ರತೆ ಬಗ್ಗೆ ಸೂಕ್ತ ನಿರ್ಧಾರ
December 14, 2018ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಹಾಗೂ ಖಾಯಂ ಸೇವಾ ಭದ್ರತೆ ಒದಗಿಸುವ ಸಂಬಂಧ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ವಿಧಾನಪರಿಷತ್ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ನಿರಾಣಿ ಹನುಮಂತ ರುದ್ರಪ್ಪ ಹಾಗೂ ಎಸ್.ಎಲ್.ಬೋಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018-19ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12642 ಉಪನ್ಯಾಸ ಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೇತನ ಹೆಚ್ಚಳ,…
ಮೈಸೂರು ದಸರಾಕ್ಕೆ 120 ಕೋಟಿ ವೆಚ್ಚ!
December 14, 2018ಬೆಳಗಾವಿ(ಸುವರ್ಣಸೌಧ): ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಜ್ಯ ಸರ್ಕಾರ 120 ಕೋಟಿ ರೂ. ವೆಚ್ಚ ಮಾಡಿದೆಯಂತೆ. ವಿಧಾನಸಭೆಗೆ ಆಯ್ಕೆಗೊಂಡಿರುವ ಶಾಸಕರು ಕಾರು ಖರೀದಿ ಸೇರಿದಂತೆ ವಿವಿಧ ಉದ್ದೇಶಗಳಿಗೆ 6,980 ಕೋಟಿ ರೂ.ಗಳ ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಮಂಡಿಸಿರುವ ಪೂರಕ ಅಂದಾಜಿನಲ್ಲಿ ದಸರಾ ಮಹೋತ್ಸವದ ವೆಚ್ಚವಲ್ಲದೆ, ಮೈಸೂರು ನಗರದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಇಷ್ಟು ಹಣ ವೆಚ್ಚ ಮಾಡಲಾಗಿದೆ….
ಮೊದಲು ರೈತರಿಗೆ ನೀರು ಕೊಡಿ ನಂತರ ಕೆಆರ್ಎಸ್ನಲ್ಲಿ ಡಿಸ್ನಿ-ಪಸ್ನಿ ಮಾಡಿಕೊಳ್ಳಿ…
December 14, 2018ಬೆಳಗಾವಿ(ಸುವರ್ಣಸೌಧ): ಕೃಷ್ಣರಾಜ ಸಾಗರ ಅಣೆಕಟ್ಟು ಕೆಳಭಾಗ ದಲ್ಲಿ 1500 ಕೋಟಿ ರೂ. ವೆಚ್ಚ ಮಾಡಿ ಡಿಸ್ನಿಲ್ಯಾಂಡ್ ನಿರ್ಮಿಸುವ ಬದಲು ಆಲಮಟ್ಟಿ ಜಲಾಶಯದ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಆಗ್ರಹಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಯಶವಂತರಾಯಗೌಡ ವಿಠಲಗೌಡ ಪಾಟೀಲ್ ಪ್ರಸ್ತಾವ ಮಾಡಿದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ, ಹೊಸ ಸರ್ಕಾರ ಬಂದ ನಂತರ ನೀರಾವರಿ ಯೋಜನೆಗಳು ಕುಂಠಿತಗೊಂಡಿವೆ ಎಂದರು. ದಿನನಿತ್ಯ ರೈತರ ಬಗ್ಗೆ ಮಾತನಾಡುವ ನೀವು, ಮೊದಲು ಅವರ ಹೊಲಕ್ಕೆ ಮತ್ತು ಕುಡಿಯಲು…
ಮೈಸೂರಲ್ಲಿ ರೈತರಿಂದ ದಿಢೀರ್ ಹೆದ್ದಾರಿ ತಡೆ
December 14, 2018ಮೈಸೂರು: ಕಬ್ಬು ಬೆಳೆಗಾರರು ಸೇರಿದಂತೆ ರೈತ ಸಮು ದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯ ದಲ್ಲಿ ಗುರುವಾರ ರೈತರು ದಿಢೀರ್ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಎಪಿಎಂಸಿ ಸಮೀಪದ ರಿಂಗ್ ರಸ್ತೆ ಜಂಕ್ಷನ್ನಲ್ಲಿ ಜಮಾಯಿಸಿದ ರೈತರು, ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ದರು. ರೈತಪರ ಸರ್ಕಾರ ಎಂದು…
ಶ್ರೀ ಸುಬ್ರಹ್ಮಣ್ಯ ಷಷ್ಠಿ: ಸಾವಿರಾರು ಭಕ್ತರಿಂದ ವಿಶೇಷ ಪೂಜೆ
December 14, 2018ಮೈಸೂರು: ಶ್ರೀಸುಬ್ರಹ್ಮಣ್ಯೇಶ್ವರ ಷಷ್ಠಿ ಅಂಗವಾಗಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಕ್ತರು ಹುತ್ತಕ್ಕೆ ಹಾಲೆರೆಯುವ ಮೂಲಕ ವಿಶೇಷ ಪೂಜೆ ನೆರವೇರಿಸಿದರು. ಮೈಸೂರು-ಬೆಂಗಳೂರು ಹೆದ್ಧಾರಿಯ ಸಿದ್ದಲಿಂಗಪುರ ಬಳಿ ಇರುವ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯ ದಲ್ಲಿ ಭಕ್ತಿ ಭಾವದಿಂದ ಷಷ್ಠಿಯನ್ನು ಆಚರಿಸಲಾ ಯಿತು. ಮುಂಜಾನೆ 3ರಿಂದ ರಾತ್ರಿ 12 ಗಂಟೆವರೆಗೂ ಭಕ್ತರು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆದರು. ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಎಂ.ವಿ.ಸುಬ್ರಹ್ಮಣ್ಯ ನೇತೃತ್ವದಲ್ಲಿ ಕಳೆದ ಮಧ್ಯ ರಾತ್ರಿಯಿಂದಲೇ ದೇವರಿಗೆ ಸಂಕಲ್ಪ, ರುದ್ರಾಭಿಷೇಕ, ಕ್ಷೀರಾಭಿಷೇಕ,…