ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸಿಎಆರ್ ಪರೇಡ್ ಗ್ರೌಂಡ್ನಲ್ಲಿ ಜಿಲ್ಲಾ ಮೀಸಲು ಪಡೆ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿ ಗಳ ದೈಹಿಕ ಪರೀಕ್ಷೆಗಳು ಬುಧವಾರ ದಿಂದ ಆರಂಭಗೊಂಡಿವೆ. ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ನೇತೃತ್ವದಲ್ಲಿ ಎಸ್ಪಿ ಅಮಿತ್ ಸಿಂಗ್, ಎಎಸ್ಪಿ ಸ್ನೇಹಾ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು ದೈಹಿಕ ಪರೀಕ್ಷೆ ನಡೆಸುತ್ತಿದ್ದು, ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಂದ ಸುಮಾರು 12 ಸಾವಿರ ಮಂದಿ…
ಡಾ.ಎಸ್.ಎಲ್.ಭೈರಪ್ಪರ `ಉತ್ತರ ಕಾಂಡ’ ಕುರಿತು ವಿಚಾರ ಸಂಕಿರಣ
September 28, 2018ಮೈಸೂರು: ಶ್ರೀರಂಗ ಪಟ್ಟಣದ ಪ್ರಿಯದರ್ಶನ ಸಾಂಸ್ಕøತಿಕ ವೇದಿಕೆ ಯಿಂದ ಸೆ.30ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಕೃಷ್ಣಮೂರ್ತಿಪುರಂ ಶಾರದ ವಿಲಾಸ ಕಾಲೇಜಿನ ಶತಮಾನೋತ್ಸವ ಭವನ ದಲ್ಲಿ ಡಾ.ಎಸ್.ಎಲ್.ಭೈರಪ್ಪನವರ `ಉತ್ತರ ಕಾಂಡ’ ಕೃತಿ ಕುರಿತ ವಿಚಾರ ಸಂಕಿರಣ ಮತ್ತು ಸಂವಾದ ಏರ್ಪಡಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಗ.ನಾ.ಭಟ್ಟ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕುವೆಂಪು ಭಾಷಾ ಭಾರತೀ ಮಾಜಿ ಛೇರ್ಮನ್ ಡಾ.ಪ್ರಧಾನ ಗುರುದತ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸರಸ್ವತಿ…
ಮೈಸೂರಲ್ಲಿ ‘ಶಾಂತಿಯೆಡೆಗೆ ನಮ್ಮ ನಡಿಗೆ’ ಜಾಥಾ
September 28, 2018ಮೈಸೂರು: ಸಂವಿ ಧಾನ ಸಂರಕ್ಷಣೆ ಹಾಗೂ ಶಾಂತಿ ಸೌಹಾ ರ್ದತೆಗಾಗಿ ಮೈಸೂರಿನಲ್ಲಿ ಗುರುವಾರ ವಿವಿಧ ಮಹಿಳಾ ಸಂಘಟನೆಗಳ ಕಾರ್ಯ ಕರ್ತರು `ಶಾಂತಿಯೆಡೆಗೆ ನಮ್ಮ ನಡಿಗೆ’ ಜಾಥಾ ನಡೆಸಿದರು. ಮೈಸೂರು ಅರಮನೆಯ ಉತ್ತರ ದ್ವಾರ ಬಳಿಯಿಂದ ಪುರಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ ಮಹಿಳಾ ಸಂಘ ಟನೆಗಳ ಕಾರ್ಯಕರ್ತರು ಮಾರ್ಗದು ದ್ದಕ್ಕೂ ಸಂವಿಧಾನ ರಕ್ಷಣೆ, ಶಾಂತಿ, ಸೌಹಾ ರ್ದತೆ ಕುರಿತಂತೆ ಘೋಷಣೆ ಕೂಗಿದರ ಲ್ಲದೆ, ಸಂವಿಧಾನ ವಿರೋಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸಂವಿ ಧಾನದ ರಕ್ಷಣೆಗೆ ಆಗ್ರಹಿಸಿ ದೇಶದ ಐದು…
ಕೆ.ಆರ್.ನಗರದಲ್ಲಿ ನ.1ರಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ
September 28, 2018ಕೆ.ಆರ್.ನಗರ: ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಿಂದ ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಪುರಸಭಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ತಿಳಿಸಿದರು. ಪಟ್ಟಣದ ಪುರಸಭೆಯ ಸಭಾಂಗಣ ದಲ್ಲಿ ಕರೆಯಲಾಗಿದ್ದ ಸ್ಥಾಯಿ ಸಮಿತಿ ಸಭೆ ಯಲ್ಲಿ ಪಟ್ಟಣದ ಹೊಟೇಲ್ ಮಾಲೀಕರು, ರಸ್ತೆ ಬದಿ ವ್ಯಾಪಾರಿಗಳು, ಕೋಳಿ, ಮಾಂಸದ ಅಂಗಡಿ ಮಾಲೀಕರುಗಳು, ಪಾನಿಪುರಿ ಮತ್ತು ಫಾಸ್ಟ್ಫುಡ್ ವ್ಯಾಪಾರಿ ಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ ಪಟ್ಟಣವು ಮಾದರಿ ಪಟ್ಟಣವಾಗಿದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯನ್ನು ಕಾಪಾ ಡಬೇಕೆಂದು ಸೂಚಿಸಿದರು….
ಜೀತ, ಮಲ ಹೊರುವ ಪದ್ಧತಿ ಹೋಗಲಾಡಿಸಿದವರು ಡಿ. ದೇವರಾಜ ಅರಸು
September 28, 2018ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎ.ಹೆಚ್.ವಿಶ್ವನಾಥ್ ಹುಣಸೂರು: ಜೀತ ಹಾಗೂ ಮಲ ಹೊರುವ ಪದ್ಧತಿ ಹೋಗ ಲಾಡಿಸಿದ ಡಿ. ದೇವರಾಜ ಅರಸು ಅವರನ್ನು ಪೌರ ಕಾರ್ಮಿಕರು ಸ್ಮರಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎ.ಹೆಚ್.ವಿಶ್ವನಾಥ್ ಅಭಿಪ್ರಾಯ ಪಟ್ಟರು. ನಗರದ ನಗರಸಭಾ ಕಚೇರಿ ಸಭಾಂಗಣ ದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸನ್ಮಾನ ಸಮಾ ರಂಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಮೊದಲು ತಮ್ಮ ಅರೋಗ್ಯ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ…
ಶಿಕ್ಷಣದ ಜತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ
September 28, 2018ಹುಣಸೂರು: ಪ್ರತಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟು ವಟಿಕೆಗಳ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ತಮ್ಮ ಜೀವನವನ್ನು ಶಕ್ತಿಯುತವಾಗಿ ಮತ್ತು ಮೌಲ್ಯಯುತವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮೈಸೂರು ವಿವಿಯ ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಿ.ವೆಂಕಟೇಶ್ ಕುಮಾರ್ ತಿಳಿಸಿದರು. ನಗರದ ದೇವರಾಜ ಅರಸ್ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಎನ್ಎಸ್ಎಸ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾ ರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಸ್ಥ್ಯ ಸಮಾಜದ ನಿರ್ಮಾಣ ಕ್ಕಾಗಿ ವಿದ್ಯಾರ್ಥಿಗಳು ಜೀವನದಲ್ಲಿ…
ಕೆ.ಆರ್.ನಗರದಲ್ಲಿ ಅದ್ಧೂರಿ ಗ್ರಾಮೀಣ ದಸರಾ ಆಚರಣೆ
September 28, 2018ಕೆ.ಆರ್.ನಗರ: ತಾಲೂಕಿನಲ್ಲಿ ಗ್ರಾಮೀಣ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅಧಿಕಾರಿಗಳೊಂದಿಗೆ ಚುನಾಯಿತಿ ಸದ ಸ್ಯರು ಮತ್ತು ಸಾರ್ವಜನಿಕರು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ತಹಶೀ ಲ್ದಾರ್ ನಿಖಿತಾ.ಎಂ.ಚಿನ್ನಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ದಸರಾ ಹಿನ್ನಲೆಯಲ್ಲಿ ಸರ್ಕಾರ ಗ್ರಾಮೀಣ ದಸರಾ ಆಚರಣೆ ಮಾಡುವಂತೆ ಸೂಚಿಸಿರುವುದರ ಜತೆಗೆ ಹೋಬಳಿ ಮಟ್ಟದಲ್ಲೂ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಅ.10ರಂದು ಹೆಬ್ಬಾಳು ಮತ್ತು ಚುಂಚನ ಕಟ್ಟೆ, 11…
ಆಧಾರ್ಗೆ ಸಾಂವಿಧಾನಿಕ ಮಾನ್ಯತೆ
September 27, 2018ನವದೆಹಲಿ: ಬಹು ನಿರೀಕ್ಷಿತ ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಆಧಾರ್ ಮೇಲಿನ ದಾಳಿ, ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಹೇಳುವ ಮೂಲಕ ಆಧಾರ್ ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಹೊರಬಿದ್ದಿದ್ದು, ಅಂತಿಮ ತೀರ್ಪಿನ ವಿವರವನ್ನು ನ್ಯಾಯಮೂರ್ತಿ ಎ.ಕೆ.ಸಿಕ್ರಿ ಓದಿದರು. ‘ಆಧಾರ್ ಮೇಲಿನ ದಾಳಿ ಸಂವಿಧಾನಕ್ಕೆ ವಿರುದ್ಧವಾದುದು. ಆಧಾರ್ ದತ್ತಾಂಶಗಳ ಸೋರಿಕೆ ಅಥವಾ ಅವುಗಳನ್ನು ಕದಿಯುವುದು ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ಮಾಹಿತಿ ರಕ್ಷಣೆಗೆ ಕೇಂದ್ರ ಸರ್ಕಾರ…
ಎಸ್ಸಿ, ಎಸ್ಟಿ ನೌಕರರ ಮುಂಬಡ್ತಿಗೆ ಮೀಸಲಾತಿ ಅಗತ್ಯವಿಲ್ಲ
September 27, 2018ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪು ನೀಡಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪಂಚ ಸದಸ್ಯ ಪೀಠ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ. ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ನ ಐವರು ಸದಸ್ಯರ ಸಂವಿಧಾನಿಕ…
ಕೊಡಗಿನ ದುರಂತಕ್ಕೆ ಮಳೆ, ಪ್ರಕೃತಿ ಮೇಲಿನ ಮಾನವ ಅಟ್ಟಹಾಸ ಕಾರಣ
September 27, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಅತಿಯಾದ ಮಳೆ ಮತ್ತು ಪ್ರಕೃತಿ ಮೇಲಿನ ಮಾನವನ ಅಟ್ಟಹಾಸ ಕಾರಣವೆಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ(ಜಿಎಸ್ಐ)ದ ಹಿರಿಯ ಭೂ ವಿಜ್ಞಾನಿಗಳ ತಂಡ ವರದಿ ನೀಡಿದೆ. ಕೊಡಗು ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರಕ್ಕೆ ಜಿಎಸ್ಐನ ಮೂವರು ಭೂ ವಿಜ್ಞಾನಿಗಳು ತಯಾರಿಸಿದ 279 ಪುಟಗಳ ಪ್ರಾಥಮಿಕ ವರದಿಯನ್ನು ಸಲ್ಲಿಸಲಾಗಿದೆ. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ಹಿರಿಯ ನಿರ್ದೇಶಕ ಕೆ.ವಿ. ಮಾರುತಿ ಮತ್ತು ಭೂ ವಿಜ್ಞಾನಿಗಳಾದ ಅಂಕುರ್ ಕುಮಾರ್ ಶ್ರೀವಾಸ್ತವ್…