ಮೈಸೂರು: -ಹಿಂದಿನ ಕಾಲದಲ್ಲಿದ್ದ ಪ್ರಾದೇಶಿಕ ಸಾಹಿ ತ್ಯದ ನೆಲೆಗಟ್ಟು, ಇಂದು ಕಣ್ಮರೆಯಾಗು ತ್ತಿವೆ. ಇದರಿಂದ ನಮ್ಮ ಗ್ರಾಮಗಳು ಗತಿ ಬಿಂಬದಂತೆ ಭಾಸವಾಗುತ್ತಿವೆ ಎಂದು ಹಾಸನದ ಎ.ವಿ.ಕೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಹೆಚ್.ಎಲ್. ಮಲ್ಲೇಶ್ಗೌಡ ಬೇಸರ ವ್ಯಕ್ತಪಡಿಸಿದರು. ಮೈಸೂರು ಅರಮನೆ ಉತ್ತರದ್ವಾರದಲ್ಲಿ ರುವ ಕಸಾಪ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಕಲಾಕೂಟ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ನಡೆದ ಸಾಹಿತ್ಯ ಸಂಜೆ ಶೀರ್ಷಿಕೆಯಡಿ `ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಬದುಕು ಬರಹ-ಒಂದು ಚಿಂತನೆ’ ಕಾರ್ಯಕ್ರಮ…
`ಜಯಚಾಮರಾಜ ಒಡೆಯರ್ ಪೂಜಾ ವಿಧಾನದ `ವಿಶೇಷ ಬೊಂಬೆ ಅಂಕಣ’ ಈ ಬಾರಿಯ ಆಕರ್ಷಣೆ
September 22, 2018ಮೈಸೂರು: ಪ್ರತಿ ವರ್ಷದಂತೆ ಈ ವರ್ಷವೂ ರಾಮ್ಸನ್ಸ್ ಕಲಾ ಪ್ರತಿಷ್ಠಾನವು ಸೆ.22ರಿಂದ ಮೈಸೂರಿನ ನಜರ್ಬಾದ್ ಮುಖ್ಯ ರಸ್ತೆಯ ಪ್ರತಿಮಾ ಗ್ಯಾಲರಿಯಲ್ಲಿ ‘ಬೊಂಬೆ ಪ್ರದರ್ಶನ ಮತ್ತು ಮಾರಾಟ’ ಏರ್ಪಡಿಸಿದೆ. ಒಂದೇ ಸೂರಿನಡಿ 10 ಸಾವಿರಕ್ಕೂ ಹೆಚ್ಚಿನ ನಾನಾ ಪ್ರದೇಶದ, ನಾನಾ ಅಳತೆಯ, ನಾನಾ ರೀತಿಯ ಬೊಂಬೆಗಳನ್ನು ಇಲ್ಲಿ ಕಾಣಬಹುದಾಗಿದೆ. ಮಣ್ಣು, ಕಾಗದ ರಚ್ಚು (ಪೇಪರ್ ಮೆಷ್), ಪ್ಲಾಸ್ಟರ್ ಆಫ್ ಪ್ಯಾರಿಸ್, ಪಿಂಗಾಣಿ, ಮರ, ಲೋಹ ಇತ್ಯಾದಿಗಳಿಂದ ರಚಿಸಲಾಗಿರುವ ಬೊಂಬೆಗಳು ವೈವಿಧ್ಯಮಯ ಬೊಂಬೆ ಲೋಕವನ್ನೇ ಇಲ್ಲಿ ಸೃಷ್ಟಿಸಿವೆ. ಮೈಸೂರು, ಚನ್ನಪಟ್ಟಣ,…
ನೋಡಲಾಗದು ಗ್ರಾಮೀಣ ವಿದ್ಯಾರ್ಥಿನಿಯರ ನಿತ್ಯ ನರಳಾಟದ ನಡಿಗೆ
September 22, 2018ಮೈಸೂರು: ಮೈಸೂರಿನ ವಿನಾಯಕನಗರ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜು ವಿದ್ಯಾರ್ಥಿನಿಯರು, ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲದೆ ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ನೂತನ ಕಟ್ಟಡದಲ್ಲಿ ತರಗತಿಗಳು ಆರಂಭವಾದ ದಿನದಿಂದಲೂ ಎದುರಿಸುತ್ತಿರುವ ತೊಂದರೆಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಗ್ರಾಮೀಣ ಭಾಗದಿಂದ ಬರುವ ನೂರಾರು ವಿದ್ಯಾರ್ಥಿನಿಯರ ಹೆಣಗಾಟ ಹೇಳತೀರದು. ವಿದ್ಯಾರ್ಥಿನಿಯರು ಹಾಗೂ ಕಾಲೇಜು ಪ್ರಾದ್ಯಾಪಕರ ಒತ್ತಾಯದಿಂದಾಗಿ ಮೈಸೂರು-ಬಿಳಿಕೆರೆ ಮಾರ್ಗದ ಬಸ್ಸುಗಳಿಗೆ ನಿಲುಗಡೆ ನೀಡಲಾಗುತ್ತಿದೆ. ಇದರ ಹೊರತು ಬೇರ್ಯಾವ ಮಾರ್ಗದಿಂದಲೂ ಕಾಲೇಜು ಸಂಪರ್ಕಕ್ಕೆ ಬಸ್ ಸೌಲಭ್ಯವಿಲ್ಲ. ಒಂದೆರಡು ಕಿಮೀ…
ಮೈಸೂರಲ್ಲಿ ಇಂದು, ನಾಳೆ `ಡಿಜಿ ಫೋಟೋ ಎಕ್ಸ್ಪೋ’
September 22, 2018ಮೈಸೂರು: ಮೈಸೂರು ಡಿಸ್ಟ್ರಿಕ್ಟ್ ಫೋಟೋಗ್ರಾಫರ್ಸ್ ಅಂಡ್ ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ಹಾಗೂ ಬೆಂಗಳೂರಿನ ಕರ್ನಾಟಕ ವಿಡಿ ಯೋಗ್ರಾಫರ್ಸ್ ಮತ್ತು ಫೋಟೋಗ್ರಾಫರ್ಸ್ ಅಸೋಸಿಯೇಷನ್, ಬೈ ಸೇಲ್ ಇಂಟ್ರಾ ಕ್ಷನ್ ಕಂಪನಿ ಜಂಟಿಯಾಗಿ ಮೈಸೂರಿನ ಹೆಬ್ಬಾ ಳದ ಶುಭೋದಿನಿ ಕನ್ವೆನ್ಷನ್ ಸೆಂಟರ್ನಲ್ಲಿ ಸೆ.22 ಮತ್ತು 23ರಂದು ಅಂತಾರಾಷ್ಟ್ರೀಯ ಮಟ್ಟದ ಡಿಜಿ ಫೋಟೋ ಎಕ್ಸ್ಪೋ ಮೇಳ ಹಾಗೂ ವಸ್ತು ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಅಸೋಸಿ ಯೇಷನ್ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸೆ.22ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ…
ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ: ದಿನಗೂಲಿ ನೌಕರರ ಮಹಾಮಂಡಲ ಎಚ್ಚರಿಕೆ
September 22, 2018ಮೈಸೂರು: ದಿನಗೂಲಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾ ರಕ್ಕೆ ಸಾಕಷ್ಟು ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಸೆ.30ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲ ಏರ್ಪಡಿಸಿರುವ ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹೋರಾಟದ ರೂಪು ರೇಷೆಗಳನ್ನು ನಿರ್ಧರಿಸಲಾಗುವುದು ಎಂದು ಮಂಡಲದ ಮೈಸೂರು-ಚಾಮರಾಜನಗರ ಜಿಲ್ಲಾ ಸಂಚಾಲಕ ಜಿ.ರಮೇಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ನಿರಂತರ ಹೋರಾಟದ ಫಲವಾಗಿ ಜಗದೀಶ್ ಶೆಟ್ಟರ್ ಮುಖ್ಯ ಮಂತ್ರಿಯಾಗಿದ್ದಾಗ…
ಸೆ.28ರಂದು ಶ್ರೇಷ್ಠ ಶಿಕ್ಷಕ ಡಾ. ಬಿ. ಗುರು ಬಸವರಾಜ್ ಅಭಿನಂದನಾ ಸಮಾರಂಭ
September 22, 2018ಮೈಸೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಮೈಸೂರಿನ ಜೆಎಸ್ಎಸ್ ಆಯುರ್ವೇದ ಕಾಲೇಜಿನ ಪ್ರೊ. ಡಾ.ಬಿ.ಗುರು ಬಸವರಾಜ್ ಅವರಿಗೆ ಅಭಿನಂದನಾ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಆಯುರ್ವೇದ ಪ್ರಚಾರ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸೆ.28ರಂದು ಸಂಜೆ 5 ಗಂಟೆಗೆ ಕಸಾಪ ಸಭಾಂಗಣ ದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಸಚಿವ ಎಂ. ಶಿವಣ್ಣ ಉದ್ಘಾಟಿಸುವರು. ಖ್ಯಾತ ವಿಮರ್ಶಕ ಮಲೆಯೂರು ಗುರುಸ್ವಾಮಿ ಮತ್ತು ಡಾ. ಎಂ.ಜಿ.ಆರ್.ಅರಸ್ ಅವರು ಅಭಿನಂದನಾ…
ನಾಳೆ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಪೌರ ಸನ್ಮಾನ
September 22, 2018ಮೈಸೂರು: ಜಯ ದೇವ ಹೃದ್ರೋಗ ಆಸ್ಪತ್ರೆಯ ನಿರ್ದೇ ಶಕ, ಪದ್ಮಶ್ರೀ ಡಾ. ಸಿ.ಎನ್.ಮಂಜು ನಾಥ್ ಅವರಿಗೆ ಸೆ.23ರ ಸಂಜೆ 4 ಗಂಟೆಗೆ ಮೈಸೂ ರಿನ ಮಾನಸಗಂಗೋತ್ರಿ ಸೆನೆಟ್ ಭವನ ದಲ್ಲಿ ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾಜದ ಎಲ್ಲಾ ಜಾತಿ, ವರ್ಗ, ಧರ್ಮ, ಬಡವ, ಬಲ್ಲಿದ ಎಂಬ ಭೇದವಿಲ್ಲದೆ, ಸಮಾಜದ ಎಲ್ಲರನ್ನೂ ಸಮಾನರೆಂದು ಪರಿಗಣಿಸಿ, ಮನೋಭಾವದೊಂದಿಗೆ ಸಮಾಜಮುಖಿ ಕೆಲಸ ನಿರ್ವಹಿಸುತ್ತಿರುವ…
ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ, ಇಡಿ ದುರ್ಬಳಕೆ: ಬಿಜೆಪಿ ವಿರುದ್ಧ ಹೋರಾಟದ ಎಚ್ಚರಿಕೆ
September 22, 2018ಮೈಸೂರು,: ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಹಾಗೂ ಇಡಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಮೈಸೂರಿನ ಅಜೀಜ್ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ ರಾಜೇಶ್ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಈ ಇಲಾಖೆಗಳ ಮೇಲೆ ಒತ್ತಡ ಹೇರುವ ಮೂಲಕ ಕಾಂಗ್ರೆಸ್ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ವ್ಯವಸ್ಥಿತವಾಗಿ ಹಣಿಯಲು ಮುಂದಾಗಿದ್ದಾರೆ. ಹಾಗೇನಾದರೂ ಬಿಜೆಪಿ ನಾಯಕರು ತಮ್ಮ ನಡೆ ಬದಲಿಸಿಕೊಳ್ಳದಿದ್ದರೆ…
ಇಂದು ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ
September 22, 2018ಬೆಂಗಳೂರು: ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ತುರ್ತಾಗಿ ನಾಳೆ (ಸೆ.22) ಹಾಸನದಲ್ಲಿ ಕರೆಯಲಾಗಿದೆ. ಹಾಸನದ ಹೊಯ್ಸಳ ರೆಸಾರ್ಟ್ನಲ್ಲಿ ನಾಳೆ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ನ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿ ಸಲಿದ್ದಾರೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಮೈತ್ರಿ…
ದಂಗೆ ಏಳುವಂತೆ ಕರೆ ಕೊಡುತ್ತೇನೆ
September 21, 2018ಹಾಸನ/ಬೆಂಗಳೂರು: ‘ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಉದಯಪುರದಲ್ಲಿ ಗುರುವಾರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಯಡಿಯೂರಪ್ಪ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮುಂದು ವರೆಸಿದ್ದಾರೆ. ಪ್ರತಿನಿತ್ಯ ಪ್ರತಿಪಕ್ಷದವರ ಕಾಟ ಸಹಿಸಿಕೊಳ್ಳಬೇಕೋ…