ಮೈಸೂರು: ಮೈಸೂರಿನ ವಿಶ್ವಮಾನವ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.23ರಂದು ಬೆಳಿಗ್ಗೆ 11.30ಕ್ಕೆ ನರಸೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಜಯ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರ ಹಾಗೂ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.25 ರಂದು ಬೆಳಿಗ್ಗೆ 11 ಗಂಟೆಗೆ ತ್ಯಾಗರಾಜ ರಸ್ತೆಯ ಅರಸು ಮಂಡಳಿ ಸಂಘದಲ್ಲಿ ಏರ್ಪಡಿಸಲಾಗಿದೆ. ಮೈಸೂರು ನಗರ ಮಹಿಳಾ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.22ರಂದು…
ಶ್ರೀ ಜಯಚಾಮರಾಜೇಂದ್ರ ಒಡೆಯರ್ ಪುಣ್ಯಸ್ಮರಣೆ
September 21, 2018ಮೈಸೂರು: ಮೈಸೂರಿನ ಅರಸು ಮಂಡಲಿ ವತಿಯಿಂದ ಸೆಪ್ಟೆಂಬರ್ 24 ರಂದು ಸಂಜೆ 6 ಗಂಟೆಗೆ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯ ಸ್ಮರಣೆ, ಸರ್ದಾರ್ ಎಂ. ಕಾಂತರಾಜೇ ಅರಸ್ ಅವರ ಜಯಂತಿ ಮತ್ತು ಬೆಳದಿಂಗಳ ಸಂಗೀತ ಸಂಜೆ ಕಾರ್ಯ ಕ್ರಮ ಹಾಗೂ ಅಕ್ಟೋಬರ್ 2 ರಂದು ಬೆಳಿಗ್ಗೆ 10ಗಂಟೆಗೆ ಸರ್ದಾರ್ ಎಂ.ಕಾಂತರಾಜೇ ಅರಸ್ ಅವರ ಪುಣ್ಯ ಸ್ಮರಣೆ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕನಕದಾಸ ಪತ್ತಿನ ಸಹಕಾರ ಸಂಘದ ಉದ್ಘಾಟನೆ
September 21, 2018ಮೈಸೂರು: ಶ್ರೀ ಕನಕದಾಸ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಹಾಗೂ ಪ್ರಸಕ್ತ ಸಾಲಿನ ವಾರ್ಷಿಕ ಸಭೆ ಹಾಗೂ ಸಂಘದ 20ನೇ ವಾರ್ಷಿಕೋತ್ಸವವನ್ನು ಸೆ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ಎನ್.ಕುಮಾರಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕನಕದಾಸನಗರ 3ನೇ ಹಂತದಲ್ಲಿ ಸಿಎ ನಿವೇಶನದಲ್ಲಿ ನಿರ್ಮಿಸಿರುವ ಸಂಘದ ನೂತನ ಕಟ್ಟಡದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ 10.30ಕ್ಕೆ ಸಮಾರಂಭ ಆರಂಭವಾಗಲಿದೆ ಎಂದು ಹೇಳಿದರು. ಕಟ್ಟಡ ಮತ್ತು…
ನನಗೆ ಸಾಕಷ್ಟು ಅನುಭವವಿದೆ, ನನ್ನ ಸರ್ಕಾರ ಉಳಿಸಿಕೊಳ್ಳುತ್ತೇನೆ, ನಾನೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ
September 20, 2018ಬೆಂಗಳೂರು: ಸರ್ಕಾರ ಉಳಿಯುತ್ತೋ, ಬೀಳುತ್ತೋ ಎಂಬ ಉದಾಸೀನ ಚರ್ಚೆಯಲ್ಲಿ ಕಾಲಹರಣ ಮಾಡಿ ಕೆಲಸ ಮಾಡದೆ ಇರುವ ಅಧಿಕಾರಿಗಳಿಗೆ ಒಂದು ವಾರ ಕಾಲಾವಕಾಶ ನೀಡುತ್ತೇನೆ. ಅನಂತರವೂ ಎಚ್ಚೆತ್ತುಕೊಳ್ಳದಿದ್ದರೆ ಸರಿಯಾಗಿ ಚಾಟಿ ಬೀಸುತ್ತೇನೆ. ನನ್ನ ಇನ್ನೊಂದು ಮುಖದ ದರ್ಶನ ಮಾಡಿಸಬೇಕಾಗುತ್ತದೆ ಎಂದು ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ 100ನೇ ರಾಜ್ಯ ಪರಿಷತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈವರೆಗೂ ನನ್ನ ಒಂದು ಮುಖ ನೋಡಿದ್ದಾರೆ. ಜವಾನನಿಂದ ಹಿಡಿದು ಎಲ್ಲರನ್ನು…
ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ, ಇಲ್ಲ ನಾನೇ ಒಂದು ನಿರ್ಧಾರಕ್ಕೆ ಬರಬೇಕಾಗುತ್ತದೆ
September 20, 2018ಜಾರಕಿಹೊಳಿ ಸಹೋದರರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ನುಡಿ ಮರು ಮಾತನಾಡದೇ ಬಂಡಾಯದಿಂದ ಹಿಂದೆ ಸರಿದ ಬೆಳಗಾವಿ ದೊರೆಗಳು ಬೆಂಗಳೂರು: ವಿಧಾನಸಭಾ ಸದಸ್ಯತ್ವ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ.ದಿನನಿತ್ಯ ನನಗೆ ನಿಮ್ಮಿಂದ ಒತ್ತಡ ಹೆಚ್ಚಾಗುತ್ತಿದೆ. ನೀವು ಇಂದು ನಿರ್ಧಾರ ಕೈಗೊಳ್ಳದಿದ್ದರೆ, ನಾನೇ ಒಂದು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ಜಾರಕಿಹೊಳಿ ಕುಟುಂಬದವರಿಗೆ ಎಚ್ಚರಿಕೆ ನೀಡಿದ ವರಸೆ ಇದಾಗಿದೆ. ಬಂಡಾಯದ ಮುಂಚೂಣಿಯಲ್ಲಿದ್ದ ಸಚಿವ…
ಬಿಜೆಪಿ ಶಾಸಕರ ಸೆಳೆಯಲು ಸಿಎಂ ಕುಮಾರಸ್ವಾಮಿ ಯತ್ನ: ಬಿಎಸ್ವೈ ಆರೋಪ
September 20, 2018ಬೆಂಗಳೂರು: ಸರ್ಕಾರಕ್ಕೆ ಒದಗಿ ಬಂದಿರುವ ಗಂಡಾಂತರದಿಂದ ಪಾರಾಗಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಒಂದು ದಿನದ ಬಿಜೆಪಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ಸರ್ಕಾರ ಉರುಳಿ ಹೋಗುತ್ತದೋ ಎಂಬ ಭೀತಿ ಕುಮಾರಸ್ವಾಮಿ ಅವರಿಗೆ ಕಾಡುತ್ತಿದೆ. ಮೈತ್ರಿ ಪಕ್ಷದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಲ್ಲಿ ಯಡಿಯೂರಪ್ಪನವರನ್ನು ಬೆಂಬಲಿಸುತ್ತಾರೋ ಎಂಬ ಕಾರಣಕ್ಕೆ ತಮ್ಮ ಅಧಿಕಾರವನ್ನು…
ಮೈಸೂರಲ್ಲಿ ಸಾವಿರಾರು ಪೌರ ಕಾರ್ಮಿಕರ ಭಾರೀ ಮೆರವಣಿಗೆ
September 20, 2018ಮೈಸೂರು: ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಸ್ಥಳೀಯ ಸಂಸ್ಥೆಯಿಂದ ನೇರವಾಗಿ ತಮಗೆ ವೇತನ ಪಾವತಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಪೌರಕಾರ್ಮಿಕರು ಇಂದು ಮೈಸೂರಿನಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದ ರಾಜ್ಯಾಧ್ಯಕ್ಷರಾದ ಮಾಜಿ ಮೇಯರ್ ನಾರಾಯಣ ನೇತೃತ್ವದಲ್ಲಿ ನಡೆದ ಪ್ರತಿ ಭಟನೆಯಲ್ಲಿ 1500ಕ್ಕೂ ಹೆಚ್ಚು ಪೌರ ಕಾರ್ಮಿಕರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಮೆರವಣಿಗೆಯು ಗಾಂಧಿಚೌಕ, ಮಕ್ಕಾಜಿ ಚೌಕ, ಕೆ.ಆರ್. ಸರ್ಕಲ್, ದೇವರಾಜ…
ನಾನು ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಯಾವ ಅಪರಾಧ ಮಾಡಿಲ್ಲ
September 20, 2018ಬೆಂಗಳೂರು: ನಾನು ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಬೇರೆ ಯಾವುದೇ ಅಪ ರಾಧ ಮಾಡಿಲ್ಲ. ಕೇಸ್ಗಳಿಗೆ ಹೆದರಿ ಓಡಿ ಹೋಗುವ ಹೇಡಿಯೂ ನಾನಲ್ಲ ಎಂದು ಜಲಸಂಪ ನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅಬ್ಬರಿಸಿದರು. ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಬುಧವಾರ ಬೆಳಿಗ್ಗೆ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಹವಾಲಾ ವ್ಯವಹಾರ ಆರೋಪ ಮಾಡಿ ದ್ದರು. ಇದರಿಂದ ಕೆರಳಿದ ಡಿ.ಕೆ.ಶಿವಕುಮಾರ್, ವಿಷ…
ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಾಲಿನ ಎಟಿಎಂ
September 20, 2018ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಎಐಸಿಸಿಯ ಎಟಿಎಂ ಆಗಿದ್ದು, ಅವರು ಕಾಂಗ್ರೆಸ್ ಹೈಕಮಾಂಡ್ಗೆ ಹವಾಲಾ ಮೂಲಕ ಕೆ.ಜಿ.ಗಟ್ಟಲೆ ಹಣ ರವಾನಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಆರೋಪಿಸಿದರು. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಡಿ.ಕೆ. ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೈರಿ ಬಿಡುಗಡೆ ಮಾಡಿದರು. ದೆಹಲಿಯ ಅಪಾರ್ಟ್ಮೆಂಟ್ವೊಂದರಲ್ಲಿ 8 ಕೋಟಿ ರೂ. ದೊರೆತ ಪ್ರಕರಣಕ್ಕೆ ಸಂಬಂಧಿಸಿದರಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಎಫ್ಐಆರ್ ದಾಖಲಿಸಿದ್ದನ್ನು ಉಲ್ಲೇಖಿಸಿದ…
ಮೈಸೂರಿನ ಅಂದ ಹೆಚ್ಚಿಸುವ ಕಾರ್ಯ ಆರಂಭ
September 20, 2018ಮೈಸೂರು: ಐತಿಹಾಸಿಕ ಮೈಸೂರು ದಸರಾ ಉತ್ಸವದ ವೇಳೆ ಮೈಸೂರು ನಗರದ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ಸ್ಥಳೀಯರ ಜೊತೆಗೆ ಪ್ರವಾಸಿಗರ ಮನಸೂರೆಗೊಳ್ಳುವ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ. ಇದಕ್ಕೆ ಕಾರಣ ನಗರದ ರಸ್ತೆಗಳ ವಿಭಜಕಗಳಿಗೆ ಬಣ್ಣದ ಲೇಪನದೊಂದಿಗೆ ನಗರದಲ್ಲಿ ವಿದ್ಯುತ್ ದೀಪಾಲಂಕಾರದ ಮೆರಗು ಸಹ ಕಾರಣ. ಈ ಬಾರಿಯ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಮೈಸೂರು ಮಹಾನಗರ ಪಾಲಿಕೆ ನಗರದ ಸೌಂದರ್ಯವನ್ನು ದ್ವಿಗುಣಗೊಳಿಸಲು ಅನೇಕ ಕೆಲಸ-ಕಾರ್ಯಗಳಿಗೆ ಚಾಲನೆ ನೀಡಿದೆ. ರಸ್ತೆ ಡಾಂಬರೀಕರಣ, ಗುಂಡಿಗಳನ್ನು ಮುಚ್ಚುವ ಕಾಮಗಾರಿ ಸೇರಿದಂತೆ ಹಲವು…