ಬೆಂಗಳೂರು: ಬುದ್ಧಿಮಾಂದ್ಯ ರೋಗಿಗಳಿಗೂ ನೂತನ ಆಯುಷ್ಮಾನ್ ಭಾರತ ಯೋಜನೆಯಡಿ ಔಷಧೋಪಚಾರ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಇಂದಿಲ್ಲಿ ತಿಳಿಸಿದರು. ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈ ತಿಂಗಳ 25ರಿಂದ ಕೇಂದ್ರ ಸರ್ಕಾರ ಪ್ರಾಯೋಜಿತ ‘ಆಯುಷ್ಮಾನ್ ಭಾರತ’ ಯೋಜನೆ ಪ್ರಾರಂಭವಾಗಲಿದೆ. ಯೋಜನಾ ವ್ಯಾಪ್ತಿಗೆ ಬುದ್ಧಿಮಾಂದ್ಯ ರೋಗಿಗಳ ಸೇರ್ಪಡೆಗೆ ಗಂಭೀರ ಚಿಂತನೆ ನಡೆದಿದೆ ಎಂದರು. ಇದರಿಂದ ಚಿಕಿತ್ಸೆಗೆ ತಗಲುವ ವೆಚ್ಚ, ಔಷಧಿ ವೆಚ್ಚವನ್ನೂ ಕೇಂದ್ರವೇ ಭರಸಲಿದೆ. ಯೋಜನೆ ವ್ಯಾಪ್ತಿಗೆ ವಿವಿಧ ಕ್ಷೇತ್ರಗಳ ಪರಿಣಿತರು ಅವರ ಕುಟುಂಬದ…
ಸೆ. 18ರಂದು ಬೆಂಗಳೂರಲ್ಲಿದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ
September 15, 2018ಬೆಂಗಳೂರು: ದಕ್ಷಿಣ ಭಾರತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಈ ತಿಂಗಳ 18ರಂದು ಕೇಂದ್ರ ಗೃಹ ಸಚಿವ ರಾಜನಾಥ್ಸಿಂಗ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಮಹಾ ಮಳೆಯಿಂದ ಹಾನಿಗೀಡಾದ ಕೊಡಗು ಜಿಲ್ಲೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ 10 ಕೋಟಿ ರೂ. ದೇಣಿಗೆ ನೀಡುತ್ತಿದೆ ಎಂದರು. ಇದರಲ್ಲಿ 8 ಕೋಟಿ ರೂ.ಗಳನ್ನು ಸಂಸ್ಥೆ ಗುರುತಿಸಿರುವ ಫಲಾನುಭವಿಗಳಿಗೆ ತಲಾ 65,000 ರೂ. ನೀಡಲಿದೆ. ಇದೇ ಸಂದರ್ಭದಲ್ಲಿ…
ಮಹದಾಯಿ ನೀರು ಹಂಚಿಕೆ ವಿಚಾರ ಸದ್ಯದಲ್ಲೇ ಸರ್ವಪಕ್ಷ ಸಭೆ
September 15, 2018ಬೆಂಗಳೂರು: ಮಹದಾಯಿ ನದಿ ವಿವಾದ ಸಂಬಂಧ ರಾಜ್ಯದ ನಿಲುವು ಕುರಿತು ಚರ್ಚಿಸಲು ಸದ್ಯದಲ್ಲೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಧೀಕರಣ ತೀರ್ಪು ನೀಡಿದೆ, ಕಾನೂನು, ನೀರಾವರಿ ತಜ್ಞರು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಚರ್ಚಿಸಿ ಸರ್ಕಾರ ಕೈಗೊಳ್ಳಬೇಕಿರುವ ನಿರ್ಧಾರದ ಬಗ್ಗೆ ಸಲಹೆ ಪಡೆಯಲಾಗಿದೆ ಎಂದರು. ನೀರಾವರಿ ಹಾಗೂ ಕಾನೂನು ತಜ್ಞರ ಸಲಹೆ ಆಧರಿಸಿ ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸಿ ರಾಜ್ಯ…
ಮಹನೀಯರ ಆದರ್ಶ ಅನುಸರಿಸಿ ಸಮಾಜದ ಏಳಿಗೆಗೆ ಶ್ರಮಿಸಲು ವಿದ್ಯಾರ್ಥಿಗಳಿಗೆ ಸಚಿವ ಜಿ.ಟಿ.ದೇವೇಗೌಡ ಕರೆ
September 15, 2018ಮೈಸೂರು: ದೇಶಕ್ಕೆ ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದು, ಅವರ ಆದರ್ಶವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಯಡಿ ಸಮಾಜದ ಏಳ್ಗೆಗೆ ಶ್ರಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಕರೆ ನೀಡಿದರು. ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಶುಕ್ರವಾರ ಏರ್ಪಡಿಸಿದ್ದ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ಎನ್ಎಸ್ಎಸ್, ರೆಡ್ಕ್ರಾಸ್, ಉದ್ಯೋಗ ಮಾಹಿತಿ ಕೋಶ ಇನ್ನಿತರ ಚಟುವಟಿಕೆಗಳನ್ನು ಉದ್ಘಾಟಿಸಿ…
ರಜೆ ರಹಿತ `ಸೈನಿಕ ದಿನ’ ಆಚರಣೆಗೆ ಮಾಜಿ ಯೋಧರ ಒತ್ತಾಯ
September 15, 2018ಮೈಸೂರು: ಧೈರ್ಯ, ಸಾಹಸದಿಂದ ದೇಶ ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳಿಗೆ ಗೌರವ ಸೂಚಕವಾಗಿ ಸರ್ಕಾರ ಪ್ರತೀ ವರ್ಷ ಸೈನಿಕ ದಿನವನ್ನು ಆಚರಿಸಬೇಕು ಎಂದು ಮಾಜಿ ಯೋಧರು ಇಂದಿಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಿವೃತ್ತ ಸೈನಿಕ ಕೆ.ಆರ್. ನಗರ ತಾಲೂಕಿನ ಚಿಕ್ಕವಡ್ಡರ ಗುಡಿಯ ಸಿ.ಎಂ.ಶ್ರೀಧರ್, ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೈನಿಕರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ದೇಶ ರಕ್ಷಿಸುತ್ತಾರೆ. ಆದರೆ ಅವರು ತವರಿಗೆ ಮರಳಿದಾಗ ಸ್ವಾಗತ ಸಂದರ್ಭದಲ್ಲಿ…
ಇಂದು ಗಾನಭಾರತಿಯಲ್ಲಿ ಉದಯೋನ್ಮುಖ ಕಲಾವಿದರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ
September 15, 2018ಮೈಸೂರು: ಮೈಸೂರು ಬಿ.ನಾಗರಾಜ್ರವರ ಸಾರಥ್ಯದಲ್ಲಿ ಸಂಯೋ ಜನೆಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ವೀಣೆ ಶೇಷಣ್ಣ ಭವನ, ಗಾನಭಾರತಿ ಆವರಣದಲ್ಲಿ ಪ್ರತಿ ತಿಂಗಳ ಮೂರನೇ ಭಾನುವಾರದಂದು ಆಯೋ ಜನೆಗೊಳ್ಳುತ್ತಿದೆ. ಸಾಂಸ್ಕøತಿಕ ನಗರಿ ಮೈಸೂ ರಿನಲ್ಲಿ ಜರುಗಲಿರುವ ಈ ನೃತ್ಯೋತ್ಸವದಲ್ಲಿ ನಾಲ್ಕು ಮಂದಿ ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತರಾಗಿರುವ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯ ಕ್ರಮದಲ್ಲಿ ಭಾಗವಹಿಸಿ ಭಾದ್ರಪದ ಮಾಸದ ಪ್ರಯುಕ್ತ ನಗರದ ಜನತೆಗೆ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ…
ಸೆ.30ರಂದು ಫೋರಂ ಪರ್ಪಲ್ ರನ್ ಹಾಫ್ ಮ್ಯಾರಥಾನ್
September 15, 2018ಮೈಸೂರು, ಸೆ.14(ಆರ್ಕೆಬಿ)- `ಅಲ್ ಜೈಮರ್’ ಕಾಯಿಲೆ ಬಗ್ಗೆ ಜನಜಾಗೃತಿ ಮೂಡಿ ಸುವ ನಿಟ್ಟಿನಲ್ಲಿ ಸೆ.30ರಂದು ಮೈಸೂರಿನಲ್ಲಿ ಫೋರಂ ಪರ್ಪಲ್ ರನ್ ಹಾಫ್ ಮ್ಯಾರಥಾನ್ ಏರ್ಪಡಿಸ ಲಾಗಿದೆ ಎಂದು ವ್ಯವಸ್ಥಾಪಕ ಧನಶೇಖರ್ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು. 3 ಕಿ.ಮೀ. (ಕುಟುಂಬ ಓಟ), 5 ಕಿ.ಮೀ., 10 ಕಿ.ಮೀ ಮತ್ತು 21 ಕಿ.ಮೀ. ಹಾಫ್ ಮ್ಯಾರಥಾನ್ ನಡೆಯಲಿದೆ. ಅಂದು ಬೆಳಿಗ್ಗೆ 5.30 ಗಂಟೆಗೆ ಫೋರಂ ಸೆಂಟರ್ ಸಿಟಿ ಮಾಲ್ ಆವರಣದಿಂದ ಫೋರಂ ಪರ್ಪಲ್…
ಗಣಪತಿ ವಿಗ್ರಹಗಳ ವಿಸರ್ಜನೆಗೆ ಮೈಸೂರಲ್ಲಿ ಸಂಚಾರಿ ವಾಹನ
September 13, 2018ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸೆ.13ರಂದು ಗಣೇಶ ವಿಗ್ರಹಗಳ ವಿಸರ್ಜನೆಗಾಗಿ ಪರಿಸರ ಸ್ನೇಹಿ ಸಂಚಾರಿ ವಿಸರ್ಜನಾ ವ್ಯವಸ್ಥೆಯನ್ನು ಮೂರು ವಾಹನಗಳ ಮೂಲಕ ಮಾಡಲಾಗಿದೆ. ಮೊದಲನೇ ವಾಹನ: ಸಂಜೆ 4ರಿಂದ 5.15 ರವರೆಗೆ ಮೇಟಗಳ್ಳಿ, ಆರಕ್ಷಕ ಠಾಣೆ ಹತ್ತಿರ, ಸಂಜೆ 5.30 ರಿಂದ 6.45 ವಿಜಯನಗರ 2ನೇ ಹಂತದ ಕೆ.ಡಿ. ಸರ್ಕಲ್ ಹತ್ತಿರ, ಸಂಜೆ 7ರಿಂದ 8.15 ಒಂಟಿಕೊಪ್ಪಲ್ ಚಂದ್ರಮೌಳೇಶ್ವರ ದೇವಸ್ಥಾನ/ ಮಾತೃಮಂಡಳಿ ಹತ್ತಿರ ರಾತ್ರಿ 8.30 ರಿಂದ 10.30 ಕುಕ್ಕರಹಳ್ಳಿಕೆರೆ ಮುಖ್ಯದ್ವಾರ ದಲ್ಲಿ…
ರೆವಿನ್ಯೂ ಇನ್ಸ್ಪೆಕ್ಟರ್ ಸಮಾನ ಪೊಲೀಸ್ ಪೇದೆಗಳಿಗೆ ವೇತನ
September 13, 2018ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ಗಳ ವೇತನವನ್ನು ರೆವಿನ್ಯೂ ಇನ್ಸ್ಪೆಕ್ಟರ್ (ಕಂದಾಯ ಇಲಾಖೆಯ ನಿರೀಕ್ಷಕರ) ಹುದ್ದೆಗೆ ಸರಿಸಮಾನವಾಗಿ ನಿಗದಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಆರನೇ ವೇತನ ಆಯೋಗ ಜಾರಿ ವೇಳೆ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯ ಲ್ಲಿಂದು ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2016ರಲ್ಲಿ ರಚಿಸಲಾ ಗಿದ್ದ ಹಿರಿಯ ಪೊಲೀಸ್ ಅಧಿಕಾರಿ…
ನಾಗನಹಳ್ಳಿಯಲ್ಲಿ ಹೊಸ ಸ್ಯಾಟ್ಲೈಟ್ ರೈಲ್ವೆ ಟರ್ಮಿನಲ್ ನವೆಂಬರ್ ವೇಳೆಗೆ ಸಿದ್ಧ
September 13, 2018ಮೈಸೂರು: ಮೈಸೂರು ಸಮೀಪದ ನಾಗನಹಳ್ಳಿ ಬಳಿ (ಮೈಸೂರಿನಿಂದ 10 ಕಿ.ಮೀ.ದೂರ) 2018 -19ರಲ್ಲಿ 7.8 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೊಸ ಸ್ಯಾಟ್ಲೈಟ್ ರೈಲ್ವೆ ಟರ್ಮಿ ನಲ್ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈ ಕುರಿತ ವಿವರವಾದ ಯೋಜನೆ ವರದಿ (ಡಿಪಿಆರ್) ತಯಾರಾಗಿದೆ. ಯೋಜ ನೆಯು ಈ ವರ್ಷದ ನವೆಂಬರ್ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಮೈಸೂರು ರೈಲ್ವೆ ನಿಲ್ದಾಣದಲ್ಲಿನ ದಟ್ಟಣೆಯನ್ನು ನಿವಾರಿಸುವ ಉದ್ದೇಶ ದಿಂದ ಇದನ್ನು ನಿರ್ಮಿಸಲಾಗುತ್ತಿದೆ ಎಂದು ಮಂಗಳವಾರ ಮೈಸೂರಿನ ವಿಭಾ ಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ನಡೆದ…










