ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನ ಇದ್ದರೆ, ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸಮಾರಂಭವೊಂದರ ನಂತರ ಸುದ್ದಿಗಾರರು, ಯಡಿಯೂರಪ್ಪ ನಿಮ್ಮ ವಿರುದ್ಧ ಮಾನನಷ್ಟ ಮೊಕ ದ್ದಮೆ ಹಾಕುತ್ತಾರಂತೆ ಎಂದು ಪ್ರಶ್ನಿಸಿದರು. ಅವರಿಗೆ ಸಂಶಯ ಇದೆಯಂತಾ, ಇದ್ದರೆ, ಏನು ನಷ್ಟ ಆಗಿದೆಯೋ ಅದಕ್ಕೆ ಅರ್ಜಿ ಹಾಕಿಕೊಳ್ಳಲಿ, ಸಮಯ ಬಂದಾಗ ಪೂರಕ ದಾಖಲೆ ಒದಗಿಸುತ್ತೇನೆ.ಅನಗತ್ಯವಾಗಿ ನಾನು ಆರೋಪ ಮಾಡುವುದಿಲ್ಲ, ಇರುವ ಸತ್ಯ ಹೇಳಿದ್ದೇನೆ, ನಾನೇನು ಕದ್ದು ಓಡಿ…
ರಾಮಕೃಷ್ಣನಗರದಲ್ಲಿ ಕಂಡ ಕಂಡವರ ಕಚ್ಚಿದ ನಾಯಿ
September 7, 2018ಮೈಸೂರು: ನಾಯಿಯೊಂದು ಕಂಡ ಕಂಡವರ ಮೇಲೆ ದಾಳಿ ನಡೆಸಿದ ಪರಿಣಾಮ ಪುಟ್ಟ ಮಗು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ಗುರುವಾರ ನಡೆದಿದೆ. ರಾಮಕೃಷ್ಣನಗರ ಹೆಚ್ ಬ್ಲಾಕ್ನ ನಟರಾಜು ಎಂಬು ವರ 4 ವರ್ಷದ ಮೊಮ್ಮಗ ಮನೆಯ ಮುಂಭಾಗ ಆಟವಾಡು ತ್ತಿದ್ದ ವೇಳೆ ನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದೆ. ಬಳಿಕ ಅದೇ ನಾಯಿ ಇ ಅಂಡ್ ಎಫ್ ಬ್ಲಾಕ್ನ ನಿವಾಸಿ ಯೊಬ್ಬರಿಗೂ ಕಚ್ಚಿದೆ. ಎಲ್ಲೆಂದರಲ್ಲಿ ಅಡ್ಡಾಡಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿದ್ದ ನಾಯಿಯನ್ನು…
ಮೈಸೂರು ವಿವಿ ಸ್ವಚ್ಛತಾಗಾರರ ಅಹೋರಾತ್ರಿ ಧರಣಿ ಮುಂದುವರಿಕೆ
September 7, 2018ಮೈಸೂರು: 14 ವರ್ಷಗಳಿಂದ ಕಸ ಗುಡಿಸಿಕೊಂಡು ಬಂದ ಮಹಿಳೆಯರನ್ನು ಮೈಸೂರು ವಿಶ್ವವಿದ್ಯಾಲಯ ಕಸದ ರೀತಿಯೇ ಗುಡಿಸಿ ಹೊರ ಹಾಕಲು ಹೊರಟಿದೆ ಎಂದು ಮೈಸೂರು ವಿವಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ವಿವಿ ಮಹಿಳಾ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪ್ರೊ.ಮಹೇಶ್ ಚಂದ್ರಗುರು, 14 ವರ್ಷಗಳಿಂದ ನೂರಾರು ಜನ ಮಹಿಳೆಯರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿ ಮೈಸೂರು ವಿಶ್ವವಿದ್ಯಾಲಯದ ಆರೋಗ್ಯ ಮತ್ತು…
ನೆರೆ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ತೆರಾಪಂಥ್ ಯುವಕ ಪರಿಷತ್ ಸಿದ್ಧ
September 7, 2018ಮೈಸೂರು: ಅಖಿಲ ಭಾರತೀಯ ತೆರಾಪಂಥ್ ಯುವಕ್ ಪರಿಷತ್, ಮೈಸೂರು ಶಾಖೆ ವತಿಯಿಂದ ಕೊಡಗು ಹಾಗೂ ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರದ ಕಿಟ್ಗಳನ್ನು ವಿತರಿಸಲಾಗಿದ್ದು, ಇನ್ನೂ ಹೆಚ್ಚಿನ ಸೇವೆ ನೀಡಲು ಸಂಘಟನೆ ಸಿದ್ಧವಿದೆ ಎಂದು ಸಂಘಟನೆಯ ಮೈಸೂರು ಶಾಖೆ ಅಧ್ಯಕ್ಷ ಮುಖೇಶ್ ಗೊಗ್ಲಿಯಾ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಅವಶ್ಯವಿರುವ ದಿನಬಳಕೆ ವಸ್ತುಗಳಾದ ಹೊದಿಕೆ, ಉಡುಪು, ಸೊಳ್ಳೆ ಪರದೆ, ಮೇಣದಬತ್ತಿ ಸೇರಿದಂತೆ ದಿನಸಿ ಪದಾರ್ಥಗಳನ್ನು ಒಳ ಗೊಂಡ 800…
ಈಡಿಗರ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ರೂ.
September 7, 2018ಹುಣಸೂರು: ತಾಲೂಕು ಆರ್ಯ ಈಡಿಗರ ಸಂಘದ ಸಮುದಾಯ ಭವನ ನಿರ್ಮಿಸಲು ಸಂಸದರ ನಿಧಿಯಿಂದ 25ಲಕ್ಷ ಹಣ ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಮುನೇಶ್ವರಕಾವಲ್ ಮೈದಾನದಲ್ಲಿ ಎರ್ಪಡಿಸಲಾಗಿದ್ದ ಶ್ರೀ ನಾರಾಯಣ ಗುರುಗಳ 164ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿವೇಕನಾಂದ ಹಾಗೂ ನಾರಾಯಣಗುರು ಸಮಕಾಲೀನರು. ಸಮಾಜದ ಅಂಕು-ಡೊಂಕುಗಳನ್ನು ತೊಡೆದು ಹಾಕಲು ಬುದ್ದ-ಬಸವ-ಗಾಂಧಿ-ಅಂಬೇಡ್ಕರರಂತೆ ಸಮಾಜ ಮುಖಿ ಕೆಲಸಗಳಿಗೆ ತಮ್ಮನ್ನು ಮುಡುಪಾಗಿಸಿಕೊಂಡಿದ್ದರು ಎಂದರು. ಕೇರಳ ರಾಜ್ಯದಲ್ಲಿ ಹಿಂದೂ ಧರ್ಮ ಉಸಿರಾಡುತ್ತಿದ್ದರೆ ನಾರಾಯಣಗುರು ಕಾರಣ ಎಂದು ಅವರು ಹೆಸರಿನ…
ಕನ್ನಡ ಶಾಸ್ತ್ರೀಯ ಚಟುವಟಿಕೆ ಇಡೀ ರಾಜ್ಯಕ್ಕೆ ವಿಸ್ತಾರವಾಗಬೇಕು
September 7, 2018ಮೈಸೂರು: ಮೈಸೂರಿಗೆ ಮಾತ್ರ ಸೀಮಿತ ವಾದ ಕನ್ನಡ ಶಾಸ್ತ್ರೀಯ ಸ್ಥಾನಮಾನ, ಚಟುವಟಿಕೆ ಇಡೀ ರಾಜ್ಯಕ್ಕೆ ವಿಸ್ತರಿಸಬೇಕು ಎಂದು ಉದಯಭಾನು ಉನ್ನತ ಅಧ್ಯಯನ ಕೇಂದ್ರದ ಗೌರವ ಡೀನ್ ಡಾ. ನಾ.ಗೀತಾಚಾರ್ಯ ಅಭಿಪ್ರಾಯಪಟ್ಟರು. ಮೈಸೂರು ಮಹಾರಾಜ ಕಾಲೇಜು ಜೂನಿಯರ್ ಬಿಎ ಹಾಲ್ನಲ್ಲಿ ಮಹಾರಾಜ ಕಾಲೇಜು ಕನ್ನಡ ಸಂಘ, ಉದಯಭಾನು ಕಲಾಸಂಘ, ಉದಯಭಾನು ಭಾಷೆ-ಸಾಹಿತ್ಯ-ಸಂಸ್ಕøತಿ ಅಧ್ಯಯನಾಂಗ ಸಂಯುಕ್ತವಾಗಿ ಗುರುವಾರ ಆಯೋಜಿಸಿದ್ದ `ಹಳಗನ್ನಡ ಗದ್ಯ ಸಾಹಿತ್ಯದ ಅವಲೋಕನ’ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದರೂ, ಕೇಂದ್ರ…
ಉಕ್ಕಲಗೆರೆಯಲ್ಲಿ ರಾಜೀವ್ ಗಾಂಧಿ ಸೇವಾಕೇಂದ್ರ ಉದ್ಘಾಟನೆ
September 7, 2018ತಿ.ನರಸೀಪುರ: ಹಳ್ಳಿಗಾಡಿನಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಅನುಕೂಲ ಕಲ್ಪಿಸಲು ಉಕ್ಕಲಗೆರೆ ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ತೆರೆಯಲಾಗಿದೆ ಎಂದು ಶಾಸಕ ಎಂ.ಅಶ್ವಿನ್ಕುಮಾರ್ ಹೇಳಿದರು. ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಹಾಗೂ ಗ್ರಾ.ಪಂ ವಿಶೇಷ ಅನುದಾನದಡಿ 20.30 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಕಛೇರಿಗಾಗಿ ನಿರ್ಮಿಸಿರುವ ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿಗೆ ಉತ್ತಮ ಆಡಳಿತವನ್ನು ನಡೆಸಲು ಯೋಗ್ಯವಾದ ಕಟ್ಟಡಗಳು ಅಗತ್ಯವಿದೆ ಎಂದರು….
ಇಂದು, ನಾಳೆ ವಿದ್ಯುತ್ ನಿಲುಗಡೆ
September 7, 2018ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಸೌತ್ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾ ರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂ ರಾವ್ ನಗರ, ಕನಕಗಿರಿ, ಅಶೋಕಪುರಂ,…
ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ
September 7, 2018ನಂಜನಗೂಡು: ನಗರದ ಎಂಜಿಎಸ್ ರಸ್ತೆಯ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಅಂದಾಜು 31.43 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಾಸಕ ಬಿ.ಹರ್ಷವರ್ಧನ್ ಗುರುವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ತಾಲೂಕಿನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಹಲವಾರು ಸೌಕರ್ಯಗಳನ್ನು ಒಳಗೊಂಡ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದೆ ಎಂದರು. ತಾಲೂಕಿನಾದ್ಯಂತ ನಾಟಿ ಕಾರ್ಯ ಪ್ರಗತಿಯಲ್ಲಿದ್ದು ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಲ್ಲಿ ಪಶು ವೈದ್ಯರು, ಆಸ್ಪತ್ರೆಗಳಲ್ಲಿ ಕಾಲ ಕಳೆಯದೆ ಗ್ರಾಮ ಪ್ರವಾಸ ಮಾಡಿ ಜಾನುವಾರುಗಳಿಗೆ…
ಕಗ್ಗತ್ತಲಲ್ಲಿ ಹುಣಸೂರು: ನಗರಸಭೆಯಲ್ಲಿ ಕಾವೇರಿದ ಚರ್ಚೆ
September 7, 2018ಹುಣಸೂರು: ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಬೀದಿ ದೀಪ, ಕುಡಿಯುವ ನೀರು, ಸಾರ್ವ ಜನಿಕ ರಸ್ತೆ ಒತ್ತುವರಿ, ಸ್ಮಶಾನ ಅಭಿವೃದ್ಧಿ ಬಗ್ಗೆ ಸಾಕಷ್ಟು ಕಾವೇರಿದ ಚರ್ಚೆ ನಡೆಯಿತು. ಹಾಗಾಗಿ ಗದ್ದಲವೂ ಉಂಟಾಯಿತು. ನಗರಸಭಾ ಅಧ್ಯಕ್ಷ ಎಂ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ಸಾಮಾನ್ಯ ಸಭೆಯಲ್ಲಿ ಮೊದಲಿಗೆ ಅಗಲಿದ ಮಾಜಿ ಪ್ರಧಾನಿ ವಾಜಪೇಯಿ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ಸಂತಾಪ ಸೂಚಿಸಲಾಯಿತು. ನಂತರ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ನಗರ…