ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ದಷ್ಟಾ ವಧಿಯ ಲಾರಿ ಮುಷ್ಕರ ಮಂಗಳವಾರ 5 ದಿನಕ್ಕೆ ಕಾಲಿಟ್ಟಿತು. ಮುಷ್ಕರದ ಹಿನ್ನೆಲೆ ಯಲ್ಲಿ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮತ್ತು ಬಂಬೂ ಬಜಾರ್ನ ಆರ್ಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ಹಣ್ಣು ಇನ್ನಿತರ ದಿನಸಿ ಪದಾರ್ಥಗಳ ಕೊರತೆ ಕಾಣತೊಡಗಿದೆ. ಮುಷ್ಕರ ಆರಂಭಕ್ಕೂ ಮುನ್ನ ಲಾರಿಗಳಲ್ಲಿ ತಂದಿ ಳಿಸಲಾಗಿದ್ದ ಆಹಾರ ಪದಾರ್ಥಗಳು, ಹಣ್ಣು ಮುಗಿಯುವ ಹಂತಕ್ಕೆ ಬಂದಿದ್ದು, ಇನ್ನೆರಡು ದಿನಗಳಲ್ಲಿ ಇದರ ಪರಿಣಾಮ ಜನಜೀವ ನದ ಮೇಲೆ ಆಗುವ ಸಂಭವವಿದೆ. ಈ…
ರಸ್ತೆ ಬದಿ ಉರುಳಿ ಬಿದ್ದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ
July 25, 2018ತಿ.ನರಸೀಪುರ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್, ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಮೈಸೂರು ತಿ.ನರಸೀಪುರ ಮುಖ್ಯರಸ್ತೆಯ ಇಂಡವಾಳು ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ನಡೆದಿದೆ. ಮೈಸೂರಿನಿಂದ ತಿ.ನರಸೀಪುರ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ತೆರಳುತ್ತಿದ್ದ ಎಸ್ಎಂಆರ್ (ಸಚಿನ್) ಖಾಸಗಿ ಬಸ್ ಇಂಡವಾಳು ಗ್ರಾಮದ ಬಳಿ ಎದುರಿ ನಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿ ಬಿದ್ದಿದೆ….
ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ, ಕಾಂಡೋಮ್, ಸ್ಯಾನಿಟರಿ ಪ್ಯಾಡ್!
July 25, 2018ಉಡುಪಿ: ಶಿರೂರು ಸ್ವಾಮೀಜಿಗಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮಠವನ್ನು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಶಾಕ್ಗೆ ಒಳಗಾಗಿದ್ದಾರೆ. ಶಿರೂರು ಮಠದ ಸ್ವಾಮೀಜಿ ಗಳ ಆಪ್ತರ ಕೋಣೆಯಲ್ಲಿ ಮದ್ಯ ಬಾಟಲಿಗಳು ಸಿಕ್ಕಿವೆ. ಅವುಗಳ ಮೌಲ್ಯ ಬರೋಬ್ಬರಿ 6 ಲಕ್ಷ ರೂ. ಇದ್ದು, ವಿದೇಶದ ದುಬಾರಿ ಮದ್ಯವಾಗಿದೆ. ಕಾಂಡೋಮ್, ಸ್ಯಾನಿಟರಿ ಪ್ಯಾಡ್, ಮಹಿಳೆಯರ ಬಟ್ಟೆಗಳೂ ಪತ್ತೆಯಾಗಿದೆ. ಸ್ವಾಮೀಜಿ ಚಾರಿತ್ರ್ಯ ಕುರಿತು ಬಹಳ ಹಿಂದೆಯೇ ಚರ್ಚೆಗಳು ನಡೆಯುತ್ತಿತ್ತು. ಆದರೆ ಸ್ವಾಮೀಜಿ ಬದುಕಿದ್ದಾಗ ಈ ಬಗ್ಗೆ ಗೊತ್ತಿರುವವರೂ ಚಕಾರ…
ಬೋರ್ವೆಲ್ ಲಾರಿ ಪಲ್ಟಿ : ಇಬ್ಬರ ಸಾವು
July 25, 2018ಹೆಚ್.ಡಿ.ಕೋಟೆ: ಬೋರ್ವೆಲ್ ಲಾರಿಯೊಂದು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ತಾಲೂಕು ಚಿಕ್ಕೆರೆಯೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅವಿನಾಶ್ (22) ಮತ್ತು ಶರವಣ (22) ಎಂಬುವರೇ ಮೃತಪಟ್ಟ ದುರ್ದೈ ವಿಗಳು. ಚಿಕ್ಕೆರೆಯೂರು ಗ್ರಾಮದಲ್ಲಿ ಬೋರ್ವೆಲ್ ನಿರ್ಮಾಣಕ್ಕೆ ಪೈಪ್ ತುಂಬಿ ಕೊಂಡು ಬರುತ್ತಿದ್ದಾಗ ಲಾರಿ (ಕೆಎ-01-ಎಜಿ-5069) ಗ್ರಾಮದ ಕೆರೆ ಏರಿ ಮೇಲೆ ಬಂದಾಗ ಪಲ್ಟಿ ಹೊಡೆದು ಈ ದುರಂತ ಸಂಭವಿಸಿದೆ. ಚಾಲಕ ಹಾಗೂ ಇನ್ನಿಬ್ಬರಿಗೆ ತೀವ್ರ ಗಾಯಗಳಾಗಿ ಮೈಸೂ ರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ…
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಶ್ರಮಿಸಿ
July 25, 2018ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಸುದರ್ಶನ್ ಸಲಹೆ ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಈ ಹಿನ್ನೆಲೆ ಯಲ್ಲಿ ಸೋಲಿಗೆ ಆತ್ಮಾವಲೋಕನ ಮಾಡಿ ಕೊಂಡು ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿ ಗಾಗಿ ಇಂದಿನಿಂದಲೇ ಪಣ ತೊಡುವಂತೆ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಲಹೆ ನೀಡಿದ್ದಾರೆ. ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ…
ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ಗೆ 2 ದಿನದಲ್ಲಿ ಸೂಕ್ತ ಭದ್ರತೆ
July 25, 2018ಮೈಸೂರು: ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್ಗೆ ಇನ್ನೂ 2 ದಿನಗಳಲ್ಲಿ ಸೂಕ್ತ ಭದ್ರತೆ ಒದಗಿಸುವುದಾಗಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ವಿದ್ಯಾರ್ಥಿನಿಯ ರಿಗೆ ಭರವಸೆ ನೀಡಿದರು. ಕಳೆದ ಮೂರ್ನಾಲ್ಕು ದಿನಗಳಿಂದ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್ಗೆ ವಿಕೃತ ಕಾಮಿಯೊಬ್ಬ ನುಗ್ಗಿ ದಾಂಧಲೆ ನಡೆಸಿದ್ದು, ನಿನ್ನೆ ರಾತ್ರಿಯೂ ಹಾಸ್ಟೆಲ್ ಕಟ್ಟಡದ ಮೇಲೆ ಆಗಂತುಕನೊಬ್ಬ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜು ಒಡೆದು ಹಾಕಿದ್ದು, ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿರಲು ಭಯಪಡುತ್ತಿದ್ದಾರೆ. ಅಲ್ಲದೆ ಪ್ರತಿಭಟನೆ ನಡೆಸಿ, ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್…
ಪತ್ನಿ ಕತ್ತು ಹಿಸುಕಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ
July 25, 2018ಮೈಸೂರು: ಕತ್ತು ಹಿಸುಕಿ ಪತ್ನಿಯನ್ನು ಕೊಲೆ ಮಾಡಿದ ಪತಿರಾಯನಿಗೆ ಜೀವಾವಧಿ ಶಿಕ್ಷೆ ಹಾಗೂ ಸಾವಿರ ರೂ. ದಂಡ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಎಂ. ಆನಂದಶೆಟ್ಟಿ ತೀರ್ಪು ನೀಡಿದ್ದಾರೆ. ಕೆ.ಆರ್.ನಗರ ತಾಲೂಕು ದೇವಿತಂದ್ರೆ ಗ್ರಾಮದ ಜಯರಾಂ ಅಲಿಯಾಸ್ ಬಂಗಾರು (38) ಶಿಕ್ಷೆಗೆ ಗುರಿ ಯಾದವನಾಗಿದ್ದು, ಈತ 2013ರ ಏಪ್ರಿಲ್ 10ರಂದು ತನ್ನ ಪತ್ನಿ ರತ್ನಮ್ಮಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ವಿವರ: ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಬೇಲೂರಯ್ಯ ಎಂಬುವರ…
ಸಂಚಾರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
July 25, 2018ಮೈಸೂರು: ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆ ಅಂಗವಾಗಿ ದೇವರಾಜ ಸಂಚಾರ ಠಾಣೆ ವತಿಯಿಂದ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ರೋಟರಿ ಐಡಿಯಲ್ ಜಾವಾ ಶಾಲಾ ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಅಗತ್ಯವಾಗಿ ಪಾಲಿಸಿ. ವೇಗದಲ್ಲಿ ವಾಹನ ಚಾಲನೆ ಮಾಡಬೇಡಿ ಹಾಗೂ ಸಾರ್ವಜನಿಕರು ರಸ್ತೆ ದಾಟುವಾಗ ಹಸಿರು ದೀಪವನ್ನು ಗಮನಿಸಿ ದಾಟಬೇಕು ಎಂಬಿತ್ಯಾದಿ ಪೋಸ್ಟರ್ ಮತ್ತು ಭಿತ್ತಿಪತ್ರಗಳನ್ನು ಹಿಡಿದು ಕೆ.ಆರ್.ವೃತ್ತದಿಂದ ಸಾಗಿ ಅರಸು ರಸ್ತೆ, ಜೆಎಲ್ಬಿ ರಸ್ತೆ ಮೂಲಕಸಾಗಿ ಕೆಆರ್ಎಸ್ ರಸ್ತೆಯ ಐಡಿಯಲ್…
ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ‘ಬ್ಲಾಕ್ ಲಿಸ್ಟ್’ಗೆ ಸೇರಿಸಲು ನಿರ್ಣಯ
July 25, 2018ಕೆ.ಆರ್.ನಗರ: ಟೆಂಡರ್ ಪಡೆದು ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸದ ಮತ್ತು ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ‘ಬ್ಲಾಕ್ಲಿಸ್ಟ್’ಗೆ ಸೇರಿಸಬೇಕೆಂದು ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು. ಇಂದು ಪುರಸಭಾ ಸಭಾಂಗಣದಲ್ಲಿ ನೂತನ ಅಧ್ಯಕ್ಷೆ ಹರ್ಷಲತಾ ಶ್ರೀಕಾಂತ್ ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಕಳೆದ 3-4 ವರ್ಷ ಗಳಲ್ಲಿ ಕೈಗೊಂಡ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಹಾಗೂ ಕಳಪೆ ಕಾಮಗಾರಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ ನಂತರ ಅಂತಹ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸುವುದಕ್ಕೆ ಎಲ್ಲಾ ಸದಸ್ಯರ ಒಪ್ಪಿಗೆ…
ಏಷಿಯನ್ ಪೇಯಿಂಟ್ಸ್ಗೆ ಸಚಿವ ಜಾರ್ಜ್ ಭೇಟಿ
July 25, 2018ನಂಜನಗೂಡು: ಮಂಗಳ ವಾರ ಬೆಳಿಗ್ಗೆ ಇಲ್ಲಿನ ಕೈಗಾರಿಕಾ ಪ್ರದೇಶದ ಲ್ಲಿರುವ ಏಷಿಯನ್ ಪೇಯಿಂಟ್, ಕಾರ್ಖಾನೆಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ರವರು ಮಳೆ ಕಾರಣ ಕೇವಲ 5 ನಿಮಿಷದಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದರು. ಇದೇ ವೇಳೆ ಸಚಿವರಿಗೆ ವರುಣಾ ಕ್ಷೇತ್ರದ ಶಾಸಕ ಡಾ. ಎಸ್.ಯತೀಂದ್ರ ಸಿದ್ದರಾಮಯ್ಯ, ಹೂಗುಚ್ಚ ನೀಡಿ ಬರಮಾಡಿ ಕೊಂಡರು. ಹಾಗೂ ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಸಚಿವ ಜಾರ್ಜ್ ಮಾತನಾಡಿ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು,…