ಮೈಸೂರು: ಮೈಸೂರು ದಸರಾ ವಸ್ತುಪ್ರದರ್ಶನವು ವರ್ಷದ 365 ದಿನಗಳು ಶಾಶ್ವತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಯೋಜನೆಯನ್ನು ರೂಪಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೂಚಿಸಿದರು. ದಸರಾ ವಸ್ತುಪ್ರದರ್ಶನ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ 142ನೇ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನ ಹೃದಯ ಭಾಗದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವರ್ಷದ 365 ದಿನಗಳು ಪ್ರದರ್ಶನವನ್ನು ಆಯೋಜಿಸಬೇಕು. ಆಗ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡುತ್ತಾರೆ….
ಮೈಸೂರಲ್ಲಿ ಹಾಡಹಗಲೇ ಚಿನ್ನಾಭರಣ ದೋಚಿದ್ದ ಖದೀಮರು ತುಮಕೂರಲ್ಲಿ ಬಂಧನ
July 19, 2018ಮೈಸೂರು: ಕಾರ್ಪೊರೇಷನ್ ಅಧಿಕಾರಿಗಳೆಂದು ಹೇಳಿಕೊಂಡು ಮನೆ ಸರ್ವೇ ಮಾಡುವ ಸೋಗಿನಲ್ಲಿ ಮೈಸೂರಿನ ಕುವೆಂಪುನಗರ ಎನ್-ಬ್ಲಾಕ್ನಲ್ಲಿ ಹಾಡ ಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಮೂವರು ಖದೀಮರನ್ನು ತುಮಕೂರು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದ ತುಮಕೂರು ಪೊಲೀಸರು, ಅವರನ್ನು ವಿಚಾರಣೆಗೊಳಪಡಿಸಿದ ವೇಳೆ ಕಾರ್ಪೊರೇಷನ್ ಅಧಿಕಾರಿಗಳೆಂದು ಹೇಳಿಕೊಂಡು ಮೈಸೂರಿನ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣವೂ ಬಯಲಾಯಿತು ಎಂದು ಹೇಳಲಾಗಿದೆ. ಖದೀಮರು…
ಸರ್ಕಾರದ ನಾನಾ ಭಾಗ್ಯಗಳಿಗಿಂತ `ವಿದ್ಯಾಭಾಗ್ಯ’ ದೊಡ್ಡದು
July 19, 2018ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅಭಿಮತ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಡಾ. ಅಂಚಿ ಸಣ್ಣ ಸ್ವಾಮಿಗೌಡರಿಗೆ ಅಭಿನಂದನೆ ಮೈಸೂರು: ಸರ್ಕಾರ ನೀಡುವ ಎಲ್ಲಾ ಭಾಗ್ಯಗಳಿಗಿಂತ ವಿದ್ಯಾಭಾಗ್ಯ ದೊಡ್ಡದು. ಆದ್ದರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಜ್ಞಾನವಂತರಾಗಲು ವಿವಿಧ ರೂಪದಲ್ಲಿ ಪ್ರೊತ್ಸಾಹಿಸುವುದು ಉತ್ತಮ ಬೆಳವಣಿಗೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ತಿಳಿಸಿದರು. ಮೈಸೂರಿನ ಪಡುವಾರಹಳ್ಳಿ(ವಿನಾಯಕ ನಗರ) ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಭೂಮಿಗಿರಿ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಡಾ.ಅಂಚಿ ಸಣ್ಣಸ್ವಾಮಿಗೌಡರಿಗೆ ಅಭಿನಂದನೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್…
ನಿವೃತ್ತ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜುಗೆ ನುಡಿನಮನ
July 19, 2018ಮೈಸೂರು: ಇತ್ತೀಚೆಗೆ ನಿಧನರಾದ ನಿವೃತ್ತ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜುರವರಿಗೆ ಮಂಗಳವಾರ ಮೈಸೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕನ್ನೇಗೌಡ ಕೊಪ್ಪಲಿನಲ್ಲಿರುವ ನೇಗಿಲಯೋಗಿ ಮರುಳೇಶ್ವರ ಸೇವಾಭವನದಲ್ಲಿ ಎಸ್.ಎನ್.ನಾಗರಾಜುರವರ ಅಭಿಮಾನಿ ಬಳಗ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಗಣ್ಯರು ನಾಗರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜೆ.ಶಶಿಧರ್ ಪ್ರಸಾದ್ ಮಾತನಾಡಿ, ಎಸ್.ಎನ್.ನಾಗರಾಜುರವರು ಶಿಸ್ತಿನ ಸಿಪಾಯಿಯಾಗಿದ್ದು, ಮೈಸೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿದ್ದ ವೇಳೆ ಪರೀಕ್ಷಾ ಫಲಿತಾಂಶವನ್ನು ಗಣಕೀಕರಣಗೊಳಿಸಿ, ಕೇವಲ 10-15 ದಿನಗಳಲ್ಲಿ ಫಲಿತಾಂಶ ಹೊರಬೀಳುವಂತೆ ಮಾಡಿದ್ದರು. ಇದು ಅವರ…
ಕನ್ನಡ ಸಾಹಿತ್ಯ ಪರಿಷತ್ನ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
July 19, 2018ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಮಸ್ತ ಕನ್ನಡಿಗರ ಮಾತೃಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಇತ್ತೀಚೆಗೆ ರಾಜಕೀಯ ಹಾಗೂ ಸ್ವಜನಪಕ್ಷಪಾತಕ್ಕೆ ಹೆಸರಾಗುತ್ತಿದೆ. ರಾಜ್ಯಾಧ್ಯಕ್ಷರು ಸಾರ್ವಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಏಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದ ಅನುದಾನದಲ್ಲಿ ಕೇವಲ ಸಮ್ಮೇಳನಗಳು, ಕವಿಗೋಷ್ಠಿ, ಪುಸ್ತಕ ಮೇಳಗಳನ್ನು ನಡೆಸುವುದೇ ತನ್ನ ಜವಾಬ್ದಾರಿ ಎಂದುಕೊಂಡಿರುವ ಅಧ್ಯಕ್ಷರು, ಕಸಾಪದಲ್ಲಿರುವ…
ಹನಿಟ್ರ್ಯಾಪ್ ಪ್ರಕರಣ: ಮೈಸೂರಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ವಿಚಾರಣೆ
July 19, 2018ಮೈಸೂರು: 2017ರ ಆಗಸ್ಟ್ ಮಾಹೆಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣದ ಸತ್ಯಾಸತ್ಯತೆ ಅರಿಯಲು ರಾಷ್ಟ್ರೀಯ ಮಾನವ ಹಕ್ಕು ಆಯೋಗ(nhrc)ದ ಅಧಿಕಾರಿಗಳು ಮೈಸೂರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಹನಿಟ್ರ್ಯಾಪ್ ನಡೆಸಿದರೆಂಬ ಮಾಹಿತಿ ಆಧರಿಸಿ 2017ರ ಆಗಸ್ಟ್ 25ರಂದು ಮೈಸೂರಿನ ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಯುವತಿಯೋರ್ವಳ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆಯಲ್ಲಿ ಯುವತಿ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದರು. ತದನಂತರ ಯುವತಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ, ನನ್ನ ವಿರುದ್ಧ ಸುಳ್ಳು ಹನಿಟ್ರ್ಯಾಪ್ ಪ್ರಕರಣ ದಾಖಲಿಸಿ, ವಶಕ್ಕೆ…
ಮೈಸೂರು ವಾರಿಯರ್ಸ್ ತಂಡದ ಮಾಲೀಕರಾದ ಎನ್.ಆರ್.ಸಮೂಹದಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ
July 19, 2018240 ಪಟುಗಳು ಹಾಜರು ಇವರಲ್ಲಿ 68 ಸ್ಪಿನ್ನರ್, 70 ಬ್ಯಾಟ್ಸ್ಮನ್, 82 ಆಲ್ರೌಂಡರ್ಸ್, 15 ವಿಕೆಟ್ ಕೀಪರ್ಸ್ ಮೈಸೂರು: ಕರ್ನಾಟಕ ಪ್ರೀಮಿಯರ್ ಲೀಗ್-2018ರ ಕ್ರಿಕೆಟ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಗೆ ಉದಯೋನ್ಮುಖ ಆಟಗಾರರನ್ನು ಶಿಫಾರಸ್ಸು ಮಾಡುವ ಸಲುವಾಗಿ ಮೈಸೂರು ವಾರಿಯರ್ಸ್ ತಂಡದ ಮಾಲೀಕತ್ವ ಹೊಂದಿರುವ ಎನ್ಆರ್ ಸಮೂಹ ಬುಧವಾರ ನಡೆಸಿದ ಕ್ರಿಕೆಟ್ ಪ್ರತಿಭಾನ್ವೇಷಣೆಯಲ್ಲಿ 240 ಪಟುಗಳು ಪಾಲ್ಗೊಂಡಿದ್ದರು. ಮೈಸೂರಿನ ಮಾನಸ ಗಂಗೋತ್ರಿಯ ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ನಡೆದ ಪ್ರತಿಭಾನ್ವೇಷಣೆ ಪಂದ್ಯದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಿಂದ…
ಉದ್ಯಾನವನ, ಕೆರೆಗಳ ದತ್ತು ಪಡೆದು ಅಭಿವೃದ್ಧಿಪಡಿಸಲು ಮುಂದಾಗಿ
July 19, 2018ಕೆಂಪೇಗೌಡ ಸ್ಮರಣೆ ಕಾರ್ಯಕ್ರಮದಲ್ಲಿ ಯುವಸಂಘಟನೆಗಳಿಗೆ ಸಚಿವ ಜಿ.ಟಿ.ದೇವೇಗೌಡ ಕರೆ ಮೈಸೂರು: ಮೈಸೂರಿನ ಯುವ ಸಂಘಟನೆಗಳು ಯಾವುದಾದರೂ ಉದ್ಯಾನವನ ಮತ್ತು ಗ್ರಾಮೀಣ ಪ್ರದೇಶದ ಯಾವುದಾದರೂ ಕೆರೆಯನ್ನು ದತ್ತು ಪಡೆದು ಅಭಿವೃದ್ಧಿಪಡಿಸಬೇಕು. ಹೀಗೆ ಮಾಡಿದರೆ ಮಾತ್ರ ಕೆಂಪೇಗೌಡರ ಸ್ಮರಣೆ ಮಾಡಿದ್ದಕ್ಕೂ ಅರ್ಥ ಬರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಮೈಸೂರಿನ ರೋಟರಿ ಶಾಲೆ ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆ ಮೈಸೂರು ಜಿಲ್ಲಾ ಘಟಕವು ನಾಡಪ್ರಭು ಕೆಂಪೇಗೌಡರ ಸ್ಮರಣೆ ಅಂಗವಾಗಿ ಬುಧವಾರ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೆಂಪೇಗೌಡ…
ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದ ಮೈಸೂರು ವಿವಿ ಆಡಳಿತ ವರ್ಗದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
July 19, 2018ಮೈಸೂರು: ದ್ವಿತೀಯ ವರ್ಷದ ವ್ಯಾಸಂಗಕ್ಕೆ ಪ್ರವೇಶ ನೀಡಿ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದೇ ಮೈಸೂರು ವಿವಿಯ ಆಡಳಿತ ವರ್ಗ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಮೈಸೂರು ವಿವಿ ಸಂಶೋಧಕರ ಸಂಘದ ಆಶ್ರಯದಲ್ಲಿ ವಿವಿಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು. ಮೈಸೂರಿನ ಮಾನಸ ಗಂಗೋತ್ರಿಯ ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿಲಯಕ್ಕೆ ಪ್ರವೇಶ ನೀಡದೇ ದೂರದ ಊರುಗಳಿಂದ ವ್ಯಾಸಂಗಕ್ಕೆ ಬಂದಿರುವ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ….
ಗ್ರಂಥಾಲಯ ನಿರ್ಮಾಣಕ್ಕೆ ಸಿಎ ಸೈಟ್ ಮಂಜೂರಾತಿ ಪತ್ರ ವಿತರಣೆ
July 19, 2018ಮೈಸೂರು: ಮೈಸೂರಿನ ದೇವನೂರು 3ನೇ ಹಂತದಲ್ಲಿ ಗ್ರಂಥಾಲಯ ನಿರ್ಮಾಣಕ್ಕಾಗಿ ಮಂಜೂರಾಗಿದ್ದ ಸಿಎ ನಿವೇಶನದ ಹಂಚಿಕೆ ಪತ್ರವನ್ನು ಮುಡಾ ಆಯುಕ್ತ ಪಿ.ಎಸ್.ಕಾಂತರಾಜು ಅವರು ಎನ್.ಆರ್. ಕ್ಷೇತ್ರದ ಶಾಸಕರಾದ ಮಾಜಿ ಸಚಿವ ತನ್ವೀರ್ ಸೇಟ್ ಅವರಿಗೆ ಇಂದು ಹಸ್ತಾಂತರಿಸಿದರು. 29ಘಿ36 ಮೀಟರ್ ವಿಸ್ತೀರ್ಣ (1,044 ಚ.ಮೀ.)ದ ನಿವೇಶನದಲ್ಲಿ ಗ್ರಂಥಾಲಯ ಇಲಾಖೆಯು ದೇವನೂರು 3ನೇ ಹಂತದಲ್ಲಿ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಿ ವಾಚನಾಲಯ ಸೌಲಭ್ಯ ಒದಗಿಸಲು ಮುಡಾದಿಂದ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂದು ತನ್ವೀರ್ ಸೇಟ್ ತಿಳಿಸಿದರು. ಈ ಸಂದರ್ಭ ಕೇಂದ್ರ…