ಮೈಸೂರು: ಬೆಂಗಳೂರಿನ ಸಾಹಿತ್ಯ ಭಂಡಾರ ಪ್ರಕಾಶನ ಹೊರತಂದಿರುವ ಲೇಖಕ ಎಂ.ಎಸ್.ಕೆ. ಪ್ರಭು ರಚಿತ `ಸಮಗ್ರ ಕಥೆಗಳು’ ಮತ್ತು `ವಿರೋಧ ವಿಲಾಸ’ ಕೃತಿಗಳನ್ನು ಹಿರಿಯ ರಂಗಕರ್ಮಿ ಎಚ್.ಎಸ್.ಉಮೇಶ್ ಸೋಮವಾರ ಬಿಡುಗಡೆಗೊಳಿಸಿದರು. ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಗಾನಭಾರತಿ (ವೀಣೆ ಶೇಷಣ್ಣ) ಸಭಾಂಗಣದಲ್ಲಿ `ಎಂ.ಎಸ್.ಕೆ.ಪ್ರಭು ಅವರ 80ನೇ ಜನ್ಮ ದಿನದ ಸ್ಮರಣಾರ್ಥ’ ಅವರ ಅಭಿಮಾನಿ ಬಳಗದ ವತಿಯಿಂದ ನಡೆದ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಗೊಳಿಸಿ,ನಂತರ ಮಾತನಾಡಿದ ಅವರು, ಲೇಖಕ ಎಂ.ಎಸ್.ಕೆ.ಪ್ರಭು ಅವರು, ರಾಜಕೀಯದಿಂದ ದೂರವಿದ್ದ ಬರಹಗಾರ. ಅಂತೆಯೇ ಅವರ ಬರವಣಿಗೆಗಳೂ ರಾಜಕೀಯದಿಂದ…
ಇಂದಿನಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ
July 17, 2018ಮೈಸೂರು: ಮೈಸೂರಿನ ಲಷ್ಕರ್ ಮೊಹಲ್ಲಾ (ಬೆಂಗಳೂರು ಪೇಟೆ)ದಲ್ಲಿ ಭಾವಸಾರ ಕ್ಷತ್ರಿಯ ಚಾಮುಂಡೇಶ್ವರಿ ಯುವಕರ ಭಕ್ತ ಮಂಡಳಿ ಆಶ್ರಯದಲ್ಲಿ ಜು.17ರಿಂದ 21ರವರೆಗೆ 78ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ ಆಯೋಜಿಸಲಾಗಿದೆ. ಜು.17ರಂದು ಮಧ್ಯಾಹ್ನ 12 ಗಂಟೆಗೆ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಮರಾಠ ರಾಮಮಂದಿರದಿಂದ ಕಬೀರ್ ರಸ್ತೆ ಮೂಲಕ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು. 18ರಂದು ಸಂಜೆ 6 ಗಂಟೆಗೆ ಭಾವಸಾರ ಕ್ಷತ್ರಿಯ ಮಹಿಳಾ ಮಂಡಳಿಯಿಂದ ಭಜನೆ, 7 ಗಂಟೆಗೆ ಮಕ್ಕಳಿಂದ ವೇಷಭೂಷಣ ಸ್ಪರ್ಧೆ…
ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
July 17, 2018ಮೈಸೂರು: ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಮೈಸೂರು ಜಿಲ್ಲಾ ಸಮಿತಿ ಆಶ್ರಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪ್ರಸಕ್ತ ಶೈಕ್ಷಣಿಕ ಸಾಲಿಗೆ ಕಾಲೇಜು ಆರಂಭಗೊಂಡು 15 ದಿನಗಳು ಕಳೆದರೂ ಕೊಠಡಿಗಳ ಕೊರತೆಯಿಂದ ಸರಿಯಾಗಿ ತರಗತಿ ನಡೆಯುತ್ತಿಲ್ಲ. ಪ್ರಾಯೋಗಿಕ ತರಗತಿಗಾಗಿ ಅಗತ್ಯವಾದ ಉಪಕರಣಗಳೂ ಲಭ್ಯವಿಲ್ಲ. ಒಂದೂವರೆ ಸಾವಿರ ವಿದ್ಯಾರ್ಥಿನಿಯರಿಗೆ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಲು ಸಾಮಥ್ರ್ಯ…
ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ
July 16, 2018ಮೈಸೂರು: ಕಾಂಕ್ರಿಟೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ರಸ್ತೆಯನ್ನು ಇಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ರಾಜಧಾನಿ ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯನ್ನು ಸಕಲೇಶಪುರ ತಾಲೂಕು ಕೆಂಪುಹೊಳೆ ಜಂಕ್ಷನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಲೋಕಾರ್ಪಣೆ ಮಾಡಿದರು. ತೀವ್ರ ಹದಗೆಟ್ಟಿದ್ದ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ 12.38 ಕಿ.ಮೀ. ಉದ್ದದ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯನ್ನು ಕಳೆದ ಜನವರಿ 20ರಂದು ಕೈಗೆತ್ತಿಕೊಳ್ಳಲಾಗಿತ್ತು….
ಅಕ್ಕಿ ತೂಗುತ್ತಿದ್ದವನನ್ನು ಸಚಿವನನ್ನಾಗಿ ಮಾಡಿದಿರಿ…
July 16, 2018ಮೈಸೂರು: ಸೊಸೈಟಿ ಯಲ್ಲಿ ಅಕ್ಕಿ ತೂಗುತ್ತಿದ್ದ ನನ್ನನ್ನು ಸಚಿವನಾಗುವ ಮಟ್ಟಕ್ಕೆ ಬೆಳೆಸಿದ್ದೀರಿ… ಚುನಾವಣೆ ಯುದ್ಧದಲ್ಲಿ ರಣ ಕಹಳೆ ಊದಿ ಭಾರೀ ಹೋರಾಟದ ಮೂಲಕ ನನ್ನನ್ನು ಗೆಲ್ಲಿಸಿದ್ದೀರಿ… ನನ್ನುಸಿರುವವರೆಗೂ ನಿಮ್ಮನ್ನು ಮರೆಯಲ್ಲ…. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಚಾಮುಂಡೇಶ್ವರಿ ಕ್ಷೇತ್ರದ ಮತದಾರರಿಗೆ ಏರ್ಪಡಿಸಿದ್ದ ಕೃತಜ್ಞತಾ ಸಭೆ ಯಲ್ಲಿ ಭಾವುಕರಾಗಿ ಹೇಳಿದ ಮಾತುಗಳಿವು. ಮೈಸೂರಿನ ಹೊರ ವಲಯದಲ್ಲಿರುವ ಲಿಂಗ ದೇವರು ಕೊಪ್ಪಲು ಮೈದಾನದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಘಟಕ ಆಯೋಜಿಸಿದ್ದ ಕೃತಜ್ಞತಾ ಸಮಾವೇಶವನ್ನು ಉದ್ಘಾಟಿಸಿ ಜಿ.ಟಿ.ದೇವೇಗೌಡರು ಮಾತನಾಡಿದರು. ನಿಮ್ಮ ಜಿ.ಟಿ.ದೇವೇಗೌಡರನ್ನು…
ಜ್ಞಾನದ ಕಲೆಯಾದ ಜನಪದದಿಂದ ಬೌದ್ಧಿಕ ಸಾಮಥ್ರ್ಯ ವೃದ್ಧಿ ಮೈಸೂರು ವಿವಿ ಕುಲಸಚಿವ ಪ್ರೊ.ಜೆ.ಸೋಮಶೇಖರ್
July 16, 2018ಮೈಸೂರು: ಪ್ರತಿಯೊಂದು ಜನಪದ ಕಲೆಯೂ ಜ್ಞಾನದ ಕಲೆಯಾಗಿದ್ದು, ಅವುಗಳನ್ನು ಕರಗತ ಮಾಡಿಕೊಳ್ಳುವ ಮೂಲಕ ಬೌದ್ಧಿಕ ಸಾಮಥ್ರ್ಯ ವೃದ್ಧಿಸಿಕೊಳ್ಳಲು ಸಾಧ್ಯವಿದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಜೆ.ಸೋಮಶೇಖರ್ ಹೇಳಿದರು. ಮೈಸೂರಿನ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜನಪದ ಕಲೆ ತನ್ನ ಜನಪರ ಸತ್ವದಿಂದ ಜೀವಪರತೆಯೊಂದಿಗೆ ಜೀವಂತವಾಗಿದೆ. ಈ ಹಿನ್ನೆಲೆಯಲ್ಲಿ ಜನಪದ…
ಬದ್ಧತೆ, ಗುರಿ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಸಾಧ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅಭಿಮತ
July 16, 2018ಮೈಸೂರು: ಪ್ರತಿಷ್ಠಿತ ಫೆಡರೇಷನ್ ಆಫ್ ಕರ್ನಾಟಕ ಛೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್ಕೆಸಿಸಿಐ) ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ಸುಧಾಕರ ಎಸ್.ಶೆಟ್ಟಿ ಹಾಗೂ ಅವರ ಪತ್ನಿ ಸುಖಲತಾ ಶೆಟ್ಟಿ ಅವರನ್ನು ಭಾನುವಾರ ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಹೋಟೆಲ್ ಮಾಲೀಕರ ಸಂಘ ಮತ್ತು ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭವನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಉದ್ಘಾಟಿಸಿದರಲ್ಲದೇ, ಸುಧಾಕರ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ…
ತ್ಯಾಜ್ಯ ನಗರಿಯಾಗಿ ಮಾರ್ಪಡುತ್ತಿದೆ ಸ್ವಚ್ಛ ನಗರಿ
July 16, 2018ರಾತ್ರೋರಾತ್ರಿ ಲೋಡ್ಗಟ್ಟಲೇ ಕಸ ತಂದು ಸುರಿಯುತ್ತಿರುವ ಅನಾಮಿಕರು, ಮೈಸೂರಿನಲ್ಲಿ ಎಲ್ಲೆಂದರಲ್ಲಿ ರಾಶಿ ರಾಶಿ ಕಸ ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ಹಾಗೂ ಅರಮನೆಗಳ ನಗರಿ ಹಾಗೂ ಸ್ವಚ್ಛ ನಗರಿ ಎಂದು ಕರೆಸಿಕೊಂಡು ದೇಶ-ವಿದೇಶಗಳ ಗಮನ ಸೆಳೆದಿದ್ದ ಮೈಸೂರು ನಗರ ಮುಂದಿನ ದಿನಗಳಲ್ಲಿ ಕಸದ ನಗರ ಎನಿಸಿಕೊಳ್ಳಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ನಗರದ ಹೊರವಲಯ ಸೇರಿದಂತೆ ಹಲವೆಡೆ ರಸ್ತೆ ಬದಿ ಕಿಡಿಗೇಡಿಗಳು ರಾತ್ರೋರಾತ್ರಿ ಕಸದ ರಾಶಿ ಸುರಿದು ನಗರದ ಅಂದವನ್ನು ಕೆಡಿಸುತ್ತಿದ್ದಾರೆ. ಕೇರಳ ಸೇರಿದಂತೆ ವಿವಿಧೆಡೆಯಿಂದ…
ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ
July 16, 2018ಜು.21ರಂದು ಹೊಸಪೇಟೆ ಬಳಿ ರೈತಸಂಘದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮೈಸೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಸ್ವರಾಜ್ ಇಂಡಿಯಾ ಪಾರ್ಟಿ ಆಶ್ರಯದಲ್ಲಿ 39ನೇ ರೈತ ಹುತಾತ್ಮ ದಿನವಾದ ಜು.21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ್ ಕ್ರಾಸ್ ಬಳಿ ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗುವುದು ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಮನೆಯಂಗಳದಲ್ಲಿ ಎರಡು ಕೃತಿ ಬಿಡುಗಡೆ
July 16, 2018ಮೈಸೂರು: `ನನ್ನ ರಂಗಭೂಮಿ’ ಮತ್ತು `ರಂಗ ವಿಮರ್ಶೆ ಅಂದು-ಇಂದು’ ಎಂಬ ಎರಡು ಕೃತಿಗಳನ್ನು ಹಿರಿಯ ಸಾಹಿತಿ ಹಾಗೂ ವಿಮರ್ಶಕ ಡಾ.ಸಿ.ನಾಗಣ್ಣ ಭಾನುವಾರ ಬಿಡುಗಡೆ ಮಾಡಿದರು. ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ದೇಶಿರಂಗ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಂಸ್ಥೆಯ ಕೃಷ್ಣ ಜನಮನ ಅವರ ಈ ಎರಡು ಕೃತಿಗಳನ್ನು ಡಾ.ಸಿ.ನಾಗಣ್ಣ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಎದುರಾಗುವ ಅಡ್ಡಿ-ಆತಂಕಗಳನ್ನು ಮೀರಿ ರಂಗಭೂಮಿಯಲ್ಲಿ ಬೆಳೆದಿರುವ ಕೃಷ್ಣ ಜನಮನ 28 ಕೃತಿಗಳನ್ನು ರಚನೆ ಮಾಡಿದ್ದಾರೆ. ಒಬ್ಬ ವ್ಯಕ್ತಿ ಕಥೆ, ಕಾದಂಬರಿ ಸೇರಿದಂತೆ…