ಮೈಸೂರು: ಮೈಸೂರಿನ ಚಾಮುಂಡಿಪುರಂನ ಬಾಲಬೋಧಿನಿ ಶಾಲೆ ಆವರಣದಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಗಾಗಿ ಆರು ಮಂದಿ ವೈದ್ಯರಿಗೆ ಶನಿವಾರ `ವೈದ್ಯೋ ನಾರಾಯಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಜೊತೆಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ, ವೈದ್ಯಕೀಯ ಸೇವೆ ನೀಡಲಾಯಿತು. ಅಪೂರ್ವ ಸ್ನೇಹ ಬಳಗ, ಅರಿವು ಸಂಸ್ಥೆ, ಕೆಎಂಪಿಕೆ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ, ಹೃದಯ ತಜ್ಞ ಡಾ.ಎಂ.ಎನ್.ರವಿ, ಪಶುವೈದ್ಯ ಡಾ.ನಾಗರಾಜ್, ದಂತ ವೈದ್ಯ ಡಾ.ಅನಿಲ್ ಥಾಮಸ್, ಮಕ್ಕಳ…
ಇಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
July 1, 2018ಮೈಸೂರು: ಮೈಸೂರು ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಜು.1ರಂದು 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಸಮಯ ದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರೀಕ್ಷೆಯು ಸುಗಮವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇ ಶ್ವರರಾವ್ ಆದೇಶ ಹೊರಡಿಸಿದ್ದಾರೆ. ಕಲಂ 144ರ ಅನ್ವಯ ಹೊರಡಿಸಿದ ಈ ಆದೇಶದನ್ವಯ ಜು.1ರಂದು ಬೆಳಿಗ್ಗೆ…
ಮಹಿಳೆ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರ ಸೆರೆ
July 1, 2018ಮೈಸೂರು: ಪಬ್ ಬಳಿ ಮಹಿಳೆ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ತಮಿಳುನಾಡಿನ ಊಟಿಯಲ್ಲಿ ಬಂಧಿಸಿದ್ದಾರೆ. ಉಮೇಶ್ ಹಾಗೂ ವಿವೇಕ್ ಬಂಧಿತರಾಗಿದ್ದು, ಮೈಸೂರಿಗೆ ಕರೆತಂದು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದಷ್ಟೇ ದಿನೇಶ್ಗೌಡ ಎಂಬುವನನ್ನು ಬಂಧಿಸಿದ್ದ ಪೊಲೀಸರು, ಆತ ನೀಡಿದ ಸುಳಿವಿನ ಜಾಡು ಹಿಡಿದು ಇಂದು ಬೆಳಿಗ್ಗೆ ಊಟಿಯಲ್ಲಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಕ್ಷ್ಮಿ ಎಂಬುವರ ಮೇಲೆ ಕಾಳಿದಾಸ ರಸ್ತೆಯ ಪಬ್ವೊಂದರ…
ವ್ಯಕ್ತಿ ನಾಪತ್ತೆ
July 1, 2018ಮೈಸೂರು: ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿ ನಿವಾಸಿ ನಾರಾಯಣಪ್ಪ ಎಂಬುವರ ಪುತ್ರ ಗುರುಮೂರ್ತಿ (53) ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಜೂ. 28 ರಂದು ಸಂಜೆ 5ರ ಸಮದಯಲ್ಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ವಾಪಸ್ ಬಂದಿಲ್ಲ ಎಂದು ಆತನ ತಂದೆ ದೂರು ದಾಖಲಿಸಿದ್ದಾರೆ. ಕನ್ನಡ ಮಾತನಾಡುತ್ತಾರೆ. ನೀಲಿ ಬಣ್ಣದ ಷರ್ಟು, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಈತನ ಬಗ್ಗೆ ಮಾಹಿತಿ ತಿಳಿದಲ್ಲಿ ದೂ. 0821-2418321, 2418521 ಅನ್ನು ಸಂಪರ್ಕಿಸಬಹುದು.
ಚಾರ್ವಾಕ ಕಥಾ ನಾಟಕೋತ್ಸವ
July 1, 2018ಮೈಸೂರು: ಕಲಾಮಂದಿರದ ಕಿರು ರಂಗಮಂದಿರದಲ್ಲಿ ಚಾರ್ವಾಕ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 2ರಂದು ಆರಂಭವಾಗುವ ನಾಟಕೋತ್ಸವದ ಅಂಗವಾಗಿ ವೈಚಾರಿಕ ಚಿಂತನೆ ಮತ್ತು ಚಿಂತಕರ ಕಗ್ಗೊಲೆ ಎಂಬ ವಿಚಾರ ಸಂಕಿರಣವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧು ಸೂದನ್ ಅವರು ಉದ್ಘಾಟಿಸಲಿದ್ದು, ವಿಚಾರವಾದಿ ಪ್ರೊ.ಕಾಳೇಗೌಡ ನಾಗವಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನ್ಯಾಯವಾದಿ ಹೆಚ್. ಮೋಹನ್ಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪರಿ ವರ್ತನಾ ಪತ್ರಿಕಾ ಸಂಪಾದಕ ಡಾ. ಕೃಷ್ಣಮೂರ್ತಿ ಚಮರಂ, ವಿಚಾರವಾದಿ ಮಲ್ಕುಂಡಿ ಮಹದೇವಸ್ವಾಮಿ…
ಸ್ವಯಂಕೃತ ಅಪರಾಧದಿಂದ ಬಿಜೆಪಿಗೆ ಬಹುಮತ ಬರಲಿಲ್ಲ
June 30, 2018ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಷಾದ ರಾಜ್ಯಪಾಲರು ನೀಡಿದ ಸಮಯಾವಕಾಶದಲ್ಲಿ ಬಹುಮತ ಸಾಬೀತುಪಡಿಸಬಹುದಿತ್ತು ಆದರೆ ಕೋರ್ಟ್ ಆದೇಶದಿಂದ ಕೈತಪ್ಪಿತು ಪಕ್ಷದ ಕಾರ್ಯಕಾರಣ ಯಲ್ಲಿ ವಿಚಾರ ಪ್ರಸ್ತಾಪ ಬೆಂಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕೆ ಬೇಕಾದ ಅಗತ್ಯ ಸಂಖ್ಯೆಯನ್ನು ಪಡೆಯ ದಿರಲು ಪಕ್ಷದ ಸ್ವಯಂಕೃತ ಅಪರಾಧವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಇಂದು ಬಿಜೆಪಿ ರಾಜ್ಯ ಕಾರ್ಯಕಾರಣ ಉದ್ಘಾಟಿಸಿ ಮಾತನಾಡಿದ ಬಿಎಸ್ವೈ, ವಿಧಾನಸಭೆ ಚುವಾವಣೆ…
ವರಮಹಾಲಕ್ಷ್ಮಿ ಹಬ್ಬಕ್ಕೆ ಗ್ರ್ಯಾಂಡ್ ಆಫರ್ ರೂ. 4500ಕ್ಕೆ ಮೈಸೂರು ರೇಷ್ಮೆ ಸೀರೆ
June 30, 2018ಮೈಸೂರು: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಕರ್ನಾಟಕ ರೇಷ್ಮೆ ಉದ್ಯಮ ನಿಗಮದ (ಕೆಎಸ್ಐಸಿ) ವತಿಯಿಂದ ಉಡುಗೊರೆಯಾಗಿ ಕೇವಲ 4.500 ರೂ.ಗೆ ಮೈಸೂರು ಸಿಲ್ಕ್ ಸೀರೆಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರವಾ ಸೋಧ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ರೇಷ್ಮೆ ಸೀರೆಗಳು ಉತ್ತಮ ಗುಣಮಟ್ಟದೊಂದಿಗೆ ವಿಶ್ವ ಪ್ರಸಿದ್ಧಿ ಪಡೆದಿವೆ. ಮೈಸೂರಿನಲ್ಲಿರುವ ರೇಷ್ಮೆ ಉದ್ಯಮ ನಿಗಮ ದಲ್ಲಿ ಸುಮಾರು…
ಶಾಂತಿವನದ ವೀಡಿಯೋಗೂ ನನಗೂ ಸಂಬಂಧ ಇಲ್ಲ
June 30, 2018ಪ್ರಕರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೆರೆ ಎಳೆಯುವ ಯತ್ನ ಯಾರೋ ಕಿಡಿಗೇಡಿಗಳ ಕೃತ್ಯ, ನಾನು ಸರ್ಕಾರದ ವಿರುದ್ಧ ಇಲ್ಲ ಬೆಂಗಳೂರು: ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಸಮ್ಮಿಶ್ರ ಸರ್ಕಾರದ ಆಯುಷ್ಯದ ಕುರಿತು ಹೇಳಿಕೆ ನೀಡಿದ್ದ ‘ವಿಡಿಯೋಗೂ ನನಗೂ ಸಂಬಂಧ ಇಲ್ಲ’ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ಮುಖಂಡರ ಸಭೆಯಲ್ಲಿ ಭಾಗ ವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿ, ‘ನಾನು ಸರ್ಕಾರದ ವಿರುದ್ಧ ಇದ್ದೇನೆ ಎನ್ನುವುದು ಸುಳ್ಳು….
ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ
June 30, 2018ಬೆಂಗಳೂರು: ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ರಾಜ್ಯ ಬಜೆಟ್ಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ಅಂತಿಮಗೊಳಿಸಿದೆ ಎಂದು ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. 2018ರ ಮೇ 31ಕ್ಕೆ ಅನ್ವಯವಾಗುವಂತೆ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಸೇರಿದಂತೆ ಹಲವಾರು ವಿಷಯಗಳನ್ನು ಸರ್ವಾನುಮತದಿಂದ ಅಂತಿಮಗೊಳಿಸಿ ವರದಿ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮಗಳಿಗೆ ಹಣಕಾಸು ಹೊಂದಾಣಿಕೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಮಾಡಿಕೊಳ್ಳಬೇಕಾಗುತ್ತದೆ. ಸಮಿತಿಯ ವರದಿಯನ್ನು ನಾಳೆ ಮೈತ್ರಿ ಸರ್ಕಾರದ…
ಕೊಡಗು ಮಾರ್ಗ ತಲಚೇರಿ-ಮೈಸೂರು ರೈಲ್ವೆ ಮಾರ್ಗ ವಿರೋಧ ಲೆಕ್ಕಿಸದೆ ಯೋಜನೆ ಅನುಷ್ಠಾನಕ್ಕೆ ಮುಂದಾದ ಕೇರಳ
June 30, 2018ನಾಳೆ ತಿರುವನಂತಪುರಂನಲ್ಲಿ ಟೆಕ್ನಿಕಲ್ ಬಿಡ್ ಓಪನ್ ಡಿಪಿಆರ್ ತಯಾರಿಸಲು ವಿದೇಶಿ ಕಂಪನಿಗಳ ಆಸಕ್ತಿ ಮೈಸೂರು: ಕೊಡಗು ಮತ್ತು ಮೈಸೂರು ಜನತೆ, ಜನಪ್ರತಿನಿಧಿಗಳು, ಪರಿಸರವಾದಿಗಳ ತೀವ್ರ ವಿರೋಧದ ನಡುವೆಯೂ ಕೇರಳ ಸರ್ಕಾರವು ದಕ್ಷಿಣ ಕೊಡಗಿನ ವನಸಿರಿ ನಾಶಪಡಿಸಿ ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆಗೆ ಡಿಪಿಆರ್ ತಯಾರಿಸಲು ಮುಂದಾಗಿದೆ. ಕೇವಲ ಕೇರಳ ರಾಜ್ಯಕ್ಕೆ ಮಾತ್ರ ಅನುಕೂಲವಾಗುವ ಈ ಯೋಜನೆಗೆ ಸಮಗ್ರ ಯೋಜನಾ ವರದಿ (DPR) ತಯಾರಿಸಲು ಹಲವು ವಿದೇಶಿ ಕಂಪನಿಗಳು ಆಸಕ್ತಿ ತೋರಿಸಿವೆ. ತಿರುವನಂತಪುರಂನಲ್ಲಿ ನಾಳೆ (ಜೂ.29) ತಾಂತ್ರಿಕ ಬಿಡ್…










