ವಿಶ್ವ ಯೋಗ ದಿನದ ಅಂಗವಾಗಿ ರೇಸ್ ಕೋರ್ಸ್ ಮೈದಾನದಲ್ಲಿ ಗುರುವಾರ ಬೆಳಿಗ್ಗೆ ನಡೆದ ಬೃಹತ್ ಸಾಮೂಹಿಕ ಯೋಗ ಪ್ರದರ್ಶನದ ವೇಳೆ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಮಾನ್ಯವಾಗಿತ್ತು. ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರವನ್ನು ಬೆಳಿಗ್ಗೆ 5ರಿಂದ 10 ಗಂಟೆವರೆಗೂ ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ಇದರಿಂದ ಇಲ್ಲಿ ಯಾವುದೇ ಗೋಜು, ಗದ್ದಲ ತಲೆದೋರಲಿಲ್ಲ. ಮೈದಾನಕ್ಕೆ ಹೊಂದಿಕೊಂಡಿರುವ ಮಹಾತ್ಮ ಗಾಂಧಿ ರಸ್ತೆ, ಮಹಾರಾಣಾ ಪ್ರತಾಪ ರಸ್ತೆ, ರೇಸ್ ಕೋರ್ಸ್ ಮತ್ತು ಸಿಎಆರ್ ಮೈದಾನದ ನಡುವೆ ಹಾದು…
ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಯೋಗ ತರಬೇತಿ ಕೇಂದ್ರ ಸ್ಥಾಪನೆ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿವರಣೆ
June 22, 2018ಮೈಸೂರು: ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಧ್ಯೋತಕವಾದ ಯೋಗವನ್ನು ಎಲ್ಲೆಡೆ ಪಸರಿಸುವುದಕ್ಕಾಗಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿನ ರೇಸ್ಕೋರ್ಸ್ ಆವರಣದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರದಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸುಧಾರಿಸುವುದಕ್ಕಾಗಿ ಜೂ.21ರಂದು ವಿಶ್ವ ಯೋಗ ದಿನವೆಂದು ಆಚರಿಸುವುದಕ್ಕೆ ಶ್ರಮಿಸಿದ್ದಾರೆ. ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಪ್ರತೀಕವೂ…
ಮುಕ್ತ ಗಂಗೋತ್ರಿಯಲ್ಲಿ ಹುಬ್ಬೇರುವಂತೆ ಮಾಡಿದ ಕಠಿಣ ಯೋಗ ಪ್ರದರ್ಶನ
June 22, 2018ಮೈಸೂರು: ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗಿತ್ತು. ಮುಕ್ತ ಗಂಗೋತ್ರಿಯಲ್ಲಿರುವ ವಿಜ್ಞಾನ ಭವನದಲ್ಲಿ ಯೋಗ ಶಿಕ್ಷಕರಿಂದ ಯೋಗ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ರಾಜ್ಯ ಮುಕ್ತ ವಿವಿಯ ತಾಂತ್ರಿಕ ಮತ್ತು ಬೋಧಕ ವರ್ಗದ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗದ ಮಹತ್ವದ ಬಗ್ಗೆ ಅರಿತುಕೊಂಡರು. ರಾಷ್ಟ್ರೀಯ ಯೋಗ ಚಾಂಪಿಯನ್ ಮತ್ತು ಯೊಗ ಚಿನ್ನದ ಪದಕ ವಿಜೇತ ಯೋಗ ಪ್ರಕಾಶ್, 85 ವರ್ಷದ ಅಂತಾರಾಷ್ಟ್ರೀಯ ಯೋಗ ಪಟು ಡಿ.ಎನ್.ಮುದ್ದುಕೃಷ್ಣ, 70 ವರ್ಷ ವಯೋಮಾನದ ರಾಷ್ಟ್ರೀಯ ಯೋಗ…
ಪ್ರಜಾಪ್ರಭುತ್ವ ವಿರೋಧಿ ಮೈಸೂರು ಪಾಲಿಕೆ ವಾರ್ಡ್, ಮೀಸಲಾತಿ ಪುನರ್ವಿಂಗಡಣೆ
June 22, 2018ಮಾಜಿ ಮೇಯರ್ ಸಂದೇಶ್ಸ್ವಾಮಿ ಆರೋಪ ಅರ್ಹರಿಗೆ ಅನ್ಯಾಯವಾಗಲಿರುವ ಮೀಸಲಾತಿ ಸಂಸದ, ಶಾಸಕರ ಮೂಲಕ ಸರ್ಕಾರದ ಗಮನ ಸೆಳೆಯಲೆತ್ನ ಮೈಸೂರು: ಮೈಸೂರು ಮಹಾನಗರಪಾಲಿಕೆ ಪುನರ್ರಚಿತ ವಾರ್ಡ್ ಹಾಗೂ ಮೀಸಲಾತಿಯ ಬಗ್ಗೆ ಮೈಸೂರಿನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಾಜಿ ಮೇಯರ್ ಹಾಗೂ ನಗರಪಾಲಿಕೆ ಸದಸ್ಯ ಸಂದೇಶ್ ಸ್ವಾಮಿ ಇಂದಿಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ವಾರ್ಡ್ವಾರು ಮೀಸಲಾತಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರು ನಗರದ ವಾರ್ಡ್ವಾರು ಮೀಸಲಾತಿಯಲ್ಲಿ ಸಾಕಷ್ಟು ನ್ಯೂನತೆ ಇದೆ. ರಿಂಗ್ ರಸ್ತೆಯ ಒಳಗಿರುವ ಮುಡಾದಿಂದ ಪಾಲಿಕೆಗೆ ಹಸ್ತಾಂತರವಾಗಿರುವ ಹೊಸ…
ಮೈಸೂರು ರೇಸ್ ಕೋರ್ಸ್ ಸ್ಥಳಾಂತರಿಸುವುದರಿಂದ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆಯೇ!?
June 22, 2018ಬಾಕಿ ಇರುವ ಬೇಕಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸಿ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ಗೆ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಪಿ.ಮಂಜುನಾಥ್ ಸಲಹೆ ಮೈಸೂರು: ಮೈಸೂರು ಮಹಾರಾಜರ ಕೊಡುಗೆಗಳಲ್ಲಿ ಒಂದಾದ ಮೈಸೂರು ರೇಸ್ ಕೋರ್ಸ್ ಅನ್ನು ಸ್ಥಳಾಂತರಿಸುವ ಪ್ರಸ್ತಾಪವನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕೈಬಿಟ್ಟು, ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಒತ್ತು ನೀಡುವುದು ಒಳಿತು ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ…
ಜೂ.24ರಂದು ಧಾರವಾಡದಲ್ಲಿ 7ನೇ ಅಖಿಲ ಭಾರತ ದಲಿತ ಯುವ ಸಾಹಿತ್ಯ ಸಮ್ಮೇಳನ
June 22, 2018ಮೈಸೂರು: ದಲಿತ ಸಾಹಿತ್ಯ ಪರಿಷತ್ತಿನ (ದಸಾಪ) `7ನೇ ಅಖಿಲ ಭಾರತ ದಲಿತ ಯುವ ಸಾಹಿತ್ಯ ಸಮ್ಮೇಳನ’ ಜೂ.24ರಂದು ಧಾರವಾಡದಲ್ಲಿ ನಡೆಯಲಿದೆ ಎಂದು ದಸಾಪ ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಕೆ.ಪುಟ್ಟನಂಜಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಪು ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಚಿಂತಕಿ ಡಾ.ಸಮತಾ ಬಿ.ದೇಶಮಾನೆ ಅವರನ್ನು ಆಯ್ಕೆ ಮಾಡಲಾಗಿದ್ದು, ಅಂದು ಬೆಳಿಗ್ಗೆ 9.30ಕ್ಕೆ ಸಾಹಿತಿ ಡಾ.ಧರಣಿದೇವಿ ಮಾಲಗತ್ತಿ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು…
ತನ್ವೀರ್ ವಿರುದ್ಧ ಹೇಳಿಕೆ ನೀಡಿದರೆ ಜಮೀರ್ ಅಹಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಬೆಂಬಲಿಗರ ಎಚ್ಚರಿಕೆ
June 22, 2018ಮೈಸೂರು: ಮಾಜಿ ಸಚಿವ, ಎನ್ಆರ್ ಕ್ಷೇತ್ರದ ಶಾಸಕ ತನ್ವೀರ್ಸೇಠ್ ವಿರುದ್ಧ ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ನೀಡುವುದು ಇದು ಹೀಗೇ ಮುಂದುವರೆದರೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ನ ಅಜೀಜ್ಸೇಠ್ ಬ್ಲಾಕ್ ಅಧ್ಯಕ್ಷ ಅಬ್ದುಲ್ಖಾದರ್ ಶಾಹಿದ್ ಎಚ್ಚರಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ವೀರ್ಸೇಠ್ ಅವರನ್ನು ಉದ್ದೇಶಿಸಿ `ನಿಮ್ಮ ಕ್ಷೇತ್ರಕ್ಕೆ ಬರುತ್ತೇನೆ, ಜನ ಯಾರನ್ನು ಬೆಂಬಲಿಸುತ್ತಾರೋ ನೋಡೋಣ’ ಎಂದು…
`ಸಂಗೀತದಿಂದ ಆರೋಗ್ಯ’ ವಿಚಾರ ಮಂಥನ : ಸಂಗೀತ ಸಾಧಕರಿಗೆ ಅಭಿನಂದನೆ
June 22, 2018ಮೈಸೂರು: ಮೈಸೂರಿನಲ್ಲಿ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ರಾಮಾನುಜ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ “ಸಂಗೀತದಿಂದ ಆರೋಗ್ಯ” ವಿಚಾರಮಂಥನ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು,ಆಕಾಶವಾಣಿ ಸಂಗೀತ ಸಂಯೋಜಕಿ ಪುಷ್ಪಲತಾ, ಗಮಕ ವಿದೂಷಿ ಜ್ಯೋತಿ, ಡಾ.ರಾಜಕುಮಾರ್ ಸಂಗೀತ ಸಂಜೆಯ ಡ್ರಮರ್ ರಾಘವೇಂದ್ರ ಪ್ರಸಾದ್, ಸುಗಮ ಸಂಗೀತದ ಕಲಾವಿದ ಮಹಾಲಿಂಗು, ಎದೆ ತುಂಬಿ ಹಾಡುವೆನು ಖ್ಯಾತಿಯ ಕುಮಾರಿ ಹಂಸಿಣಿ ಸನ್ಮಾನಿತರು. ಇದೇ ಸಂದರ್ಭದಲ್ಲಿ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಮಾತನಾಡಿ ಸಾಂಸ್ಕೃತಿಕ ರಾಜಧಾನಿ ಮೈಸೂರು…
ಅಡುಗೆ ತಯಾರಕರ ಹುದ್ದೆ ನೇಮಕಾತಿ ಆದೇಶ ವಿತರಣೆ
June 22, 2018ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಡುಗೆ ತಯಾರಕರು ಮತ್ತು ಅಡುಗೆ ಸಹಾ ಯಕರಿಗೆ ನೇರ ನೇಮಕಾತಿ ಮಾಡಲಾ ಗಿದ್ದು, ಹೊಸದಾಗಿ ನೇಮಕಗೊಂಡವರಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಜಿಪಂ ಸಭಾಂಗಣದಲ್ಲಿ ಆದೇಶ ಪತ್ರವನ್ನು ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ, ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು. ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಸಂಬಂಧ ಉಚ್ಚ ನ್ಯಾಯಾಲಯದ ವಿಭಾಗೀಯ…
ನಾಳೆ ಮಲೇರಿಯಾ ವಿರೋಧಿ ಮಾಸಾಚರಣೆ
June 22, 2018ಮೈಸೂರು: ಮೈಸೂರು ಜಿಲ್ಲಾ ರೋಗ ವಾಹನ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಜೂ.23ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ನಗರದ ಕ್ಯಾತಮಾರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಲೇರಿಯಾ ರೋಗದ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಸಂಬಂಧ ಮಲೇರಿಯಾ ವಿರೋಧಿ ಮಾಸಾಚರಣೆ, ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಉಪಮೇಯರ್ ಶ್ರೀಮತಿ ಇಂದಿರಾ ಮಹೇಶ್, ಮಾಜಿ ಮೇಯರ್ ಶ್ರೀಕಂಠಯ್ಯ, ನಗರಪಾಲಿಕೆ ಸದಸ್ಯ ಅಕ್ರಂ ಪಾಷಾ ಉದ್ಘಾಟಿಸಲಿದ್ದಾರೆ.