ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿ ಕೋಟಿ ಸಾಗಿಸಿದ ಆರೋಪ ಡಿಕೆಶಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹವಾಲ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವುದನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿದೆ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ 25 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾ ಗಿದೆ. ಈ ಹಣವನ್ನು ಕಾಂಗ್ರೆಸ್ ವರಿಷ್ಠರಿಗೆ ಹವಾಲ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರೋಧಿಗಳು ಈ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ….
ಜನರ ಜೀವನದಲ್ಲಿ ರೈತರ ಪಾತ್ರ ಅತಿ ದೊಡ್ಡದು ರೈತರಿಲ್ಲದೆ ದೇಶ, ಜನರಿಲ್ಲ ಎಂದ ಪ್ರಧಾನಿ
June 21, 2018ನವದೆಹಲಿ: ದೇಶದಲ್ಲಿ ಆಹಾರ ಭದ್ರತೆಯಲ್ಲಿ ರೈತರ ಶ್ರಮ ಮತ್ತು ಕೊಡುಗೆ ಅಪಾರವಾಗಿದೆ. ಜನರು ಬದುಕಿ ಬಾಳಲು ರೈತರು ಅತ್ಯಗತ್ಯವಾಗಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನಮೋ ಆಪ್ ಮೂಲಕ ಅವರು ಇಂದು ದೇಶದ ರೈತರೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ದೇಶದ 600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಈ ಡಿಜಿಟಲ್ ಮಾಧ್ಯಮ ನೆರವಾಗಬಹುದು ಎಂದು ಆಶಾವಾದ ವ್ಯಕ್ತಪಡಿಸಿದರು. ನಮ್ಮ ದೇಶದಲ್ಲಿ ರೈತ ರನ್ನು ಅವರ ಪಾಡಿಗೆ ಬಿಟ್ಟುಬಿಡಲಾಗಿದೆ. ಅವರ ಅಭಿವೃದ್ಧಿಗೆ…
ಸದ್ಯಕ್ಕೆ ಬಸ್ ದರ ಏರಿಕೆ ಇಲ್ಲ: 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
June 21, 2018ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶೇ.15 ರಷ್ಟು ಬಸ್ ಪ್ರಯಾಣದರ ಹೆಚ್ಚಿಸಲು ಮುಂದಾಗಿದೆ. ನಿಗಮದ ಪ್ರಸ್ತಾವವನ್ನು ತಿರಸ್ಕರಿಸಿರುವ ರಾಜ್ಯ ಸರ್ಕಾರ ಇದರಿಂದ ಹೊರೆಯಾಗುವ 400ರಿಂದ 500 ಕೋಟಿ ರೂ.ಗಳನ್ನು ಬೇರೆ ಮೂಲಗಳಿಂದ ತುಂಬಿ ಕೊಡುವ ಭರವಸೆ ನೀಡಿದೆ. ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಈಗಷ್ಟೇ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸ ಸರ್ಕಾರ ಪ್ರಯಾಣಿಕರ ದರ ಹೆಚ್ಚಿಸಲು ಸದ್ಯಕ್ಕೆ ಅವಕಾಶ…
ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮೈಸೂರಲ್ಲಿ ಇಂದು ಬೃಹತ್ ಸಾಮೂಹಿಕ ಯೋಗ ಪ್ರದರ್ಶನ
June 21, 2018ಬೆಳಿಗ್ಗೆ 6 ರಿಂದ ಮೈಸೂರಿನ ರೇಸ್ ಕೋರ್ಸ್ನಲ್ಲಿ ಲಕ್ಷ ಯೋಗಪಟುಗಳ ಸಮಾಗಮ ಸಚಿವರು, ಶಾಸಕರು, ಸಮಾಜದ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಪ್ರದರ್ಶನದಲ್ಲಿ ವಿವಿಧ ಯೋಗ ಶಾಲೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಥ್ ಮೈಸೂರು: ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದ್ದು, ಇಲ್ಲಿನ ರೇಸ್ಕೋರ್ಸ್ನಲ್ಲಿ ನಡೆಯಲಿರುವ ಸಾಮೂಹಿಕ ಬೃಹತ್ ಯೋಗ ಪ್ರದರ್ಶನದಲ್ಲಿ ಲಕ್ಷ ಯೋಗಪಟು ಗಳು ಭಾಗವಹಿಸುವ ನಿರೀಕ್ಷೆಯಿದೆ. ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ, ಎಸ್ಪಿವೈಎಸ್ಎಸ್, ಜಿಎಸ್ಎಸ್ ಯೋಗಿಕ್…
ಯೋಗ ಪಟುಗಳಿಗೆ ಉಪಹಾರ ವ್ಯವಸ್ಥೆ: ಡಿಸಿ ಅಭಿರಾಮ್
June 21, 2018ಮೈಸೂರು: ಮೈಸೂರು ರೇಸ್ಕೋರ್ಸ್ ಆವರಣದಲ್ಲಿ ಬೃಹತ್ ಸಾಮೂಹಿಕ ಯೋಗ ಪ್ರದರ್ಶನಕ್ಕಾಗಿ 70 ಬ್ಲಾಕ್ಗಳನ್ನು ನಿರ್ಮಿಸಿದ್ದು, ಪ್ರತಿ ಬ್ಲಾಕ್ನಲ್ಲಿ ಸುಮಾರು 1200 ಮಂದಿ ಯೋಗಪಟು ಗಳು ಪ್ರದರ್ಶನ ನೀಡಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ನಾಳೆ(ಜೂ.21) ಇಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂ.21ರಂದು ಬೆಳಿಗ್ಗೆ 7 ಗಂಟೆಗೆ ವಿಶ್ವ ಯೋಗ ದಿನ ಆಚರಿಸುತ್ತಿದ್ದು, ಕಳೆದ ಬಾರಿಗಿಂತ ಅಂದರೆ, ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ….
ನಾವು ಕಾನೂನಾತ್ಮಕವಾಗಿ ಡಿಕೆಶಿ ಜತೆಗಿದ್ದೇವೆ
June 21, 2018ಬೆಂಗಳೂರು: ನಾವು ಕಾನೂನಾತ್ಮಕವಾಗಿ ಡಿಕೆ ಶಿವಕುಮಾರ್ ಜತೆಗಿದ್ದೇವೆ. ಅವ ರೇಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅಘೋಷಿತ ನಗದು ಹಾಗೂ ಸುಳ್ಳು ದಾಖಲೆ ಹೊಂದಿದ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಬೇಕು ಎಂದು ಆರ್ಥಿಕ ಅಪರಾಧ ನ್ಯಾಯಾ ಲಯ ಸಚಿವ ಡಿಕೆ ಶಿವಕುಮಾರ್ಗೆ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕಾನೂನು ಪ್ರಕಾರ ಹೋರಾಟ ನಡೆಸುತ್ತಿದ್ದಾರೆ. ಸುದ್ದಿ ಮಾಧ್ಯಮಗಳು ಇದನ್ನು ದೊಡ್ಡ ವಿಷಯವಾಗಿ ಬಿಂಬಿಸುವ ಅಗತ್ಯವಿಲ್ಲ. ಬಿಜೆಪಿಯವರು ಯಾರು…
ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಮೊದಲ ಪ್ರಗತಿ ಪರಿಶೀಲನಾ ಸಭೆ: ನದಿ ನೀರಿನ ಮೂಲ ಸದ್ಬಳಕೆಗೆ ಅಧಿಕಾರಿಗಳಿಗೆ ಸೂಚನೆ
June 21, 2018ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸುತ್ತಲೂ ನದಿ ನೀರಿನ ಮೂಲವಿದ್ದು, ಇಂತಹ ವಾತಾವರಣ ರಾಜ್ಯದ ಹಲವು ಜಿಲ್ಲೆಗಳಿಗೆ ಇಲ್ಲ. ನೀರಿನ ಮೂಲವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವುದು. ಕೆರೆಗಳನ್ನು ತುಂಬಿಸುವ ಬಗ್ಗೆ ಅಧಿಕಾರಿಗಳು ತಿಂಗಳೊಳಗೆ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಆರ್.ಧ್ರುವನಾರಾಯಣ್ ಮತ್ತು ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರಿನ ಮಿನಿ ವಿಧಾನಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ನಡೆಸಿದ ಮೊಟ್ಟ…
ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ, ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ ಮೈ ಗ್ರೀನ್-2018
June 21, 2018ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಎಐ) ಮೈಸೂರು ಕೇಂದ್ರ, ಮೈಸೂರು ಬಿಲ್ಡರ್ ಚಾರಿಟಬಲ್ ಟ್ರಸ್ಟ್ (ಎಂಬಿಸಿಟಿ) ವತಿಯಿಂದ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಹಾಗೂ ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ `ಮೈ ಗ್ರೀನ್-2018’ ಜೂ.23ರಿಂದ 24ರವರೆಗೆ ನಡೆಯಲಿದೆ ಎಂದು ಬಿಎಐ ಮೈಸೂರು ಕೇಂದ್ರದ ಅಧ್ಯಕ್ಷ ಕೆ.ಸುಬ್ರಹ್ಮಣ್ಯರಾವ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ನಲ್ಲಿ ಪರಿಸರ ಪೂರಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿಶ್ವ ಪರಿಸರ…
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ
June 21, 2018ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ಜಿಲ್ಲಾ ಘಟಕವು ವಿವಿಧ ಕ್ಷೇತ್ರಗಳ 6 ಮಂದಿಗೆ ಸಾಧಕರಿಗೆ `ನಾಲ್ವಡಿ ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಿತು. ಮೈಸೂರಿನ ರೋಟರಿ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನಿವೃತ್ತ ಪದವಿ ಪೂರ್ವ ನಿರ್ದೇಶಕ ಶ್ರೀಧರರಾಜೇ ಅರಸ್ (ಸಂಘಟನಾ ಕ್ಷೇತ್ರ), ಚಾಮುಂಡಿಬೆಟ್ಟದ ಅರ್ಚಕ ಎಂ.ಡಿ.ಸೋಮಣ್ಣ (ಧಾರ್ಮಿಕ), ನಿವೃತ್ತ ಪುರಾತತ್ವ ಶಾಸ್ತ್ರದ ಪ್ರಾಧ್ಯಾಪಕ ಎನ್.ಎಸ್.ರಂಗರಾಜು (ಪುರಾತತ್ವ), ಮಹಾರಾಣಿ ಸ್ನಾತಕೋತ್ತರ ಕಾಲೇಜಿನ ಪ್ರಾಧ್ಯಾಪಕಿ ಡಾ.ಎಂ.ಎಸ್.ಅನಿತಾ (ಶಿಕ್ಷಣ), ಸಾಹಿತಿ ಡಾ.ಸುಜಾತಾ…
ಜಿಎಸ್ಟಿ ಜಾರಿ ನಂತರ ಸಿಎಗಳಿಗೆ ಬೇಡಿಕೆ ಹೆಚ್ಚು ಚಾರ್ಟೆರ್ಡ್ ಅಕೌಂಟೆಂಟ್ ಶಿವಾನಂದ್
June 21, 2018ಮೈಸೂರು: ದೇಶದಲ್ಲಿ ಜಿಎಸ್ಟಿ ಕಾಯ್ದೆ ಜಾರಿ ಬಳಿಕ ಚಾರ್ಟೆರ್ಡ್ ಅಕೌಂಟೆಂಟ್ಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಚಾರ್ಟೆರ್ಡ್ ಅಕೌಂಟೆಂಟ್ ಶಿವಾನಂದ್ ಹೇಳಿದರು. ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನೇಗಿಲಯೋಗಿ ವಿದ್ಯಾವರ್ಧಕ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿ ವಾಣ ಜ್ಯ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಹಾಗೂ ಸಿಎ, ಸಿಎಸ್, ಐಸಿಡಬ್ಲ್ಯೂಎ ಪರೀಕ್ಷೆಗಳ ವಿಶೇಷ ವಾರಾಂತ್ಯ ತರಬೇತಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಚಾರ್ಟೆರ್ಡ್ ಅಕೌಂಟೆಂಟ್ (ಸನ್ನದು ಲೆಕ್ಕಿಗ) ಕೋರ್ಸ್ ಅನ್ನು ಇನ್ಸ್ಟಿಟ್ಯೂಟ್ ಆಫ್…