ಬೆಂಗಳೂರು: ರೈತರ ನೋವು ಚೆನ್ನಾಗಿ ಗೊತ್ತು, ಅವರ ಸಾಲ ಮನ್ನಾ ಮಾಡುತ್ತೇನೆ. ಅದಕ್ಕೆಲ್ಲ ಸ್ವಲ್ಪ ಸಮಯಾವಕಾಶ ಬೇಕು. ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ಮಾಡಿ, ಅವರ ವಿಶ್ವಾಸ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುತ್ತೇನೆ. ಬಿಎಸ್ವೈ ಅವರಿಗೆ ಇರುವ ಆತುರ ನಮಗೆ ಇಲ್ಲ. ಸಂಪೂರ್ಣ ವಿಶ್ವಾಸ ಮತ ಪಡೆದ ಬಳಿಕ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಜಗದೀಶ್ ಶೆಟ್ಟರ್ ಹೇಳಿಕೆ ಉಲ್ಲೇಖಿಸಿ ಟಾಂಗ್ ಕೊಟ್ಟ ಸಿಎಂ ಕುಮಾರಸ್ವಾಮಿ, ದಯವಿಟ್ಟು ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಎಂದು ವಿಭಾಗಿಸಬೇಡಿ ಎಂದರು….
ಅಧಿಕಾರಕ್ಕಾಗಿ ನಾವು ಯಾರ ಮನೆ ಬಾಗಿಲಿಗೂ ಹೋಗಲಿಲ್ಲ, ಕಾಂಗ್ರೆಸ್ ಮುಖಂಡರೇ ಸರ್ಕಾರ ರಚನೆ ಪ್ರಸ್ತಾಪ ಮುಂದಿಟ್ಟರು…
May 26, 2018ಬೆಂಗಳೂರು: ಸಂದಿಗ್ದ ಸನ್ನಿವೇಶದಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ. ಚುನಾವಣೆಗೂ ಮುನ್ನ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಿ, ರಾಜ್ಯಕ್ಕೆ ಮತ್ತು ನನ್ನ ಮೈತ್ರಿ ಪಕ್ಷವಾದ ಕಾಂಗ್ರೆಸ್ಗೆ ಇಡೀ ರಾಜ್ಯದಲ್ಲಿ ಒಳ್ಳೆ ಹೆಸರು ತಂದುಕೊಡುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಬಡವರು ಮತ್ತು ರೈತರ ಕಲ್ಯಾಣಕ್ಕೆ ನನ್ನ ಸರ್ಕಾರ ಸದಾ ಸಿದ್ಧ. ಮೈತ್ರಿ ಕಾಂಗ್ರೆಸ್ ನಾಯಕರೊಟ್ಟಿಗೆ ಚರ್ಚೆ ಮಾಡಿ, ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ವೇಳೆ ಮತ್ತೆ ಪುನರುಚ್ಛಾರ ಮಾಡಿದರು. ಅಧಿಕಾರಕ್ಕೆ ಬರಲು ಕಾರಣಕರ್ತರಾದ ಕಾಂಗ್ರೆಸ್…
ಇಂದಿನಿಂದ ರಂಗಾಯಣದಲ್ಲಿ ‘ಗ್ರೀಷ್ಮ ರಂಗೋತ್ಸವ’ ಸಿಜಿಕೆ ನೆನಪಿನ ಹವ್ಯಾಸಿ ನಾಟಕೋತ್ಸವ
May 26, 2018ಮೈಸೂರು: ಮೈಸೂರಿನ ರಂಗಾಯಣದ ಭೂಮಿಗೀತದಲ್ಲಿ ನಾಳೆ(ಮೇ.26)ಯಿಂದ ಜೂನ್ 24ರವರೆಗೆ ಸಿಜಿಕೆ ನೆನಪಿನ ಹವ್ಯಾಸಿ ನಾಟಕೋತ್ಸವ `ಗ್ರೀಷ್ಮ ರಂಗೋತ್ಸವ’ ನಡೆಯಲಿದ್ದು, ರಾಜ್ಯದ ಬೇರೆ ಹವ್ಯಾಸಿ ರಂಗ ತಂಡಗಳು ವಿಭಿನ್ನ ಅಭಿರುಚಿವುಳ್ಳ ನಾಟಕ ಪ್ರದರ್ಶಿಸಲಿವೆ ಎಂದು ರಂಗಾಯಣದ ನಿರ್ದೇಶಕಿ ಭಾಗೀರಥಿಬಾಯಿ ಕದಂ ತಿಳಿಸಿದ್ದಾರೆ. ರಂಗಾಯಣದ ಆವರಣದಲ್ಲಿರುವ ಶ್ರೀರಂಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುರೂಪಿ, ಚಿಣ್ಣರಮೇಳದ ನಂತರ ಗ್ರೀಷ್ಮ ರಂಗೋತ್ಸವ ನಡೆಸಲಾಗುತ್ತದೆ. ರಂಗಭೂಮಿಯನ್ನು ಜನಪರ ಚಳುವಳಿಯನ್ನಾಗಿ ರೂಪಿಸಿದ ರಂಗ ಚೇತನ ಪೆÇ್ರ.ಸಿ.ಜಿ. ಕೃಷ್ಣಸ್ವಾಮಿ ಅವರ ಹೆಸರಿನಲ್ಲಿ ರಂಗಾಯಣದ ವತಿಯಿಂದ ಪ್ರತಿ…
ನಗುವನಹಳ್ಳಿ, ಬೋಗಾದಿ ಜನರ ನಿದ್ದೆಗೆಡಿಸಿರುವ ಚಿರತೆಗಳು
May 26, 2018ಮೈಸೂರು: ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಚಿರತೆ ಸಾಕು ಪ್ರಾಣ ಗಳ ಬೇಟೆಯಾಡಿದ್ದು, ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಇತ್ತ ಮೈಸೂರು ತಾಲೂಕಿನ ಜಟ್ಟಿಹುಂಡಿ, ಬೋಗಾದಿಯಲ್ಲಿ ಎರಡು ಮರಿಗಳೊಂದಿಗೆ ಚಿರತೆ ಕಾಣ ಸಿಕೊಳ್ಳುವ ಮೂಲಕ ಆತಂಕ ಉಂಟು ಮಾಡಿದೆ. ಕಳೆದ ಎರಡು ವಾರದಿಂದ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಚಿರತೆ ಉಪಟಳ ನೀಡುತ್ತಿದ್ದು, ಗ್ರಾಮಸ್ಥರ ಮೇಕೆ, ಕುರಿ, ನಾಯಿ, ಬೆಕ್ಕು ಹಾಗೂ ಹಂದಿಯನ್ನು ಬೇಟೆಯಾಡಿದೆ. ಗ್ರಾಮದ ನಿವಾಸಿ ಅಣ್ಣಯ್ಯ ಅವರಿಗೆ ಸೇರಿದ ಬೆಕ್ಕು ಮತ್ತು ನಾಯಿಯನ್ನು ಬಲಿ ಪಡೆದಿದೆ. ಅಲ್ಲದೆ…
ಇಂದು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥಾಪನಾ ದಿನಾಚರಣೆ
May 26, 2018ಮೈಸೂರು: ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ನಲ್ಲಿ ಮೇ 26ರ ಸಂಜೆ 6 ಗಂಟೆಗೆ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಎಂ.ಚಿನ್ನಸ್ವಾಮಿ ತಿಳಿಸಿದರು. ಕಾರ್ಯಕ್ರಮದಲ್ಲಿ ಐಇಐನ ಅಧ್ಯಕ್ಷ ಸಿಸಿರ್ ಕುಮಾರ್ ಬ್ಯಾನರ್ಜಿ ಮತ್ತು ಮಾಜಿ ಅಧ್ಯಕ್ಷ ನವೀನಚಂದ್ರ ಬಿ.ವಸೋಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಸ್ಥೆಯ ಬೆಳವಣ ಗೆಯಲ್ಲಿ ಅಪಾರವಾಗಿ ಶ್ರಮಿಸಿದ ಸಂಸ್ಥೆಯ ಎಲ್ಲಾ ಅಧ್ಯಕ್ಷರು, ಗೌರವ ಕಾರ್ಯದರ್ಶಿಗಳು ಮತ್ತು ಸದಸ್ಯರನ್ನು ಗೌರವಿಸಲಾಗುವುದು ಎಂದು ಶುಕ್ರವಾರ ಮೈಸೂರು ಜಿಲ್ಲಾ…
2006ರಲ್ಲಿ ಕುಮಾರಸ್ವಾಮಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದ್ದು ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ಅಪರಾಧ…
May 26, 2018ಬೆಂಗಳೂರು: 2006ರಲ್ಲಿ ಕುಮಾರಸ್ವಾಮಿ ಜೊತೆ ಕೈ ಜೋಡಿಸಿ ಸರ್ಕಾರ ಮಾಡಿದ್ದು ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ಅಪರಾಧ. ಇದಕ್ಕಾಗಿ ನಾಡಿನ ಜನತೆಯ ಕ್ಷಮೆ ಯಾಚನೆ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಪಶ್ಚಾತ್ತಾಪ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮೇಲಿನ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅವರು, 20 ತಿಂಗಳು ಹೊಂದಾಣ ಕೆ ರಾಜಕಾರಣ ಮಾಡಿಕೊಂಡು ಕುಮಾರಸ್ವಾಮಿ ಸರ್ಕಾರದಲ್ಲಿ ನಾನು ಉಪ ಮುಖ್ಯಮಂತ್ರಿ ಆಗಿದ್ದೆ. ಅವರು ಮುಖ್ಯಮಂತ್ರಿ ಆದ ಸಮಯದಲ್ಲಿ…
ಮುಸ್ಲಿಂ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡಲು ಒತ್ತಾಯ
May 26, 2018ಮೈಸೂರು: ಎಲ್ಲಾ ಜಾತಿ, ಧರ್ಮದ ಜನರೊಂದಿಗೆ ಬೆರೆತು ಎಲ್ಲರ ನೋವು, ನಲಿವುಗಳಿಗೆ ಸ್ಪಂದಿಸುತ್ತಿರುವ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಂಡ್ಯದ ಜಫ್ರುಲ್ಲಾ ಖಾನ್ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಿ, ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಮುಸ್ಲಿಂ ಸಮುದಾಯಕ್ಕೂ ಪ್ರಾತಿನಿಧ್ಯ ನೀಡುವಂತೆ ಮೈಸೂರಿನ ಗೌಸಿಯಾನಗರದ ತದ್ರೀಬ್ ಎಜುಕೇಷನ್ ಅಂಡ್ ಚಾರಿಟಬಲ್ ಟ್ರಸ್ಟ್ನ ಪದಾಧಿಕಾರಿಗಳು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಇಮ್ರಾನ್ ಷರೀಫ್, ದಲಿತ ಉಪ ಮುಖ್ಯಮಂತ್ರಿಂಯನೇಮಕ…
ನಾಳೆ ಬ್ರಾಹ್ಮಣ ಸಂಘದಿಂದ ಶಾಸಕ ಎಸ್.ಎ.ರಾಮದಾಸ್ಗೆ ಅಭಿನಂದನೆ
May 26, 2018ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಬಿಜೆಪಿಯಿಂದ ಅತ್ಯಧಿಕ ಮತಗಳಿಂದ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಮೇ 27ರಂದು ಸಂಜೆ 4 ಗಂಟೆಗೆ ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಬ್ರಾಹ್ಮಣ ಸಂಘಗಳ…
ಕಾವೇರಿ ನದಿಗೆ ಜೀವಂತ ವ್ಯಕ್ತಿ ಶಾಸನಬದ್ಧ ಸ್ಥಾನಮಾನಕ್ಕೆ ಆಗ್ರಹ
May 26, 2018ಮೈಸೂರು: ಕಾವೇರಿ ನದಿಗೆ ಜೀವಂತ ವ್ಯಕ್ತಿಯ ಶಾಸನಬದ್ಧ ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ(ಸಿಎನ್ಸಿ), ತಲಕಾವೇರಿಯಿಂದ ಪೂಂಪ್ಹಾರ್ವರೆಗೆ ವಾಹನ ಜಾಥಾದೊಂದಿಗೆ ‘ಚಾರಿತ್ರಿಕ ಕಾವೇರಿ ಯಾತ್ರೆ’ ಆರಂಭಿಸಿದೆ. ಜೀವನದಿ ಕಾವೇರಿಯ ಉಗಮ ಸ್ಥಾನವಾದ ಕೊಡಗಿನ ತಲಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ನಿನ್ನೆ(ಮೇ 24) ಆರಂಭಗೊಂಡಿರುವ ಯಾತ್ರೆ ಇಂದು ಮೈಸೂರಿಗೆ ತಲುಪಿದ್ದು, ಇಲ್ಲಿನ ಪತ್ರಕರ್ತರ ಭವನದಲ್ಲಿ ಸಿಎನ್ಸಿ ಸಂಘಟನೆಯ ಸಂಚಾಲಕ ಎನ್.ಯು.ನಾಚಪ್ಪ ಅವರು ಸುದ್ದಿಗೋಷ್ಟಿ ನಡೆಸಿ, ಯಾತ್ರೆಯ ಮಾರ್ಗ ಹಾಗೂ ಉದ್ದೇಶವನ್ನು ವಿವರಿಸಿದರು. ಭರತ ವರ್ಷದ ವೇದ…
ಮೈಸೂರಿನಿಂದ ತಿರುಪತಿಗೆ ಮತ್ತೊಂದು ಎಕ್ಸ್ಪ್ರೆಸ್ ರೈಲು
May 26, 2018ಮೈಸೂರು: ಮೈಸೂರಿನಿಂದ ತೆರಳುವ ತಿರುಪತಿ ಯಾತ್ರಾರ್ಥಿಗಳಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೈಸೂರು-ತಿರುಪತಿ ನಡುವೆ ವಾರಕ್ಕೊಮ್ಮೆ ಸಂಚರಿಸುವ ಹೊಸ ಎಕ್ಸ್ಪ್ರೆಸ್ ರೈಲು ತಿರುಪತಿಗೆ ಕೇವಲ 10 ಕಿ.ಮೀ. ದೂರದಲ್ಲಿರುವ ರೇಣ ಗುಂಟ ನಿಲ್ದಾಣ ಮತ್ತು ಮೈಸೂರು ನಡುವೆ ಸಂಚರಿಸಲಿದೆ. ಈ ರೈಲು (ರೈಲು ಸಂಖ್ಯೆ: 11065) ಸಂಚಾರ ಜೂ.1ರಂದು ಮೈಸೂರಿನಿಂದ ರೇಣ ಗುಂಟಕ್ಕೆ ಹಾಗೂ (ರೈಲು ಸಂಖ್ಯೆ: 11066) ಜೂ.2ರಂದು ರೇಣ ಗುಂಟದಿಂದ ಮೈಸೂರು ಕಡೆಗೆ ಸಂಚರಿಸುವುದರೊಂದಿಗೆ ಪ್ರಾರಂಭವಾಗಲಿದೆ. ಪ್ರತಿ ಶುಕ್ರವಾರ ರಾತ್ರಿ 10.55ಕ್ಕೆ ಮೈಸೂರಿನಿಂದ…