ಮೈಸೂರು,ಜು.20(ಪಿಎಂ)-ರಸ್ತೆಬದಿ ವ್ಯಾಪಾರಿಗಳಿಗೆ ಕೊಡೆ, ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಉಚಿತವಾಗಿ ವಿತರಿ ಸುವ ಮೂಲಕ ವಸತಿ ಸಚಿವರೂ ಆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ 70ನೇ ವರ್ಷದ ಜನ್ಮದಿನವನ್ನು ವಿ.ಸೋಮಣ್ಣ ಅಭಿಮಾನಿ ಗಳ ಬಳಗದ ವತಿಯಿಂದ ಮಂಗಳವಾರ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ದೇವರಾಜ ಮಾರುಕಟ್ಟೆ ಎದುರಿನ ಚಿಕ್ಕ ಗಡಿಯಾರ ವೃತ್ತದ ಬಳಿ ಯಲ್ಲಿ ಬಾಳೆಹಣ್ಣು, ನಿಂಬೆಹಣ್ಣು, ತರಕಾರಿ, ಚಾಪೆ ವ್ಯಾಪಾರ ಮಾಡುವ ರಸ್ತೆಬದಿ ವ್ಯಾಪಾರಿಗಳಿಗೆ ಕೊಡೆ, ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಿಜೆಪಿ…
ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾಗಲ್ಲ, ಅವರು ರಾಜಾಹುಲಿನೇ
July 21, 2021ಮೈಸೂರು,ಜು.20(ಪಿಎಂ)-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಕೆಳಗಿಳಿಸಲಾಗು ತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಯಾವುದೇ ಕಾರಣಕ್ಕೂ ಯಡಿಯೂರಪ್ಪ ನವರು ಸಿಎಂ ಸ್ಥಾನದಿಂದ ಬದಲಾವಣೆ ಆಗಲ್ಲ. ಅವ ರನ್ನು ರಾಜಾಹುಲಿ ಎನ್ನುತ್ತಾರೆ. ಹಾಗೇ ಅವರು ರಾಜಾ ಹುಲಿನೇ ಎಂದು ಅತೀವ ಅಭಿಮಾನ ವ್ಯಕ್ತಪಡಿಸಿದರು. ಮೈಸೂರಿನ ಬಸವೇಶ್ವರ ಪ್ರತಿಮೆ ಬಳಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಯಡಿಯೂರಪ್ಪ ಬಿಜೆಪಿಗೆ ಆತ್ಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್…
ದೇವರಾಜ ಮಾರುಕಟ್ಟೆ, ಲ್ಯಾನ್ಸ್ಡೌನ್ ಬಿಲ್ಡಿಂಗ್ ಸಂರಕ್ಷಣೆಗೆ ಯೋಗ್ಯ
July 21, 2021ಮೈಸೂರು,ಜು.20(ಪಿಎಂ)-ದೇವರಾಜ ಮಾರು ಕಟ್ಟೆ ಮತ್ತು ಲ್ಯಾನ್ಸ್ಡೌನ್ ಬಿಲ್ಡಿಂಗ್ ಸಂರಕ್ಷಣೆಗೆ ಯೋಗ್ಯ ವಾಗಿವೆ. ದೇವರಾಜ ಮಾರುಕಟ್ಟೆ ನೆಲಸಮಗೊಳಿಸು ವುದರ ವಿರುದ್ಧ ಹೈಕೋರ್ಟ್ನಲ್ಲಿ ಎರಡು ಪ್ರಕರಣ ಗಳಿದ್ದು, ಆದಾಗ್ಯೂ ಈ ಕಟ್ಟಡಗಳನ್ನು ನೆಲಸಮಗೊಳಿಸಿ, ಪುನರ್ ನಿರ್ಮಿಸುವ ನಗರಾಭಿವೃದ್ಧಿ ಸಚಿವರ ಹೇಳಿಕೆ ನ್ಯಾಯಾಂಗ ನಿಂದನೆ ಅಲ್ಲವೇ? ಎಂದು ಇತಿಹಾಸ, ಪರಂಪರೆ ತಜ್ಞರೂ ಆದ ಪರಂಪರೆ ಇಲಾಖೆಯ ಮೈಸೂರು ಪಾರಂಪರಿಕ ತಜ್ಞರ ಸಮಿತಿ ಸದಸ್ಯ ಪ್ರೊ. ಎನ್.ಎಸ್.ರಂಗರಾಜು ಬೇಸರ ವ್ಯಕ್ತಪಡಿಸಿದರು. ಸೇವ್ ಹೆರಿಟೇಜ್ ಅಭಿಯಾನದ ವತಿಯಿಂದ ಲ್ಯಾನ್ಸ್ಡೌನ್ ಬಿಲ್ಡಿಂಗ್ ಮತ್ತು ದೇವರಾಜ ಮಾರು…
ಪೌರಕಾರ್ಮಿಕರು, ಕೋವಿಡ್ ವಾರಿಯರ್ಸ್ಗೆ ದಿನಸಿ ಕಿಟ್ ವಿತರಣೆ
July 21, 2021ಮೈಸೂರು,ಜು.20(ಪಿಎಂ)-ಪೌರಕಾರ್ಮಿಕರು ಮತ್ತು ಕೋವಿಡ್ ವಾರಿಯರ್ಸ್ಗಳಿಗೆ ದಿನಸಿ ಕಿಟ್ಗಳನ್ನು ವಿತರಿಸುವ ಮೂಲಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್) ಮಾಜಿ ಅಧ್ಯಕ್ಷರೂ ಆದ ಉದ್ಯಮಿ ಕೆ.ವಿವೇಕಾನಂದ ತಮ್ಮ ಜನ್ಮದಿನವನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೈಸೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪೌರಕಾರ್ಮಿ ಕರು ಮತ್ತು ಇತರ ಕೊರೊನಾ ವಾರಿಯರ್ಸ್ಗಳಿಗೆ ದಿನಸಿ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸುವ ಮೂಲಕ ಕೆ.ವಿವೇಕಾನಂದ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ…
ಆದಿಚುಂಚನಗಿರಿ ಶ್ರೀಗಳ ಹುಟ್ಟುಹಬ್ಬ: ಸ್ವಯಂ ರಕ್ತದಾನ
July 21, 2021ಮೈಸೂರು, ಜು.20(ಎಸ್ಪಿಎನ್)- ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಕರ್ನಾ ಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ಕುಮಾರ್ಗೌಡ ನೇತೃತ್ವದಲ್ಲಿ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಶ್ರೀಗಳ ಜನ್ಮ ದಿನಾಚರಣೆ ಅರ್ಥ ಪೂರ್ಣವಾಗಿ ಮಂಗಳವಾರ ಆಚರಿಸಿದರು. ಮೈಸೂರು ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ರಕ್ತದಾನ ಮಾಡಿದ ನಂತರ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ಕುಮಾರ್ಗೌಡ ಮಾತನಾಡಿದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ತಮ್ಮ ಜೀವಿತಾವಧಿಯಲ್ಲಿ ಅನ್ನ, ಅಕ್ಷರ, ಆರೋಗ್ಯ, ಆಧ್ಯಾತ್ಮ, ಪರಿಸರ…
ಕೋವಿಡ್ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶಾಸಕ ರಾಮದಾಸ್ ದಿನಸಿ ಕಿಟ್ ವಿತರಣೆ
July 21, 2021ಮೈಸೂರು, ಜು.20(ಆರ್ಕೆಬಿ)- ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸಂಘ-ಸಂಸ್ಥೆಗಳು ಕೊಡ ಮಾಡಿದ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮ ದಾಸ್ ನೇತೃತ್ವದಲ್ಲಿ ಮೈಸೂರಿನ ಬಿಲ್ಡರ್ಸ್ ಅಸೋಸಿಯೇಷನ್ ಆವರಣದಲ್ಲಿ ನಡೆಯಿತು. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ, ಮೈಸೂರು ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ, ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಕ್ರೆಡಾಯ್, ಮೈಸೂರು ಬಿಲ್ಡರ್ಸ್…
ತಿ.ನರಸೀಪುರದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
July 21, 2021ತಿ.ನರಸೀಪುರ, ಜು.20(ಎಸ್ಕೆ)- ಮೈಸೂರಿನ ಎನ್ಟಿಎಂ ಶಾಲೆ ಉಳಿಸಿ ಕೊಂಡು ವಿವೇಕಾ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿ ಪಟ್ಟಣದಲ್ಲಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ತಾಲೂಕು ಕಚೇರಿ ಎದುರು ಜಮಾಯಿಸಿದ ತಾಲೂಕು ದಲಿತ ಸಂಘ ಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಪ್ರಗತಿಪರ ಚಿಂತಕರ ವೇದಿಕೆ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಒಕ್ಕೂಟದ ಸಂಚಾಲಕ ಆಲಗೂಡು ಡಾ.ಚಂದ್ರಶೇಖರ್ ಮಾತನಾಡಿ, ಐತಿ ಹಾಸಿಕ…
ದೇವಾಲಯ, ಮಠಗಳಿಗೆ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರ ಭೇಟಿ
July 21, 2021ತಿ.ನರಸೀಪುರ, ಜು.20(ಎಸ್ಕೆ)- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ನೂತನ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ ಅವರು ಮಂಗಳವಾರ ಹಲವು ದೇವಾಲಯ ಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ವಿವಿಧ ಮಠಗಳಿಗೆ ತೆರಳಿ ಹರಗುರುಚರ ಮೂರ್ತಿಗಳ ಆಶೀರ್ವಾದ ಪಡೆದರು. ರಾಜ್ಯ ಸರ್ಕಾರ ಕಾ.ಪು.ಸಿದ್ದಲಿಂಗ ಸ್ವಾಮಿ ಅವರ ಪಕ್ಷನಿಷ್ಠೆ ಗುರುತಿಸಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಠ-ಮಂದಿರಗಳಿಗೆ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿ…
ಪ್ರಾರ್ಥನಾ ಮಂದಿರ ನಿರ್ಮಾಣಕ್ಕೆ ವಿರೋಧ
July 21, 2021ತಿ.ನರಸೀಪುರ, ಜು.20(ಎಸ್ಕೆ)- ವಾಣಿಜ್ಯ ಮಳಿಗೆ ನಿರ್ಮಾಣಕ್ಕಾಗಿ ಪುರಸಭೆ ಯಲ್ಲಿ ಪರವಾನಗಿ ಪಡೆದು ಪ್ರಾರ್ಥನಾ ಮಂದಿರ ನಿರ್ಮಿಸುತ್ತಿರುವುದಕ್ಕೆ ಪಟ್ಟಣದ ತ್ರಿವೇಣಿನಗರ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಟ್ಟಣದ ತ್ರಿವೇಣಿನಗರದ ಖಾಲಿ ನಿವೇಶನದಲ್ಲಿ ನಯಾಜ್ ಅಹ್ಮದ್, ಅಯಾಜ್ ಅಹ್ಮದ್, ಅಪ್ಸಾನ್ ಅಹಮದ್ ಹಾಗೂ ತಹೀದ್ ಅಹಮದ್ ಎಂಬುವರು ನಿವೇಶನ ಸಂಖ್ಯೆ 21 ಮತ್ತು 17ರಲ್ಲಿ ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸುತ್ತಿದ್ದಾರೆ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದು ಕಾಮಗಾರಿ ನಿಲ್ಲಿಸಿ ಸೌಹಾರ್ದತೆ ಕಾಪಾಡುವಂತೆ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಸೀಲ್ದಾರ್ ಡಿ.ನಾಗೇಶ್ ಅವರಿಗೆ…
ಪುರಸಭೆ ಅಭಿವೃದ್ಧಿ ಹಿನ್ನಡೆಗೆ ಅಧಿಕಾರಿಗಳೇ ಕಾರಣ
July 21, 2021ಹೆಚ್.ಡಿ.ಕೋಟೆ, ಜು.20(ಮಂಜು)- ಪುರಸಭೆ ಅಭಿವೃದ್ಧಿ ಹಿನ್ನಡೆಗೆ ಅಧಿಕಾರಿ ವರ್ಗವೇ ಕಾರಣ ಎಂದು ಪುರಸಭಾ ಸದಸ್ಯರು ಆರೋಪಿಸಿದರು. ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಅಧ್ಯಕ್ಷೆ ಸರೋಜಮ್ಮ ಅವರ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಒಕ್ಕೊರಲಿನಿಂದ ಆರೋಪಿ ಸಿದ ಸದಸ್ಯರು, ಕಳೆದ ಸಭೆಯಲ್ಲಿ ಕೆಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ದ್ದರೂ, ಯಾವುದೇ ಕಾಮಗಾರಿ ಸರಿ ಯಾಗಿ ನಡೆದಿಲ್ಲ. ಹಿಂದಿನ ಸಭೆಯ ಮಾಹಿತಿ ಗಳು ಸದಸ್ಯರಿಗೆ ಲಭ್ಯವಾಗಿಲ್ಲ ಎಂದರು. ಸಮುದಾಯ ಪರಿಪಾಲನಾ ಸಂಘಟನ ಅಧಿಕಾರಿ ಉಮಾಶಂಕರ್ ಎಂಬುವರು ಕಳೆದ…










