ಮೈಸೂರು,ಮಾ.22(ಆರ್ಕೆ)-ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರ(ಮುಡಾ) ವ್ಯಾಪ್ತಿಯ ಸ್ವತ್ತುಗಳಿಗೆ ಏಪ್ರಿಲ್ 1ರಿಂದ ಆನ್ಲೈನ್ ಮೂಲಕ ಕಂದಾಯ ಪಾವ ತಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಮುಡಾ ಕಚೇರಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ರಾಜೀವ್, ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಸ್ವತ್ತುಗಳ ಮಾಲೀಕರು ಪದೇ ಪದೇ ಕಚೇರಿಗೆ ಭೇಟಿ ನೀಡುವ ತೊಂದರೆ ತಪ್ಪಿಸಲು ಮಾರ್ಚ್ 20 ರಂದು ನಡೆದ ಸಭೆಯಲ್ಲಿ ಆನ್ಲೈನ್ ಕಂದಾಯ ಪಾವತಿ ಸೌಲಭ್ಯ ಜಾರಿಗೊಳಿಸಲು ನಿರ್ಧರಿಸಲಾಯಿತು ಎಂದರು. ಅದಕ್ಕಾಗಿ ತಂತ್ರಾಂಶ ಸಿದ್ದಪಡಿಸಲು ಸರ್ಕಾರಿ…
ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಮೈಸೂರು ಭೇಟಿ
March 23, 2021ಮೈಸೂರು,ಮಾ.22-ಭಾರತದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರು ಕುಟುಂಬದೊಂದಿಗೆ ಮಾರ್ಚ್ 20 ಮತ್ತು 21 ರಂದು ಮೈಸೂರು ಹಾಗೂ ಚಾಮರಾಜನಗರದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಮಾರ್ಚ್ 20ರಂದು ಬೆಳಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು, ನಂತರ ರಸ್ತೆ ಮೂಲಕ ಚಾಮರಾಜನಗರಕ್ಕೆ ತೆರಳಿ ಅಲ್ಲಿನ ರಾಮಸಮುದ್ರದ ಶ್ರೀ ಹರಳುಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ನಂತರ ಚಾಮ ರಾಜನಗರದ ಫಾರೆಸ್ಟ್ ನರ್ಸರಿ ಬಳಿ ನಿವಾಸಿ ಪುರೋ ಹಿತ ವಿಜಯಕುಮಾರ ಅವರನ್ನು ಭೇಟಿ ಮಾಡಿದ್ದರು….
ಬುದ್ಧನ ಪಂಚಶೀಲ ತತ್ವ ಅನುಸರಿಸಿದರೆ ಕೋರ್ಟು-ಕಚೇರಿಗೆ ಹೋಗದೆ, ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ
March 23, 2021ಮೈಸೂರು, ಮಾ.22(ಆರ್ಕೆಬಿ)- ಜಾತಿ, ಯುದ್ಧ, ಹಿಂಸೆ, ಕೋಪ ಇಲ್ಲದ ಬುದ್ಧ ಶಾಂತ ವ್ಯಕ್ತಿ. ಬುದ್ಧನ ಪಂಚಶೀಲ ತತ್ವಗಳನ್ನು ಅನುಸರಿಸಿದರೆ ಯಾವ ಕೋರ್ಟು, ಕಚೇ ರಿಗೂ ಹೋಗಬೇಕಾಗುವುದಿಲ್ಲ. ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾನಿಲಯದ ತತ್ವ ಶಾಸ್ತ್ರ ಅಧ್ಯಯನ ವಿಭಾಗ, ಚಾಮರಾಜ ನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯ (ಉದ್ದೇಶಿತ), ಇಂಟರ್ನ್ಯಾಷನಲ್ ಬುದ್ದಿಸ್ಟ್ ಮಾಂಕ್ಸ್ ಚಾರಿಟಬಲ್ ಟ್ರಸ್ಟ್ ಸಹಯೋಗ ದಲ್ಲಿ ಮೈಸೂರು ಮಾನಸಗಂಗೋತ್ರಿ ಮಾನ ವಿಕ ಸಭಾಂಗಣದಲ್ಲಿ ಆಯೋಜಿಸಿದ್ದ…
ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು
March 22, 2021ಮೈಸೂರು, ಮಾ.21(ಆರ್ಕೆಬಿ)- ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಹೆಚ್ಚು ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡ ಲಾಗುವುದು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿ ಕಾರದ ಅಧ್ಯಕ್ಷ ಹೇಮಂತ್ಕುಮಾರ್ಗೌಡ ತಿಳಿಸಿದರು. ವಿಶ್ವ ಅರಣ್ಯ ದಿನಾಚರಣೆ ಅಂಗವಾಗಿ ಭಾನುವಾರ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ `ಅರಣ್ಯ ಅರಿವು’ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿಯಲ್ಲಿ ರುವ ಎಲ್ಲವೂ…
ಕೋಟಿ ರೂ. ವೆಚ್ಚದಲ್ಲಿ ಉದಯರವಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
March 22, 2021ಮೈಸೂರು,ಮಾ.21(ಪಿಎಂ)- ಮೈಸೂ ರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ ಚನ್ನಗಿರಿ ಕೊಪ್ಪಲು ಬಳಿಯ ರೈಲ್ವೆ ಕೆಳಸೇತುವೆ ಬಳಿ ಯಿಂದ ಉದಯರವಿ ರಸ್ತೆಯ ಅಭಿವೃದ್ಧಿ ಜೊತೆಗೆ ಇದೇ ರಸ್ತೆಯ ಫುಟ್ಪಾತ್ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ (ಆದಿಚುಂಚನಗಿರಿ ರಸ್ತೆ ಜಂಕ್ಷನ್ವರೆಗೆ) ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಚಾಲನೆ ನೀಡಿದರು. ರಾಜ್ಯ ಸರ್ಕಾರದ ಕೋಟಿ ರೂ. ವೆಚ್ಚ ದಲ್ಲಿ (ಟಿಎಸ್ಪಿ ಅನುದಾನ) ಸದರಿ ಕಾಮ ಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿದೆ. ಉದಯರವಿ ರಸ್ತೆಯ ಇಸ್ಕಾನ್ ದೇವಾಲಯದ ಎದುರು ಕಾಮ ಗಾರಿಗೆ ಚಾಲನೆ…
ಸಂಪರ್ಕ ಭಾಷೆಯಾಗಿರುವ ಹಿಂದಿ ಕಲಿಕೆ ಅನಿವಾರ್ಯ: ಶಾಸಕ ನಾಗೇಂದ್ರ
March 22, 2021ಮೈಸೂರು, ಮಾ.21(ಎಂಟಿವೈ)-ಹಿಂದಿ ಕೇವಲ ರಾಷ್ಟ್ರ ಭಾಷೆಯಾಗಿರದೇ ಬಹು ತೇಕ ಜನರ ಸಂಪರ್ಕ ಭಾಷೆಯೂ ಆಗಿರು ವುದರಿಂದ ಪ್ರಸ್ತುತ ಸಂದರ್ಭದಲ್ಲಿ ಹಿಂದಿ ಕಲಿಕೆ ಅನಿವಾರ್ಯ ಎಂದು ಶಾಸಕ ಎಲ್. ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿ ರುವ ತೇರಾ ಪಂಥ್ ಭವನದಲ್ಲಿ ಭಾನು ವಾರ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ (ಧಾರವಾಡ) ಸಂಸ್ಥೆ ಆಯೋಜಿಸಿದ್ದ ಹಿಂದಿ ಪ್ರಚಾರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ 130 ಕೋಟಿ ಜನಸಂಖ್ಯೆಯಲ್ಲಿ ಬಹುತೇಕ ಮಂದಿ ಹಿಂದಿ ಭಾಷೆಯನ್ನೇ ಹೆಚ್ಚಾಗಿ ಅವಲಂ…
ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಗೆ ರಾಜೀನಾಮೆ ನಳಿನ್ಕುಮಾರ್ ಕಟೀಲ್ ಭವಿಷ್ಯ
March 22, 2021ಮಸ್ಕಿ,ಮಾ.21-ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀ ನಾಮೆ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಭವಿಷ್ಯ ನುಡಿದರು. ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂ ಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶ ದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದ ರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು…
ಸಾಮೂಹಿಕ ಯೋಗ ಮೂಲಕ ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ
March 22, 2021ಮೈಸೂರು,ಮಾ.21(ಎಂಟಿವೈ)-ಮಾನವ ಕಳ್ಳ ಸಾಗಾಣಿಕೆ, ಮಕ್ಕಳು ಮತ್ತು ಮಹಿಳಾ ದೌರ್ಜನ್ಯ ವಿರುದ್ಧ ಜನ ಜಾಗೃತಿ ಮೂಡಿಸಲು ಮೈಸೂರು ಅರಮನೆ ಮುಂಭಾ ಗದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಭಾನುವಾರ ಒಡನಾಡಿ ಸಂಸ್ಥೆ ಆಯೋಜಿಸಿದ್ದ ಸಾಮೂ ಹಿಕ ಯೋಗ ಪ್ರದರ್ಶನದಲ್ಲಿ 120ಕ್ಕೂ ಹೆಚ್ಚು ಮಂದಿ ಯೋಗಪಟುಗಳು ಪಾಲ್ಗೊಂಡು ಗಮನ ಸೆಳೆದರು. 11ನೇ ವರ್ಷದ `ಯೋಗ ಸ್ಟಾಪ್ಸ್ ಟ್ರಾಫಿಕಿಂಗ್’ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ವಯೋಮಾನದ ಯೋಗಪಟುಗಳು ಪಾಲ್ಗೊಂಡು ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಇನ್ನಿತರ ಯೋಗಾಸನದ ಭಂಗಿ ಪ್ರದರ್ಶಿಸಿದರು. ಸಂಸ್ಥೆಯ…
ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನರಾಗಿ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದಾರೆ
March 22, 2021ಮೈಸೂರು,ಮಾ.21(ಎಂಟಿವೈ)- ಮಹಿಳೆ ಯರು ಈ ಹಿಂದೆ ಒಳಗಾಗಿದ್ದ ಕಟ್ಟುಪಾಡು ಗಳಿಂದ ಹೊರ ಬಂದು ಎಲ್ಲಾ ಕ್ಷೇತ್ರ ಗಳಲ್ಲೂ ಪುರುಷರಿಗೆ ಸರಿಸಮಾನರಾಗಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಡಿ.ದೇವರಾಜ ಅರಸ್ ಹಿಂದು ಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಐಡಿಯಲ್ ಜಾವಾ ರೋಟರಿ ಶಾಲಾ ಸಭಾಂಗಣದಲ್ಲಿ ಕೀರ್ತಿ ಯುವತಿ ಮಹಿಳಾ ಮಂಡಳಿ, ಶ್ರೀ ಮಲ್ಲಿ ಗಮ್ಮ ಮಾಚೀದೇವ ಮಡಿವಾಳ ಪ್ರದೇಶ ಮಟ್ಟದ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ `ವಿಶ್ವ ಮಹಿಳಾ ದಿನ’ ಹಾಗೂ…
ನಾನು ಮುಖ್ಯಮಂತ್ರಿ ರೇಸ್ನಲ್ಲಿ ಇಲ್ಲ
March 22, 2021ಮೈಸೂರು,ಮಾ.21(ಎಸ್ಪಿಎನ್)-ಹಿರಿಯನಾಗಿದ್ದರೂ ನಾನಂತೂ ಮುಖ್ಯ ಮಂತ್ರಿ ರೇಸ್ನಲ್ಲಿ ಇಲ್ಲ. ಈ ರೇಸ್ನಲ್ಲಿ ಹಲವು ಮುಖಂಡರಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅಭಿಪ್ರಾಯಪಟ್ಟರು. ಮೈಸೂರಿನ ಖಾಸಗಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಪ್ರಸ್ತುತ ಪಕ್ಷವನ್ನು ಅಧಿಕಾರಕ್ಕೆ ತರುವುದು ಎಲ್ಲಾ ಮುಖಂ ಡರ ಜವಾಬ್ದಾರಿಯಾಗಿದೆ. ಮುಖ್ಯಮಂತ್ರಿ ಸಾಲಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ…










