ಮೈಸೂರು,ಫೆ.25(ಪಿಎಂ)- ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಮೈನಾರಿಟೀಸ್ ಫ್ರಂಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಹೆಚ್ಚಳದಿಂದ ಬಡವರು ಮತ್ತು ಮಧ್ಯಮ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸಕ್ಕೆ ತೆರಳಲು ಹಾಗೂ ತಮ್ಮ ಮಕ್ಕಳನ್ನು ಶಾಲೆಗೆ ಬಿಡಲು ಬಡವರು ಹಾಗೂ ಮಧ್ಯಮ ವರ್ಗದವರು ಹೆಚ್ಚಾಗಿ ಬೈಕ್ ಅನ್ನು ಅವಲಂಬಿಸಿದ್ದಾರೆ….
ಡಿಜಿಟಲ್ ಗ್ರಂಥಾಲಯ; ಒಂದೇ ವರ್ಷದಲ್ಲಿ 25 ಲಕ್ಷ ಸದಸ್ಯರು!
February 26, 2021ಮೈಸೂರು,ಫೆ.25(ವೈಡಿಎಸ್)- ಕೊರೊನಾ ವೇಳೆ ಇ-ಗ್ರಂಥಾಲಯಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ವರ್ಷದ ಅವಧಿಯಲ್ಲಿ 25 ಲಕ್ಷ ಮಂದಿ ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದಾರೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ಕುಮಾರ್ ಹೊಸಮನಿ ತಿಳಿಸಿದರು. ಮೈಸೂರು ಜೆಎಲ್ಬಿ ರಸ್ತೆಯ ಇಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ವೈದ್ಯವಾರ್ತಾ ಪ್ರಕಾಶನ ಆಯೋಜಿಸಿದ್ದ ಕೆ.ಎಸ್.ಸಿಂಹ ಅವರ `ಚೌಪದಿಯ ಶಿಶಿರ’ ಕೃತಿ ಬಿಡುಗಡೆಗೊಳಿಸಿ, ಮಾತನಾಡಿದರು. 11 ಸಾವಿರ ಸದಸ್ಯತ್ವ: ಕೊರೊನಾ ಸಂದರ್ಭ ಓದುಗರ ಮನೆ ಬಾಗಿಲಿಗೆ ಗ್ರಂಥಾಲಯ ಸೌಲಭ್ಯ ಕಲ್ಪಿಸಬೇಕೆಂಬ ಉದ್ದೇಶದಿಂದ 2020ರ ಫೆ.26ರಂದು ಇ-ಗ್ರಂಥಾಲಯ…
ಎರಡು ಹೆಚ್ಚುವರಿ ಹಾಸ್ಟೆಲ್ ಕಟ್ಟಡ ನಿರ್ಮಿಸಲು ಮೈಸೂರು ವಿವಿ ಚಿಂತನೆ
February 26, 2021ಮೈಸೂರು, ಫೆ.25(ಆರ್ಕೆ)-ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾ ದಂತೆ ಮೈಸೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್ ಗಳಿಗೂ ಬೇಡಿಕೆ ದ್ವಿಗುಣವಾಗುತ್ತಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು 1,29,000 ವಿದ್ಯಾರ್ಥಿಗಳು ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರತೀ ವರ್ಷ ಸುಮಾರು 26,000 ಮಂದಿ ಪದವಿ ಪಡೆಯುತ್ತಿದ್ದಾರೆ ಎಂದು ಕುಲಪತಿ ಪ್ರೊ. ಜಿ.ಹೇಮಂತಕುಮಾರ್ ತಿಳಿಸಿದ್ದಾರೆ. ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಂದ ಹೆಚ್ಚು ಬೇಡಿಕೆ ಇರುವಂತೆಯೇ ವಸತಿ ನಿಲಯಗಳ ಅಗತ್ಯವಿದೆ. ಪ್ರಸ್ತುತ ಗಂಗೋತ್ರಿಯಲ್ಲಿರುವ 17 ಹಾಸ್ಟೆಲ್ಗಳು, ಹಾಸನ, ಮಂಡ್ಯ, ಚಾಮ ರಾಜನಗರ ಜಿಲ್ಲೆಗಳಲ್ಲಿನ ತಲಾ ಒಂದೊಂದು ಹಾಸ್ಟೆಲ್ಗಳಲ್ಲಿ ಒಟ್ಟು 3,200…
ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ
February 26, 2021ಬೆಂಗಳೂರು, ಫೆ.25(ಕೆಎಂಶಿ)- ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿಬೆಟ್ಟ ಹಾಗೂ ಸುತ್ತಮುತ್ತ ಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲ ವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರ ವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು. ಕಳೆದ 15 ವರ್ಷಗಳಿಂದ…
ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ
February 26, 2021ಮುಂಬೈ,ಫೆ.25-ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದ ಕಾರು ಪತ್ತೆ ಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳಕ್ಕೆ ಎಟಿಎಸ್, ಮುಂಬೈ ಕ್ರೈಂ ಬ್ರ್ಯಾಂಚ್ ಪೆÇಲೀ ಸರು ಭೇಟಿ ಕೊಟ್ಟಿದ್ದಾರೆ. ಶ್ವಾನದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ. ಮುಕೇಶ್ ಅಂಬಾನಿಯವರ ಅಂತಿಲ್ಲಾ ನಿವಾಸದ ಬಳಿ ಸ್ಕಾರ್ಪಿಯೊ ವಾಹನ ವೊಂದು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ…
ಗಡ್ಡ ಬಿಟ್ರೆ ರವೀಂದ್ರನಾಥ್ ಟ್ಯಾಗೋರ್ ಆಗಲ್ಲ ಪ್ರಧಾನಿ ಮೋದಿ ವಿರುದ್ಧ ಎಚ್.ಕೆ.ಪಾಟೀಲ್ ವಾಗ್ದಾಳಿ
February 26, 2021ಗದಗ, ಫೆ.25- ಪ್ರಧಾನಿ ಗಡ್ಡ ಹಾಗೂ ವೇಷಭೂಷಣದ ಬಗ್ಗೆ ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಟೀಕಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆ ಹಾಗೂ ನೂತನ ಕೃಷಿ ಕಾಯ್ದೆ ವಿರುದ್ಧ ನಗರದಲ್ಲಿ ಇಂದು ಟ್ರ್ಯಾಕ್ಟರ್ ರ್ಯಾಲಿ ನಂತರ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದರು. ಮೋದಿ ಅವರೇ, ಗಡ್ಡ ಬಿಟ್ರೆ, ನೀವು ರವೀಂದ್ರನಾಥ ಟ್ಯಾಗೋರ್ ಆಗಲ್ಲ. ಸೈನ್ಯದ ಸಮವಸ್ತ್ರ ಹಾಕಿದರೆ ನೀವು ಸುಭಾಷ್ ಚಂದ್ರ ಬೋಸ್ ಆಗುವುದಿಲ್ಲ. ಕೈ ಎತ್ತಿ ತೋರಿಸಿದರೆ ಬಿ.ಆರ್.ಅಂಬೇಡ್ಕರ್ ಆಗುವುದಿಲ್ಲ. ಹೆಗಲ…
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರ ನಂಜನಗೂಡು ತಾಲೂಕು ಪ್ರವಾಸ
February 26, 2021ಮೈಸೂರು, ಫೆ.25- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ ಫೆ.26ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮೇದರ ಕುಶಲ ಕೈಗಾರಿಕ ಸಹಕಾರ ಸಂಘಕ್ಕೆ ಭೇಟಿ ನೀಡಲಿದ್ದಾರೆ. ಮೇದರ ಕುಶಲ ಕೈಗಾರಿಕ ಸಹಕಾರ ಸಂಘದಲ್ಲಿ 70-100 ಜನ ಕಸುಬುದಾರರು ವಿವಿಧ ಮಾದರಿಯ ಬಿದುರು ಉತ್ಪನ್ನಗಳನ್ನು ಮಾಡುತ್ತಿದ್ದು, ಈ ಹಿಂದೆ ಖಾದಿ ಮಂಡಳಿಯಿಂದ ಆರ್ಥಿಕ ನೆರವು ನೀಡಲಾಗಿದೆ. ಸಂಘದ ಪುನಃಶ್ಚೇತನ ಕಾರ್ಯ ಕೈಗೊಳ್ಳಲು ಹಾಗೂ ಸ್ಥಳ ಪರಿಶೀಲನೆಗಾಗಿ ಮತ್ತು ಸರ್ಕಾರದ ವಿಶೇಷ…
ಬೆಂಗಳೂರು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಸಂಘಟನೆಗಳ ನಿಷೇಧಕ್ಕೆ ಬಿಜೆಪಿ ಮನವಿ
February 26, 2021ಮೈಸೂರು, ಫೆ.25(ಆರ್ಕೆಬಿ)- ಬೆಂಗ ಳೂರಿನ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10.2.2021ರಂದು ನ್ಯಾಯಾಲಯಕ್ಕೆ 7 ಸಾವಿರ ಪುಟದ ಚಾರ್ಜ್ಶೀಟ್ ಸಲ್ಲಿಸಿದ್ದು, ಗಲಭೆಯಲ್ಲಿ ಇದುವರೆಗೆ 247 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ 40ಕ್ಕೂ ಅಧಿಕ ಗಲಭೆಕೋರರು ಎಸ್ಡಿ ಪಿಐ ಸಂಘಟನೆಯ ಸದಸ್ಯರಾಗಿದ್ದಾರೆ. ಒಂದೂವರೆ ತಿಂಗಳ ಕಾಲ ಗಲಭೆಗೆ ಪೂರ್ವ ಯೋಜನೆ ನಡೆಸಿದ್ದರೆಂದು ತಿಳಿದಿದೆ. ಹೀಗಾಗಿ ಪದೇ ಪದೆ ಗಲಭೆಗೆ ಕುಮ್ಮಕ್ಕು ನೀಡುವ ಮತ್ತು ವಿಧ್ವಂಸಕ ಕೃತ್ಯದಲ್ಲಿ ತೊಡ ಗುವ…
ಬುಡಕಟ್ಟು ಜನರ ಅಭಿವೃದ್ಧಿಗೆ ಮೈಸೂರು ವಿವಿ ಸಂಶೋಧನೆ
February 26, 2021ಮೈಸೂರು,ಫೆ.25(ಆರ್ಕೆ)-ರಾಜ್ಯದ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಸಂಶೋಧನಾ ಯೋಜನೆಯನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೆತ್ತಿಕೊಂಡಿದೆ. ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯ ಪ್ರಾಯೋಜಕತ್ವದ `ಕರ್ನಾಟಕ ರಾಜ್ಯದಲ್ಲಿ ಬುಡಕಟ್ಟು ಜನರ ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಕೆ’ ಕುರಿತ ಸಂಶೋಧನೆಯನ್ನು ಮೈಸೂರು ವಿವಿ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿದೆ ಎಂದು ಯೋಜನಾ ನಿರ್ದೇಶಕ ಡಾ.ಡಿ.ಸಿ.ನಂಜುಂಡ ತಿಳಿಸಿದ್ದಾರೆ. ಎಸ್ಟಿ ಮೀಸಲಾತಿಗೆ ತೀವ್ರ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಈ ಸಂಶೋಧನೆ ಮಹತ್ವ ಪಡೆಯಲಿದ್ದು, ಈ ಯೋಜನೆಗೆ ಕೇಂದ್ರ ಬುಡಕಟ್ಟು ಮಂತ್ರಾಲಯವು 30…
`ವಾತ್ಸಲ್ಯ ಸಿಂಧೂರ’ ಕಥಾ ಸಂಕಲನ ಬಿಡುಗಡೆ
February 26, 2021ಮೈಸೂರು,ಫೆ.25(ಪಿಎಂ)- ವೆಂಕಟಗಿರಿ ಪ್ರಕಾಶನ ಮತ್ತು ಭಾರತ ಕನ್ನಡ ಪರಿಷತ್ತು ಜಂಟಿ ಆಶ್ರಯದಲ್ಲಿ ಗುರುವಾರ ಪರಿಷತ್ತಿನ ರಾಜ್ಯ ಉಪಾಧ್ಯಕ್ಷೆ ಎಸ್.ನಾಗರತ್ನ (ಎಸ್.ಸ್ವಾತಿ) ಅವರ `ವಾತ್ಸಲ್ಯ ಸಿಂಧೂರ’ ಕಥಾ ಸಂಕಲನ ಬಿಡುಗಡೆ ಮಾಡಲಾಯಿತು. ಮೈಸೂರಿನ ಶಂಕರ ಮಠದ ರಸ್ತೆಯ ಶ್ರೀ ನಟರಾಜ ಪ್ರತಿಷ್ಠಾನ ಸಭಾಭವನದಲ್ಲಿ ಏರ್ಪಡಿಸಿದ್ದ ಸಮಾರಂಭ ದಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಕೃತಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಭಾಷೆ ಮತ್ತು ಸಾಹಿತ್ಯ ದಿಂದ ನಮ್ಮ ವ್ಯಕ್ತಿಗತ ಬದುಕಿಗೆ ಏನಾದರೂ…










