ಮೈಸೂರು,ಫೆ.17-ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿ ಯಿಂದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಕಾಲೇಜು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಆಯೋಜಿಸುತ್ತಾ ಬಂದಿದೆ. ಇದಕ್ಕೆ ಪೂರ್ವಭಾವಿ ಯಾಗಿ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಯನ್ನು ಆಯೋಜಿಸಿ ಅದರಲ್ಲಿ ಪ್ರಶಸ್ತಿ ಪಡೆದವರನ್ನು ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸೇರಿಸಿ…
ಫೆ.20ಕ್ಕೆ ತರಿಕಲ್ ಗ್ರಾಮದಲ್ಲಿ ಡಿಸಿ ವಾಸ್ತವ್ಯ
February 18, 2021ಮೈಸೂರು, ಫೆ.17- ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದು ಅವರ ಸಮಸ್ಯೆಗಳನ್ನು ತಳಮಟ್ಟ ದಿಂದಲೇ ಪರಿಹರಿಸುವ ನಿಟ್ಟಿ ನಲ್ಲಿ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ದಡಿ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ಸೇರಿ ದಂತೆ ಇತರೆ ಅಧಿಕಾರಿಗಳು 2021ರ ಫೆ.20ರಂದು ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ತರಿಕಲ್ ಗ್ರಾಮ ದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ಭೇಟಿ ಕಾರ್ಯಕ್ರಮವನ್ನು ನಡೆಸಿದ ನಂತರ ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ದಾಖಲೆಗಳು, ಸಾಮಾಜಿಕ ಭದ್ರತಾ ಯೋಜನೆ ವಿಷಯಗಳು, ಪೆÇೀಡಿ ಕ್ರಮದ ವಿಷಯ…
ಸ್ಪರ್ಧಾತ್ಮಕ ಪರೀಕ್ಷೆಗಳ ವಿಶೇಷ ಕಾರ್ಯಾಗಾರದಲ್ಲಿ ಸಾಧಕರಿಗೆ ಸನ್ಮಾನ ಪಾಶ್ಚಿಮಾತ್ಯ ದೇಶಗಳಂತೆ ನಮ್ಮಲ್ಲಿ ಜ್ಞಾನಕ್ಕೆ ಬೆಲೆ ಇಲ್ಲ
February 18, 2021ಮೈಸೂರು,ಫೆ.17(ಪಿಎಂ)- ಪಾಶ್ಚಿಮಾತ್ಯ ದೇಶ ಗಳಲ್ಲಿ ಬುದ್ಧಿವಂತಿಕೆ ಹಾಗೂ ಜ್ಞಾನಕ್ಕೆ ಬೆಲೆಯಿದೆ. ಆದರೆ ನಮ್ಮಲ್ಲಿ ಆ ರೀತಿಯ ಸನ್ನಿವೇಶವಿಲ್ಲ. ನಮ್ಮ ದೇಶದಲ್ಲಿಯೂ ಅಂತಹ ವಾತಾವರಣ ಸೃಷ್ಟಿಸುವ ಶಕ್ತಿ ನಮ್ಮಲ್ಲಿನ ಯುವ ಜನತೆಗೆ ಇದೆ ಎಂದು ಮುಕ್ತ ವಿವಿ ಹಾಗೂ ಮೈಸೂರು ವಿವಿ ವಿಶ್ರಾಂತ ಕುಲಪತಿಗಳೂ ಆದ ವಿಶ್ವ ಶ್ರೇಷ್ಠ ವಿಜ್ಞಾನಿ ಪ್ರೊ. ಕೆ.ಎಸ್.ರಂಗಪ್ಪ ಅಭಿಪ್ರಾಯಪಟ್ಟರು. ಮೈಸೂರು ಮಾನಸಗಂಗೋತ್ರಿಯ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಪ್ರೊ.ಕೆ.ಎಸ್.ರಂಗಪ್ಪ ಅಭಿ ಮಾನಿ ಬಳಗ, ಮೈಸೂರು ವಿವಿ ಶಿಕ್ಷಣಶಾಸ್ತ್ರ ಅಧ್ಯ ಯನ ವಿಭಾಗ, ಕರುನಾಡು…
`ಭತ್ತದ ಮಹದೇವಪ್ಪ’ ಅವರು ಯುವ ಪೀಳಿಗೆಗೆ ಮಾದರಿ
February 18, 2021ಮೈಸೂರು ಫೆ.17- ಪದ್ಮಭೂಷಣ ಪುರಸ್ಕøತ ನಾಡಿನ ಖ್ಯಾತ ಕೃಷಿ ವಿಜ್ಞಾನಿ, ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ಎಂ. ಮಹದೇವಪ್ಪನವರ ‘ಸಮಗ್ರ ಕೃಷಿ ಕಾವ್ಯ’ ಕೃತಿ ಬಿಡುಗಡೆ ನೆರವೇರಿತು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು, ಮಹದೇವಪ್ಪ ನವರು ರೈತ ಪರ ಕಾಳಜಿಯನ್ನು ಹೊಂದಿದ್ದು, ರೈತ ಸ್ವಾವಲಂಬಿಯಾಗಿ ಬದುಕಲು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಆಶೀರ್ವಚನದಲ್ಲಿ ತಿಳಿಸಿದರು. ಅನೇಕ ಭತ್ತದ ತಳಿಗಳ ಸಂಶೋಧಕರಾದ ಮಹದೇವಪ್ಪ ನವರು ನಾಡಿನಲ್ಲಿ ‘ಪ್ಯಾಡಿ ಮಹದೇವಪ್ಪ’ ಎಂದೇ ಕರೆಯ ಲ್ಪಡುತ್ತಾರೆ….
`ಟೂಲ್ಕಿಟ್’ ಸಿದ್ಧಪಡಿಸಿದ ಆರೋಪದ ಮೇಲೆ ಬಂಧಿತರಾದ ದಿಶಾರವಿ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ
February 18, 2021ಮೈಸೂರು,ಫೆ.17(ಪಿಎಂ)- ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸುವ ಸಂಬಂಧ `ಟೂಲ್ಕಿಟ್’ ಸಿದ್ಧಪಡಿಸಿದ ಆರೋಪದ ಮೇಲೆ ಬಂಧಿಸಿರುವ ಫ್ರೈಡೇ ಫಾರ್ ಫ್ಯೂಚರ್ ಸಂಘಟನೆ ಸಹ ಸಂಸ್ಥಾಪಕಿ ದಿಶಾರವಿ ಬಿಡುಗಡೆಗೊಳಿಸಲು ಒತ್ತಾಯಿಸಿ ಸಂವಿಧಾನ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರೈತರ ಪರ ಧ್ವನಿ ಎತ್ತಿದ ಕಾರಣಕ್ಕೆ ದಿಶಾರವಿ ಅವರನ್ನು ಬಂಧಿಸಿರುವುದು ಖಂಡನಾರ್ಹ. ಇದು ಪ್ರಜಾಪ್ರಭುತ್ವ ದೇಶದಲ್ಲಿ…
ಹಸಿರು, ಶುದ್ಧ ಶಕ್ತಿ ಕುರಿತು ಜಾಗೃತಿ ಕಾರ್ಯಕ್ರಮ
February 18, 2021ಮೈಸೂರು,ಫೆ.17-ಮೈಸೂರಿನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹಸಿರು ಮತ್ತು ಶುದ್ಧ ಶಕ್ತಿ ಕುರಿತು ಜಾಗೃತಿ ಕಾರ್ಯಕ್ರಮ ‘ಸಕ್ಷಂ-2021’ ಅಂಗವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಪೆಟ್ರೋಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಉಪಯೋಗ, ಮಹತ್ವ ಮತ್ತು ಸಂರಕ್ಷಣೆ ವಿಧಾನಗಳು, ಅದರಿಂದ ಕೆಟ್ಟ ಅನಿಲ ಹೊರಸೂಸುವಿಕೆ ಕಡಿತದ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಂವೇದನಾ ಭಾವನೆ ಮೂಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪಿಸಿಆರ್ಎ (ಪೆಟ್ರೋಲಿಯಂ ಸಂರಕ್ಷಣೆ ಮತ್ತು ಸಂಶೋಧನಾ ಸಂಘ)ದ…
ತ್ವರಿತ್ ತಯಾರ್ ಉಡುಗೊರೆ ಪ್ಯಾಕ್ ಬಿಡುಗಡೆ
February 18, 2021ಮೈಸೂರು, ಫೆ.17-ಧರ್ಮಸ್ಥಳದ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ತ್ವರಿತ್ ತಯಾರ್ ಆಹಾರ ಉತ್ಪನ್ನ ತಯಾರಕರ ಉಡುಗೊರೆ ಪ್ಯಾಕ್ಗಳನ್ನು ಧರ್ಮ ಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿದರು. ತ್ವರಿತ್ ತಯಾರ್ ಆಹಾರ ಉತ್ಪಾದಕರು ತಮ್ಮ ಆಹಾರ ಉತ್ಪನ್ನವನ್ನು ಡಬ್ಬಿ ಯಲ್ಲಿ ಜನಸಾಮಾನ್ಯರ ಕೈಗೆಟಕುವ ದರದಲ್ಲಿ ವಿವಿಧ ಶ್ರೇಣಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಉಡುಗೊರೆ ಕೊಡಬಯಸು ವವರು ಅದನ್ನು ಖುದ್ದಾಗಿ ಪಡೆದು ನೀಡಬಹುದು. ಅಥವಾ ತ್ವರಿತ್ ತಯಾರ್ ಸಂಸ್ಥೆ ಯವರಿಗೆ ತಿಳಿಸಿದಲ್ಲಿ ನಿಮ್ಮ ಪರವಾಗಿ ಉಡುಗೊರೆಯನ್ನು ಅಂಚೆ ಮೂಲಕ ಅವರಿಗೆ ಕಳುಹಿಸುವ…
ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಆರಂಭ
February 16, 2021ಮೈಸೂರು,ಫೆ.15(ಆರ್ಕೆ)- ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಜನವರಿ 16ರಿಂದ ದೇಶಾದ್ಯಂತ ಆರಂಭ ವಾದ ಅಭಿಯಾನದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದ 28 ದಿನಗಳ ನಂತರ ಮೊದಲ ದಿನವಾದ ಇಂದು ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಟ್ರಾಮಾ ಕೇರ್ ಸೆಂಟರ್ ನಲ್ಲಿ ಇಂದು ಸಂಜೆವರೆಗೆ ಕೇವಲ 100 ಮಂದಿ ಲಸಿಕೆ ಎರಡನೇ ಡೋಸೇಜ್ ಪಡೆದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥಾಪಕ ಡಾ.ಆರ್.ಬಾಲಸುಬ್ರ ಹ್ಮಣ್ಯಂ, ಪಿಕೆಟಿಬಿ…
ಸಿಎಂ ಕುಟುಂಬ ಖಾಸಗಿ ವಿಮಾನದಲ್ಲಿ ಮಾರಿಷಸ್ ಪ್ರವಾಸ: ಯತ್ನಾಳ್ ‘ಯಕ್ಷಪ್ರಶ್ನೆ!’
February 16, 2021ಬೆಂಗಳೂರು, ಫೆ.15(ಕೆಎಂಶಿ)-ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಖಾಸಗಿ ವಿಮಾನದಲ್ಲಿ ಮಾರಿಷಸ್ಗೆ ಹೋಗಿದ್ದಾದರೂ ಏತಕ್ಕೆ, ಅಲ್ಲಿ ಹಣ ಹೂಡಲು ಹೋಗಿದ್ದರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ವರಿಷ್ಠರು ಶೋಕಾಸ್ ನೋಟೀಸ್ ಜಾರಿ ಮಾಡಿದ್ದರೂ ಅದನ್ನು ಕ್ಯಾರೆ ಎನ್ನದ ಯತ್ನಾಳ್, ಮುಖ್ಯಮಂತ್ರಿ ವಿರುದ್ಧ ಇಂದೂ ಹರಿಹಾಯ್ದಿ ದ್ದಾರೆ. ಯಡಿಯೂರಪ್ಪ ಕುಟುಂಬದವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡಿ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳ ಮಧ್ಯೆಯೇ, ಇವರ ಕುಟುಂಬ ಮಾರಿಷಸ್ಗೆ ಹೋಗಿದ್ದಾದರೂ ಏಕೆ…
ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿ
February 16, 2021ಬೆಂಗಳೂರು,ಫೆ.15(ಕೆಎಂಶಿ)-ರೈತರ ಹಿತಕ್ಕಾಗಿ ರಾಜ್ಯ ಕೃಷಿ ಇಲಾಖೆ ಕೈಗೊಂಡಿ ರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಚಿತ್ರನಟ ದರ್ಶನ್ ಅವ ರನ್ನು ಕೃಷಿ ಇಲಾಖೆಯ ಪ್ರಚಾರ ರಾಯಭಾರಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆಯ ಪ್ರಚಾರ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ನಟ ದರ್ಶನ್ ಒಪ್ಪಿಕೊಂಡಿದ್ದಾರೆ. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ, ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಇಲಾಖೆಯ…










