ಬೆಂಗಳೂರು: ಈ ಹಿಂದೆ ಸದನದಲ್ಲಿ ಕೂತು ಬಿಜೆಪಿಯ ಮೂವರು ಶಾಸಕರು ಬ್ಲೂ ಫಿಲಂ ವೀಕ್ಷಣೆ ಮಾಡಿ ಇಡೀ ದೇಶಾ ದ್ಯಂತ ಕರ್ನಾಟಕದ ಮಾನ ಮರ್ಯಾದೆ ಯನ್ನು ತೆಗೆದಿದ್ದರು. ಇದು ರಾಜ್ಯದ ಪಾಲಿಗೆ ಕಪ್ಪು ಚುಕ್ಕೆಯಾಗೇ ಉಳಿಕೊಂಡಿದೆ. ಇದೀಗ ಮತ್ತೊಬ್ಬ ಜನಪ್ರತಿನಿಧಿ ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ ಸದನದ ಮಾನ ಹರಾಜು ಹಾಕಿದ ಘಟನೆ ಶುಕ್ರವಾರ ಸಂಭವಿಸಿದೆ. ಇಂದು ವಿಧಾನಪರಿಷತ್ ಕಲಾಪ ನಡೆಯುತ್ತಿತ್ತು. ಕಾಂಗ್ರೆಸ್ ಎಂಎಲ್ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ…
ಕೆರೆ ಒತ್ತುವರಿ ತೆರವುಗೊಳಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಲೋಕಾಯುಕ್ತಕ್ಕೆ ದೂರು
January 30, 2021ಮೈಸೂರು, ಜ.29-ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯದಿಂದ ಸೂಚನೆ ಬಂದಿದ್ದರೂ, ಕೆರೆ ಒತ್ತುವರಿ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯತೆ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾ ಜಿಕ ಕಾರ್ಯಕರ್ತರೊಬ್ಬರು ಕರ್ನಾಟಕ ಲೋಕಾ ಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಸಾಮಾಜಿಕ ಕಾರ್ಯಕರ್ತ ಬೋರೇಗೌಡ ಎಂಬುವರು ತಿ.ನರಸೀಪುರ ತಹಸೀಲ್ದಾರ್ ನಾಗೇಶ್, ತಹಸೀಲ್ದಾರ್ ಕಚೇರಿಯ ಭೂ ಅಭಿವೃದ್ಧಿ ವಿಭಾಗದ ಕ್ಲರ್ಕ್ ಕೆ.ಆರ್. ಹರ್ಷಕುಮಾರ್, ಬನ್ನೂರು ನಾಡ ಕಚೇರಿಯ ಗ್ರಾಮ ಸಹಾಯಕ ಸೋಮಶೇಖರ್, ಪಾಂಡವಪುರ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ ಮತ್ತು…
ಮೈಸೂರು ಸಶಸ್ತ್ರ ಪಡೆಗಳ ಮಾಜಿ ಸೈನಿಕರ ಸಂಘ ನಾಳೆ ಉದ್ಘಾಟನೆ
January 30, 2021ಮೈಸೂರು, ಜ.29(ಎಂಟಿವೈ)- ಮಾಜಿ ಸೈನಿಕರ ಕುಂದು ಕೊರತೆ ನಿವಾರಿಸಲು, ಕೇಂದ್ರ-ರಾಜ್ಯ ಸರ್ಕಾರದ ಸೌಲಭ್ಯಗಳನ್ನು ದೊರ ಕಿಸಿಕೊಡಲು ಹೊಸದಾಗಿ ರಚಿಸ ಲಾಗಿರುವ `ಮೈಸೂರು ಸಶಸ್ತ್ರಪಡೆಗಳ ಮಾಜಿ ಸೈನಿಕರ ಸಂಘ’ದ ಉದ್ಘಾಟನಾ ಸಮಾರಂಭ ಜ.31ರ ಬೆಳಿಗ್ಗೆ 10.30ಕ್ಕೆ ಜಯಲಕ್ಷ್ಮಿಪುರಂನಲ್ಲಿರುವ ಕೊಡಗು ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು, ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಪ್ರತಾಪ ಸಿಂಹ ಉದ್ಘಾಟಿಸಲಿದ್ದಾರೆ ಎಂದು ನೂತನ ಸಂಘದ ಅಧ್ಯಕ್ಷ ಪಿ.ಕೆ.ಬಿದ್ದಪ್ಪ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಶಾಸಕ ಜಿ.ಟಿ.ದೇವೇಗೌಡ…
ಮೈಸೂರು ನಗರ ಸಾರಿಗೆ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ
January 30, 2021ಮೈಸೂರು,ಜ.29(ಎಸ್ಬಿಡಿ)-ಕೊರೊನಾ ತಗ್ಗುತ್ತಿರುವ ಮೈಸೂರು ನಗರ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲಾಕ್ಡೌನ್ನಿಂದ ರಸ್ತೆ ಸಾರಿಗೆ ಸಂಸ್ಥೆಗೇ ಭಾರೀ ಹೊಡೆತ ಬಿದ್ದಿತ್ತು. ಕೊರೊನಾ ಆತಂಕದ ನಡುವೆಯೇ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಗೆ ಬರುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ದಿನೇ ದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಮತ್ತೆ ಸಾರಿಗೆ ಸಂಸ್ಥೆ ಬಸ್ಗಳತ್ತ ಹೆಜ್ಜೆ ಹಾಕಿದ್ದಾರೆ. ಪರಿಣಾಮ ಮೈಸೂರು ನಗರ ಸಾರಿಗೆಯಲ್ಲೂ ಗಣನೀಯ ಸುಧಾರಣೆಯಾಗಿದೆ. ಮೈಸೂರು…
ರೈತರನ್ನು ಭಯೋತ್ಪಾದಕರಂತೆ ಬಿಂಬಿಸದಿರಿ
January 30, 2021ಮೈಸೂರು, ಜ.29(ಆರ್ಕೆಬಿ)- ಗಣ ರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಕೃತ್ಯಕ್ಕೂ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ. ರೈತರನ್ನು ಭಯೋತ್ಪಾದ ಕರಂತೆ ಬಿಂಬಿಸುವುದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲ ಪುರ ನಾಗೇಂದ್ರ ಒತ್ತಾಯಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿ ಗೃಹ ದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, 70 ದಿನಗಳಿಂದ ಶಾಂತಿ ಯುತವಾಗಿ ರೈತರು ಧರಣಿ ನಡೆಸುತ್ತಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಕೃತ್ಯದ ರೂವಾರಿ…
ಸರ್ಕಾರಿ ನೌಕರಿಗೆ ಕಾಯದೆ ಉದ್ಯೋಗ ಸೃಷ್ಟಿಸಿಕೊಳ್ಳಿ ಯುವಜನರಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕರೆ
January 30, 2021ಮೈಸೂರು,ಜ.29(ಆರ್ಕೆಬಿ)-ಯಾರೊಬ್ಬರೂ ಸರ್ಕಾರಿ ನೌಕರಿ ಗಾಗಿ ಕಾಯುವ ಬದಲಿಗೆ ನಿಮಗೆ ನೀವೇ ಉದ್ಯೋಗ ಸೃಷ್ಟಿಸಿಕೊಳ್ಳ ಬೇಕು. ಇತರರಿಗೂ ಉದ್ಯೋಗ ನೀಡುವಂತ ಕೌಶಲ್ಯ ಬೆಳೆಸಿ ಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಯುವಜನತೆಗೆ ಕರೆ ನೀಡಿದರು. ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂ ಗಣದಲ್ಲಿ ಶುಕ್ರವಾರ ನೆಹರು ಯುವ ಕೇಂದ್ರ, ಎಜ್ಯುಕೇರ್-ಐಟಿಇಎಸ್ ಸಹಯೋಗದಲ್ಲಿ ಏರ್ಪಡಿಸಿದ್ದ `ನೆರೆಹೊರೆ ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಆಯೋಜಿಸಿರುವ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮಗಳನ್ನು ಯುವ…
ಬೈಕಿಗೆ ಗೂಡ್ಸ್ ವಾಹನ ಡಿಕ್ಕಿ; ಯುವಕ ಸಾವು
January 30, 2021ಮೈಸೂರು,ಜ.29(ಆರ್ಕೆ)-ಸರಕು ಸಾಗಣೆ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನ ಪ್ಪಿದ್ದು, ಮತ್ತೋರ್ವ ಗಾಯಗೊಂಡಿ ರುವ ಘಟನೆ ಮೈಸೂರಿನ ಹುಣಸೂರು ರಸ್ತೆಯ ಹಳೇ ತಹಸೀಲ್ದಾರ್ ಕಚೇರಿ ಬಳಿ ಗುರುವಾರ ಮಧ್ಯರಾತ್ರಿ ಸಂಭವಿ ಸಿದೆ. ಹಾಸನದ ವಿಶ್ವೇಶ್ವರನಗರ ನಿವಾಸಿ ಸುಪ್ರೀತ ಜೈನ್ (26) ಸಾವನ್ನಪ್ಪಿದವರು. ಗಾಯಗೊಂಡಿರುವ ಬೈಕ್ ಹಿಂಬದಿ ಸವಾರ ರಕ್ಷಿತ್ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನಿಮೇಷನ್ ವಿದ್ಯಾರ್ಥಿಯಾದ ಸುಪ್ರೀತ ಜೈನ್ ಅಪಾಚಿ ಬೈಕ್ (ಕೆಎ 13, ಇಎಂ 3012)ನಲ್ಲಿ ಎಸ್ಜೆ ಸಿಇ ಕಡೆಯಿಂದ ಬರುತ್ತಿದ್ದಾಗ ಬಿ.ಎಂ….
ಫೆ.19, ಸಾಮೂಹಿಕ ಸೂರ್ಯ ನಮಸ್ಕಾರ
January 30, 2021ಮೈಸೂರು, ಜ.29-ರಥಸಪ್ತಮಿ ಅಂಗವಾಗಿ ಫೆ.19ರಂದು ಬೆಳಗ್ಗೆ 5.45ರಿಂದ 7.15 ರವರೆಗೆ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ 108 ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮೈಸೂರಿನ ಯೋಗ ಒಕ್ಕೂಟದಿಂದ ಏರ್ಪಡಿಸಲಿ ರುವ ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಎಲ್ಲಾ ಯೋಗ ಸಂಸ್ಥೆಗಳು, ಯೋಗ ಫೆಡರೇಷನ್ ಆಫ್ ಮೈಸೂರು ಮತ್ತು ಸಾರ್ವಜನಿಕರು ಸೇರಿದಂತೆ ಎಲ್ಲಾ ಯೋಗಾಭಿಮಾನಿಗಳು ಭಾಗವಹಿಸಲಿದ್ದಾರೆ. ಕಾರ್ಯ ಕ್ರಮದಲ್ಲಿ ಭಾಗವಹಿಸುವ ಎಲ್ಲಾ ಯೋಗಪಟುಗಳಿಗೂ ಉಚಿತ ಪ್ರವೇಶ ವಿದ್ದು, ಎಲ್ಲರಿಗೂ ಪ್ರಾತಿನಿಧ್ಯ ಪತ್ರ ನೀಡಲಾಗುವುದು ಎಂದು…
ಮೈಸೂರು ಜಿಲ್ಲೆಯಲ್ಲಿ ಗುರುವಾರ 19 ಮಂದಿಗೆ ಕೊರೊನಾ ಸೋಂಕು
January 29, 2021ಮೈಸೂರು,ಜ.28(ವೈಡಿಎಸ್)- ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗು ತ್ತಿದ್ದು, ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಇಂದು ಒಂದೂ ಕೊರೊನಾ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಕೊರೊನಾದಿಂದ ಸಾವಿಗೀಡಾಗುವವರ ಸಂಖ್ಯೆಯೂ ಬಹಳ ಕಡಿಮೆಯಾಗಿದೆ. ಗುರುವಾರ ರಾಜ್ಯದಲ್ಲಿ ಕೊರೊನಾದಿಂದ ಇಬ್ಬರಷ್ಟೇ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಗುರುವಾರ 19 ಮಂದಿಗೆ ಮಾತ್ರ ಸೋಂಕು ತಗುಲಿದೆ. 26 ಸೋಂಕಿತರು ಗುಣ ಕಂಡಿದ್ದಾರೆ. ಇಂದು ಕೊರೊನಾದಿಂದ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಕೊರೊನಾ ಸೋಂಕಿ ತರ ಒಟ್ಟು ಸಂಖ್ಯೆ 53,318ಕ್ಕೆ ಏರಿಕೆಯಾಗಿದೆ. ಇದೇ…
ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ನಿಧನ
January 29, 2021ಬೆಂಗಳೂರು,ಜ.28(ಕೆಎಂಶಿ)-ಮಾಜಿ ಸಚಿವ, ಜೆಡಿಎಸ್ ಶಾಸಕ ಮಲ್ಲಪ್ಪ ಚನ್ನವೀರಪ್ಪ ಮನಗೂಳಿ ನಿಧನ ಹೊಂದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಮೂಲತಃ ಕೃಷಿಕರಾಗಿದ್ದ ಅವರು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಸೇವಕರಾಗಿ, ಜನರಿಂದ ಮನ್ನಣೆ ಪಡೆದು 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿ ಸಿದ್ದರು. 2018ರಲ್ಲಿ 2ನೇ ಬಾರಿ ಆಯ್ಕೆಯಾಗಿ ಕುಮಾರಸ್ವಾಮಿ ಸರ್ಕಾರ ದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ…










