ಬೆಂಗಳೂರು,ಡಿ.20-ಮುಂದಿನ ದಿನಗಳಲ್ಲಿ ರಾಜ್ಯ ರಾಜ ಕಾರಣದಲ್ಲಿ ಧೃವೀಕರಣ ನಡೆಯಲಿದ್ದು, ಒಂದು ಪಕ್ಷವೇ ಬಿಜೆಪಿ ಜೊತೆ ವಿಲೀನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ವಕ್ತಾರರೂ ಆದ ಪಕ್ಷದ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾ ವಳಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ಲಿಂಬಾವಳಿ ಅವರ ಈ ಸ್ಫೋಟಕ ಮಾಹಿತಿಯು ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಲಿದೆ ಎಂಬ ವಿಶ್ಲೇಷಣೆಗೆ ಕಾರಣವಾಗಿದೆ. ಅವರ ಮಾಹಿತಿ ಆಧ ರಿಸಿ ಸುದ್ದಿ ಮಾಧ್ಯಮಗಳು ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಲಿದೆ ಎಂದು ಪ್ರಸಾರ ಮಾಡಿದವು. ಆದರೆ ಅದನ್ನು ಸಿಎಂ…
ಇದು ಸತ್ಯಕ್ಕೆ ದೂರ ಪರಿಷತ್ ಸಭಾಪತಿ ಆಯ್ಕೆಗೆ ಸಹಕಾರ
December 21, 2020ಬೆಂಗಳೂರು, ಡಿ.20- ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿ ಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವು ದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ರುವ ಸಿಎಂ,…
ಯಾವುದೇ ಪಕ್ಷದ ಜೊತೆ ಜೆಡಿಎಸ್ ವಿಲೀನ ಇಲ್ಲ, ಬಿಜೆಪಿಗೆ ವಿಷಯಾಧಾರಿತ ಬೆಂಬಲ
December 21, 2020ಬೆಂಗಳೂರು,ಡಿ.20-ಜೆಡಿಎಸ್ ಸ್ವತಂತ್ರವಾಗಿಯೇ ಹೋರಾಟ ನಡೆಸಲಿದೆ, ಯಾವುದೇ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು, 1973ರಲ್ಲಿ 22 ಜನ ಶಾಸಕರನ್ನು ಇಟ್ಟುಕೊಂಡು ಎಚ್.ಡಿ.ದೇವೇಗೌಡರು ವಿರೋಧ ಪಕ್ಷದ ನಾಯಕ ರಾಗಿ ಹೋರಾಟ ಆರಂಭಿಸಿದರು. ಕಾಂಗ್ರೆಸ್ ಹಾಗೂ ಜನತಾ ದಳ ಒಡೆದು ಹೋದ ಬಳಿಕ ಶ್ರಮಪಟ್ಟು ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇವೆ. ರಾಜ್ಯದ ಸಮಸ್ಯೆಗಳಿಗೆ ಹೋರಾಟ ಮಾಡಿದ ದೇವೇಗೌಡರ ಕಳಕಳಿ ಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ಸ್ವತಂತ್ರವಾಗಿರುವ…
ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಜೊತೆ ಹೊಂದಾಣಿಕೆ ಅನಿವಾರ್ಯ
December 21, 2020ಈ ಸಂಬಂಧ ಶಾಸಕರೊಂದಿಗೆ ಕುಮಾರಸ್ವಾಮಿ ಚರ್ಚಿಸಿದ್ದಾರೆ ಹುಬ್ಬಳ್ಳಿ,ಡಿ.20-ಪಕ್ಷದ ಅಸ್ತಿತ್ವದ ಕಾರಣಕ್ಕಾಗಿ ಬಿಜೆಪಿ ಜೊತೆ ಜೆಡಿಎಸ್ ಹೊಂದಾ ಣಿಕೆ ಮಾಡಿಕೊಳ್ಳುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಪಕ್ಷದ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರೂ ಆದ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಜೊತೆ ಹೊಂದಾ ಣಿಕೆ ಮಾಡಿಕೊಳ್ಳಬಹುದೇ ಹೊರತು, ಯಾವುದೇ ಕಾರಣಕ್ಕೂ ವಿಲೀನವಾಗುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಜೊತೆ ಹೋದರೆ ಹೇಗೆ?…
ಹೊರಟ್ಟಿ ಹೇಳಿಕೆಯಂತೆ ಮೈತ್ರಿಯಾಗಬಹುದು
December 21, 2020ಮೈಸೂರು,ಡಿ.20(ಎಂಟಿವೈ)-ಬಿಜೆಪಿ-ಜೆಡಿಎಸ್ ಮೈತ್ರಿ ಸಹಜವಾಗಿ ನಡೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆಯಂತೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಸಖ್ಯ ಮುಂದು ವರೆಸಲೂಬಹುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆಲೋಚನೆಗಳು ಇಂದಿನ ರಾಜಕೀಯದಲ್ಲಿ ನಡೆಯುವು ದಿಲ್ಲ ಎಂಬ ಹೊರಟ್ಟಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೆಚ್.ಡಿ.ದೇವೇಗೌಡ ಪಕ್ಷದ ವರಿಷ್ಠರು. ಅವರು ಹೇಳಿದಂತೆಯೇ ಪಕ್ಷದಲ್ಲಿ ನಡೆಯುವುದು. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬೇಕಾದರೂ ದೇವೇಗೌಡರೇ ಸಹಿ ಹಾಕಬೇಕು…
ರೈತರು, ಕಾರ್ಮಿಕರ ಪ್ರತಿಭಟನೆ: ಸಮಸ್ಯೆ ಬಗೆಹರಿಸಲು ಸಿದ್ದರಾಮಯ್ಯ ಆಗ್ರಹ
December 21, 2020ಬೆಂಗಳೂರು,ಡಿ.20-ರಾಜ್ಯದಲ್ಲಿ ಕಳೆದ ಹಲವು ತಿಂಗಳಿಂದ ರೈತರು ಮತ್ತು ಕಾರ್ಮಿ ಕರು ಚಳವಳಿ, ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿ ಭಟನೆಯಲ್ಲಿ ನಿರತರಾಗಿರುವ ರೈತರು, ಕಾರ್ಮಿಕರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿ ದ್ದಾರೆ. ಕಾರು ತಯಾರಿಸುವ ಬಿಡದಿಯ ಟೊಯೋಟಾ ಕಂಪನಿ ಬಿಡದಿ ಕೈಗಾರಿಕಾ ಪ್ರದೇಶ ದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು…
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೌಶಲ್ಯದ ಬಗ್ಗೆ ರತನ್ ಟಾಟಾ ಪ್ರಶಂಸೆ
December 21, 2020ನವದೆಹಲಿ, ಡಿ.20- ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಕೌಶಲ್ಯವನ್ನು ಉದ್ಯಮ ದಿಗ್ಗಜ ರತನ್ ಟಾಟಾ ಶ್ಲಾಘಿಸಿದ್ದಾರೆ. ಸಂಕಷ್ಟದ ಸಮಯ ದಲ್ಲಿ ಯಾವುದೇ ಅಡೆ ತಡೆಯಿಲ್ಲದೆ ದೇಶವನ್ನು ಮೋದಿ ಅತ್ಯಂತ ಸಮರ್ಥ ವಾಗಿ ಮುನ್ನಡೆಸುತ್ತಿದ್ದಾರೆ ಎಂದು ಕೊಂಡಾಡಿದ್ದಾರೆ. ಅತ್ಯಂತ ಸಂಕಷ್ಟದ ಸಾಂಕ್ರಾಮಿಕ ಸಮಯದಲ್ಲಿ, ಆರ್ಥಿಕ ಸ್ಥಿತಿ ಕುಸಿಯುವ ಸಮಯದಲ್ಲಿ ಅವರು ನೀಡಿದ ನಾಯಕತ್ವದ ಬಗ್ಗೆ ನನಗೆ ಗೌರವವಿದೆ. ನೀವು ಯಾವುದೇ ನಿರ್ಧಾರ ಕೈಗೊಳ್ಳಲು ಹಿಂಜರಿಯ ಲಿಲ್ಲ, ಸಮಸ್ಯೆಗಳಿಂದ ಪಲಾಯನವಾಗಲಿಲ್ಲ, ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದೀರಿ ಎಂದು ಟಾಟಾ, ಮೋದಿ…
ಜ.15ರ ನಂತರ ಜೆಡಿಎಸ್ಗೆ ಸಿ.ಎಂ.ಇಬ್ರಾಹಿಂ?
December 21, 2020ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಪ್ರಾರಂಭವಾಗಿದ್ದು ಮಾಜಿ ಕೇಂದ್ರ ಸಚಿವ, ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜನವರಿ 15ರ ನಂತರ ಜೆಡಿಎಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುದ್ದಿಸಂಸ್ಥೆ ವರದಿ ಮಾಡಿರುವಂತೆ, ಕಾಂಗ್ರೆಸ್ ಪಕ್ಷ ತಮ್ಮನ್ನು ನಿರ್ಲಕ್ಷಿಸಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡಿರುವ ಸಿ.ಎಂ.ಇಬ್ರಾಹಿಂ ಈಗಾಗಲೇ ಪಕ್ಷ ಬಿಡುವ ಸುಳಿವು ನೀಡಿದ್ದಾರೆ. ಆದರೆ ಅದಕ್ಕೂ ಮುನ್ನ ರಾಜ್ಯಾದ್ಯಂತ ಇರುವ ತಮ್ಮ ಬೆಂಬಲಿಗರು, ಆಪ್ತರ ಜತೆ ಚರ್ಚಿಸಲು ಇಬ್ರಾಹಿಂ ನಿರ್ಧರಿಸಿದ್ದು ಇದಕ್ಕೆ ಪೂರಕ ವಾಗಿ ಮಾತುಕತೆ ಆರಂಭಿಸಿದ್ದಾರೆ. ಜನವರಿ 15ರ ನಂತರ…
ಸರಳ, ಸಾಂಪ್ರದಾಯಿಕ ಆಚರಣೆಗಷ್ಟೇ ಸೀಮಿತಗೊಂಡ ಸಿದ್ದಲಿಂಗಪುರ ಷಷ್ಠಿ ಜಾತ್ರೆ
December 21, 2020ಮೈಸೂರು,ಡಿ.20(ಎಂಟಿವೈ)- ಅಪಾರ ಸಂಖ್ಯೆಯ ಭಕ್ತರ ಆಗಮನದೊಂದಿಗೆ ಪ್ರತಿ ವರ್ಷ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದ ಮೈಸೂರು ತಾಲೂಕಿನ ಸಿದ್ದಲಿಂಗಪುರದ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ಜಾತ್ರೆ ಭಾನುವಾರ ಕೋವಿಡ್-19 ಹಿನ್ನೆಲೆಯಲ್ಲಿ ಭಕ್ತರ ಪ್ರವೇಶ ನಿರ್ಬಂಧದ ನಡುವೆ ಸರಳ ಹಾಗೂ ಸಾಂಪ್ರದಾಯಿಕ ಪೂಜೆಗಷ್ಟೇ ಸೀಮಿತವಾಗಿ ಆಚರಿಸಲಾಯಿತು. ಹಳೆ ಮೈಸೂರು ಭಾಗದಲ್ಲಿ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿರುವ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ಷಷ್ಠಿ ಜಾತ್ರಾ ಮಹೋ ತ್ಸವವನ್ನು ಈ ಬಾರಿ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಕೇವಲ…
ತಪ್ಪಾಗಿ ಟೋಲ್ ಶುಲ್ಕ ಕಡಿತವಾದರೆ ಆಟೋ ರೀಫಂಡ್
December 21, 2020ಬೆಂಗಳೂರು: ತಪ್ಪಾಗಿ ಟೋಲ್ ಶುಲ್ಕ ಕಡಿತವಾದರೆ ಆಟೋ ರೀಫಂಡ್ ಸೌಲಭ್ಯ ವನ್ನು ವೀಲ್ಸ್ಐ ಸಂಸ್ಥೆಯು ಕಲ್ಪಿಸಿದೆ. ಕೇವಲ 3ರಿಂದ 7 ದಿನಗಳ ಒಳಗಾಗಿ ಕಡಿತಗೊಂಡ ಹಣ ರೀಫಂಡ್ ಆಗಲಿದೆ. ಇಅದರಿಂದ ಲಕ್ಷಾಂತರ ಟ್ರಕ್ ಡ್ರೈವರ್ ಗಳಿಗೆ ಅನುಕೂಲವಾಗಲಿದೆ. ನ್ಯಾಷ ನಲ್ ಪೇಮೆಂಟ್ಸ್ ಕಾಪೆರ್Çರೇಷನ್ ಆಫ್ ಇಂಡಿಯಾ ಮತ್ತು ಬ್ಯಾಂಕು ಗಳೊಂದಿಗೆ ಕೈಜೋಡಿಸುವ ಮೂಲಕ ಫಾಸ್ಟ್ಟ್ಯಾಗ್ ವಹಿವಾಟುಗಳಿಗೆ ಸ್ವಯಂ ಮರುಪಾವತಿ ಮಾಡ್ಯೂಲ್ ಅನ್ನು ರಚಿಸಿದ ಮೊದಲ ಕಂಪನಿ ವೀಲ್ಸ್ಐ. “ಡಬಲ್ ಅಥವಾ ತಪ್ಪು ಟೋಲ್ ಕಡಿತವು ಟ್ರಕ್ ಮಾಲೀಕರಿಗೆ…










