ಮೈಸೂರು. ಡಿ.3(ಎಸ್ಬಿಡಿ)- ರಾಜ್ಯದಲ್ಲಿ ಸರ್ಕಾ ರವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ರಾಜ್ಯದ ಜನತೆಗೆ ಕನಕದಾಸರ ಜಯಂತ್ಯೋತ್ಸವದ ಶುಭಾ ಶಯ ತಿಳಿಸಿದ ಅವರು, ಮಾಧ್ಯಮದವರ ನಾನಾ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈವರೆಗೂ ಸರ್ಕಾರ ಟೇಕ್ ಆಫ್ ಆಗಿಯೇ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ. ತಿಂಗಳ ಹಿಂದೆಯೇ ಹೇಳಿದಂತೆ ಮುಖ್ಯಮಂತ್ರಿ…
ಹೆಂಡತಿ-ಮಕ್ಕಳ ಸಾಕಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು
December 4, 2020ಪೊನ್ನಂಪೇಟೆ, ಡಿ.3-ಹೆಂಡತಿ-ಮಕ್ಕಳನ್ನು ಸಾಕ ಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಕೃಷಿ ದಿನದ ಪ್ರಯುಕ್ತ ಏರ್ಪಡಿಸಿದ್ದ ಬಿದಿರು ಸಸ್ಯ ಕ್ಷೇತ್ರ, ಬಿದಿರು ಸಂಸ್ಕರಣೆ ಮತ್ತು ಬಿದಿರು ಮೌಲ್ಯವರ್ಧನ ಘಟಕ ಗಳನ್ನು ಅರಣ್ಯ ಸಚಿವ ಆನಂದ್ ಸಿಂಗ್ ಜೊತೆ ಗೂಡಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ದುಡಿದು ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಹೀಗಿರು ವಾಗ ರೈತರು…
ಕೃಷಿ ಸಚಿವರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್
December 4, 2020ಮೈಸೂರು, ಡಿ.3-ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ನಿಜವಾದ ಹೇಡಿಗಳು ಯಾರು? ರೈತರೋ ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ? ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ. ನಿಜವಾದ ಹೇಡಿಗಳು ಯಾರು? ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ…
ಕರ್ನಾಟಕ ಬಂದ್ಗೆ ಅವಕಾಶ ಇಲ್ಲ
December 4, 2020ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಹೊಸ ವರ್ಷದ ರಾತ್ರಿ ಕಫ್ರ್ಯೂ ಇರಲ್ಲ ಉಡುಪಿ,ಡಿ.3-ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಡಿ.5 ಕರ್ನಾ ಟಕ ಬಂದ್ ನಡೆಸಲು ಅವಕಾಶವಿಲ್ಲ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ದಿನನಿತ್ಯದಂತೆ ನಡೆಯುತ್ತವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಬಂದ್ ಮಾಡಿದರೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ. ಬಂದ್ ಮಾಡ ಬೇಡಿ ಎಂದು ಸಿಎಂ ಜೊತೆ ನಾನೂ ಮನವಿ ಮಾಡುತ್ತೇನೆ ಎಂದರು. ಹೊಸ ವರ್ಷಾಚರಣೆ ಮತ್ತು…
ಮೈಸೂರಲ್ಲಿ ಪ್ರತಿಭಟನೆಗೆ ಸೀಮಿತವಾಗುವುದೇ ನಾಳಿನ ಬಂದ್?
December 4, 2020ಮೈಸೂರು, ಡಿ.3(ಆರ್ಕೆ)-ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಕನ್ನಡ ಪರ ಸಂಘಟನೆ ಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್ ಮೈಸೂರಿನಲ್ಲಿ ಪ್ರತಿಭಟನೆಗೆ ಸೀಮಿತ ವಾಗಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ರಾಜ್ಯ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್ಗೆ ಬೆಂಬಲ ಸೂಚಿಸಲು ಬಹುತೇಕ ಸಂಘ-ಸಂಸ್ಥೆಗಳು ನಿರಾಕರಿಸಿರುವುದರಿಂದ ಮೈಸೂರಲ್ಲಿ ಕೇವಲ ಪ್ರತಿಭಟನೆಗಷ್ಟೇ ಸೀಮಿತ ವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಡಿ.5ರ ಕರ್ನಾಟಕ ಬಂದ್ಗೆ…
ಸಾಹಿತಿಗಳು, ಪ್ರಗತಿಪರರೊಂದಿಗೆ ಸಿದ್ದರಾಮಯ್ಯ ಸಭೆ
December 4, 2020ಮೈಸೂರು,ಡಿ.3- ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ ಹೋರಾಟಗಾರರು, ಪ್ರಾಧ್ಯಾಪಕರು ಹಾಗೂ ಜಾತ್ಯತೀತ ಚಿಂತನೆಯುಳ್ಳ ಸಾಹಿತಿಗಳ ಜೊತೆ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಚರ್ಚೆ ನಡೆಸಿದರು. ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿರುವುದು ನಿಜ. ಇದೇನೂ ರಹಸ್ಯ ಸಭೆ ಅಲ್ಲ. ಪ್ರಸಕ್ತ ಪರಿಸ್ಥಿತಿಯಲ್ಲಿ ತಳ ಸಮುದಾಯದವರು, ಬಡವರು ಜೀವನ ನಡೆಸಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅನಿ ವಾರ್ಯ ಎಂಬ…
ಎಲ್ಲಾ ಗ್ರಾಮಗಳ ಸೇರ್ಪಡೆಗೆ ಸಿದ್ದರಾಮಯ್ಯರಿಗೆ ಮನವಿ
December 4, 2020ಮೈಸೂರು, ಡಿ.3-ಮೈಸೂರು ಸಮೀಪದ ಬೀರಿಹುಂಡಿ ಪಂಚಾಯಿತಿಗೆ ಸೇರಿದ ಎಲ್ಲಾ ಗ್ರಾಮಗಳನ್ನು ಬೋಗಾದಿ ಪಟ್ಟಣ ಪಂಚಾ ಯಿತಿಗೆ ಸೇರಿಸಲು ಸರ್ಕಾರಕ್ಕೆ ಸಲಹೆ ನೀಡು ವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡರ ನೇತೃತ್ವದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು. ಹೊಸದಾಗಿ ರಚನೆ ಯಾಗಿರುವ ಬೋಗಾದಿ ಪಟ್ಟಣ ಪಂಚಾಯಿತಿಗೆ ಬೀರಿಹುಂಡಿ ಪಂಚಾಯಿತಿ ವ್ಯಾಪ್ತಿಗೆ ಬರುವ ಬಡಗಲಹುಂಡಿ, ಕೇರ್ಗಳ್ಳಿ, ಕೆ. ಸಾಲುಂಡಿ, ನಂಜರಾಜಯ್ಯ ನಹುಂಡಿ, ಮನ್ನಹುಂಡಿ ಗ್ರಾಮ ಗಳು ಸೇರ್ಪಡೆಯಾಗುತ್ತವೆ. ಉಳಿದಂತೆ ಬಲ್ಲಹಳ್ಳಿ, ಬೀರಿ ಹುಂಡಿ, ಕುಮಾರಬೀಡು,…
ಹುಯಿಲಾಳು ಗ್ರಾಮದಲ್ಲಿ ಮನೆಗೆ ಬೆಂಕಿ
December 4, 2020ಮೈಸೂರು,ಡಿ.3(ಆರ್ಕೆ)-ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮೈಸೂರು ತಾಲೂಕು ಹುಯಿಲಾಳು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಗ್ರಾಮದ ದೊಡ್ಡೇಗೌಡರ ಮಗ ಶಿವಣ್ಣ ಅವರ ಹೆಂಚಿನ ಮನೆ ಅಗ್ನಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಶಿವಣ್ಣ ಅವರ ಕುಟುಂಬದ ಸದಸ್ಯರೆಲ್ಲರೂ ಕೊಟ್ಟಿಗೆ ಬಳಿ ಇದ್ದ ವೇಳೆ ಅಪರಾಹ್ನ 12 ಗಂಟೆ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸಿದರು. ಇಲವಾಲ ಠಾಣೆ…
ಪಾಲಿಥಿನ್ ಕವರ್ ಬಳಕೆ ಕೈಬಿಡುವಂತೆ ಮನವಿ
December 4, 2020ಮೈಸೂರು, ಡಿ.3(ಎಸ್ಪಿಎನ್)- ನಮ್ಮ ಸುತ್ತ್ತಲಿನ ಪರಿಸರ ಶುದ್ಧವಾಗಿರಬೇಕಾದರೆ ನಗರದ ಜೀವನಶೈಲಿ ಬದಲಾಗಬೇಕು ಎಂದು ರಾಜ್ಯ ವಾಯುಮಾಲಿನ್ಯ ಮಂಡಳಿ ಮೈಸೂರು ಕೇಂದ್ರದ ಉಪ ಪರಿಸರ ಅಧಿಕಾರಿ ಸಬಿಕೆ ನುಬಿಯಾ ಅಭಿಪ್ರಾಯಪಟ್ಟರು. ಮೈಸೂರು ಜೆಎಲ್ಬಿ ರಸ್ತೆಯ ಐಡಿಯಲ್ ಜಾವಾ ರೋಟರಿ ಸಭಾಂಗಣದಲ್ಲಿ ಶ್ರೀಗರಿ ಟ್ರಸ್ಟ್ ವತಿಯಿಂದ `ರಾಷ್ಟ್ರೀಯ ಪರಿಸರ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಪ್ರಸ್ತುತ ನಗರ ಪ್ರದೇಶದಲ್ಲಿ ಪಾಲಿಥಿನ್ ಕವರ್, ಕ್ಯಾರಿಬ್ಯಾಗ್ ಅತಿಯಾಗಿ ಬಳಕೆಯಾಗುತ್ತಿದೆ. ಹಾಗಾಗಿ, ತೆಳು ಪಾಲಿಥಿನ್ ಬಳಕೆ…
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವ್ಯಕ್ತಿ ಸಾವು
December 4, 2020ಪಡುವಾರಹಳ್ಳಿ ಬಳಿ ಹುಣಸೂರು ರಸ್ತೆಯಲ್ಲಿ ಬುಧವಾರ ಮಧ್ಯರಾತ್ರಿ ಘಟನೆ ಮೈಸೂರು, ಡಿ.3(ಆರ್ಕೆ)-ಕಾರೊಂದು ವಿದ್ಯುತ್ ಕಂಭಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮೈಸೂರಿನ ಪಡುವಾರಹಳ್ಳಿ ಬಳಿ ಹುಣಸೂರು ರಸ್ತೆಯಲ್ಲಿ ಬುಧವಾರ ಮಧ್ಯ ರಾತ್ರಿ ಸಂಭವಿಸಿದೆ. ಮೂಲತಃ ಹಾಸನ ಜಿಲ್ಲೆಯವರಾದ ಮೈಸೂರಿನ ಬೋಗಾದಿ ನಿವಾಸಿ ಚಿರಂಜೀವಿ (34) ಸಾವನ್ನಪ್ಪಿದವರು. ಕಾರಿನಲ್ಲಿದ್ದ ಅಜೀಜ್ ಅಹಮದ್ ಮತ್ತು ಪುನೀತ್ ಎಂಬು ವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೇಂಟ್ ಜೋಸೆಫ್ ಕಾಲೇಜು ಕಡೆಯಿಂದ ಫೋರ್ಡ್…










