ಮೈಸೂರು,ಡಿ.3(ಆರ್ಕೆ)-ಸ್ಕೂಟರ್ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿ ಣಾಮ ಖಾಸಗಿ ಆಸ್ಪತ್ರೆಯೊಂದರ ಮಹಿಳಾ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಮೈಸೂರು-ಬೆಂಗಳೂರು ಹೆದ್ದಾರಿಯ ಸಿದ್ದ ಲಿಂಗಪುರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಪಾಂಡವಪುರ ತಾಲೂಕು ಬೇವಿನಕುಪ್ಪೆ ಗ್ರಾಮದ ಪರಮೇಶ ಅವರ ಪತ್ನಿ ಶ್ರೀಮತಿ ಸರಸ್ವತಿ (32) ಸಾವನ್ನಪ್ಪಿದವರು. ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶ್ರೀರಂಗಪಟ್ಟಣದ ಲಕ್ಷ್ಮೀಯನ್ನು ಮೈಸೂರಿನ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಭದ್ರತಾ ಸಿಬ್ಬಂದಿಗಳಾಗಿರುವ ಈ ಇಬ್ಬರ ಪೈಕಿ ಸರಸ್ವತಿ…
ನೈರುತ್ಯ ರೈಲ್ವೇ ವಿಭಾಗದಲ್ಲಿ ಶೀಘ್ರ 54 ರೈಲು ಸಂಚಾರ ಆರಂಭ ಸಂಭವ
December 4, 2020ಇಂದು ನಡೆಯಲಿರುವ ರೈಲ್ವೆ ಮಂಡಳಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ ಮೈಸೂರು, ಡಿ.3(ಆರ್ಕೆ)-ಕೋವಿಡ್-19 ನಿರ್ಬಂಧದಿಂದಾಗಿ ಸ್ಥಗಿತಗೊಂಡಿರುವ ರೈಲು ಸಂಚಾರ ಪುನರಾರಂಭಿಸಲು ಭಾರ ತೀಯ ರೈಲ್ವೆ ಮಂಡಳಿ ತಯಾರಿ ನಡೆಸುತ್ತಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ತೀವ್ರತೆ ದಿನೇ ದಿನೆ ಕಡಿಮೆಯಾಗುತ್ತಿರುವುದರಿಂದ ಸಾವಿನ ಪ್ರಮಾಣವೂ ತಗ್ಗಿದ್ದು, ಕಳೆದ ಮಾರ್ಚ್ ಮಾಹೆಯಿಂದ ಸ್ಥಗಿತಗೊಂಡಿರುವ ಪ್ರಯಾಣಿಕರ ರೈಲು ಸಂಚಾರ ಪುನರಾರಂಭಿಸಲು ರೈಲ್ವೇ ಇಲಾಖೆ ಮುಂದಾಗಿದೆ. ಭಾರತೀಯ ರೈಲ್ವೇ ಮಂಡಳಿ ಅಧ್ಯಕ್ಷ ವಿನೋದ್ಕುಮಾರ್ ನೇತೃತ್ವದಲ್ಲಿ ನಾಳೆ (ಡಿ.4) ದೆಹಲಿಯಲ್ಲಿ ಮಹತ್ವದ ಸಭೆ ನಿಗದಿಯಾಗಿದ್ದು, ದೇಶಾದ್ಯಂತ…
ಅಂಕ ಗಳಿಸಿದ ಭರದಲ್ಲಿ ಅಹಂಕಾರ ಬೆಳೆಸಿಕೊಳ್ಳಬಾರದು
December 4, 2020ಮೈಸೂರು, ಡಿ.3(ಪಿಎಂ)-ಅಂಕ ಗಳಿಸಬೇಕು ನಿಜ. ಆದರೆ ಅದೇ ಭರದಲ್ಲಿ ಅಹಂಕಾರ ಬೆಳೆಸಿಕೊಳ್ಳಬಾರದು. ಜೊತೆಗೆ ಅನಾರೋಗ್ಯಕರ ಸ್ಪರ್ಧೆಗೂ ಮುಂದಾಗದೇ ಆಂತರಿಕ ಶ್ರದ್ಧೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿ ಚುಂಚನಗಿರಿ ವಿದ್ಯಾಪೀಠದ ಸಭಾಂಗಣದಲ್ಲಿ 2019- 20ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಅಂಕ ಪಡೆದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಬಿಜಿಎಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿ…
ಮೈಸೂರು ಸೇರಿ ಹಲವು ನಗರಗಳಿಗೆ ಸೋಂಕಿನ 2ನೇ ಅಲೆ ಅಪಾಯ
December 3, 2020ಬೆಂಗಳೂರು, ಡಿ.2(ಕೆಎಂಶಿ)- ಬೆಂಗಳೂರು ನಗರ ಸೇರಿ ದಂತೆ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆ ಅಪ್ಪಳಿ ಸುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರನ್ನೊಳಗೊಂಡ ಕಾರ್ಯಪಡೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಡಾ.ಸುದರ್ಶನ್ ನೇತೃತ್ವದ ಕಾರ್ಯಪಡೆ ಸರ್ಕಾರಕ್ಕೆ ಎರಡನೇ ಅಲೆಗೆ ಸಂಬಂಧಿಸಿದಂತೆ ಸುದೀರ್ಘ ಮುನ್ನೆಚ್ಚರಿಕೆ ನೀಡಿರುವುದಲ್ಲದೆ ವರ್ಷಾಂತ್ಯದಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಯನ್ನು ನಿಷೇಧಿಸಿ ಮತ್ತು ಡಿಸೆಂಬರ್ 26 ರಿಂದ 2021ರ ಜನವರಿ ಒಂದರವರೆಗೆ ರಾತ್ರಿ…
ರಾಜ್ಯದಲ್ಲಿ ಲಸಿಕೆ ನೀಡಲು 29451 ಕೇಂದ್ರ ವ್ಯವಸ್ಥೆ
December 3, 2020ಬೆಂಗಳೂರು,ಡಿ.2(ಕೆಎಂಶಿ)-ಕೋವಿಡ್-19 ಸಾಂಕ್ರಾ ಮಿಕ ರೋಗಕ್ಕೆ ಲಸಿಕೆ ನೀಡಲು ರಾಜ್ಯದಲ್ಲಿ 29451 ಕೇಂದ್ರಗಳನ್ನು ಗುರುತಿಸಿ, ಅಣಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ. ಲಸಿಕೆ ನೀಡಲು 10008 ಸಿಬ್ಬಂದಿ ಗುರು ತಿಸಲಾಗಿದ್ದು, ಲಸಿಕೆ ಸಂಗ್ರಹ, ವಿತರಣೆಗೆ 2855 ಶೀತಲೀಕೃತ ಕೇಂದ್ರಗಳು ಸಿದ್ಧ ಗೊಂಡಿವೆ. ಬೆಂಗಳೂರು, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ವರ್ಷಾಂತ್ಯಕ್ಕೆ ಇಲ್ಲವೇ ಮುಂದಿನ ವರ್ಷದ ಮೊದಲ ಭಾಗದಲ್ಲೇ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
`ಸೈನಿಕ’ನ ಮಂತ್ರಿ ಮಾಡಲು ಅವಸರವೇಕೆ?
December 3, 2020ಮೈಸೂರು, ಡಿ.2(ಪಿಎಂ)- `ಸೈನಿಕ’ನ ಮಂತ್ರಿ ಮಾಡಲು ಅವಸರವೇಕೇ? ಎಂದು ಕೇಳುವ ಮೂಲಕ ವಿಧಾನ ಪರಿಷತ್ ಸದಸ್ಯ ಎ.ಹೆಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಂತ್ರಿ ಆಗು ವುದು ಖಚಿತ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಎ.ಹೆಚ್.ವಿಶ್ವನಾಥ್, ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನ ನೀಡಲು ಅವಸರ ಬೇಕಿಲ್ಲ. ಏಕೆಂದರೆ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ನೀಡಿಲ್ಲ. ಆದರೂ ಮುಖ್ಯಮಂತ್ರಿಗಳು ಏಕೆ…
ಕರ್ನಾಟಕ ಬಂದ್ಗೆ ನಮ್ಮ ಬೆಂಬಲವಿಲ್ಲ
December 3, 2020ಮೈಸೂರು, ಡಿ.2(ಎಂಟಿವೈ)- ರಾಜ್ಯ ಸರ್ಕಾರ ಘೋಷಿಸಿರುವ ಮರಾಠಿ ಅಭಿವೃದ್ಧಿ ನಿಗಮ ರದ್ದು ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಗಳು ಕರೆ ನೀಡಿರುವ ಡಿ.5ರ ಕರ್ನಾಟಕ ಬಂದ್ಗೆ ಬೆಂಬಲ ನೀಡದಿರಲು ಮೈಸೂರು ಉದ್ಯಮ ಒಕ್ಕೂಟ ನಿರ್ಧರಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಉದ್ಯಮ ಒಕ್ಕೂಟದ ವತಿಯಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ವಿವಿಧ ಉದ್ಯಮ ಗಳ ಪ್ರತಿನಿಧಿಗಳು ಮಾತನಾಡಿ, ಕನ್ನಡಪರ ಸಂಘ ಟನೆಗಳು ಕರೆ ನೀಡಿರುವ ಡಿ.5ರ ಕರ್ನಾಟಕ ಬಂದ್ಗೆ ಕೇವಲ ನೈತಿಕ ಬೆಂಬಲ ನೀಡುತ್ತೇವೆ….
ಸಿಬಿಐ, ಇಡಿ, ಎನ್ಐಎ, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
December 3, 2020ನವದೆಹಲಿ,ಡಿ.2-ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಪ್ರತಿಯೊಂದು ಪೆÇಲೀಸ್ ಠಾಣೆಗಳ ಎಲ್ಲಾ ಆಗಮನ, ನಿರ್ಗಮನ ದ್ವಾರಗಳು, ಮುಖ್ಯ ದ್ವಾರ, ಲಾಕಪ್ಗಳು, ಕಾರಿಡಾರ್ಗಳು, ಸ್ವಾಗತ ಕೌಂಟರ್ ಮತ್ತು ಲಾಕಪ್ ಕೊಠಡಿಗಳ ಹೊರಗಡೆಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳ ವಡಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶ ಆರ್.ಎಫ್.ನಾರಿಮನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ…
ಜನರ ಸಮಸ್ಯೆ ನಿವಾರಿಸಲು ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ
December 3, 2020ಮೈಸೂರು,ಡಿ.2(ಪಿಎಂ)-ಜನತೆ ಸಮಸ್ಯೆ ಪರಿಹರಿ ಸಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ಶಾಸಕ ರಿಗೆ ಕ್ಷೇತ್ರಗಳನ್ನೇನು ಬರೆದುಕೊಡಲಾಗಿದೆಯೇ? ಇವರು ಜನತೆ ಸಮಸ್ಯೆ ನಿವಾರಿಸಿದ್ದರೆ ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ನಡೆ ಬೆಂಬಲಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಹಲವು ಶಾಸಕರ ಮುಸುಕಿನ ಗುದ್ದಾಟಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿನ ತಮ್ಮ ಕಚೇರಿ ಬಳಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾಧಿ ಕಾರಿಗಳು…
ಚಾ.ನಗರ ಜಿಲ್ಲೆ ಜನರಿಗೂ ಎಸ್.ಟಿ.ಸೋಮಶೇಖರ್ ಅವರೇ ಬೇಕಂತೆ…?
December 3, 2020ಮದ್ದೂರು,ಡಿ.2-ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ರಾಗಿ ಅಭೂತಪೂರ್ವ ವಾಗಿ ಕಾರ್ಯನಿರ್ವ ಹಿಸುತ್ತಿರುವ ಎಸ್.ಟಿ. ಸೋಮಶೇಖರ್ ಅವ ರಿಗೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಯನ್ನೂ ಕೂಡ ಕೊಡಬೇಕೆಂದು ಅಲ್ಲಿನ ಜನರು ಆಗ್ರಹಿಸುತ್ತಿ ದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದ್ದೂರಿನಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಏಳೆಂಟು ತಿಂಗ ಳಿಂದ ಎಸ್.ಟಿ.ಸೋಮಶೇಖರ್ ಅವರು, ಮೈಸೂರಿನ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಳ್ಳು ವಂತೆ ಮಾಡಿದ್ದಾರೆ….










