ಮೈಸೂರು,ನ.11(ಪಿಎಂ)- ರಾಜ್ಯ ದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ರೇಟ್ ಇಳಿಮುಖವಾಗಿದೆ. ಕಳೆದ 15 ದಿನಗಳ ಹಿಂದೆ ಕೆಲ ಜಿಲ್ಲೆಗಳಲ್ಲಿ ಶೇ.12 ರಿಂದ ಶೇ.19ರಷ್ಟು ಪಾಸಿಟಿವಿಟಿ ರೇಟ್ ಇತ್ತು. ಆದರೆ ಮಂಗಳವಾರಕ್ಕೆ ಇದು ಶೇ.2ರಷ್ಟಕ್ಕೆ ಇಳಿಕೆ ಕಂಡಿದೆ. ಸೋಂಕಿನ ಪ್ರಮಾಣ ಹೆಚ್ಚಳವಾಗದಂತೆ ನಿಯಂ ತ್ರಣ ಕಾಯ್ದುಕೊಳ್ಳುವುದು ಮುಖ್ಯ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪ ಲಿನ ಸುತ್ತೂರು ಮಠದ ಆವರಣದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶವೂ ಸೇರಿದಂತೆ…
ಅರ್ನಾಬ್ ಗೋಸ್ವಾಮಿ, ಮತ್ತಿಬ್ಬರಿಗೆ ಸುಪ್ರೀಂ ಮಧ್ಯಂತರ ಜಾಮೀನು
November 12, 2020ನವದೆಹಲಿ, ನ. 11- ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯ ಕ್ತಿಕ ಬಾಂಡ್ ಮೇಲೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ…
ನಿತೀಶ್ಕುಮಾರ್ಗೆ ಒಲಿದ ಬಿ`ಹಾರ’
November 12, 2020ಪಾಟ್ನಾ,ನ.11-ಬಿಹಾರ ವಿಧಾನ ಸಭೆ ಚುನಾ ವಣೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಮೋಡಿ ಮಾಡಿದ್ದಾರೆ. ಎನ್ಡಿಎ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ 125 ಕ್ಷೇತ್ರ ಗಳನ್ನು ಗೆದ್ದಿದ್ದು ಸತತ 6ನೇ ಬಾರಿ ನಿತೀಶ್ ಕುಮಾರ್ ಮುಖ್ಯಮಂತ್ರಿ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಬಾರಿ ಬಿಜೆಪಿ 74 ಸೀಟುಗಳನ್ನು ಗೆದ್ದರೆ, ನಿತೀಶ್ಕುಮಾರ್ ಅವರ ಜೆಡಿಯು 43 ಸ್ಥಾನಕ್ಕೇ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇಲ್ಲಿ ಕೈಮೇಲಾಗಿದ್ದು ಬಿಜೆಪಿಯದ್ದೇ. ಸಹಜವಾಗಿ ಮುಖ್ಯಮಂತ್ರಿ ಯಾರಾಗು ತ್ತಾರೆ ಎಂಬ ಪ್ರಶ್ನೆ ಉದ್ಭವವಾಗು…
ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ `ಸಖಿ’ ಸಾಂತ್ವ್ವನ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಎಲ್.ನಾಗೇಂದ್ರರಿಂದ ಶಂಕುಸ್ಥಾಪನೆ
November 12, 2020ಮೈಸೂರು, ನ.11(ಎಂಟಿವೈ)- ದೌರ್ಜನ್ಯ ಕ್ಕೊಳಗಾಗುವ ಮಹಿಳೆಯರಿಗೆ ಒಂದೇ ಸೂರಿ ನಡಿ ಕಾನೂನು ಹಾಗೂ ವೈದ್ಯಕೀಯ ನೆರವು ನೀಡುವ ನಿಟ್ಟಿನಲ್ಲಿ ಚೆಲುವಾಂಬ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ `ಸಖಿ ಒನ್ ಸ್ಟಾಫ್ ಸೆಂಟರ್’ಗೆ ನೂತನ ಕಟ್ಟಡ ನಿರ್ಮಾ ಣಕ್ಕೆ ಬುಧವಾರ ಶಾಸಕ ಎಲ್.ನಾಗೇಂದ್ರ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ಚೆಲುವಾಂಬ ಆಸ್ಪತ್ರೆ ಆವರಣ ದಲ್ಲಿರುವ ಮಕ್ಕಳ ಆಸ್ಪತ್ರೆ ಹಿಂಭಾಗದಲ್ಲಿ 40ಘಿ40 ಅಳತೆಯ ನಿವೇಶನದಲ್ಲಿ 48 ಕೋಟಿ ರೂ. ವೆಚ್ಚದಲ್ಲಿ `ಸಖಿ ಒನ್ ಸ್ಟಾಫ್ ಸೆಂಟರ್’ಗೆ ನೆಲ ಮಹಡಿ ಹಾಗೂ ಮೊದಲ ಮಹಡಿ ಯುಳ್ಳ…
ಚೆಲುವಾಂಬ ಆಸ್ಪತ್ರೆ ಮುಂಭಾಗ ಚಪ್ಪಲಿ ರಾಶಿ, ಸಾರ್ವಜನಿಕರ ಆಕ್ರೋಶ
November 12, 2020ಮೈಸೂರು,ನ.11(ಎಂಟಿವೈ)- ಮೈಸೂ ರಿನ ಪ್ರತಿಷ್ಟಿತ ಹೆರಿಗೆ ಆಸ್ಪತ್ರೆಗಳಲ್ಲಿ ಮುಂಚೂಣಿ ಯಲ್ಲಿರುವ ಚೆಲುವಾಂಬ ಆಸ್ಪತ್ರೆ ಮುಂದೆ ಕಳೆದ 1 ತಿಂಗಳಿಂದ ಚಪ್ಪಲಿ ರಾಶಿ ಬಿದ್ದಿದ್ದು, ಪಾರಂಪರಿಕ ಕಟ್ಟಡವೂ ಆಗಿರುವ ಆಸ್ಪತ್ರೆ ಅಂದಕ್ಕೆ ಧಕ್ಕೆಯುಂಟಾಗುತ್ತಿದೆ. ಮುಖ್ಯ ದ್ವಾರದ ಬಳಿಯೇ ರಾಶಿ ಬಿದ್ದಿರುವ ಚಪ್ಪಲಿ ಕಂಡು ಸಾರ್ವಜನಿಕ ವಲಯ ದಿಂದ ಆಕ್ರೋಶ ವ್ಯಕ್ತವಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ ಹೆರಿಗೆಗಾಗಿ ಹಲವು ಮಂದಿ ಮೈಸೂರಿನ ಚೆಲುವಾಂಬ ಹೆರಿಗೆ ಆಸ್ಪತ್ರೆ ಯನ್ನೇ ಅವಲಂಬಿಸಿದ್ದಾರೆ. ಇದರೊಂದಿಗೆ ತಪಾಸಣೆಗೆಂದು ಬರುವ ಗರ್ಭಿಣಿಯರ ಸಂಖ್ಯೆಯೂ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ…
ಸೈಕಲ್ ಪ್ಯೂರ್ ಅಗರಬತ್ತಿಯಿಂದ ವೇದಿಕ್ ಸಂಪೂರ್ಣ ಲಕ್ಷ್ಮಿ ಪೂಜಾ ಪ್ಯಾಕ್ ಬಿಡುಗಡೆ
November 12, 2020ಮೈಸೂರು,ನ.11-ವಿಶ್ವದ ಅತೀ ದೊಡ್ಡ ಅಗರಬತ್ತಿ ಗಳ ತಯಾರಿಕಾ ಸಂಸ್ಥೆ ಮೈಸೂರಿನ ಎನ್.ರಂಗರಾವ್ ಅಂಡ್ ಸನ್ಸ್ನ ಸೈಕಲ್ ಪ್ಯೂರ್ ಅಗರಬತ್ತೀಸ್, ದೀಪಾವಳಿ ಹಬ್ಬದ ಅಂಗವಾಗಿ ವಿಶೇಷವಾದ ವೇದಿಕ್ ಸಂಪೂರ್ಣ ಲಕ್ಷ್ಮಿ ಪೂಜಾ ಪ್ಯಾಕ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಎಂದು ಸೈಕಲ್ ಪ್ಯೂರ್ ಅಗರಬತ್ತೀಸ್ನ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗಾ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ದೇಶೀಯ ಬ್ರ್ಯಾಂಡ್ ಆಗಿರುವ ಸೈಕಲ್ ಪ್ಯೂರ್ ಅಗರಬತ್ತೀಸ್, ಈ ಹಬ್ಬದ ಸಂಭ್ರಮ ಸುರಕ್ಷಿತವಾಗಿರಲು ಪೂಜೆಗೆ ಅಗತ್ಯವಾದ ಎಲ್ಲಾ…
ಬಿಜೆಪಿಯವರಿಗೆ ಯಾವುದೇ ನಿಯಂತ್ರಣ ಇಲ್ಲವಾಗಿದೆ: ಡಿಕೆಶಿ
November 12, 2020ಬೆಂಗಳೂರು, ನ.11(ಕೆಎಂಶಿ)- ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂ ತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯು ತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಗೂಂಡಾಗಿರಿ ಮಾಡಿ ಅಧಿಕಾರವನ್ನು ಬಿಜೆಪಿ ಪಡೆದುಕೊಳ್ಳುತ್ತಿದೆ ಎಂದು ದೂರಿದರು. ಬಹುಮತ ಇಲ್ಲದಿದ್ದರೂ ಸಂಬಂಧಪಟ್ಟ ಪುರಸಭೆ, ನಗರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಅಲ್ಲಿನ ಶಾಸಕರು ಇಲ್ಲವೆ ಬಿಜೆಪಿ ಮುಖಂಡರು ವಿರೋಧ ಪಕ್ಷಗಳ ಕಾರ್ಯಕರ್ತರು ಮತ್ತು ಸದಸ್ಯರ ಮೇಲೆ…
ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯ; ಯುವಕನಿಗೆ 53 ಲಕ್ಷ ಪರಿಹಾರ
November 12, 2020ಕೇರಳದ ಯುವಕ ಮೈಸೂರಿನಲ್ಲಿ ನೌಕರಿಯಲ್ಲಿದ್ದ ತಿರುವನಂತಪುರ, ನ.11- ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ 52.7 ಲಕ್ಷ ರೂ. ಪರಿಹಾರ ಧನವನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಮೋಟಾರು ಅಪಘಾತ ಪರಿಹಾರ ನ್ಯಾಯ ಮಂಡಳಿ (ಎಂಎಸಿಟಿ) ಘೋಷಿಸಿದೆ. ಬಡ್ಡಿ ಸೇರಿ 68 ಲಕ್ಷ ರೂ. ಪರಿಹಾರ ಧನ ಗಾಯಾಳುವಿಗೆ ದೊರೆಯಲಿದೆ. ಮಲಪ್ಪುರಂನ ಮನಿಯೂರ್ ಗ್ರಾಮದ ನಿವಾಸಿ ಬಿಜು(29) ಅವರಿಗೆ 2016ರ ಜುಲೈ ತಿಂಗಳಲ್ಲಿ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ಸೊಂಟದ ಕೆಳಗಿನ ಭಾಗ ಪಾರ್ಶ್ವ ವಾಯುಗೆ ತುತ್ತಾಗಿ…
ಆರ್ಆರ್ ನಗರ, ಶಿರಾದಲ್ಲಿ ಬಿಜೆಪಿಗೆ ಬಂಪರ್ ಗೆಲುವು
November 11, 2020ಬೆಂಗಳೂರು, ನ.10(ಕೆಎಂಶಿ)-ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಈ ಫಲಿತಾಂಶಗಳು ಭಾರೀ ಮುಖಭಂಗವುಂಟುಮಾಡಿದೆ. ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ನಾಯ್ಡು 3ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರೆ, ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಸಿ.ಎಂ.ರಾಜೇಶ್ಗೌಡ ಮೊದಲ ಬಾರಿ ವಿಧಾನಸಭೆಯ ಮೆಟ್ಟಿಲು ಹತ್ತಿದ್ದಾರೆ. ಉಪಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಎರಡೂ ಕ್ಷೇತ್ರಗಳಲ್ಲೂ ಮಂಗಳವಾರ ಬೆಳಿಗ್ಗೆ ಮತ ಎಣಿಕೆ ಆರಂಭದ ಮೊದಲ ಸುತ್ತಿನಿಂದ ಕೊನೆಯ…
ಸದ್ಯದಲ್ಲೇ ಭಾರೀ ಪ್ರಮಾಣದಲ್ಲಿ ಸಂಪುಟ ಪುನರ್ರಚನೆ
November 11, 2020ಬೆಂಗಳೂರು, ನ.10(ಕೆಎಂಶಿ)- ಮಂತ್ರಿ ಮಂಡಲವನ್ನು ದೊಡ್ಡ ಪ್ರಮಾಣದಲ್ಲಿ ಪುನರ್ರ ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ. ಉಪಚುನಾವಣೆ ನಡೆದ ಎರಡು ಕ್ಷೇತ್ರಗಳಲ್ಲಿ ಪಕ್ಷ ಜಯಭೇರಿ ಬಾರಿಸಲು ತಮ್ಮ ಸರ್ಕಾರಕ್ಕಿ ರುವ ಜನ ಬೆಂಬಲವೇ ಕಾರಣ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಇದಕ್ಕೆ ಈ ಕ್ಷೇತ್ರಗಳ ಮತ ದಾರರು ಮತ್ತು ರಾಜ್ಯದ ಜನತೆಗೆ ಚಿರಋಣಿ ಯಾಗಿರುತ್ತೇನೆ. ಮುಂದಿನ ಎರಡೂವರೆ ವರ್ಷ ಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದ್ದು, ಇದಕ್ಕಾಗಿ ಆಡಳಿತದಲ್ಲಿ ಕೆಲವು ಮಾರ್ಪಾಡು ಮಾಡುತ್ತೇನೆ….










