ಮೈಸೂರು, ಅ. 12-ಮೈಸೂರು ಯೋಗ ಅಸೋಸಿಯೇಷನ್ ಹಾಗೂ ಹಿಮಾಲಯ ಫೌಂಡೇಷನ್ ವತಿಯಿಂದ ಮೈಸೂರು ಯೋಗ ಅಸೋಸಿಯೇಷನ್ ಕೇಂದ್ರ ಕಚೇರಿ ಸಭಾಂಗಣದಲ್ಲಿ ಮಲ್ಲಾಡಿಹಳ್ಳಿ ಮಹಾಯೋಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಸಂಸ್ಮರಣೋ ತ್ಸವ ಅಂಗವಾಗಿ ಆಯುರ್ವೇದ ತಜ್ಞರು ಹಾಗೂ ಸಮರ ಕಲೆ ನಿಪುಣರಾದ ಮನು ಬಿ.ಮೆನನ್ ಅವರಿಗೆ ಮಲ್ಲಾಡಿಹಳ್ಳಿ ಮಹಾಯೋಗಿ ಶ್ರೀ ರಾಘವೇಂದ್ರ ಸ್ವಾಮೀಜಿ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ಸಮಾಜ ಸೇವಕ ಡಾ. ಕೆ.ರಘುರಾಂ ವಾಜಪೇಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬರಡು ಭೂಮಿಯಾಗಿದ್ದ ಮಲ್ಲಾಡಿಹಳ್ಳಿಯನ್ನು ಯೋಗದ ಕಾಶಿಯನ್ನಾಗಿಸಿದವರು…
ಮೈಸೂರಿನ ಸೆಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿಯ ಸಾಧನೆ
October 13, 2020ಮೈಸೂರು, ಅ. 12- ಮೈಸೂರಿನ ಪ್ರತಿಷ್ಠಿತ ಸೆಂಟ್ ಫಿಲೋಮಿನಾಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಯಾದ ಎಂ.ಎಸ್. ದರ್ಶನ್ ಗೌಡ ಅವರಿಗೆ ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ ಲಭಿಸಿದೆ. ಮುಖ್ಯಶಿಕ್ಷಕ ಎಂ.ಆರ್.ಸುರೇಶ್ ಹಾಗೂ ಶೋಭಾ ದಂಪತಿ ಪುತ್ರರಾದ ದರ್ಶನ್ ಗೌಡ ಅವರು, 6.9 ಸೆಂಟಿ ಮೀಟರ್ ಉದ್ದ ಸಿಗರೇಟಿನ ಮೇಲೆ “SಒಔಏIಓಉ IS IಓಎUಖIಔUS ಖಿಔ ಊಇಂಐಖಿಊ” ಹಾಗೂ “ IಓಆIಂ” ಎಂಬ ಪದಗಳನ್ನು 7186 ಬಾರಿ ಬರೆದು ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್, ಏಷ್ಯಾ ಬುಕ್…
ಜಾನುವಾರುಗಳ ಕಾಲು-ಬಾಯಿ ಜ್ವರಕ್ಕೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ
October 13, 2020ಮೈಸೂರು, ಅ.12(ಆರ್ಕೆಬಿ)- ಜಿಲ್ಲೆಯ 189 ಪಶುವೈದ್ಯ ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ (ಎನ್ಎಡಿಸಿಪಿ)ಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಿತು. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಅಮೃತೇಶ್ವರ ದೇವಸ್ಥಾನದ ಬಳಿ ಪಶುಪಾಲನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಸಿ.ಎಂ.ಪ್ರಸಾದ್ಮೂರ್ತಿ ಇಂದು ಬೆಳಿಗ್ಗೆ ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾನು ವಾರುಗಳಿಗೆ ಕಂಟಕ ಪ್ರಾಯವಾಗಿರುವ ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ರಾಷ್ಟ್ರೀಯ…
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ 3 ವಾರ ಮಧ್ಯಂತರ ರಜೆ
October 12, 2020ಬೆಂಗಳೂರು/ಮೈಸೂರು, ಅ. 11(ಎಸ್ಪಿಎನ್)- ವಿದ್ಯಾರ್ಥಿ ಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿ ಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅ.12ರಿಂದ 3 ವಾರಗಳ ಕಾಲ ಅಂದರೆ ಅ.30ರವರೆಗೆ…
ದಸರಾ: ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ ಡಿಸಿ
October 12, 2020ಬೆಂಗಳೂರು, ಅ.11- ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವೇಳೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಜತೆ ಭಾನುವಾರ ಬೆಳಗ್ಗೆ ಬೆಂಗ ಳೂರಿನಲ್ಲಿ ಚರ್ಚಿಸಿದರು. ಅ.17ರಂದು ಆರಂಭಗೊಂಡು 10 ದಿನ ಗಳ ಕಾಲ ನಡೆಯುವ ದಸರಾ ಮಹೋ ತ್ಸವ ವೇಳೆ ಕೋವಿಡ್-19 ಸೋಂಕು ಹರಡ ದಂತೆ ಗರಿಷ್ಠ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಬೇಕು. ಮೈಸೂರು ನಗರ ಮತ್ತು ಜಿಲ್ಲೆ ಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ…
ಚಳಿಗಾಲದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: ಡಾ.ಹರ್ಷವರ್ಧನ್ ಎಚ್ಚರಿಕೆ
October 12, 2020ನವದೆಹಲಿ,ಅ.11-ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣ ನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್, ಚಳಿಗಾಲದ ಅವಧಿ ಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ. ವಾರದ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮ ‘ಸಂವಾದ’ದಲ್ಲಿ ಪಾಲ್ಗೊಂಡ ಅವರು, ಕೊರೊನಾ ವೈರಸ್ ಶ್ವಾಸಕೋಶದ ವೈರಸ್ ಆಗಿದ್ದು, ತಂಪು ವಾತಾವರಣದಲ್ಲಿ ಉಸಿರಾಟದ ವೈರಸ್ ಹರಡುವುದು ಹೆಚ್ಚಾಗು ತ್ತದೆ. ತಂಪು ಹವಾಮಾನ ಮತ್ತು ಕಡಿಮೆ ಆರ್ದ್ರತೆಯ ಸ್ಥಿತಿಯಲ್ಲಿ ಶ್ವಾಸಕೋಶದ ವೈರಸ್ಗಳು ಹೆಚ್ಚಾಗುತ್ತದೆ. ನೆನಪಿನಲ್ಲಿಟ್ಟುಕೊಳ್ಳ…
ಆಸ್ತಿ ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
October 12, 2020ನವದೆಹಲಿ,ಅ.11-ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರ ಜ್ಞಾನದ ಸ್ವಾಮಿತ್ವ ಯೋಜನೆಯ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ. ಈ ಕಾರ್ಡ್ಗಳು ಹಳ್ಳಿಗರ ಮನೆಗಳು ಮತ್ತು ಅವರು ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿಗಳಾಗಲಿವೆ. ಏಪ್ರಿಲ್ನಲ್ಲಿ ಆರಂಭಿ ಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭ ವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. ಯೋಜನೆಯಲ್ಲಿ…
ನಿಯಮ ಮೀರಿದ ವಾಹನಗಳಿಂದ ದಂಡ ವಸೂಲಿಗೆ ಮೈಸೂರು ಪೊಲೀಸ್ ಭಿನ್ನ`ಮಾರ್ಗ’!
October 12, 2020ಮೈಸೂರು, ಅ.11(ಎಂಟಿವೈ)- ಪದೇ ಪದೆ ರಸ್ತೆ ನಿಯಮ ಉಲ್ಲಂಘಿಸುತ್ತಲೇ ಇರುವ, ದಂಡ ವಿಧಿಸಿ ಮನೆಗೆ ನೋಟಿಸ್ ಕಳುಹಿಸಿದರೂ ದಂಡ ಪಾವತಿಸದೇ ತಪ್ಪಿಸಿ ಕೊಳ್ಳುವ ಚಾಲಾಕಿ ವಾಹನ ಮಾಲೀಕರಿಗೆ ತಕ್ಕ ಪಾಠ ಕಲಿಸಲು ಮೈಸೂರಿನ ಸಂಚಾರ ಪೊಲೀಸರು ಈಗ ಭಿನ್ನ ಮಾರ್ಗ ತುಳಿದಿ ದ್ದಾರೆ. ಸಂಚಾರ ಪೊಲೀಸರನ್ನು ದೂರದಿಂ ದಲೇ ಕಂಡು ಮಾರ್ಗ ಬದಲಿಸುತ್ತಿದ್ದ, ನೋಟಿಸ್ ಕೊಟ್ಟರೂ ದಂಡ ಕಟ್ಟದೇ ತಪ್ಪಿಸಿ ಕೊಳ್ಳುತ್ತಿದ್ದ ವಾಹನ ಸವಾರರನ್ನು ನಗರ ಸಂಚಾರ ಪೊಲೀಸರು ಆರ್ಟಿಒ ಕಚೇರಿ, ವಿಮಾ ಕಂಪನಿ ಕಚೇರಿ, ಎಮಿಷನ್…
ಕೊಡಗು ಬಿಜೆಪಿ ಮುಖಂಡ ಬಾಲಚಂದ್ರ ಕಳಗಿಯ ಕೊಲೆ ಆರೋಪಿ ಹತ್ಯೆ ಪ್ರಕರಣದಲ್ಲಿ ಐವರ ಬಂಧನ
October 12, 2020ಮಡಿಕೇರಿ,ಅ.11-ಕೊಡಗು ಜಿಲ್ಲೆಯ ಪ್ರಭಾವಿ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿಯ ಕೊಲೆ ಪ್ರಕರಣದ ಆರೋಪಿ ಸಂಪಾಜೆಯ ಸಂಪತ್ಕುಮಾರ್(35) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕೊಲೆಯಾದ ಸಂಪತ್ ಕುಮಾರ್ ಆಪ್ತರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಬಾಲಚಂದ್ರ ಕಳಗಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ಸಂಪತ್ ಕುಮಾರ್ನನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿತ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಮೊದಲ ಆರೋಪಿ ಸಂಪಾಜೆ ಗ್ರಾಮದ ಕಲ್ಲುಗುಂಡಿಯ…
ಚಾಮುಂಡಿಬೆಟ್ಟದಲ್ಲಿ ಕೊರೊನಾ ಹರಡುವ ಆತಂಕ
October 12, 2020ಮೈಸೂರು,ಅ.11(ಎಂಟಿವೈ)- ಮೈಸೂರಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾ ಗುತ್ತಿರುವ ಬೆನ್ನಲ್ಲೇ ಚಾಮುಂಡಿಬೆಟ್ಟಕ್ಕೆ ಶುಕ್ರವಾರದಂದು ನಾಡದೇವಿಯ ದರ್ಶನ ಪಡೆಯಲು ಅಪಾರ ಸಂಖ್ಯೆ ಯಲ್ಲಿ ಆಗಮಿಸುತ್ತಿರುವ ಭಕ್ತರು ಶ್ರದ್ಧಾ ಭಕ್ತಿ ನಡುವೆಯೇ ಕೊರೊನಾ ಸೋಂಕು ಹರಡಲು ಕಾರಣವಾಗಬಹು ದೆಂಬ ಆತಂಕ ಬೆಟ್ಟದ ನಿವಾಸಿಗಳಲ್ಲಿ ಮೂಡಿದ್ದು, ದಸರಾ ಮಾದರಿಯಲ್ಲಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೊರೊನಾ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿ,…










