ಕರ್ನಾಟಕ ಬಂದ್ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ನಾರಾಯಣಗೌಡ ನೇತೃತ್ವದ ಕರವೇ, ಪ್ರವೀಣ್ಶೆಟ್ಟಿ ನೇತೃತ್ವದ ಕರವೇ, ದಲಿತ ಸಂಘಟನೆಗಳು, ಉತ್ತರ ಕರ್ನಾಟಕ ವಿವಿಧ ಸಂಘಟನೆ ಗಳು, ಮಹದಾಯಿ ಹೋರಾಟ ಸಮಿತಿ, ಓಲಾ, ಊಬರ್, ಕ್ಯಾಬ್ ಅಸೋಸಿ ಯೇಷನ್, ಆಟೋ -ಟ್ಯಾಕ್ಸಿ ಅಸೋಸಿ ಯೇಷನ್, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಲಾರಿ ಮಾಲೀಕರ ಸಂಘಟನೆ, ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ 25ಕ್ಕೂ ಹೆಚ್ಚು ಸಂಘ ಟನೆಗಳು ಕರ್ನಾ ಟಕ ಬಂದ್ಗೆ ಬೆಂಬಲ…
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೋವಿಡ್ ಟೆಸ್ಟ್
September 28, 2020ಮೈಸೂರು, ಸೆ.27(ಪಿಎಂ)- ದಸರಾ ಮಹೋತ್ಸವದ ಜಂಬೂ ಸವಾರಿ ಮೆರ ವಣಿಗೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ 5 ದಿನ ಮುನ್ನವೇ ಕೋವಿಡ್ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ದಸರಾ ಸಿದ್ಧತೆಗಳ ಸಂಬಂಧ ಸಭೆ ನಡೆಸಿದ ಸಚಿವರು ಬಳಿಕ ಮಾಧ್ಯಮ ದವರಿಗೆ ಪ್ರತಿಕ್ರಿಯಿಸಿದರು. ಜಂಬೂ ಮೆರವಣಿಗೆಯಲ್ಲಿ ಪಾಲ್ಗೊ ಳ್ಳುವವರು ಕೋವಿಡ್ ಪರೀಕ್ಷೆಯಲ್ಲಿ ನೆಗೆ ಟಿವ್ ವರದಿ…
ಕರ್ನಾಟಕ ಬಂದ್ಗೆ ಮೈಸೂರಲ್ಲಿ ಉತ್ತಮ ಪ್ರತಿಕ್ರಿಯೆ ಸಾಧ್ಯತೆ
September 28, 2020ಮೈಸೂರು, ಸೆ.27(ಎಂಟಿವೈ)- ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದು ಪಡಿ ತಂದು ಬಂಡವಾಳಶಾಹಿಗಳಿಗೆ ಮಣೆ ಹಾಕಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ, ಜನ ವಿರೋಧಿ ನೀತಿ ಖಂಡಿಸಿ ನಾಳೆ(ಸೆ.28) ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯ ಕರೆ ನೀಡಿರುವ `ಕರ್ನಾಟಕ ಬಂದ್’ಗೆ ಮೈಸೂರಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿವೆಯಾದರೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆಯಿದೆ. ನಾಳಿನ ಕರ್ನಾಟಕ ಬಂದ್ಗೆ ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಸಂಪೂರ್ಣವಾಗಿ…
ಬಂದ್ನಲ್ಲಿ ರೈತರಲ್ಲ, ಸಂಘಟನೆಗಳಷ್ಟೇ ಭಾಗಿ: ಸಂಸದ ಸಿಂಹ ಕಿಡಿನುಡಿ
September 28, 2020ಮೈಸೂರು,ಸೆ.27(ಆರ್ಕೆಬಿ)- ಸೋಮ ವಾರ ನಡೆಯುವ ಕರ್ನಾಟಕ ಬಂದ್ ನಲ್ಲಿ ರೈತರು ಭಾಗಿಯಾಗುತ್ತಿಲ್ಲ. ರೈತರ ಹೆಸರಿನಲ್ಲಿ ಸಂಘಟನೆಗಳು ಭಾಗವಹಿ ಸುತ್ತಿವೆ ಅಷ್ಟೆ. ಇದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾನುವಾರ ಭಾಗ ವಹಿಸುವ ಮುನ್ನ ಮಾಧ್ಯಮಗಳೊಂ ದಿಗೆ ಮಾತನಾಡಿದ ಅವರು, ಬಂದ್ ಮಾಡುವವರು ಅವರಿಗಾಗುವ ಲಾಭದ ಬಗೆಗಷ್ಟೇ ಯೋಚಿಸುತ್ತಾರೆ. ಅವರು ರೈತರ ಏಳಿಗೆ ಬಯಸುವವರಲ್ಲ. ಕಾಯ್ದೆ ಮೂಲಕ ದಳ್ಳಾಳಿ ವ್ಯವಸ್ಥೆಯಿಂದ ರೈತ ರನ್ನು…
ಬಿಜೆಪಿ ಸರ್ಕಾರ ರೈತಪರ ಸಚಿವ ಎಸ್.ಟಿ.ಸೋಮಶೇಖರ್
September 28, 2020ಮೈಸೂರು,ಸೆ.27(ಆರ್ಕೆಬಿ)-ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಗಳು ಯಾವತ್ತೂ ರೈತರ ಪರವೇ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಅಧಿವೇಶನದಲ್ಲಿ ಚರ್ಚೆಯಾದ ಬಳಿಕವೇ ಒಪ್ಪಿಗೆ ಪಡೆಯಲಾಗಿದೆ. ಹಾಗಾಗಿ ಇದಕ್ಕೆ ರೈತರ ವಿರೋಧವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ತೊಂದರೆಯಾಗುವ ಯಾವ ಕಾಯ್ದೆಯನ್ನೂ ಮಾಡಿಲ್ಲ. ರೈತರಿಗೆ ಅನ್ಯಾಯವಾಗುವಂತಿದ್ದರೆ ಸಿಎಂ ಯಡಿಯೂರಪ್ಪ ಅದನ್ನು ಒಪ್ಪಿಕೊಳ್ಳುತ್ತಿಲಿಲ್ಲ ಎಂದರು. ರೈತಪರ ವಾದ ಒಳ್ಳೆಯ…
ಕೃಷಿ ಸಂಬಂಧಿತ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
September 28, 2020ನವದೆಹಲಿ: ವಿಪಕ್ಷಗಳ ವಿರೋಧದ ನಡುವೆಯೂ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಕೃಷಿ ಸಂಬಂಧಿತ 3 ಮಸೂದೆಗಳಿಗೆ ಸಹಿ ಹಾಕಿದ್ದು, ಇಂದಿನಿಂದ ಕಾನೂನಾಗಿ ಮಾರ್ಪಾಡಾಗಲಿದೆ. ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಹಾಗೂ ರೈತರಿಗೆ ಗುತ್ತಿಗೆ ಕೃಷಿಗೆ ಪ್ರವೇಶಿ ಸಲು ಚೌಕಟ್ಟನ್ನು ಒದಗಿಸುವ ಮಸೂದೆ ಅಂಗೀಕರಿಸಲಾಗಿತ್ತು. ಈ ಮಸೂದೆ ರೈತರ ಡೆತ್ ವಾರೆಂಟ್, ಅದಕ್ಕೆ…
ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ
September 28, 2020ನವದೆಹಲಿ,ಸೆ.27-ಆತ್ಮನಿರ್ಭರ ಭಾರತದ ನಿರ್ಮಾಣ ದಲ್ಲಿ ರೈತರ ಪಾತ್ರ ಪ್ರಮುಖವಾಗಿದ್ದು, ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯ ವನ್ನು ರೈತರಿಗೆ ಸರ್ಕಾರ ನೀಡಿದೆ ಎಂದು ಹೇಳುವ ಮೂಲಕ ಕೃಷಿ ಮಸೂದೆಯನ್ನು ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ 69ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯ ಕ್ರಮದಲ್ಲಿ ಮಾತನಾಡುತ್ತ, ಕೃಷಿ ಮಸೂದೆಯ ಲಾಭಗಳನ್ನು ಉಲ್ಲೇಖಿಸಿದರು. ನೂತನ ಮಸೂದೆ ದೇಶದ ಕೃಷಿ ವಲಯದ…
ಅ.1ರಿಂದ ಚಾಲನಾ ಪರವಾನಗಿ, SBI ಹೊಸ ನಿಯಮಗಳು ಜಾರಿಗೆ
September 28, 2020ನವದೆಹಲಿ, ಸೆ.27-ಅಕ್ಟೋಬರ್ 1ರಿಂದ ಚಾಲನಾ ಪರವಾನಗಿ ಹಾಗೂ ಎಸ್ಬಿಐನ ಹೊಸ ನಿಯಮಗಳು ಜಾರಿಗೆ ಬರಲಿವೆ. ದಿನನಿತ್ಯ ಉಪಯೋಗವಾಗುವ ನಿಯಮಗಳು ಇವುಗಳಾಗಿದ್ದು, ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿವೆ. ಮುಖ್ಯ ಬದಲಾವಣೆಗಳು ಹೀಗಿರಲಿವೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇತ್ತೀಚಿನ ದಿನಗಳಲ್ಲಿ ವಾಹನ ನೋಂದಣಿ ಕಾರ್ಡ್ ವಿತರಣೆ ಹಾಗೂ ಡಿಎಲ್ ಗಳಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ಜಾರಿಗೆ ತಂದಿದೆ. ಡಿಎಲ್ ಹಾಗೂ ಆರ್ಸಿಗಳನ್ನು ಅಪ್ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ನೀವು ಕ್ರೆಡಿಟ್ ಕಾರ್ಡ್ಗಳ ಮೂಲಕ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ತುಂಬಿಸಿ ಪಾವತಿ…
3.15 ಕೋಟಿ ರೂ. ವೆಚ್ಚದಲ್ಲಿ ಕಾಳಿದಾಸ ರಸ್ತೆ ಕಾಮಗಾರಿಗೆ ಚಾಲನೆ
September 28, 2020ಮೈಸೂರು, ಸೆ.27(ಪಿಎಂ)- ಮೈಸೂ ರಿನ ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಯಲಕ್ಷ್ಮೀಪುರಂನ ಮಾತೃ ಮಂಡಳಿ (ಕೆಇಬಿ) ವೃತ್ತದಿಂದ ಕಾಳಿದಾಸ (ಕೆಡಿ ರಸ್ತೆ) ರಸ್ತೆ ಮಾರ್ಗವಾಗಿ ವಿಜಯ ನಗರದ ಯೋಗನರಸಿಂಹಸ್ವಾಮಿ ದೇವಸ್ಥಾನ ದವರೆಗೆ (ಜನರಲ್ ತಿಮ್ಮಯ್ಯ ರಸ್ತೆ ಜಂಕ್ಷನ್ ವರೆಗೆ) ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನು ವಾರ ಸಹಕಾರ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆ ಅನು ದಾನದ 3.15 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತು ಕೊಂಡಿರುವ ಈ ಕಾಮಗಾರಿಗೆ…
ಅರಮನೆಯಲ್ಲಿ ಪ್ರವಾಸಿಗರಿಗೆ ಗುಲಾಬಿ, ಸಿಹಿ ನೀಡಿ ಸ್ವಾಗತ
September 28, 2020ಮೈಸೂರು, ಸೆ.27(ಎಂಟಿವೈ)- ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ ಮೈಸೂರು ಅರಮನೆಗೆ ಬಂದ ಪ್ರವಾಸಿಗ ರಿಗೆ ಗುಲಾಬಿ ಹಾಗೂ ಮೈಸೂರು ಪಾಕ್ ನೀಡುವ ಮೂಲಕ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಸದಸ್ಯರು ಆತ್ಮೀಯ ವಾಗಿ ಬರಮಾಡಿಕೊಂಡರಲ್ಲದೆ, ಸಾಂಸ್ಕøತಿಕ ನಗರಿ ಮೈಸೂರು ಪ್ರವಾಸಿಗರಿಗೆ ಸುರಕ್ಷಿತ ತಾಣ, ನಗರದ ಎಲ್ಲಾ ಪ್ರವಾಸಿ ತಾಣ ತೆರೆದಿದ್ದು, ಕುಟುಂಬದ ಸದಸ್ಯರೊಂದಿಗೆ ಆಗಮಿಸುವಂತೆ ಕೋರಿದರು. ಪ್ರತಿ ವರ್ಷ ಸೆ.27ರಂದು ವಿಶ್ವ ಪ್ರವಾ ಸೋದ್ಯಮ ದಿನವನ್ನು ಮೈಸೂರಲ್ಲಿ ವಿಜೃಂ ಭಣೆಯಿಂದ ಆಚರಿಸುವ ಪದ್ಧತಿಯಿದೆ. ಕರ್ನಾ ಟಕ ಪ್ರವಾಸೋದ್ಯಮ ಇಲಾಖೆ…










