ಮೈಸೂರು, ಸೆ.26(ಎಂಟಿವೈ)- ಅನಾ ರೋಗ್ಯದಿಂದ ಶುಕ್ರವಾರ ನಿಧನರಾದ ಸಂಗೀತ ಲೋಕ ದಿಗ್ಗಜ, ಗಾನಗಂಧರ್ವ ಎಸ್.ಬಿ.ಬಾಲಸುಬ್ರಹ್ಮಣ್ಯಂ ಅವರ ಆತ್ಮಕ್ಕೆ ಶಾಂತಿ ಕೋರಿ ಮೈಸೂರು ರಂಗಾಯಣ ದಲ್ಲಿ ಶನಿವಾರ ಬೆಳಗ್ಗೆ ಸಂಗೀತ ನುಡಿ ನಮನ ಅರ್ಪಿಸಲಾಯಿತು. ಭೂಮಿಗೀತದ ಆವರಣದಲ್ಲಿ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಂಟಿ ನಿರ್ದೇಶಕ ಎಂ.ಎನ್.ಮಲ್ಲಿಕಾರ್ಜುನ ಸ್ವಾಮಿ, ಹಿರಿಯ ರಂಗಕರ್ಮಿ ಪ್ರಶಾಂತ ಹೀರೆಮಠ ಮತ್ತಿತರರು ಎಸ್ಪಿಬಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ಹಲವು ಭಾಷೆಗಳಲ್ಲಿ 40 ಸಾವಿರಕ್ಕೂ…
ಕೋವಿಡ್ ಪರೀಕ್ಷೆ ನಡೆಸಲು ಸಿದ್ಧವಿದ್ದವರಿಗೆ ಅವಕಾಶ
September 27, 2020ಮೈಸೂರು, ಸೆ.26(ವೈಡಿಎಸ್)-ಮೈಸೂರು ಜಿಲ್ಲಾದÀ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ಪರೀಕ್ಷೆ ನಡೆಸಲು ಆಸಕ್ತ ರಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ದತ್ತಾಂಶ ನಮೂದಕರನ್ನು ನೇಮಿಸಿ ಕೊಳ್ಳುವ ಅಗತ್ಯವಿದೆ. ಸರ್ಕಾರವು ಪ್ರಯೋಗ ಶಾಲಾ ತಂತ್ರಜ್ಞರು ಲಭ್ಯವಿಲ್ಲದಿದ್ದಲ್ಲಿ ನರ್ಸಿಂಗ್ ಅಂಡ್ ಪ್ಯಾರಾ ಮೆಡಿಕಲ್ ಪರ್ಸನಲ್, ಡಿಪೆÇ್ಲಮಾ ಹೋಲ್ಡರ್ಸ್, ವಿಜ್ಞಾನ ಪದವೀಧರರನ್ನು ಸದರಿ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಕೊರೊನಾ ಪರೀಕ್ಷೆಗೆ ನೇಮಕ ಮಾಡಿಕೊಳ್ಳುವವರಿಗೆ ಸರ್ಕಾರ…
ಸಾರ್ವಜನಿಕ ವೀಕ್ಷಣೆಗೆ `ರತ್ನ ಖಚಿತ ಸಿಂಹಾಸನ’ ಮುಕ್ತ
September 25, 2020ಮೈಸೂರು, ಸೆ.24(ಎಂಟಿವೈ)- ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದರ್ಬಾರ್ ಹಾಲ್ನಲ್ಲಿ ಜೋಡಿಸಲಾಗಿರುವ ರತ್ನ ಖಚಿತ ಚಿನ್ನದ ಸಿಂಹಾಸನ ದರ್ಶನ ಭಾಗ್ಯ ಈ ವರ್ಷವೂ ಪ್ರವಾಸಿಗರಿಗೆ ಲಭ್ಯವಿದ್ದು, ಅರಮನೆಯ ಪ್ರವೇಶ ಶುಲ್ಕದೊಂದಿಗೆ ಹೆಚ್ಚುವರಿಯಾಗಿ 50 ರೂ. ಪಾವತಿಸಿದರೆ ಸಿಂಹಾಸನ ಕಣ್ತುಂಬಿಕೊಳ್ಳಬಹುದಾಗಿದೆ. ಅರಮನೆಯಲ್ಲಿ ನಡೆಯಲಿರುವ ಖಾಸಗಿ ದರ್ಬಾರ್ಗಾಗಿ ಸಿಂಹಾಸನವನ್ನು ದರ್ಬಾರ್ ಹಾಲ್ನಲ್ಲಿ ಈ ಬಾರಿಯೂ ಈಗಾಗಲೇ ಜೋಡಿಸಲಾಗಿದೆ. ದಸರಾ ಮಹೋತ್ಸವ ಮುಗಿದ ನಂತರ ಸಿಂಹಾಸನವನ್ನು ಪ್ರತ್ಯೇಕ ಗೊಳಿಸಿ ಸ್ಟ್ರಾಂಗ್ ರೂಮ್ನಲ್ಲಿ ಸುರಕ್ಷಿತವಾಗಿ ಡುವ ಪದ್ಧತಿ ಹಿಂದಿನಿಂದಲೂ ಅನುಸರಣೆ ಆಗುತ್ತ್ತಿದೆ. ಈ ಹಿನ್ನೆಲೆಯಲ್ಲಿ…
ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ
September 25, 2020ಬೆಂಗಳೂರು, ಸೆ.24(ಕೆಎಂಶಿ)-ಭ್ರಷ್ಟಾಚಾರ, ವರ್ಗಾ ವಣೆ ದಂಧೆ, ರಾಜ್ಯದ ಜನತೆಯನ್ನು ಸಾಲದ ಸುಳಿಗೆ ಸಿಲುಕಿಸು ತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮಂತ್ರಿಮಂಡಲ, ಸದನ ಹಾಗೂ ಜನರ ವಿಶ್ವಾಸ ಕಳೆದುಕೊಂಡಿದೆ. ಇಂಥ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ವಿಧಾನಸಭೆ ಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಸದನ ಸಮಾವೇಶಗೊಂಡಾಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ನಿಯಮ 167 ರಡಿಯಲ್ಲಿ ಸದನ ಸಮಾವೇಶಗೊಳ್ಳುವ ಮುನ್ನ ನೋಟಿಸ್ ನೀಡಿದ್ದೇವೆ….
ಮುಡಾದಲ್ಲಿ ಅಕ್ರಮ ತಡೆಗೆ ಆನ್ಲೈನ್ ಖಾತೆ ವಿತರಣೆ
September 25, 2020ಮೈಸೂರು, ಸೆ.24(ಆರ್ಕೆಬಿ)- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಯಾವುದೇ ದುರುಪಯೋಗ ಆಗುವುದನ್ನು ತಡೆಗಟ್ಟುವ ಉದ್ದೇಶದಿಂದ ಶೀಘ್ರವೇ ಆನ್ಲೈನ್ ಖಾತಾ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಗುರುವಾರ ಆಯೋಜಿ ಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ಆನ್ಲೈನ್ ಖಾತಾ ಜಾರಿಗಾಗಿ ವಿಶೇಷ ಸಾಫ್ಟ್ವೇರ್ ಅಭಿವೃದ್ಧಿ ತ್ವರಿತಗತಿ ಯಲ್ಲಿ ಸಾಗಿದೆ ಎಂದರು. 20-30 ವರ್ಷಗಳಿಗಿಂತ ಹೆಚ್ಚು ಕಾಲದಿಂದ ಮನೆ/ನಿವೇಶನದ ನಿರೀಕ್ಷೆಯಲ್ಲಿರುವ ವಿವಿಧ ವರ್ಗದ ಜನರ 85,000 ಅರ್ಜಿಗಳು ಬಾಕಿ ಇವೆ….
ಕೊರೊನಾಗೆ ಬಸವ ಕಲ್ಯಾಣ ಶಾಸಕ ನಾರಾಯಣರಾವ್ ಬಲಿ
September 25, 2020ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಂತರ ಮತ್ತೊಬ್ಬ ಜನಪ್ರತಿನಿಧಿ ಸಾವು ಬೆಂಗಳೂರು, ಸೆ.24(ಕೆಎಂಶಿ)-ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿಗೆ ಬಲಿಯಾದ ಬೆನ್ನಲ್ಲೇ ಕಾಂಗ್ರೆಸ್ನ ಬಸವಕಲ್ಯಾಣದ ಶಾಸಕ ನಾರಾಯಣರಾವ್ ಇದೇ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿದ್ದಾರೆ. ಕೊರೊನಾ ಸೋಂಕು ರಾಜ್ಯದ ಪ್ರಮುಖ ಮೂವರು ಜನಪ್ರತಿನಿಧಿಗಳನ್ನು ಬಲಿ ತೆಗೆದುಕೊಂಡಿದೆ. ಕಳೆದ ವಾರ ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನರಾಗಿದ್ದರು. ಹಾಲಿ ವಿಧಾನಮಂಡಲದ 90ಕ್ಕೂ ಹೆಚ್ಚು ಸದಸ್ಯರಿಗೆ ಈ ರೋಗದ…
ಡ್ರಗ್ಸ್ ಪ್ರಕರಣ: ನಿರೂಪಕಿ ಅನುಶ್ರೀಗೆ ಮಂಗಳೂರು ಸಿಸಿಬಿ ನೋಟಿಸ್ ಜಾರಿ ಇಂದು ವಿಚಾರಣೆಗೆ ಹಾಜರು
September 25, 2020ಬೆಂಗಳೂರು, ಸೆ.24-ಡ್ರಗ್ಸ್ ಪ್ರಕರಣಕ್ಕೆ ಸಂಬಂ ಧಿಸಿದಂತೆ ಕಿರುತೆರೆ ನಿರೂಪಕಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಬೆಂಗ ಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಅವರ ಫ್ಲಾಟ್ಗೆ ಗುರುವಾರ ಸಂಜೆ ಭೇಟಿ ನೀಡಿದ ಸಿಸಿಬಿ ಅಧಿಕಾರಿಗಳು, ಖುದ್ದು ನೋಟಿಸ್ ಜಾರಿ ಮಾಡಿ ಸೆ.26ರೊಳಗೆ ವಿಚಾರಣೆಗಾಗಿ ಮಂಗಳೂರು ಸಿಸಿಬಿ ಕಚೇರಿಗೆ ಹಾಜರಾಗುವಂತೆ ತಿಳಿಸಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಗಳಾದ ಕಿಶೋರ್ ಶೆಟ್ಟಿ ಮತ್ತು ತರುಣ್ ಎಂಬುವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರಿಬ್ಬರು ನೀಡಿದ…
ಲೋಕಸಭೆಯಲ್ಲಿ ಕಾಫಿ ಬೆಳೆಗಾರರ ಸಮಸ್ಯೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂಸದ ಸಿಂಹ
September 25, 2020ಬೆಳೆಗಾರರ ಸಾಲದ ಮೇಲಿನ ಬಡ್ಡಿ ಮನ್ನಾಗೆ ಒತ್ತಾಯ ನವದೆಹಲಿ, ಸೆ.24-ಲೋಕಸಭೆಯಲ್ಲಿ ಗುರುವಾರ ಕಾಫಿ ಬೆಳೆಗಾರರ ಸಂಕಷ್ಟವನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು, ಕಾಫಿ ಬೆಳೆಗಾರರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ದೇಶದ ಕಾಫಿ ಉತ್ಪಾದನೆ ಪೈಕಿ ಶೇ.70ರಷ್ಟು ಕಾಫಿ ಕರ್ನಾಟಕದಲ್ಲೇ ಉತ್ಪಾದನೆಯಾಗಲಿದೆ. ಶೇ.98 ರಷ್ಟು ಬೆಳೆಗಾರರು ಸಣ್ಣ ಮತ್ತು ಮಧ್ಯಮ ವರ್ಗದವರಿದ್ದಾರೆ. 2016-17ರಲ್ಲಿ ಅನಾವೃಷ್ಟಿಯಿಂದ ಕಾಫಿ ಬೆಳೆಗಾರರು ತತ್ತರಿಸಿದ್ದರು. ನಂತರ 2018ರಿಂದ ಸತತ 3 ವರ್ಷ ಕಾಲ ಮಹಾಮಳೆ,…
ಎಸ್ಪಿಬಿ ಸ್ಥಿತಿ ಗಂಭೀರ
September 25, 2020ಚೆನ್ನೈ,ಸೆ.24- ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರ ವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ತಿಳಿಸಿದೆ. ಕೊರೊನಾ ವೈರಸ್ ಪಾಸಿ ಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆ.5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಈಗಲೂ ಇಸಿಎಂಒ ಮತ್ತು ಲೈಫ್ ಸಪೆÇೀರ್ಟ್ನಲ್ಲಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದ ಗೆಟ್ಟಿದ್ದು, ಗರಿಷ್ಠ ಲೈಫ್…
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ `ಖಚಿತ’
September 25, 2020ಮೈಸೂರು, ಸೆ.24(ವೈಡಿಎಸ್)- ಮೈಸೂರು ಜಿಲ್ಲೆ ಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಸೋಂಕು ಮತ್ತು ಸಾವಿನ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಬಿ.ಶರತ್ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾದ್ಯಂತ ಈವರೆಗೆ ಮಾಸ್ಕ್ ಧರಿಸದೆ, ನಿಯಮ ಉಲ್ಲಂಘಿಸಿದ 4,675 ಜನರಿಂದ ಒಟ್ಟು 7,84,900 ರೂ. ವಸೂಲಿ…










