ನವದೆಹಲಿ,ಸೆ.23-ಸಂಸತ್ ಮುಂಗಾರು ಅಧಿವೇಶನದ ಕೊನೆ ದಿನವಾದ ಬುಧ ವಾರ 8 ವಿಧೇಯಕಗಳು ಅನುಮೋದನೆ ಗೊಂಡಿವೆ. ಮಂಗಳವಾರ 7 ವಿಧೇಯಕ ಗಳಿಗೆ ಸಂಸತ್ ಅನುಮೋದನೆ ಸಿಕ್ಕಿತ್ತು. ವೃತ್ತಿಪರ ಸುರಕ್ಷತೆ, ಆರೋಗ್ಯ ರಕ್ಷಣೆ, ಕೆಲಸ ನಿರ್ವಹಣೆ, ಕೈಗಾರಿಕಾ ಸಂಬಂಧ ಗಳ ನಿರ್ವಹಣೆ ಹಾಗೂ ಸಾಮಾಜಿಕ ಭದ್ರತೆ ವಿಧೇಯಕ ಸೇರಿದಂತೆ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ವಿಧೇ ಯಕಗಳ ಅನುಮೋದನೆಯೊಂದಿಗೆ ಬುಧವಾರಕ್ಕೆ ಈ ಬಾರಿಯ ಮುಂಗಾರು ಅಧಿವೇಶನ ಅಂತ್ಯಗೊಂಡಿತು. ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನ ಮಾತನಾಡಿದ ಸಭಾಪತಿಯೂ ಆದ ಉಪ ರಾಷ್ಟ್ರಪತಿ…
ಸದ್ಯಕ್ಕೆ ಕೊರೊನಾಗೆ ಕೊನೆಯಿಲ್ಲ
September 24, 2020ಬೆಂಗಳೂರು, ಸೆ.23-ಮುಂದಿನ ಆರು ತಿಂಗಳ ಅವಧಿಯಲ್ಲಿ ಸಮರೋಪಾದಿಯಲ್ಲಿ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದು ಹೇಳುವ ಮೂಲಕ ಸದ್ಯಕ್ಕೆ ಈ ಮಹಾಮಾರಿಯಿಂದ ಜನರಿಗೆ ವಿಮುಕ್ತಿ ಇಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚ್ಯವಾಗಿ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ, ಮಹಾ ರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ನವ ದೆಹಲಿ, ಉತ್ತರಪ್ರದೇಶ, ಪಂಜಾಬ್ ಸೇರಿ ದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳೊಂ ದಿಗೆ ವೀಡಿಯೋ ಸಂವಾದ ನಡೆಸಿದರು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಅವರಿಗೆ ಪುನಃ ಆರ್ಟಿ ಪಿಸಿಆರ್ ಪರೀಕ್ಷೆಯನ್ನು ಮಾಡಬೇಕು….
ಪೆಡ್ಲರ್ಗೆ ಸಹಕರಿಸಿದ ಸಿಸಿಬಿ ಎಸಿಪಿ ಮುದವಿ ಅಮಾನತು
September 24, 2020ಬೆಂಗಳೂರು, ಸೆ.23-ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಎಸಿಪಿ ಮುದವಿ ಮತ್ತು ಮುಖ್ಯ ಪೇದೆ ಮಲ್ಲಿಕಾರ್ಜುನ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಪೆÇಲೀಸ್ ಇಲಾಖೆ ಆದೇಶಿಸಿದೆ. ಡ್ರಗ್ಸ್ ಕೇಸಿನಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವಿರೇನ್ ಖನ್ನಾ ಸೇರಿದಂತೆ 14ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಪೆÇಲೀಸರು ತನಿಖೆ ನಡೆಸುತ್ತಿದ್ದ ಸಮಯದಲ್ಲಿಯೇ ಬಂಧಿತ ಆರೋಪಿ ವಿರೇನ್ ಖನ್ನಾಗೆ ಮೊಬೈಲ್ ಕೊಟ್ಟು ತನಿಖೆಗೆ ಅಡ್ಡಿ ಉಂಟು ಮಾಡಿದ್ದ ಆರೋಪ ಎಸಿಪಿ…
ಮಂಗಳೂರು, ಧಾರವಾಡ, ಕಲಬುರಗಿಯಲ್ಲಿ ಕಟ್ಟಡ ನಿರ್ಮಿಸಲು ಮುಕ್ತ ವಿವಿ ಚಿಂತನೆ
September 24, 2020ಮೈಸೂರು,ಸೆ.23(ಆರ್ಕೆ)-ಶೈಕ್ಷಣಿಕ ಚಟುವಟಿಕೆ ಗಳನ್ನು ವಿಸ್ತರಿಸಲು ಮುಂದಾಗಿರುವ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಓಯು)ವು ರಾಜ್ಯದ ಕರಾವಳಿ ಪ್ರದೇಶದ ಮಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ಚಿಂತನೆ ನಡೆಸಿದೆ. ದೂರ ಶಿಕ್ಷಣ ನೀಡಲು ಕೇವಲ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮಾತ್ರ ಅವಕಾಶ ಇದೆ ಎಂದು ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ (ಯುಜಿಸಿ) ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದ್ದು, ಇದರಿಂದ ಘೋಷಿತ ಗೊಂಡಿರುವ…
`ಫಿಟ್ ಮೈಸೂರು’ ಅಭಿಯಾನ 3 ದಿನ ಜಿಮ್, ಫಿಟ್ನೆಸ್ ಉಚಿತ ತರಬೇತಿ
September 24, 2020ಮೈಸೂರು, ಸೆ.23(ಆರ್ಕೆಬಿ)- ಪ್ರಧಾನಮಂತ್ರಿಗಳ ಫಿಟ್ ಇಂಡಿಯಾ ಅಭಿಯಾನ ದಡಿ `ಫಿಟ್ ಮೈಸೂರು’ ಸಂಕಲ್ಪ ಮಾಡಿರುವ ಮೈಸೂರು ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘ ಗುರುವಾರದಿಂದ ಜಿಮ್ ಮತ್ತು ಫಿಟ್ನೆಸ್ ಕುರಿತಂತೆ 3 ದಿನಗಳ ಉಚಿತ ತರಬೇತಿ ನೀಡ ಲಿದೆ ಎಂದು ಸಂಘದ ಅಧ್ಯಕ್ಷ, ಏಕಲವ್ಯ ಪ್ರಶಸ್ತಿ ಪುರಸ್ಕøತ ಅಂತಾರಾಷ್ಟ್ರಿಯ ಕ್ರೀಡಾಪಟು ಎ.ವಿ.ರವಿ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಇಡೀ ಜಗತ್ತಿಗೆ ವ್ಯಾಪಿಸಿರುವ ಕೋವಿಡ್-19ನಿಂದಾಗಿ ಬಹುತೇಕ ಆರ್ಥಿಕ ಚಟು ವಟಿಕೆಗಳು ಸ್ಥಗಿತಗೊಂಡಿವೆ. ಜಿಮ್…
ಭೂ ಸುಧಾರಣಾ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
September 24, 2020ಮೈಸೂರು, ಸೆ.23(ಎಂಟಿವೈ)- ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು, ಸದಸ್ಯರು ಬುಧ ವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೇಶಾದ್ಯಂತ ಕೊರೊನಾ ಸಾಕಷ್ಟು ಮಂದಿಯನ್ನು ಬಲಿಪಡೆದಿದೆ. ಸೋಂಕಿ ನಿಂದ ಜನರನ್ನು ರಕ್ಷಿಸಲು ಕ್ರಮ ಕೈಗೊಳ್ಳದ ಸರ್ಕಾರ, ಕೃಷಿ ಕ್ಷೇತ್ರ ಹಾಗೂ ರೈತರಿಗೆ ಮರಣ ಶಾಸನದಂತಹ ತಿದ್ದುಪಡಿ…
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರೈತಪರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಸಮರ್ಥನೆ
September 24, 2020ಮೈಸೂರು, ಸೆ.23 (ಆರ್ಕೆಬಿ)- ಭೂಸುಧಾರಣಾ ಕಾಯ್ದೆ ರೈತಪರ. ಯುವ ಸಮೂಹವನ್ನು ಕೃಷಿ ಕ್ಷೇತ್ರದತ್ತ ಸೆಳೆಯುವ ಪ್ರಯತ್ನಕ್ಕೆ ಈ ಕಾಯ್ದೆ ಜಾರಿಗೊಳಿಸ ಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ ಇಂದಿಲ್ಲಿ ಹೇಳಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಬಂಡವಾಳಶಾಹಿಗಳು ಎಲ್ಲಾ ಕೃಷಿ ಭೂಮಿ ಯನ್ನು ಖರೀದಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಈಗ ಶಿಕ್ಷಣ ಪಡೆದವರಲ್ಲಿ ಹೆಚ್ಚು ಮಂದಿ ವಿವಿಧೆಡೆ ಕೆಲಸಗಳಿಗೆ ವಲಸೆ ಹೋಗಿದ್ದಾರೆ. ಅವರನ್ನು ಕೃಷಿಯತ್ತ ಮತ್ತೆ ಸೆಳೆಯುವುದು ಈ…
ಸಮಾನ ವೇತನ, ಸೇವಾ ಭದ್ರತೆಗೆ ಆಗ್ರಹ ಸೆ.28ಕ್ಕೆ ರಾಜ್ಯಾದ್ಯಂತ ಹೊರಗುತ್ತಿಗೆ ವಾಹನ ಚಾಲಕರ ಪ್ರತಿಭಟನೆ
September 24, 2020ಮೈಸೂರು, ಸೆ.23 (ಆರ್ಕೆಬಿ)- ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್ಮನ್ಗಳಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಸೌಲಭ್ಯ ಜಾರಿಗೆ ಆಗ್ರಹಿಸಿ ಸೆಪ್ಟೆಂಬರ್ 28ರಂದು ರಾಜ್ಯದೆಲ್ಲೆಡೆ ಸ್ಥಳೀಯ ಸಂಸ್ಥೆ ಕಚೇರಿಗಳೆದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಹೊರಗುತ್ತಿಗೆ ವಾಹನ ಚಾಲಕರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮೈಸೂರಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎರಡೂ ವಿಭಾಗದಿಂದ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಹೊರಗುತ್ತಿಗೆ ಚಾಲಕರು ಕರ್ತವ್ಯ…
ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ
September 24, 2020ಮೈಸೂರು, ಸೆ.23-ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಗಳನ್ನು ಗುರುತಿಸಿ ಮತ್ತು ಸಾಧನ ಸಲಕರಣೆಗಳನ್ನು ವಿತರಿಸ ಲಾಯಿತು. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ ಯಡಿಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಪೂರ್ಣ ಅನುದಾನದೊಂದಿಗೆ ಭಾರತೀಯ ರೆಡ್ಕ್ರಾಸ್ ಸೊಸೈಟಿ, ಮೈಸೂರು ಶಾಖೆ ಇವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಯಾಗಿರುವ ಜಿಲ್ಲಾ ನಿರ್ವಹಣಾ ಸಮಿತಿಯ ಮೇಲ್ವಿಚಾರಣೆ…
ಒಳಗೊಂದು, ಹೊರಗೊಂದು ಮಾತಾಡೋದು ಡಿಕೆಶಿಗೆ ಅಭ್ಯಾಸ
September 24, 2020ಬೆಂಗಳೂರು, ಸೆ.23(ಕೆ.ಎಂ.ಶಿ)- ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವರು, ನಿನ್ನೆ ಸದನದ ಒಳಗೆ ಬಿ.ಸಿ.ಪಾಟೀಲ್ ನನ್ನ ಆತ್ಮೀಯ ಸ್ನೇಹಿತ ಎಂದವರು ಸಂಜೆ ಹೊತ್ತಿಗೆ ತಮ್ಮ ಮಾತು ಬದಲಾಯಿಸಿದ್ದಾರೆ. ಒಳಗೊಂದು, ಹೊರಗೊಂದು, ರೂಂನಲ್ಲೊಂದು ಮಾತನಾಡುವುದು ಶಿವಕುಮಾರ್ಗೆ ಅಭ್ಯಾಸವಾಗಿದೆ. ಅವರು ತಮ್ಮ ತೆವಲಿಗೆ ಮಾತನಾಡುವುದನ್ನು ಬಿಡಲಿ ಎಂದು ತಿರುಗೇಟು ನೀಡಿದರು. ಎಪಿಎಂಸಿ ಕಾಯ್ದೆಯಿಂದ ಯಾವುದೇ ನಷ್ಟವಿಲ್ಲ….










