ಮೈಸೂರು,ಸೆ.22(ಆರ್ಕೆ)-ಈ ಬಾರಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿ ಗಳನ್ನು ಹೊರತುಪಡಿಸಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಚಾಮುಂಡಿಬೆಟ್ಟದಲ್ಲಿ ನವ ರಾತ್ರಿ ಉತ್ಸವಕ್ಕೆ ಚಾಲನೆ ನೀಡುವ ಕಾರ್ಯ ಕ್ರಮಕ್ಕೆ ವೇದಿಕೆ ಸಿದ್ಧಪಡಿಸುವ ಸಲುವಾಗಿ ಇಂದು ಸಂಜೆ 4.30 ಗಂಟೆ ವೇಳೆಗೆ ಜಿಲ್ಲಾ ಧಿಕಾರಿ ಬಿ.ಶರತ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ.ಎ.ಎನ್.ಪ್ರಕಾಶ್ಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕೊರೊನಾ ಸೋಂಕಿನ ಭೀತಿ…
ಕೃಷಿ ಹೊಂಡಕ್ಕೆ ಬಿದ್ದು ಕಾರ್ಮಿಕರ ಮೂವರು ಮಕ್ಕಳು ಸಾವು
September 23, 2020ಬನ್ನೂರು, ಸೆ.22-ಬಳ್ಳಾರಿಯಿಂದ ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಕುಟುಂಬಗಳ ಮೂವರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಬನ್ನೂರು ಸಮೀಪದ ಅಂಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಬಳ್ಳಾರಿಯ ಹೊಸಕೋಟೆ ತಾಲೂಕಿನವರಾದ ರವಿಕುಮಾರ್ ಅವರ ಎರಡೂವರೆ ವರ್ಷದ ಪುತ್ರ ರೋಹಿತ್, ರಾಮನಾಯಕ ಎಂಬುವರ 3 ವರ್ಷದ ಮಗ ಸಂಜಯ್ಕುಮಾರ್ ಮತ್ತು ಕೃಷ್ಣಾ ನಾಯಕ ಎಂಬುವರ 2 ವರ್ಷದ ಮಗಳು ಕಾವೇರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಕಂದಮ್ಮಗಳು. ಬಳ್ಳಾರಿ ಜಿಲ್ಲೆಯಿಂದ ಕಬ್ಬು ಕಡಿಯುವ ಕೆಲಸಕ್ಕಾಗಿ ತಿ.ನರಸೀಪುರ…
ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಶೀಘ್ರ ಬಿಡುಗಡೆ
September 23, 2020ಬೆಂಗಳೂರು, ಸೆ.22- ಕಳೆದ 5 ತಿಂಗಳಿನಿಂದ ಬಾಕಿಯಿರುವ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳವಾರ ವಿಧಾನಪರಿಷತ್ನಲ್ಲಿ ಶೂನ್ಯವೇಳೆಯಲ್ಲಿ ಉಪನ್ಯಾಸಕ ರಿಗೆ ಗೌರವಧನ ನೀಡದ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ಆಯನೂರು ಮಂಜುನಾಥ್ ಸರಕಾರ ಕೂಡಲೇ ಈ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿ ಬಾವಿಗಿಳಿದು ಪ್ರತಿಭಟಿಸಿದರು. ಇದಕ್ಕೆ ವಿಪಕ್ಷದ ಸದಸ್ಯರು ಬೆಂಬಲಿಸಿ ಬಾವಿಗಿಳಿದ ಹಿನ್ನೆಲೆಯಲ್ಲಿ ಗದ್ದಲ ಸೃಷ್ಟಿಯಾಯಿತು. ಈ ವೇಳೆ ಸಭಾಧ್ಯಕ್ಷ ಪ್ರತಾಪ…
ಕೊರೊನಾ ನಿಯಂತ್ರಣಕ್ಕೆ ಖರೀದಿಸಲಾದ ವೈದ್ಯಕೀಯ ಸಾಮಗ್ರಿಗಳಲ್ಲಿ ಕೋಟ್ಯಾಂತರ ಅವ್ಯವಹಾರ
September 23, 2020ಬೆಂಗಳೂರು, ಸೆ.22(ಕೆಎಂಶಿ)- ಕೋವಿಡ್-19ಕ್ಕೆ ಕಡಿವಾಣ ಹಾಕಲು ಖರೀದಿಸಲಾದ ವೈದ್ಯಕೀಯ ಸಾಮಗ್ರಿ ಗಳಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆ ದಿದ್ದು, ಈ ಸಂಬಂಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ವಿಫಲ ವಾಗಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ದೂರಿದರು. ನಿಯಮ 69ರಡಿಯಲ್ಲಿ ಕೊರೊನಾ ನಿರ್ವಹಣೆ ಮತ್ತು ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ, ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 2200…
ಆಮ್ಲಜನಕ ಕೊರತೆಯಿಂದ ಸಾವಿರಾರು ಮಂದಿ ಸಾವು
September 23, 2020ಸೆ.22 (ಕೆಎಂಶಿ)- ಕೊರೊನಾ ಸೋಂಕಿತರಿಗೆ ಆಮ್ಲಜನಕ (ಆಕ್ಸಿಜನ್) ಕೊರತೆಯಿಂದ ಸಾವಿರಾರು ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ವಿಧಾನ ಸಭೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದು ಕೊಂಡರು. ನಿಯಮ 69ರಡಿಯಲ್ಲಿ ಕೋವಿಡ್-19ರ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಟ್ಟ ಅವರು, ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲೇ ಆಕ್ಸಿಜನ್ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಯಾಗುತ್ತಿದೆ. ಇಲ್ಲಿ ಉತ್ಪಾದನೆಯಾದದ್ದು ನೆರೆಯ ರಾಜ್ಯಗಳಿಗೆ ರವಾನೆಯಾಗುತ್ತದೆ. ನಮ್ಮವರಿಗೆ ದೊರೆಯುತ್ತಿಲ್ಲ. ಇಂಥ ಸಂದಿಗ್ಧ ಸಂದರ್ಭದಲ್ಲಿ ಆಕ್ಸಿಜನ್ ಬೇರೆ…
ಅ.17ಕ್ಕೆ ಕಾವೇರಿ ತೀರ್ಥೋದ್ಭವ
September 23, 2020ಮಡಿಕೇರಿ,ಸೆ.22-ಕಾವೇರಿ ತವರು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅ.17ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವ ವಾಗಲಿದೆ. ಇದರ ಅಂಗವಾಗಿ ಸೆ.26 ರಂದು ಬೆಳಗ್ಗೆ 8.31ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ.14ರಂದು ಸಾಯಂ ಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ…
ಸಿಎಂ ಯಡಿಯೂರಪ್ಪ ಬದಲಾವಣೆ ವರದಿ ತಳ್ಳಿಹಾಕಿದ ಬಿಜೆಪಿ
September 23, 2020ಬೆಂಗಳೂರು: ಮುಖ್ಯಮಂತ್ರಿ ಯಡಿ ಯೂರಪ್ಪ ನಾಯಕತ್ವ ಬದಲಾವಣೆ ಯನ್ನು ರಾಜ್ಯ ಬಿಜೆಪಿ ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಖ್ಯಮಂತ್ರಿ ದೆಹಲಿಗೆ ತೆರ ಳಿದ ಸಂದರ್ಭದಲ್ಲಿ ಕೆಲ ಮಾಧ್ಯಮಗಳಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಬಂದ ವರದಿಗಳನ್ನು ಸ್ಪಷ್ಟವಾಗಿ ನಿರಾ ಕರಿಸುವ ಬಿಜೆಪಿ ಮೂಲಗಳು, ಇದೆಲ್ಲವೂ ಬರೀ ಊಹಾಪೋಹ ಎಂದು ಸ್ಪಷ್ಟಪಡಿ ಸಿವೆ. ಈ ವರದಿಗಳು ಆಧಾರರಹಿತ ಮತ್ತು ದಾರಿತಪ್ಪಿಸುವಂತಹವು ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಹೇಳಿದ್ದಾರೆ.
ಮಾನಸಗಂಗೋತ್ರಿಯಲ್ಲಿ 5 ಕಡೆ ಎಲ್ಇಡಿ ಸ್ಕ್ರೀನ್ ಅಳವಡಿಕೆ
September 23, 2020ಮೈಸೂರು, ಸೆ.22 (ಆರ್ಕೆ)- ಜನಸಾಮಾನ್ಯರಿಗೆ ಹತ್ತಿರವಾಗಲು ಮುಂದಾಗಿರುವ ಮೈಸೂರು ವಿಶ್ವ ವಿದ್ಯಾನಿಲಯವು ಮಾನಸಗಂಗೋತ್ರಿ ಆವರಣದ 5 ಕಡೆ ಎಲ್ಇಡಿ ಸ್ಕ್ರೀನ್ಗಳನ್ನು ಅಳವಡಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ವಿರುವ ಕ್ರಾಫರ್ಡ್ ಭವನದ ಮುಂಭಾಗ, ಮಾನಸ ಗಂಗೋತ್ರಿಯ ದಕ್ಷಿಣ ದ್ವಾರದ ರಾಷ್ಟ್ರಕವಿ ಕುವೆಂಪು ಪ್ರತಿಮೆ ಇರುವ ಬೋಗಾದಿ ರಸ್ತೆಗೆ ಹೊಂದಿಕೊಂಡಂತಿ ರುವ ಪ್ರವೇಶ ದ್ವಾರ, ಸೆನೆಟ್ ಭವನದ ಬಳಿಯ ಗೇಟ್, ವಿಶ್ವವಿದ್ಯಾನಿಲಯದ ಕ್ಯಾಂಟೀನ್ ಸಮೀಪ, ಎಸ್ಜೆಸಿಇ ಗೇಟ್ ಎದುರಿನ ಗಂಗೋತ್ರಿ ಪಶ್ಚಿಮ ದ್ವಾರದ ಬಳಿ ದೊಡ್ಡ ಎಲ್ಇಡಿ ಸ್ಕ್ರೀನ್ಗಳನ್ನು ಅಳವಡಿಸಲಾಗಿದೆ….
ಮುಕ್ತ ವಿವಿಯಲ್ಲಿ ಪದವಿ ಪಡೆದ 18 ಮಂದಿ ಈಗ ಕೆಎಎಸ್ ಅಧಿಕಾರಿಗಳು
September 23, 2020ಮೈಸೂರು, ಸೆ.22(ಆರ್ಕೆ)-ಕರ್ನಾಟಕದ ಏಕಮಾತ್ರ ದೂರ ಶಿಕ್ಷಣ ಕಲಿಕಾ ಸಂಸ್ಥೆ ಎಂದು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಘೋಷಿ ಸಿದ ಬೆನ್ನಲ್ಲೇ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಹಿರಿಮೆಗೆ ಇದೀಗ ಮತ್ತೊಂದು ಗರಿಮೆ ಸೇರಿದೆ. ಕಳೆದ ವರ್ಷ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿ ಎಸ್ಸಿ) ನಡೆಸಿದ ಪರೀಕ್ಷೆಯಲ್ಲಿ ಮುಕ್ತ ವಿಶ್ವವಿದ್ಯಾನಿಲಯ ದಲ್ಲಿ ಪದವಿ ಪಡೆದ 18 ಮಂದಿ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ…
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
September 23, 2020ಮೈಸೂರು, ಸೆ.22(ಆರ್ಕೆಬಿ)- ಮಾಸಿಕ ರೂ.12,000 ಸಂಬಳ ಘೋಷಿಸಬೇಕು. ಆಗಾಗ್ಗೆ ಎಲ್ಲಾ ಕಾಂiÀರ್iಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಸರ್ಗಳನ್ನು ಸಮರ್ಪಕವಾಗಿ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆ ಯರ ಸಂಘದ ಜಿಲ್ಲಾ ಸಮಿತಿ ಆಶ್ರಯದಲ್ಲಿ ನಡೆದ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು…










