ಬೆಂಗಳೂರು, ಸೆ. 9-ಈಗಾಗಲೇ ಸರ್ಕಾರಿ ಹುದ್ದೆ ಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆ ಆಯ್ಕೆ ಗಾಗಿ ಅರ್ಜಿ ಸಲ್ಲಿಸುವ ಮುನ್ನ ಎನ್ಒಸಿ ಪಡೆಯುವ ಹಳೆ ನಿಯಮಕ್ಕೆ ವಿನಾಯಿತಿ ಕಲ್ಪಿಸಿ, ಸರಕಾರ ನೌಕರರ ಪಾಲಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ನಿರಾಕರ್ಷೇಪಣಾ ಪತ್ರ(ಎನ್ಒಸಿ) ಪಡೆಯುವುದು ಈ ಮೊದಲು ಕಡ್ಡಾಯವಾಗಿತ್ತು. ಇದೀಗ ಈ ನಿಯಮಕ್ಕೆ ತಿದ್ದುಪಡಿ ತಂದಿದ್ದು ನೌಕರರು ಬೇರೊಂದು ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಿ, ನೇಮಕಾತಿ…
ಸೆ.12ರಂದು ಮೈಸೂರಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ
September 10, 2020ಮೈಸೂರು, ಸೆ.9(ಆರ್ಕೆ)-ಸೆಪ್ಟೆಂಬರ್ 12ರಂದು ಸಂಜೆ 4 ಗಂಟೆಗೆ ಮೈಸೂರಿನ ಅರಮನೆ ಆವರಣದಲ್ಲಿ ರುವ ಅರಮನೆ ಮಂಡಳಿ ಕಚೇರಿ ಸಭಾಂಗಣದಲ್ಲಿ ದಸರಾ ಕಾರ್ಯಕಾರಿ ಸಮಿತಿಯ ಮೊದಲ ಸಭೆ ನಡೆಯಲಿದೆ. ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಈ ಬಾರಿಯ ದಸರಾ ಮಹೋತ್ಸವದ ಬಗ್ಗೆ ರೂಪು-ರೇಷೆಗಳ ಕುರಿತಂತೆ ಚರ್ಚೆ ನಡೆಯಲಿದ್ದು, ಕೈಗೊಂಡಿರುವ ಸಿದ್ಧತೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳನ್ನು ಶಿಬಿರ ಗಳಿಂದ ಕರೆತರುವುದು, ಅರಮನೆಗೆ ಬರಮಾಡಿಕೊಳ್ಳು ವುದು, ತಾಲೀಮು,…
ಮೈಸೂರು ದಸರಾ ಪ್ರಾಧಿಕಾರ ರಚನೆಗೆ ಜಿಟಿಡಿ ಮನವಿ
September 10, 2020ಬೆಂಗಳೂರು, ಸೆ.9-ಮಂಗಳವಾರ ಬೆಂಗಳೂರಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾಜಿ ಸಚಿವರೂ ಆದ ಹಾಲಿ ಶಾಸಕ ಜಿ.ಟಿ. ದೇವೇಗೌಡ ಶಾಶ್ವತ ದಸರಾ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಅಭಿ ಪ್ರಾಯಗಳನ್ನು ಮಂಡಿಸಿದ ಜಿಟಿಡಿ, ಮೈಸೂರು ದಸರಾ ಪ್ರಾಧಿಕಾರವನ್ನು ರಚಿಸಿದರೆ, ಸಾಂಸ್ಕøತಿಕ ರಾಜಧಾನಿಯಾದ ಮೈಸೂರಿನಲ್ಲಿ ನಿರಂತರವಾಗಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆ. ಇದರ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈಗ ಪ್ರತೀ ವರ್ಷ ದಸರಾ…
ಕೊರೊನಾ ಸಂಕಷ್ಟ: ಮುಖ್ಯಮಂತ್ರಿ ಯಡಿಯೂರಪ್ಪಗೆ ಶಿವರಾಜ್ಕುಮಾರ್ ನೇತೃತ್ವದಲ್ಲಿ ಚಿತ್ರೋದ್ಯಮ ಮನವಿ
September 10, 2020ಬೆಂಗಳೂರು, ಸೆ. 9 (ಕೆಎಂಶಿ)-ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಮನವಿ ಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಶಿವರಾಜ್ಕುಮಾರ್ ನೇತೃತ್ವದ ತಂಡ ಸಲ್ಲಿಸಿತು. ಕಳೆದ 6 ತಿಂಗಳಿನಿಂದ ಕೊರೊನಾದಿಂದ ತತ್ತರಿಸಿರುವ ಚಿತ್ರೋ ದ್ಯಮದ ಮಂದಿಗೆ ನೆರವು ನೀಡಲು ವಿಶೇಷ ಪ್ಯಾಕೇಜ್ ಅಗತ್ಯ ವಿದೆ. ಸರ್ಕಾರ ಇದನ್ನು ನೀಡುವಂತೆ ಕೋರಲಾಯಿತು. ಜೊತೆಗೆ ವಾರ್ಷಿಕ ತೆರಿಗೆ ಮನ್ನಾ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳ ಕರೆಂಟ್ ಬಿಲ್ಅನ್ನು ಮನ್ನಾ ಮಾಡುವುದು,…
ಆರು ತಿಂಗಳ ನಂತರ ರೈಲು ಸಂಚಾರ ಪುನಾರಂಭ
September 10, 2020ಮೈಸೂರು, ಸೆ.9(ಆರ್ಕೆ)- ಕಳೆದ 6 ತಿಂಗ ಳಿಂದ ರೈಲು ಸಂಚಾರವಿಲ್ಲದೇ ಬಿಕೋ ಎನ್ನುತ್ತಿದ್ದ ಮೈಸೂರು ರೈಲು ನಿಲ್ದಾಣದಲ್ಲೀಗ ಚಟುವಟಿಕೆ ಕಂಡು ಬರುತ್ತಿದೆ. ಏನೋ ಒಂದು ರೀತಿ ಸಡಗರದ ವಾತಾವರಣ. ಸೆಪ್ಟೆಂಬರ್ 7ರಿಂದ ಬೆಂಗಳೂರು-ಮೈಸೂರು ನಡುವೆ ಕೆಲ ರೈಲು ಸಂಚಾರ ಆರಂಭವಾಗಿರುವುದರಿಂದ ಮೈಸೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ, ರೈಲ್ವೇ ಪೊಲೀಸರು, ಆರ್ಪಿಎಫ್ ಸಿಬ್ಬಂದಿ ಕರ್ತವ್ಯದಲ್ಲಿ ನಿರತರಾಗಿರುವುದಲ್ಲದೆ, ರೈಲ್ವೇ ಸಿಬ್ಬಂದಿ ಸ್ಟೇಷನ್ನಿನ ಸ್ವಚ್ಛತೆ, ಹಳ್ಳಿ ಗಳನ್ನು ಶುಚಿಗೊಳಿಸುತ್ತಿದ್ದನ್ನು ನೋಡಿದಾಗ ಅಬ್ಬಾ ಅಂತೂ ರೈಲು ಓಡಲಾರಂಭಿಸಿ ದವಲ್ಲ ಎಂದು ಎಲ್ಲಾ…
ಡ್ರಗ್ಸ್ ದಂಧೆಕೋರರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಸಹಿ ಸಂಗ್ರಹ ಅಭಿಯಾನ
September 10, 2020ಮೈಸೂರು, ಸೆ.9(ಪಿಎಂ)- ಡ್ರಗ್ಸ್ ದಂಧೆ ಕೋರರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದ ವಿವಿಧ ಭಾಗಗಳಲ್ಲಿ ಬುಧವಾರ ಸಹಿ ಸಂಗ್ರಹ ಅಭಿಯಾನ ನಡೆಯಿತು. `ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ’ ಶೀರ್ಷಿಕೆಯಡಿ ಮೈಸೂರಿನ ಸಬ್ ಅರ್ಬನ್ ಬಸ್ ನಿಲ್ದಾಣ ಆವರಣ, ಶಿವರಾಂ ಪೇಟೆಯ ವಿನೋಬಾ ರಸ್ತೆ ಸೇರಿದಂತೆ ವಿವಿಧೆಡೆ ಎಬಿವಿಪಿ ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನ ನಡೆಸಿದರು. ಸ್ಯಾಂಡಲ್ವುಡ್ನೊಂದಿಗೆ ಬೃಹತ್ ಡ್ರಗ್ಸ್ ಜಾಲದ…
ರಾಜ್ಯದ ಕೃಷಿ ಯೋಜನೆಗಳಿಗೆ ನೆರವಾಗಲು ಕೇಂದ್ರ ಕೃಷಿ ಸಚಿವರಿಗೆ ಸಚಿವ ಬಿ.ಸಿ.ಪಾಟೀಲ್ ಮನವಿ
September 10, 2020ಬೆಂಗಳೂರು, ಸೆ.10(ಕೆಎಂಶಿ)-ರಾಜ್ಯದಲ್ಲಿ ಜಲಾನಯನ ಹಾಗೂ ಸೂಕ್ಷ್ಮ ನೀರಾ ವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರನ್ನು ಭೇಟಿ ಮಾಡಿದರು. ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಬಿ.ಸಿ.ಪಾಟೀಲರು, ರಾಜ್ಯದ ಕೃಷಿ ಅಭಿವೃದ್ಧಿ ಕುರಿತು ಚರ್ಚಿಸಿ, ರೈತ ಕಲ್ಯಾಣ ನಿಧಿಯಡಿಯಲ್ಲಿ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ವೈಜ್ಞಾನಿಕ ಜಲಾನಯನ ಯೋಜನೆ…
`ಮಹಾನಾಯಕ’ ಧಾರಾವಾಹಿ ಪ್ರಸಾರಕ್ಕೆ ಕೋಮುವಾದಿ ಮನಸುಗಳಿಂದ ಅಡ್ಡಿ: ದಸಂಸ ಕಿಡಿ
September 10, 2020ಮೈಸೂರು, ಸೆ.10(ಎಂಟಿವೈ)- ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ `ಮಹಾನಾಯಕ’ ಧಾರಾವಾಹಿ ಪ್ರಸಾರ ಮಾಡದಂತೆ ಕೋಮುವಾದಿ ಮನಸ್ಥಿತಿಯವರು ಟಿವಿ ಚಾನಲ್ ಮುಖ್ಯಸ್ಥರಿಗೆ ಬೆದರಿಕೆಯೊಡ್ಡುವ ಮೂಲಕ ನೀಚ ಮನಸ್ಥಿತಿ ಪ್ರದರ್ಶಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಬುದ್ಧವಾದ) ಆಕ್ರೋಶ ವ್ಯಕ್ತಪಡಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ದಸಂಸ ರಾಜ್ಯ ಪ್ರಧಾನ ಸಂಚಾಲಕ ನಿಂಗ ರಾಜ್ ಮ¯್ಲÁಡಿ, ರಾಜ್ಯದಲ್ಲಿ ಖಾಸಗಿ ಟಿವಿಯೊಂದ ರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಜೀವನಾಧಾರಿತ ಕಥೆ ಇರುವ `ಮಹಾನಾಯಕ’ ಧಾರಾವಾಹಿ ಪ್ರಸಾರ ವಾಗುತ್ತಿದೆ….
ಅರಮನೆ ಆವರಣಕ್ಕಷ್ಟೇ ಈ ಬಾರಿ ದಸರಾ ಸೀಮಿತ
September 9, 2020ಬೆಂಗಳೂರು, ಸೆ. 8 (ಕೆಎಂಶಿ)- ಕೋವಿಡ್-19 ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಮಹೋ ತ್ಸವವನ್ನು ಈ ಬಾರಿ ಮೈಸೂರು ಅರಮನೆಗೆ ಸೀಮಿತ ಗೊಳಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯ ಕ್ಷತೆಯಲ್ಲಿ ಮಂಗಳವಾರ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿರುವುದಲ್ಲದೆ, ನಾಡದೇವತೆ ಚಾಮುಂಡೇ ಶ್ವರಿಯ ಅಗ್ರ ಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ಗಾಗಿ ಶ್ರಮಿಸುತ್ತಿರುವ ಕೊರೊನಾ ಸೇನಾನಿ ಗಳಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರಕಾರ್ಮಿಕರು ಹಾಗೂ ಪೊಲೀಸರಿಂದ ನೆರ ವೇರಿಸುವ ತೀರ್ಮಾನ…
ಮೈಸೂರು ಜಿಲ್ಲೆಯಲ್ಲಿ 3.54 ಲಕ್ಷ ವಿದ್ಯಾರ್ಥಿಗಳು ಶಾಲಾ ಪ್ರವೇಶ
September 9, 2020ಮೈಸೂರು, ಸೆ.8(ಪಿಎಂ)- ಕೊರೊನಾ ಸೋಂಕಿನ ಭೀತಿ ಹೆಚ್ಚುತ್ತಲೇ ಇರುವುದರಿಂದ ರಾಜ್ಯದಲ್ಲಿ ಶಾಲೆ ಬಾಗಿಲು ತೆರೆಯು ವುದೋ ಇಲ್ಲವೋ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ಮಧ್ಯೆಯೇ ವಿದ್ಯಾರ್ಥಿಗಳ ಶಾಲಾ ಪ್ರವೇಶ ದಾಖಲಾತಿ ಸದ್ದಿಲ್ಲದೇ ಸಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈವರೆಗೆ ಮೈಸೂರು ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಒಟ್ಟು 3.54 ಲಕ್ಷ ವಿದ್ಯಾರ್ಥಿ ಗಳು ಪ್ರವೇಶ ದಾಖಲಾತಿ ಪಡೆದುಕೊಂಡಿದ್ದಾರೆ. ಪ್ರತಿ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಪ್ರವೇಶ ದಾಖಲಾತಿ ಪ್ರಕ್ರಿಯೆ ನಡೆದು ಜೂನ್ನಲ್ಲಿ ಶಾಲೆ ಪ್ರಾರಂಭವಾಗುತ್ತಿತ್ತು. ಆದರೆ…










