ಬೆಂಗಳೂರು, ಸೆ. 2(ಕೆಎಂಶಿ)- ಅತೀವೃಷ್ಟಿ, ಪ್ರವಾಹದಿಂದ ಉಂಟಾಗಿರುವ ಬೆಳೆ, ಆಸ್ತಿ-ಪಾಸ್ತಿ ಹಾನಿಗೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು, ಕಲಬುರಗಿ ವಿಭಾಗದ ಪಕ್ಷದ ಮುಖಂಡ ರೊಂದಿಗೆ ವಿಡಿಯೋ ಸಂವಾದವನ್ನು ನಾಳೆ ನಡೆಸಲಿದ್ದಾರೆ. ಜತೆಗೆ ಆ ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೂಡ ಸಂವಾದ ನಡೆಸಿ ಮಾರ್ಗದರ್ಶನಗಳನ್ನು ಮಾಡಲಿದ್ದಾರೆ. ನಾಳೆ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ತಿಪ್ಪೇಸ್ವಾಮಿ, ವಿಡಿಯೋ ಸಂವಾದ ನಡೆಸಲಿದ್ದಾರೆ. ನಾಳೆ…
ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ
September 3, 2020ಮೈಸೂರು, ಸೆ. 2-ಜೆಎಸ್ಎಸ್ ಮಹಾವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರ ಪತಿ ಡಾ.ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಶ್ರದ್ಧಾಂ ಜಲಿ ಸಲ್ಲಿಸಲಾಯಿತು. ಕಾರ್ಯದರ್ಶಿ ಪ್ರೊ. ಎಸ್.ಪಿ. ಮಂಜುನಾಥ್ ಅಧ್ಯಕ್ಷತೆ ವಹಿಸಿ, ಸಂತಾಪ ಸೂಚಿಸಿದರು. ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಪ್ರಣಬ್ ಮುಖರ್ಜಿ ಯವರು ವಿಶಾಲ ಮನೋಭಾವದವರಾಗಿದ್ದರು. ಎಲ್ಲ ಪಕ್ಷ ಮತ್ತು ರಾಜಕಾರಣಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಾಮಾನ್ಯ ಹಂತದಿಂದ ರಾಷ್ಟ್ರಪತಿ ಹುದ್ದೆಗೆ ಏರಿದ ಅಪರೂಪದ ವ್ಯಕ್ತಿಯಾಗಿದ್ದರು. ಜೆಎಸ್ಎಸ್ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಆಗ…
ಮೈಸೂರು ಜಿಲ್ಲೆಯಲ್ಲಿ ಮಂಗಳವಾರ 737 ಜನರಿಗೆ ಕೊರೊನಾ ಸೋಂಕು
September 2, 2020ಮೈಸೂರು, ಸೆ.1(ಎಸ್ಬಿಡಿ)- ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಮಂಗಳವಾರವೂ 737 ಜನರಿಗೆ ಜಾಡ್ಯ ಅಂಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 18,686ಕ್ಕೆ ಏರಿಕೆಯಾಗಿದೆ. ಮಂಗಳವಾರ 178 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 12,931 ಸೋಂಕಿತರು ಗುಣಮುಖ ರಾದಂತಾಗಿದೆ. ಮತ್ತೆ 12 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 456ಕ್ಕೆ ಏರಿದೆ. ಇನ್ನು 5,299 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು, ಕೋವಿಡ್ ಆಸ್ಪತ್ರೆ, ಹೆಲ್ತ್ ಕೇರ್ಸ್, ಕೋವಿಡ್ ಕೇರ್ ಸೆಂಟರ್ಸ್…
ಸೋಮವಾರದ ಮಳೆಗೆ 18 ವಿದ್ಯುತ್ ಕಂಬ ಧರಾಶಾಯಿ, ಟಿಸಿಗೆ ಹಾನಿ
September 2, 2020ಮೈಸೂರು,ಸೆ.1(ಎಂಕೆ)- ಮೈಸೂರು ನಗರ ಮತ್ತು ಜಿಲ್ಲೆಯ ಹಲವೆಡೆ ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಗೆ 18 ವಿದ್ಯುತ್ ಕಂಬಗಳು ನೆಲಕ್ಕುರುಳಿದರೆ, 1 ಟ್ರಾನ್ಸ್ಫಾರ್ಮರ್ ಘಟಕ ಸುಟ್ಟು ಹೋಗಿದೆ. ನಗರದ ವಸಂತ ಮಹಲ್ ರಸ್ತೆಯಲ್ಲಿ ಟ್ರಾನ್ಸ್ಫಾರ್ಮರ್ ಘಟಕ ಶಾರ್ಟ್ಸಕ್ರ್ಯೂಟ್ನಿಂದ ಸುಟ್ಟು ಹೋಗಿದ್ದರೆ, ನಂಜನಗೂಡು ತಾಲೂಕಿನಲ್ಲಿ 18 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಗಾಳಿಯ ವೇಗ ಕಡಿಮೆ ಇದ್ದುದರಿಂದ ಮೈಸೂರು ನಗರ, ನಂಜನಗೂಡು ಹೊರತು ಬೇರೆ ತಾಲೂಕುಗಳಲ್ಲಿ ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್ಗೆ ಹಾನಿಯಾಗಿಲ್ಲ ಎಂದು ಸೆಸ್ಕ್ನ ಮೈಸೂರು…
ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ್ ಮಾಸಾಚರಣೆಗೆ ನಾಳೆ ಚಾಲನೆ
September 2, 2020ಮೈಸೂರು, ಸೆ.1(ಪಿಎಂ)- ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ `ಪೋಷಣ್ ಮಾಸ’ ಆಚರಣೆಯ ಉದ್ಘಾಟನೆ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯ ಮಟ್ಟದಲ್ಲಿ ಸೆ.3ರಂದು ಜರುಗಲಿದೆ. ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ಸೆ.1ರಿಂದ 7ರವರೆಗೆ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದಲ್ಲಿ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಕಳೆದ ವರ್ಷದಿಂದ ಸೆಪ್ಟೆಂಬರ್ನಲ್ಲಿ `ಪೋಷಣ್ ಮಾಸ’ ಆಚ ರಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು, ಯುವತಿಯರನ್ನು ಕೇಂದ್ರೀಕರಿಸಿ, ಅವರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಜಾಗೃತಿ…
ಆಶ್ರಯ ಮನೆ ಜಾಗದಲ್ಲಿ ಗುಡಿಸಲು: ಮುಡಾದಿಂದ ತೆರವು ಕಾರ್ಯಾಚರಣೆ
September 2, 2020ಮೈಸೂರು, ಸೆ.1(ಎಂಕೆ)- ಮೈಸೂರು ತಾಲೂಕಿನ ಲಲಿತಾದ್ರಿಪುರ ಗ್ರಾಮದ ವ್ಯಾಪ್ತಿಯಲ್ಲಿ ನಗರ ಆಶ್ರಯ ಮನೆಗಳ ನಿರ್ಮಾಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಸ್ವಾಧೀನಪಡಿಸಿಕೊಂಡು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಿದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 15ಕ್ಕೂ ಹೆಚ್ಚು ಸಣ್ಣ ಗುಡಿಸಲು ಮತ್ತು ಶೆಡ್ಗಳನ್ನು ಮಂಗಳವಾರ ತೆರವುಗೊಳಿಸಲಾಯಿತು. ಲಲಿತಾದ್ರಿಪುರ ಗ್ರಾಮದ ಸರ್ವೆ ನಂ 16/1, 16/2, 16/3, 17, 18/2, 18/3 ಮತ್ತು 18/4 ರಲ್ಲಿ ಒಟ್ಟು 15.19 ಎಕರೆ ಭೂಮಿಯನ್ನು ಭೂ ಸ್ವಾಧೀನಪಡಿಸಿಕೊಂಡು ನಗರ ಆಶ್ರಯ ಮನೆಗಳನ್ನು ನಿರ್ಮಿಸಲು ರಾಜೀವ್…
ರಮಾಬಾಯಿನಗರದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ
September 2, 2020ಮೈಸೂರು, ಸೆ.1 (ಆರ್ಕೆಬಿ)- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ದೇಶ ಕಂಡ ಶ್ರೇಷ್ಠ ಹಾಗೂ ಆದರ್ಶ ವ್ಯಕ್ತಿಯಾಗಿದ್ದರು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ತಿಳಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ರಮಾಬಾಯಿನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಪ್ರಣಬ್ ಮುಖರ್ಜಿ ಕೇಂದ್ರ ಸಚಿವ ರಾಗಿ ಅನೇಕ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಅನೇಕ ಜನಪರ ಕಾರ್ಯಕ್ರಮ ಗಳನ್ನು ಜಾರಿಗೆ ತಂದರು. ಅವರ…
ಕ್ಷುಲಕ ವಿಚಾರಕ್ಕೆ ಯುವಕನ ಇರಿದು ಹತ್ಯೆ
September 2, 2020ವಿಜಯನಗರ 2ನೇ ಹಂತದ ಕೃಷ್ಣದೇವರಾಯ ಸರ್ಕಲ್ನಲ್ಲಿ ಘಟನೆ ಮೈಸೂರು, ಸೆ.1(ಎಂಕೆ)- ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ವಿಜಯನಗರ 2ನೇ ಹಂತ, ಕೃಷ್ಣದೇವರಾಯ ವೃತ್ತದ ಬಳಿ ಚಿರಂತ್(19) ಎಂಬ ಯುವಕನನ್ನು ಮಂಚೇಗೌಡನಕೊಪ್ಪಲು ನಿವಾಸಿ ಮನೋಜ್(22) ಹತ್ಯೆ ಮಾಡಿದ್ದಾನೆಂದು ತಿಳಿದು ಬಂದಿದೆ ಎಂದು ವಿಜಯನಗರ ಪೊಲೀಸ್ ಠಾಣೆ ಇನ್ಸ್ಸ್ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ. ಈತ ಮಂಗಳವಾರ ರಾತ್ರಿ ಕೃಷ್ಣದೇವರಾಯ ವೃತ್ತದಲ್ಲಿ ಅಂಗಡಿಯೊಂದರ ಮುಂದೆ ಟೀ ಕುಡಿಯುತ್ತಿದ್ದಾಗ ಚಿರಂತ್…
‘ಕೊರೊನಾ’ ರಾಜ್ಯ ಸರ್ಕಾರಕ್ಕೆ ಹಣ ಮಾಡುವ ಹಬ್ಬ
September 1, 2020ಮೈಸೂರು, ಆ.31(ಪಿಎಂ)-ರಾಜ್ಯ ಬಿಜೆಪಿ ಸರ್ಕಾ ರಕ್ಕೆ `ಕೊರೊನಾ’ ಹಣ ಮಾಡುವ ಹಬ್ಬದಂತಾಗಿದೆ. ಇದು ಸುಖಾಸುಮ್ಮನೆ ಮಾಡುತ್ತಿರುವ ಆರೋಪ ವಲ್ಲ. ಈ ಸಂಬಂಧ ಕಾಂಗ್ರೆಸ್ ಬಳಿ ದಾಖಲೆಗಳಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆ ಅನಾಥವಾಗಿದ್ದು, ಇಲ್ಲಿ ಕೊರೊನಾ ಮಿತಿ ಮೀರುತ್ತಿ ದ್ದರೂ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೆಂಗಳೂರು ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಂಬಂಧ ವೈದ್ಯಕೀಯ…
ದಸರಾ, ಪಂಚಲಿಂಗ ದರ್ಶನ ನಡೆಸುವಂತೆ ವಿದ್ಯುತ್ ದೀಪಾಲಂಕಾರ, ಧ್ವನಿವರ್ಧಕ ಸಂಸ್ಥೆ ಮಾಲೀಕರ ಒತ್ತಾಯ
September 1, 2020ಮೈಸೂರು, ಆ.31(ಎಂಟಿವೈ)- ಲಾಕ್ ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿ ವರ್ಧಕ ಮಾಲೀಕರಿಗೆ ಸರ್ಕಾರ ಆರ್ಥಿಕ ನೆರವು ನೀಡುವುದರೊಂದಿಗೆ ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡು ಪಂಚಲಿಂಗ ದರ್ಶನದ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಒತ್ತಾ ಯಿಸಿ ಮೈಸೂರು ನಗರ ಮತ್ತು ಜಿಲ್ಲಾ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿ ವರ್ಧಕ ಸಂಸ್ಥೆಗಳ ಮಾಲೀಕರ ಸಂಘದ ಸದಸ್ಯರು ಪ್ರತಿಭಟಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಿಂದ…