ಬೆಂಗಳೂರು, ಜು.16(ಕೆಎಂಶಿ)- ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವುದರ ಹಿಂದೆ ಭಾರೀ ಷಡ್ಯಂತ್ರ ಅಡಗಿದೆ. ಇದು ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತ ನಾಡಿದ ಅವರು, ಸರ್ಕಾರದ ಈ ನಿರ್ಧಾರ ವಿರೋಧಿಸಿ ಕಾಂಗ್ರೆಸ್ ಪಕ್ಷ ಬೃಹತ್ ಹೋರಾಟ ನಡೆಸಲಿದೆ. ಹಳ್ಳಿ ಮಟ್ಟದಿಂದ ಹೋರಾಟವನ್ನು ಸಂಘಟಿಸಲಾಗುವುದು. ಈ ಕುರಿತು ಬೇರೆ ಬೇರೆ ಪಕ್ಷಗಳು ಹಾಗೂ ರೈತ…
ಕೊರೊನಾದಿಂದ ಜನರ ರಕ್ಷಣೆ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ
July 17, 2020ಸಚಿವ ಶ್ರೀರಾಮುಲು ಅವರ ಕೊರೊನಾದಿಂದ ಜನರ ದೇವರೇ ಕಾಪಾಡಲಿ ಹೇಳಿಕೆಗೆ ಡಿಕೆಶಿ ತೀಕ್ಷ್ಣ ಪ್ರತಿಕ್ರಿಯೆ ಬೆಂಗಳೂರು, ಜು.16(ಕೆಎಂಶಿ)- ಕೊರೊನಾ ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾ ರಕ್ಕೆ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ನಿನ್ನೆ ಕೊರೊನಾ ವಿಚಾರದಲ್ಲಿ ಜನರನ್ನು ದೇವರೇ ಕಾಪಾಡಬೇಕು ಎಂದು ನೀಡಿದ ಹೇಳಿಕೆಗೆ ಗುರುವಾರ ಡಿ.ಕೆ.ಶಿವಕುಮಾರ್ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣ…
ಬೋಧಕ, ಬೋಧಕೇತರ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಿ ಸರ್ಕಾರದ ಸುತ್ತೋಲೆ
July 17, 2020ಮೈಸೂರು, ಜು.16(ವೈಡಿಎಸ್)- ಕೋವಿಡ್-19 ಸೋಂಕು ಹೆಚ್ಚುತ್ತಲೇ ಇರುವುದರಿಂದ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಮನೆಯಿಂ ದಲೇ ಕೆಲಸ ನಿರ್ವಹಿಸುವಂತೆ ರಾಜ್ಯ ಸರ್ಕಾರ ಗುರುವಾರ ಸುತ್ತೋಲೆ ಹೊರ ಡಿಸಿದೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಅಧೀನದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಕೋವಿಡ್-19 ಸೋಂಕು ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.31 ರವರೆಗೆ ಮನೆಯಿಂದಲೇ ಕೆಲಸ ನಿರ್ವ ಹಿಸುವಂತೆ ಹೊರಡಿಸಿದ ಉಲ್ಲೇಖ(1)ರ…
ಎನ್.ಆರ್.ಕ್ಷೇತ್ರದಲ್ಲಿ 3 ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ಧತೆ
July 17, 2020ಮೈಸೂರು, ಜು. 16(ಆರ್ಕೆ)- ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಸಾವಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತವು ನಿಯಂತ್ರಣಕ್ಕೆ ಹೆಣಗಾಡುತ್ತಿರುವುದನ್ನು ಮನಗಂಡ ಮುಸ್ಲಿಂ ಬಾಂಧ ವರು ಮೈಸೂರಿನ ಎನ್.ಆರ್. ವಿಧಾನಸಭಾ ಕ್ಷೇತ್ರ ದಲ್ಲಿ ಮೂರು ಕೋವಿಡ್ ಕೇರ್ ಕೇಂದ್ರ ತೆರೆಯಲು ಮುಂದಾಗಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಒಂದು ವಾರದ ಮಟ್ಟಿಗೆ ಎನ್. ಆರ್. ಕ್ಷೇತ್ರದ ಕೆಲ ಭಾಗ ಗಳನ್ನು ಮಿನಿ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಅಯೂಬ್ ಖಾನ್, ಪಾಲಿಕೆ ವಕ್ರ್ಸ್ ಕಮಿಟಿ ಅಧ್ಯಕ್ಷ…
ಅನಧಿಕೃತವಾಗಿ ರೈಲ್ವೆ ಟಿಕೆಟ್ ಮಾರುತ್ತಿದ್ದ ವ್ಯಕ್ತಿ ಸೆರೆ
July 17, 2020ಮೈಸೂರು, ಜು.16(ಆರ್ಕೆ)- ಐಆರ್ಟಿಸಿ ವೆಬ್ಸೈಟ್ನಲ್ಲಿ ರೈಲ್ವೆ ಟಿಕೆಟ್ಗಳನ್ನು ಬುಕ್ ಮಾಡಿ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲೆತ್ನಿಸುತ್ತಿದ್ದ ವ್ಯಕ್ತಿಯನ್ನು ಆರ್ಪಿಎಫ್ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ, ಕಡೂರಿನ ಪುಟ್ಟಸ್ವಾಮಿ ಎಂಬಾತನೇ ಅನಧಿಕೃತವಾಗಿ ರೈಲ್ವೆ ಟಿಕೆಟ್ ಮಾರಾಟ ಮಾಡಿ ಸಿಕ್ಕಿಬಿದ್ದವನಾಗಿದ್ದು, ಆತನಿಂದ 17,054 ರೂ. ಮೌಲ್ಯದ ರೈಲ್ವೆ ಇ-ಟಿಕೆಟ್ಗಳು ಹಾಗೂ ಒಂದು ಮೊಬೈಲ್ ಫೋನ್ ಅನ್ನು ಬೀರೂರು ವ್ಯಾಪ್ತಿಯ ಆರ್ಪಿಎಫ್ ಔಟ್ಪೋಸ್ಟ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೊರೊನಾ ವೈರಸ್ನಿಂದಾಗಿ ರೈಲ್ವೆ ಸ್ಟೇಷನ್ ಕೌಂಟರ್ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ಕೊಡುವುದನ್ನು ಸ್ಥಗಿತಗೊಳಿಸಿ ಆನ್ಲೈನ್…
ಲಯನ್ಸ್ ಕ್ಲಬ್ ಆಫ್ ಮೈಸೂರು ಕ್ಲಾಸಿಕ್ ನೂತನ ತಂಡದ ಪದಗ್ರಹಣ
July 17, 2020ಮೈಸೂರು, ಜು.16- ಅಂತರ ರಾಷ್ಟ್ರೀಯ ಲಯನ್ಸ್ ಕ್ಲಬ್ಗಳ ಒಕ್ಕೂಟ, ಜಿಲ್ಲೆ 317ಎ ಇದರ ಲಯನ್ಸ್ ಕ್ಲಬ್ ಆಫ್ ಮೈಸೂರು ಕ್ಲಾಸಿಕ್ ನೂತನ ಪದಾ ಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಲಯನ್ ಡಾ. ನಾಗರಾಜ್ ವಿ.ಬೈರಿ, ಪಿಎಂಜೆಎಫ್ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಇತ್ತೀಚೆಗೆ ನಗರದ ಖಾಸಗಿ ಹೊಟೇಲ್ನಲ್ಲಿ ಉದ್ಘಾಟಿಸಿದರು. ಅಧ್ಯಕ್ಷರಾಗಿ ಲಯನ್ ಕೆ.ಶಿವಪ್ಪ, ಕಾರ್ಯದರ್ಶಿಯಾಗಿ ಲಯನ್ ಮಂಜು ನಾಥ್, ಖಜಾಂಚಿಯಾಗಿ ಲಯನ್ ಸಿ.ಕೃಷ್ಣ ನೇಮಕಗೊಂಡರು. ಕ್ಲಬ್ನ 16 ನೂತನ ಸÀದಸ್ಯರನ್ನು ಲಯನ್ ಎನ್. ಜಯರಾಮು, ಎಂಜೆಎಫ್, ಜಿಲ್ಲಾ ರಾಯ ಭಾರಿ…
ಮದ್ಯ ಮಳಿಗೆ ಆರಂಭದ ವಿರುದ್ಧ ಟಿ.ಕೆ.ಲೇಔಟ್ ನಿವಾಸಿಗಳ ಪ್ರತಿಭಟನೆ
July 17, 2020ಮೈಸೂರು, ಜು.16(ಎಂಟಿವೈ)- ಜನ ವಸತಿ ಪ್ರದೇಶದಲ್ಲಿ ಮದ್ಯದಂಗಡಿ ಆರಂ ಭಿಸದಂತೆ ಮೈಸೂರಿನ ತೊಣಚಿಕೊಪ್ಪಲು ಬಡಾವಣೆ ನಿವಾಸಿಗಳು ಪಾಲಿಕೆ ಸದಸ್ಯ ಜೆ.ಗೋಪಿ ಅವರ ನೇತೃತ್ವದಲ್ಲಿ ಗುರು ವಾರ ಪ್ರತಿಭಟನೆ ನಡೆಸಿದರು. ಬಡಾವಣೆಯ ಮುಖ್ಯರಸ್ತೆಯಲ್ಲಿನ ಕಟ್ಟಡ ವೊಂದರಲ್ಲಿ ಹೊಸದಾಗಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯಲಾಗುತ್ತಿದ್ದು, ಸ್ಥಳ ಪರಿಶೀಲನೆಗೆ ಅಬಕಾರಿ ಇಲಾಖೆ ಅಧಿಕಾರಿ ಗಳು ಬಂದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಸ್ಥಳ ಪರಿಶೀಲನೆ ತಡೆಯಲೆತ್ನಿಸಿದರು. ಜನ ವಸತಿ ಪ್ರದೇಶದಲ್ಲಿ ಯಾವುದೇ ಕಾರ ಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು…
ಮೈಸೂರಲ್ಲಿ ಕೊರೊನಾ ಗೆದ್ದ ಮೂವರಿಂದ ಪ್ಲಾಸ್ಮಾ ಕೊಡುಗೆ
July 17, 2020ಕೆ.ಆರ್. ಆಸ್ಪತ್ರೆ ರಕ್ತನಿಧಿ ಅಧಿಕಾರಿ ಡಾ.ಮಂಜುನಾಥ್ ಮೈಸೂರು, ಜು.16(ಆರ್ಕೆ)- ಮೈಸೂರಲ್ಲಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆದು, ಸಂಪೂರ್ಣ ಗುಣಮುಖರಾದ ಮೂವರು ಯುವಕರಿಂದ ಪ್ಲಾಸ್ಮಾ ಪಡೆಯ ಲಾಗಿದೆ ಎಂದು ಕೆ.ಆರ್.ಆಸ್ಪತ್ರೆ ರಕ್ತನಿಧಿ ಅಧಿಕಾರಿ ಡಾ.ಮಂಜುನಾಥ ತಿಳಿಸಿದ್ದಾರೆ. ಗಂಟಲು ದ್ರವ ತೆಗೆದು ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಬಂದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಪುನರಾವರ್ತಿತ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ 4 ವಾರ ಮನೆಯಲ್ಲಿ ಪ್ರತ್ಯೇಕವಾಗಿದ್ದವರ ಪೈಕಿ ಮೂವರು ಪ್ಲಾಸ್ಮಾ…
ಕಡೇ ಆಷಾಢ ಶುಕ್ರವಾರ: ಇಂದು ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ
July 17, 2020ಮೈಸೂರು, ಜು.16- ಕೋವಿಡ್-19 ಹರಡುವುದನ್ನು ತಡೆಗಟ್ಟುವ ಹಿನ್ನೆಲೆ ಜು.20ರಂದು ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಆಷಾಢ ಶುಕ್ರವಾರ, ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಸಾರ್ವಜನಿಕರಿಗೆ ಹೇರಲಾಗಿದ್ದ ದೇವರದರ್ಶನ ನಿರ್ಬಂಧವು ಮುಂದುವರಿಯು ವುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಪ್ರವೇಶ ನಿಷೇಧವಿರುವ ದಿನಗಳಂದು ಗ್ರಾಮಸ್ಥರ ವಾಹನ ಹಾಗೂ ತುರ್ತು ಸೇವಾ ವಾಹನ ಹೊರತುಪಡಿಸಿ, ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳ ಸಂಚಾರನಿಷೇಧಿಸಲಾಗಿದೆ. ಅಲ್ಲದೆ ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ…
ಸಿದ್ಧಾರ್ಥನಗರ, ಕೆಸಿ ನಗರ, ಜೆಸಿ ನಗರ ‘ಬಿ ಖರಾಬು’ ಮುಕ್ತ
July 16, 2020ಮೈಸೂರು, ಜು. 15- ಕಳೆದ ಐದೂ ವರೆ ವರ್ಷಗಳಿಂದ ವನವಾಸ ಅನುಭವಿಸು ತ್ತಿದ್ದ ಮೈಸೂರಿನ ಕುರುಬಾರಹಳ್ಳಿ ಸರ್ವೆ ನಂ. 4 ಮತ್ತು ಆಲನಹಳ್ಳಿ ಸರ್ವೆ ನಂ. 41ರಲ್ಲಿ ಸಿಐಟಿಬಿ ಮತ್ತು ಮುಡಾದಿಂದ ನಿರ್ಮಾಣ ಗೊಂಡ ಸಿದ್ಧಾರ್ಥನಗರ, ಕೆಸಿ, ಜೆಸಿ ಬಡಾ ವಣೆಗಳನ್ನು ‘ಬಿ ಖರಾಬು’ ಮುಕ್ತಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿ ಸಿದೆ. ಇದರಿಂದ ಈ ಬಡಾವಣೆಗಳ ಸುಮಾರು 25 ಸಾವಿರಕ್ಕೂ ಅಧಿಕ ನಿವಾಸಿ ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಬುಧವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್,…










