ಮೈಸೂರು,ಮಾ.2(ಎಂಟಿವೈ)- ಸೈಬರ್ ಅಪರಾಧ ಜಾಗತಿಕ ಸಮಸ್ಯೆಯಾಗಿ ಉಲ್ಬಣಿ ಸಿದ್ದು, ಅಹಿಂಸೆ, ಅಶ್ಲೀಲತೆ, ಆನ್ಲೈನ್ ವಂಚನೆ ಮೂಲಕ ವಿಶ್ವದ ಬಹುತೇಕ ರಾಷ್ಟ್ರ ಗಳ ಜನರನ್ನು ಕಾಡುತ್ತಿದೆ ಎಂದು ಶಿವಮೊಗ್ಗ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪೆÇ್ರ. ಪಿ.ವೆಂಕಟರಾಮಯ್ಯ ವಿಷಾದಿಸಿದರು. ಮೈಸೂರು ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸೋಮವಾರ ಮೈಸೂರು ವಿವಿ ಸ್ಕೂಲ್ ಆಫ್ ಲಾ ಆಯೋ ಜಿಸಿದ್ದ `ವಿಶ್ವಸಂಸ್ಥೆ ಮಾದರಿ ಸಮ್ಮೇಳನ ಸಮಾರಂಭ ಹಾಗೂ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಮೇಲೆ ಸೈಬರ್ ಕ್ರೈಂ ಪ್ರಭಾವ’ ಕುರಿತ ಒಂದು ದಿನದ…
ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಂಟಾಗದಿರಲು ಮುಂಜಾಗ್ರತೆಗೆ ಡಿಸಿ ಸೂಚನೆ
March 3, 2020ಮೈಸೂರು, ಮಾ.2- ಬೇಸಿಗೆ ಕಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ದ್ಯಂತ ಸಾರ್ವಜನಿಕರಿಗೆ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಅನು ಸರಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿ ಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಜಿಲ್ಲಾಧಿಕಾರಿಗಳು, ನೀರಿನ ಅಭಾವ ಕಂಡು ಬರುವ ಮುನ್ಸೂಚನೆ ಇರುವ ಪ್ರದೇಶಗಳನ್ನು ಗುರುತಿಸಿ ಕೂಡಲೇ ಸ್ಪಂದಿಸಲು ಮುಂದಾಗಿ ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಕಳೆದ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು,…
ಆರ್ಥಿಕ ಗಣತಿಯಲ್ಲಿ ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ
March 3, 2020ಮೈಸೂರು,ಮಾ.2(ಆರ್ಕೆ)-ಮೈಸೂರು ಜಿಲ್ಲೆಯಲ್ಲಿ ಆರಂಭ ವಾಗಿರುವ ಆರ್ಥಿಕ ಗಣತಿ ಕಾರ್ಯದಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರಿನ ಡಿಸಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, 2011ರ ಜನಗಣತಿ ಪ್ರಕಾರ ಮೈಸೂರು ಜಿಲ್ಲೆಯಲ್ಲಿ 7 ಲಕ್ಷ ಕುಟುಂಬಗಳಿದ್ದು, ಈವರೆಗೆ 27,000 ಕುಟುಂಬಗಳ ಗಣತಿ ಮಾಡ ಲಾಗಿದೆ. ಅದಕ್ಕಾಗಿ ನೇಮಕಗೊಂಡಿರುವ 468 ಗಣತಿದಾರರ ಪೈಕಿ ಕೇವಲ 84 ಮಂದಿ ಮಾತ್ರ ಕ್ರಿಯಾಶೀಲರಾಗಿದ್ದಾರೆ ಎಂದರು. ಮೊದಲ ಹಂತದಲ್ಲಿ 350 ಮೇಲ್ವಿಚಾರಕರನ್ನು ನೇಮಕ ಮಾಡ ಬೇಕಾಗಿದ್ದು, ಅದರಲ್ಲಿ 29…
ಮೈಸೂರಲ್ಲಿ ಶಾಂತಿ-ಸೌಹಾರ್ದತೆಗಾಗಿ ಸಂವಿಧಾನ ರಕ್ಷಣಾ ಸಮಿತಿಯಿಂದ ಮೌನ ಮೆರವಣಿಗೆ
March 3, 2020ಮೈಸೂರು, ಮಾ.2(ಎಸ್ಬಿಡಿ)- ದೆಹಲಿಯಲ್ಲಿ ನಡೆದ ಹಿಂಸಾಚಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಮೈಸೂರಿನಲ್ಲಿ ಸೋಮವಾರ ಶಾಂತಿ- ಸೌಹಾರ್ದತೆಗಾಗಿ ಮೌನ ಮೆರವಣಿಗೆ ನಡೆಸಲಾಯಿತು. ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿಯಿಂದ ಆರಂಭಗೊಂಡ ಮೆರವಣಿಗೆ ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ, ಸಯ್ಯಾಜಿರಾವ್ ರಸ್ತೆ, ಸಂತೆಪೇಟೆ ರಸ್ತೆ, ಚಿಕ್ಕ ಗಡಿಯಾರ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ಇರ್ವಿನ್ ರಸ್ತೆ, ಅಶೋಕ ರಸ್ತೆ ಮೂಲಕ ಸಾಗಿ ಮಹಾತ್ಮ…
ಮಹಾರಾಜ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
March 3, 2020ಮೈಸೂರು, ಮಾ.2(ಎಸ್ಬಿಡಿ)-ಮೈಸೂರಿನ ಮಹಾರಾಜ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳು ಮೂಲ ಸೌಕರ್ಯಕ್ಕೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತ- ಅಗ್ನಿಶಾಮಕ ಠಾಣೆ ರಸ್ತೆಯಲ್ಲಿರುವ ಹಾಸ್ಟೆಲ್ ಆವರಣದಲ್ಲಿ ಜಮಾವಣೆಗೊಂಡ ವಿದ್ಯಾರ್ಥಿಗಳು ಶೌಚಾಲಯ, ಸ್ನಾನದ ಕೊಠಡಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇನ್ನಿತರ ಮೂಲ ಸೌಕರ್ಯವನ್ನು ಸಮರ್ಪಕ ವಾಗಿ ಕಲ್ಪಿಸುವಂತೆ ಆಗ್ರಹಿಸಿದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬೆರಳೆಣಿಕೆಯಷ್ಟು ಶೌಚಾಲಯ ಹಾಗೂ ಸ್ನಾನದ ಕೊಠಡಿಗಳಿವೆ. ಅದರಲ್ಲೂ ಕೆಲವು ಕೊಠಡಿಗಳ ಬಾಗಿಲು ಮುರಿದು ಬಿದ್ದಿವೆ, ನಲ್ಲಿಗಳೂ ಇಲ್ಲ. ಕುಡಿಯಲು ಶುದ್ಧ ನೀರಿಲ್ಲ….
ಹಾರ್ಡಿಂಜ್ ವೃತ್ತದಲ್ಲಿ ಮತ್ತೆ ಸಿಟಿ ಬಸ್ ನಿಲುಗಡೆಗೆ ಅವಕಾಶ
March 3, 2020ಮೈಸೂರು, ಮಾ.2(ಎಸ್ಬಿಡಿ)- ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತ(ಹಾರ್ಡಿಂಜ್ ಸರ್ಕಲ್)ದಲ್ಲಿ ಸಿಟಿ ಬಸ್ ನಿಲುಗಡೆಗೆ ವಿಧಿಸಲಾಗಿದ್ದ ನಿರ್ಬಂಧ ತೆರವಾಗಿದ್ದು, ಸೋಮವಾರ ಸಂಜೆಯಿಂದ ಯಥಾಸ್ಥಿತಿ ಮುಂದುವರೆದಿದೆ. ವಿವಿಧ ಮಾರ್ಗಗಳಿಂದ ಬಸವೇಶ್ವರ ವೃತ್ತ(ಪಾಠಶಾಲೆ ಸಿಗ್ನಲ್), ಬಿಎನ್ ರಸ್ತೆ ಮೂಲಕ ಸಿಟಿ ಬಸ್ ನಿಲ್ದಾಣಕ್ಕೆ ಸಾಗುತ್ತಿದ್ದ ಬಸ್ಗಳು ಹಾರ್ಡಿಂಜ್ ವೃತ್ತದ ಬಳಿ ನಿಲುಗಡೆ ನೀಡುತ್ತವೆ. ಆದರೆ ಇದರಿಂದ ವಾಹನ ಸಂಚಾರ ಅಡ್ಡಿ ಹಾಗೂ ಪಾದಚಾರಿ ಗಳಿಗೆ ರಸ್ತೆ ದಾಟುವುದಕ್ಕೆ ಅಡ್ಡಿಯಾಗುವುದಲ್ಲದೆ, ಅಪಘಾತಕ್ಕೂ ಆಸ್ಪದವಾಗುತ್ತಿದೆ ಎಂಬ ಕಾರಣದಿಂದ ಕಳೆದ ಶನಿವಾರದಿಂದ ಬಸ್ ನಿಲುಗಡೆಯನ್ನು ನಿರ್ಬಂಧಿಸಿದ್ದರು….
ಪ್ಯಾನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ಗೆ ಮಾರ್ಚ್ 31 ಡೆಡ್ಲೈನ್: ತಪ್ಪಿದರೆ 10 ಸಾವಿರ ರೂ. ದಂಡ..!
March 3, 2020ಹೊಸದಿಲ್ಲಿ, ಮಾ.2- ಮಾರ್ಚ್ 31ರ ಗಡುವಿನೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜತೆ ಜೋಡಣೆ ಮಾಡದೇ ಹೋದರೆ, ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಒಂದು ವೇಳೆ ನೀವು ನಿಷ್ಕ್ರಿಯ ಕಾರ್ಡ್ ಅನ್ನೇ ಬಳಸಿದರೆ 10,000 ರೂ. ದಂಡ ತೆರಬೇಕಾಗುತ್ತದೆ. ಪ್ಯಾನ್-ಆಧಾರ್ ಜೋಡಣೆ ಸಂಬಂಧ ಗಡುವುಗಳನ್ನು ವಿಸ್ತರಿಸುತ್ತಲೇ ಬಂದಿರುವ ಆದಾಯ ತೆರಿಗೆ ಇಲಾಖೆ, ಈಗ ದಂಡ ವಿಧಿಸುವುದಾಗಿ ಎಚ್ಚರಿಸಿದೆ. ಮಾರ್ಚ್ 31ರೊಳಗೆ ಜೋಡಣೆ ಮಾಡದೇ ಹೋದರೆ, ನಿಮ್ಮ ಪ್ಯಾನ್ ಕಾರ್ಡ್ ಏಪ್ರಿಲ್ 1ರಿಂದ ನಿಷ್ಕ್ರಿಯವಾಗುತ್ತದೆ. ನಿಷ್ಕ್ರಿಯ ಪ್ಯಾನ್ ಅನ್ನೇ…
ವಿಧಾನಸಭೆಯಲ್ಲಿ ಧರಣಿ, ಗದ್ದಲದ ಮಧ್ಯೆ ವಿಧೇಯಕಗಳ ಮಂಡನೆ, ವಂದನಾ ನಿರ್ಣಯ ಅಂಗೀಕಾರ
March 3, 2020ಬೆಂಗಳೂರು, ಮಾ.2- ಹಿರಿಯ ಹೋರಾಟಗಾರ ದೊರೆಸ್ವಾಮಿ ವಿರುದ್ಧದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರದಲ್ಲಿ ನಡೆಯುತ್ತಿದ್ದ ಧರಣಿ ನಡುವೆಯೇ ಹಲವು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬಳಿಕ ಗದ್ದಲದ ನಡುವೆ ಸ್ಪೀಕರ್ ಎಂಟು ವಿಧೇಯಕಗಳ ಮಂಡನೆಗೆ ಅನುಮತಿ ನೀಡಿದ್ದು, ಗದ್ದಲದ ಮಧ್ಯೆಯೇ ಎಂಟು ವಿಧೇಯಕಗಳನ್ನು ಮಂಡಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಂಡರು. ಬಳಿಕ ಮುಖ್ಯಮಂತ್ರಿ ಅವರು 2020ನೇ ಸಾಲಿನ ಕರ್ನಾಟಕ ಪೌರ ಸೇವೆಗಳ…
24 ವರ್ಷದ ಬೆಂಗಳೂರು ಟೆಕ್ಕಿಗೆ ಕೊರೋನಾ ವೈರಸ್
March 3, 2020-ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದ ಟೆಕ್ಕಿ -ಸಹ ಪ್ರಯಾಣಿಕರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ ಹೈದರಾಬಾದ್, ಮಾ.2- ತೆಲಂಗಾಣದ ಇಬ್ಬರಲ್ಲಿ ಬೆಂಗಳೂರು ಮೂಲದ ಟೆಕ್ಕಿ ಕೊರೋನಾ ವೈರಸ್ಗೆ ತುತ್ತಾಗಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಟೆಕ್ಕಿಗೆ ಕೊರೋನಾ ವೈರಸ್ಗೆ ಒಳಗಾಗಿರೋದು ದೃಢಪಟ್ಟಿದೆ. ಕೊರೋನಾ ವೈರಸ್ ಗೆ ತುತ್ತಾಗಿರುವ ಟೆಕ್ಕಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವರು ಖಚಿತಪಡಿಸಿದ್ದಾರೆ. ಕೊರೋನಾ ಸೋಂಕಿತ ಟೆಕ್ಕಿ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹೈದರಾಬಾದ್ಗೆ…
ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳಲು ಪ್ರಧಾನಿ ಮೋದಿ ಚಿಂತನೆ
March 3, 2020ದ್ವೇಷವನ್ನು ಬಿಡಿ, ಜಾಲತಾಣಗಳನ್ನಲ್ಲ ಎಂದ ರಾಹುಲ್ ನವದೆಹಲಿ, ಮಾ.2- ಸಾಮಾಜಿಕ ಜಾಲತಾಣಗಳನ್ನು ಬಿಟ್ಟುಬಿಡಲು ಯೋಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಚ್ಚರಿಯ ವಿಷಯವನ್ನು ತಿಳಿಸಿದ್ದಾರೆ. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಪ್ರಧಾನಿ ನರೇಂದ್ರ ಮೋದಿ, ಇದ್ದಕ್ಕಿದ್ದಂತೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೇವಲ ಎರಡು ಸಾಲುಗಳನ್ನು ಬರೆಯುವ ಮೂಲಕ ಈ ವಿಚಾರವನ್ನು ತಮ್ಮ ಅಭಿಮಾನಿಗಳು ಹಾಗೂ ಹಿಂಬಾಲಕರೊಂದಿಗೆ ಮೋದಿ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲಿ 6 ಸಾವಿರಕ್ಕೂ…










