ಮೈಸೂರು, ಜ.22(ಎಂಕೆ)- ಕಾಂಗ್ರೆಸ್ ಸರ್ಕಾ ರದ ಆಡಳಿತಾವಧಿಯಲ್ಲಿ ನಿರ್ಮಿಸಿರುವ ಜಿಲ್ಲಾಸ್ಪತ್ರೆಗೆ ಈಗಿನ ಬಿಜೆಪಿ ಸರ್ಕಾರ ಯಾವುದೇ ಮೂಲಭೂತ ಸೌಕರ್ಯ ಕಲ್ಪಿಸದೆ ಉದ್ಘಾಟನೆಗೆ ಮುಂದಾಗಿರುವುದು ಸರಿಯಲ್ಲ. ಮೂಲಭೂತ ಸೌಕರ್ಯ ಕಲ್ಪಿಸುವವ ರೆಗೂ ಉದ್ಘಾಟನಾ ಕಾರ್ಯಕ್ರಮ ಮುಂದೂಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೆಆರ್ಎಸ್ ರಸ್ತೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2016-17ನೇ ಸಾಲಿನ ಆಯವ್ಯಯದಲ್ಲಿ 64 ಕೋಟಿ ರೂ. ವೆಚ್ಚದಲ್ಲಿ 5 ಅಂತಸ್ತಿನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಕಟ್ಟಿಸಿದ್ದು. ಅಲ್ಲದೆ…
ಅತ್ಯಾಚಾರಿಗಳ ಗಲ್ಲು ಶಿಕ್ಷೆ ಜಾರಿಗೆ ಕಾಲಮಿತಿ ವಿಧಿಸಿ: `ಸುಪ್ರೀಂ’ಗೆ ಕೇಂದ್ರ ಮನವಿ
January 23, 2020ನವದೆಹಲಿ, ಜ.22- ನಿರ್ಭಯಾ ಪ್ರಕರಣ ಹಿನ್ನೆಲೆಯಲ್ಲಿ, ಅತ್ಯಾಚಾರಿಗಳ ಮರಣದಂಡನೆ ಜಾರಿಗೆ ಕಾಲಮಿತಿ ವಿಧಿಸುವಂತೆ ಹಾಗೂ 2014ರ ಜನವರಿಯ ತೀರ್ಪಿನಲ್ಲಿ ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ. ಅತ್ಯಾಚಾರ ಪ್ರಕರಣ ಸಂಬಂಧ ಮರು ಪರಿಶೀಲನಾ ಮತ್ತು ಕ್ಷಮಾದಾನ ಅರ್ಜಿಗಳ ಸಲ್ಲಿಕೆ ಕುರಿತು ಮಾರ್ಗಸೂಚಿಗಳನ್ನು ರಚಿಸುವಂತೆ ಸರ್ಕಾರ ಮನವಿ ಮಾಡಿದೆ. ಮೇಲ್ಮನವಿಗಳನ್ನು ತಿರಸ್ಕರಿಸಿದ ನಂತರ ಮರಣದಂಡನೆ ಶಿಕ್ಷೆಗೊಳಗಾಗುವ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಮಯದ ಮಿತಿಯನ್ನು ನಿಗದಿಪಡಿಸಬೇಕು ಎಂದು ಗೃಹ ಸಚಿವಾಲಯ ಕೋರಿದೆ. ಡೆತ್ ವಾರಂಟ್ ಜಾರಿಗೊಳಿಸಿದ 7…
ಹೆಚ್ಟಿ, ಇಹೆಚ್ಟಿ ಕೈಗಾರಿಕಾ ಗ್ರಾಹಕರಿಗೆ ವಿಶೇಷ ಪ್ರೋತ್ಸಾಹ
January 23, 2020ಮೈಸೂರು, ಜ. 22(ಆರ್ಕೆ)- ಕರ್ನಾ ಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಜಾರಿಗೆ ತಂದಿರುವ ವಿಶೇಷ ಪ್ರೋತ್ಸಾಹ ಯೋಜನೆ(Special Incentive Scheme to EHT/HT Industrial Consumers)ಗೆ ಕೈಗಾರಿಕೋದ್ಯಮಿ ಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್(ಸೆಸ್ಕ್)ನಿಂದ ಮೈಸೂ ರಿನ ವಿಜಯನಗರ 1ನೇ ಹಂತದಲ್ಲಿರುವ ನಿಗಮದ ಕಾರ್ಪೊರೇಟ್ ಕಚೇರಿ ಸಭಾಂ ಗಣದಲ್ಲಿ ಇಂದು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮೈಸೂರು, ಚಾಮರಾಜ ನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಕೈಗಾರಿಕೋದ್ಯಮಿಗಳು, ಕೈಗಾರಿಕಾ ಸಂಘಗಳ…
ಕಲುಷಿತ ನೀರು ಸೇವನೆ: ಮತ್ತೆ 7 ಜನ ಅಸ್ವಸ್ಥ, ಕಡಕೊಳಕ್ಕೆ ಅಧಿಕಾರಿಗಳ ದಂಡು
January 23, 2020ಕಡಕೊಳ, ಜ.22-ಮೈಸೂರು ತಾಲೂಕಿನ ಕಡಕೊಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮತ್ತೆ 7 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕಳೆದ ಐದಾರು ದಿನಗಳಿಂದ ಈವರೆಗೆ ಅಸ್ವಸ್ಥಗೊಂಡವರ ಸಂಖ್ಯೆ 127ಕ್ಕೆ ಏರಿಕೆಯಾಗಿದೆ. ಅಧಿಕಾರಿಗಳ ದಂಡೇ ಗ್ರಾಮಕ್ಕೆ ಆಗಮಿಸಿ, ಪರಿಸ್ಥಿತಿ ಹತೋಟಿಗೆ ಕ್ರಮ ಕೈಗೊಂಡಿದೆ. ಗ್ರಾಮದ ಜನತಾ ಕಾಲೋನಿಯಲ್ಲಿ ಕಲುಷಿತ ನೀರು ಸೇವನೆಯಿಂದ ಐದಾರು ದಿನಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ 120 ಮಂದಿ ಚೇತರಿಸಿಕೊಳ್ಳುವಷ್ಟರಲ್ಲೇ ಬುಧವಾರ ಮತ್ತೆ 7 ಮಂದಿಗೆ ವಾಂತಿ-ಭೇದಿ ಕಾಣಿಸಿ ಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….
ಮೈಸೂರಲ್ಲಿ ಆರ್ಥಿಕ ಗಣತಿಗೆ ಚಾಲನೆ
January 23, 2020ಮೈಸೂರು,ಜ.22(ಎಂಟಿವೈ)- ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನು ಷ್ಟಾನ ಮಂತ್ರಾಲಯವು ದೇಶದಾದ್ಯಂತ ನಡೆಸುತ್ತಿರುವ 7ನೇ ಆರ್ಥಿಕ ಗಣತಿಯು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಆರಂಭ ವಾಗಿದ್ದು, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಬುಧವಾರ ಆರ್ಥಿಕ ಗಣತಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದರು. ಮೈಸೂರು ಮಹಾನಗರಪಾಲಿಕೆ ಕಚೇರಿ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ನಗರದಲ್ಲಿ ರುವ ಸಂಘಟಿತ ಹಾಗೂ ಅಸಂಘಟಿತ ಉದ್ದಿಮೆದಾರರ ಮಾಹಿತಿ ನಮೂದಿಸಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿ, ಗಣತಿಗೆ ಚಾಲನೆ ನೀಡಲಾಯಿತು. ಪಾಲಿಕೆ ಆಯುಕ್ತ…
ಸಲಗ ದಾಳಿ: ವ್ಯಕ್ತಿಗೆ ಗಾಯ
January 23, 2020ಹನಗೂಡು, ಜ.22- ಒಂಟಿ ಸಲಗ ದಾಳಿಗೆ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಾಗರಹೊಳೆಯ ಮತ್ತಿಗೋಡು ಅರಣ್ಯ ವಲಯದ ನೇರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಂಕರ್(50) ಗಾಯಗೊಂಡವರು. ಇಂದು ಬೆಳಿಗ್ಗೆ ಬಾಲಕೃಷ್ಣ ಎಂಬುವರು ತೋಟದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಶಂಕರ್ ಕುಳಿತಿದ್ದರು. ಈ ವೇಳೆÀ ಏಕಾಏಕಿ ಬಂದ ಸಲಗ ಕಾರಿನ ಮೇಲೆ ದಾಳಿ ನಡೆಸಿದೆ. ಇದರಿಂದ ಕಾರಿನಲ್ಲಿದ್ದ ಶಂಕರ್ ಅವರ ಬಲಗಾಲಿಗೆ ತೀವ್ರ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾರಿಯಾಗಿ ದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಂಕರ್ರನ್ನು ಮೈಸೂರಿನ ಖಾಸಗಿ…
ಸೇವಾ ಕಾರ್ಯದ ಮೂಲಕ ಸಮಾಜ ಸೇವಕ ಸುಜಿತ್ಕುಮಾರ್ ಹುಟ್ಟುಹಬ್ಬ ಸರಳ ಆಚರಣೆ
January 23, 2020ಮೈಸೂರು,ಜ.22-ನಗರದ ಮೈಸೂರು ಸ್ನೇಹಜೀವಿ ಬಳಗ ಹಾಗೂ ಮಂಡಿ ಲಷ್ಕರ್ ಮೊಹಲ್ಲಾ ಗೆಳೆಯರ ಬಳಗದ ವತಿಯಿಂದ ಸಮಾಜ ಸೇವಕ ಹೆಚ್.ಎಸ್. ಸುಜಿತ್ಕುಮಾರ್ ಹುಟ್ಟುಹಬ್ಬವನ್ನು ವಿವಿಧ ಸೇವಾ ಕಾರ್ಯಗಳ ಮೂಲಕ ಇಂದು (ಜ.22) ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇನ್ಫೋಸಿಸ್ನ ಪ್ರಾಜೆಕ್ಟ್ ಅಧಿ ಕಾರಿ ಅಮರ್, ನಿಸ್ವಾರ್ಥ ಸೇವೆಯೇ ಮನುಷ್ಯನಿಗೆ ನಿಜವಾದ ಆತ್ಮತೃಪ್ತಿ. ಸೇವೆ ಮಾಡಬೇಕಾದರೆ ಯಾವುದೇ ರೀತಿಯಾ ದಂತಹ ಮುಜುಗರವಿರಬಾರದು. ಮನ ಸಾರೆ ಮಾಡಿದಾಗ ಸಂತೋಷದೊಂದಿಗೆ ನೆಮ್ಮದಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಕೂಡ ಸಮಾಜ…
ವಿವಿಧ ಗ್ರಾಪಂಗಳ 25 ಸ್ಥಾನಗಳಿಗೆ ಉಪ ಚುನಾವಣೆ
January 23, 2020ಮೈಸೂರು, ಜ.22- ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ವಿವಿಧ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅಧಿಸೂಚನೆ ಹೊರ ಡಿಸಲಾಗಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. 2020ರ ಜ.25 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಜನವರಿ 28 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ, ನಾಮಪತ್ರಗಳನ್ನು ಪರಿಶೀಲನೆ ಜ.29 ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದು ಕೊಳ್ಳಲು ಜ.31 ಕೊನೆಯ ದಿನವಾಗಿರುತ್ತದೆ. ಒಂದು ವೇಳೆ ಮತದಾನ ಅವಶ್ಯವಿದ್ದರೆ ಫೆ.9…
ಅಳಿವಿನಂಚಿನಲ್ಲಿರುವ ಎರಡು ಕಾಡುಪಾಪ ರಕ್ಷಣೆ; ಮೂವರ ಬಂಧನ
January 23, 2020ಮೈಸೂರು,ಜ.22(ಎಂಟಿವೈ)- ಮೈಸೂ ರಿನ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಅಳಿವಿನಂಚಿನಲ್ಲಿರುವ ಕಾಡುಪಾಪ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವ ರನ್ನು ಬಂಧಿಸಿ, ಎರಡು ಜೀವಂತ ಕಾಡುಪಾಪ ಪ್ರಾಣಿಯನ್ನು ರಕ್ಷಿಸಿದ್ದಾರೆ. ಟಿ.ನರಸೀಪುರದಿಂದ ತಾಯೂರಿಗೆ ಹೋಗುವ ರಸ್ತೆಯಲ್ಲಿ ಮೂವರು ಕಾಡು ಪಾಪ ಮಾರಾಟ ಮಾಡಲು ಯತ್ನಿಸು ತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಡಿಸಿಎಫ್ ಎ.ಟಿ.ಪೂವಯ್ಯ ನೇತೃತ್ವದಲ್ಲಿ ದಾಳಿ ನಡೆಸಿದಾಗ ಎರಡು ಜೀವಂತ ಕಾಡು ಪಾಪಗಳು ಇದ್ದುದು ಕಂಡು ಬಂದಿದೆ. ಕೂಡಲೇ ಆರೋಪಿಗಳಾದ ನಂಜನ ಗೂಡು ತಾಲೂಕಿನ ಹೆಮ್ಮರಗಾಲ…
ಸಮಾಜದ ಅನಿಷ್ಟ ಆಚರಣೆಗಳ ವಿರುದ್ಧ ಅಂಬಿಗರ ಚೌಡಯ್ಯ ನಿಷ್ಠುರವಾದಿಯಾಗಿದ್ದರು: ಮೈಸೂರಲ್ಲಿ ಅಂಬಿಗರ ಚೌಡಯ್ಯರ ಜಯಂತಿ
January 22, 2020ಮೈಸೂರು, ಜ.21(ಪಿಎಂ)- ಅಸಮಾ ನತೆ, ಅಸ್ಪøಶ್ಯತೆ, ಮೌಢ್ಯ ಹಾಗೂ ಕಂದಾ ಚಾರ ಖಂಡಿಸಿ ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ ಶರಣರ ಪೈಕಿ ಅಂಬಿಗರ ಚೌಡಯ್ಯ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದವರು. ಅವರು ಸಮಾಜ ಅನಿಷ್ಟಗಳನ್ನು ನಿಷ್ಠುರವಾಗಿ ಕಠಿಣ ಶಬ್ದಗಳಲ್ಲಿ ಟೀಕಿಸಿದ್ದಾರೆ ಎಂದು ಚಿಂತಕ ಬಿ.ಕುಮಾರಸ್ವಾಮಿ ತಿಳಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡ ಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂ ತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯರ ಜಯಂತಿಯಲ್ಲಿ…










