ಮೈಸೂರು, ಜ.7(ಎಸ್ಬಿಡಿ)- ಕಾಲೇಜಿನ ಹಿಂಭಾಗದ ಗೇಟ್ ಬೀಗ ಮುರಿದು, ಬೈಕ್, ದಾಖಲೆಗಳು ಸೇರಿದಂತೆ ಸುಮಾರು 1.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಳ್ಳಿಯಲ್ಲಿರುವ ಮೈಸೆಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಹಿಂಭಾಗದ ಗೇಟ್ ಬೀಗ ಮುರಿದು ಒಳನುಗ್ಗಿರುವ ಖದೀಮರು, ಸಿಸಿಟಿವಿ ಕ್ಯಾಮರಾಗಳನ್ನು ಜಖಂ ಮಾಡಿ, ಸರ್ವರ್ ರೂಂ, ಅಕೌಂಟ್ ವಿಭಾಗ, ಕಾಲೇಜು ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಕೊಠಡಿ ಹಾಗೂ ಕಚೇರಿಯ ಲಾಕ್ಗಳನ್ನೂ ಮುರಿದು,…
ಜ. 17 ರಿಂದ ಮೈಸೂರು-ಬೆಳಗಾವಿ ನಡುವೆ ಟ್ರೂಜೆಟ್ ವಿಮಾನ ಹಾರಾಟ
January 8, 2020ಮೈಸೂರು, ಜ. 7 (ಆರ್ಕೆ)-ಮೈಸೂರು-ಬೆಳಗಾವಿ ನಗರಗಳ ನಡುವೆ ವಿಮಾನ ಹಾರಾಟ ನಡೆಸಲು ಟ್ರೂಜೆಟ್ ಸಂಸ್ಥೆ ಮುಂದೆ ಬಂದಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಆರ್. ಮಂಜುನಾಥ್ ತಿಳಿಸಿದ್ದಾರೆ. ಜನವರಿ 17 ರಿಂದ ಹೊಸ ಮಾರ್ಗದ ವಿಮಾನ ಸಂಚಾರ ಆರಂಭವಾಗಲಿದ್ದು, ಪ್ರತಿ ದಿನ ಬೆಳಿಗ್ಗೆ 9.35ಕ್ಕೆ ಬೆಳಗಾವಿ ನಗರದಿಂದ ಹೊರಡುವ ಟ್ರೂ ಜೆಟ್ ವಿಮಾನವು ಬೆಳಿಗ್ಗೆ 11ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ತಲುಪುವುದು. ಅದೇ ವಿಮಾನವು ಬೆಳಿಗ್ಗೆ 11.20ಕ್ಕೆ ಮೈಸೂರಿನಿಂದ ಪ್ರಯಾಣ ಆರಂಭಿಸಿ, ಮಧ್ಯಾಹ್ನ…
ಭಾರತ್ ಬಂದ್: ಪಿಎಸ್ಐ ಪರೀಕ್ಷೆಗಳು ಮುಂದೂಡಿಕೆ
January 8, 2020ಹುಬ್ಬಳ್ಳಿ,ಜ.7-ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜ.7ರಿಂದ 28ರವರೆಗೆ ನಡೆಯಬೇಕಾಗಿದ್ದ ಪಿಎಸ್ಐ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ದಿನಾಂಕ ಜ.7 ರಿಂದ ಜ.28 ರವರೆಗೂ ನಿಗದಿಪಡಿಸಲಾಗಿತ್ತು. ಆದರೆ ಜ.8ರಂದು ಭಾರತ ಬಂದ್ ಘೋಷಣೆಯಾಗಿರುವುದರಿಂದ ಸದರಿ ದಿನಾಂಕದಂದು ಇಟಿ/ಪಿಎಸ್ಟಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಲು ತೊಂದರೆಯುಂಟಾಗುವ ಸಾಧ್ಯತೆ ಇರುವ ಕಾರಣ ಪರೀಕ್ಷೆಯನ್ನು ಜ.13ರಂದು ನಿಗದಿಪಡಿಸಲಾಗಿದೆ. ಸದರಿ ಆದೇಶದಂತೆ ಇಟಿ/ಪಿಎಸ್ಟಿ ಪರೀಕ್ಷೆಗೆ…
ಸಿಎಎ ಪರ ಬೆಂಬಲಕ್ಕೆ ಬಿಜೆಪಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ
January 7, 2020ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪ ಮೈಸೂರು,ಜ.6(ಪಿಎಂ)-ಪೌರತ್ವ ತಿದ್ದು ಪಡಿ ಕಾಯ್ದೆ (ಸಿಎಎ) ಪರ ಬಿಜೆಪಿ, ಸಾಮಾ ಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಸಿಎಎ ಪರ ಬೆಂಬಲ ಪಡೆಯಲು ಬಿಜೆಪಿಯವರು ಮಿಸ್ಡ್ ಕಾಲ್ (ದೂರವಾಣಿ ಕರೆ) ಅಭಿಯಾನ ಆರಂಭಿಸಿ ದ್ದಾರೆ. ಆದರೆ ಬೆಂಬಲಿಸಲು ನೀಡಿರುವ ದೂರವಾಣಿ ಕರೆ ಸಂಖ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರು ಎಂದು ಸೃಷ್ಟಿಸಿರುವ ನಕಲಿ ಖಾತೆಗಳಲ್ಲಿ…
ಜ.8ರ ದೇಶವ್ಯಾಪಿ ಮುಷ್ಕರಕ್ಕೆ ಮೈಸೂರಿನಲ್ಲೂ ಕಾರ್ಮಿಕ ಸಂಘಟನೆಗಳ ಬೆಂಬಲ
January 7, 2020ಮೈಸೂರು, ಜ.6(ಪಿಎಂ)- ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಷ್ಟ್ರವ್ಯಾಪಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜ.8ರಂದು ಕರೆ ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಮೈಸೂರಿನ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ. ವಿಕ್ರಾಂತ್ ಟೈರ್ಸ್ ಎಂಪ್ಲಾಯ್ಸ್ ಯೂನಿಯನ್ (ಸಿಐಟಿಯು) ಹಾಗೂ ಎಐಎಸ್ಎಫ್, ಎಸ್ಎಫ್ಐ, ಎಐಡಿಎಸ್ಓ, ಎಐವೈಎಫ್, ಡಿವೈಎಫ್ಐ, ಎಐಡಿ ವೈಓ, ಎನ್ಎಫ್ಐಡಬ್ಲ್ಯೂ, ಎಐಡಿಡಬ್ಲ್ಯೂಎ, ಎಐಎಂಎಸ್ಎಸ್ ಹಾಗೂ ಎಐಪಿಡಬ್ಲ್ಯೂಎ ಸಂಘಟನೆಗಳ ಜಿಲ್ಲಾ ಸಮಿತಿಗಳು ಬೆಂಬಲ ನೀಡಿವೆ. ವಿಕ್ರಾಂತ್ ಟೈರ್ಸ್ ಎಂಪ್ಲಾಯ್ಸ್ ಯೂನಿಯನ್ ಹಾಗೂ…
ತಮಿಳುನಾಡಿನ ವರ್ತನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
January 7, 2020ಮೈಸೂರು,ಜ.6(ಎಂಟಿವೈ)- ಕರ್ನಾ ಟಕ ಧ್ವಜ ತೆಗೆದು ಹಾಕುವಂತೆ ತಮಿಳು ನಾಡಿನಲ್ಲಿ ರಾಜ್ಯದ ಪ್ರವಾಸಿ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡಿಸಿ, ಪ್ರವಾಸಿ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಮೈಸೂರಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಕೋಟೆ ಆಂಜನೇಯಸ್ವಾಮಿ ದೇವಾ ಲಯದ ಮುಂಭಾಗದಿಂದÀ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿ ಭಟನಾಕಾರರು, ವಾಹನಗಳ ಮೇಲೆ ಕನ್ನ ಡದ ಬಾವುಟ ಹಾರಿಸಿದ್ದಕ್ಕೆ ತಮಿಳು ನಾಡಿನ ಪೊಲೀಸರು ಉದ್ಧಟತನ ಪ್ರದ ರ್ಶಿಸಿ, ಹಲ್ಲೆ ನಡೆಸಿದ್ದಾರೆ….
ಜೆಎನ್ಯು ವಿದ್ಯಾರ್ಥಿಗಳು, ಅಧ್ಯಾಪಕರ ಮೇಲೆ ದಾಳಿ ಖಂಡಿಸಿ ಮೈಸೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
January 7, 2020ಮೈಸೂರು,ಜ.6(ಎಂಟಿವೈ, ಎಸ್ಪಿಎನ್)-ದೆಹಲಿ ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಮೇಲಿನ ಹ¯್ಲÉ ಖಂಡಿಸಿ ನಗರದ ವಿವಿಧ ಸಂಘಟನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸೋಮ ವಾರ ಪ್ರತಿಭಟನೆ ನಡೆಸಿದ್ದಾರೆ. ಎಐಡಿಎಸ್ಓ ಪ್ರತಿಭಟನೆ: ಜೆಎನ್ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಮೇಲಿನ ಹಲ್ಲೆ ಖಂಡಿಸಿ ಎಐಡಿಎಸ್ಒ ಕಾರ್ಯಕರ್ತರು ಮೈಸೂ ರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರ ವಿರುದ್ಧ ವಿವಿಧ ಘೋಷಣೆ ಕೂಗಿದ ರಲ್ಲದೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಜೆಎನ್ಯುಗೆ ಹೊರಗಡೆಯಿಂದ ಬಂದ ಕೆಲ ಕಿಡಿಗೇಡಿಗಳು,…
ಜ.19ರಂದು `ಒಬ್ಸಟ್ಯಾಕಲ್ ಕೋರ್ಸ್ ರೇಸ್’ ಮಕ್ಕಳ ಸಾಹಸ ಗುಣಗಳ ಉತ್ತೇಜಿಸುವ ಕ್ರೀಡೆ
January 7, 2020ಮೈಸೂರು ಅಮಿಟಿ ಲೇಡೀಸ್ ಸರ್ಕಲ್ 108ರಿಂದ ಆಯೋಜನೆ ಮೈಸೂರಿನಲ್ಲಿ ಪ್ರಥಮ ಬಾರಿಗೆ ಒಬ್ಸಟ್ಯಾಕಲ್ ಕ್ರೀಡೆ ಮೈಸೂರು,ಜ.6(ಪಿಎಂ)-ಮಕ್ಕಳಲ್ಲಿರುವ ಸಾಹಸ ಪ್ರವೃತ್ತಿ, ಧೈರ್ಯ ಹಾಗೂ ಉತ್ಸಾಹಿ ಗುಣಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ `ಮೈಸೂರು ಅಮಿಟಿ ಲೇಡೀಸ್ ಸರ್ಕಲ್ 108’ ಇದೇ ಪ್ರಥಮ ಬಾರಿಗೆ ಮೈಸೂರಿನಲ್ಲಿ ಜ.19ರಂದು `ಒಬ್ಸಟ್ಯಾಕಲ್ ಕೋರ್ಸ್ ರೇಸ್ (ಅಡೆತಡೆ ನಡುವಿನ ಓಟ)’ ಆಯೋಜಿಸಿದೆ. ಮಕ್ಕಳ ಸಾಮಥ್ರ್ಯಕ್ಕೆ ಅನುಗುಣವಾಗಿ ಅಡೆತಡೆ ಓಟವನ್ನು ವಿನ್ಯಾಸಗೊಳಿಸಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವ್ಯವಸ್ಥಿತವಾಗಿ ಈ ಕ್ರೀಡೆ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 5ರಿಂದ…
ಕಲಾವಿದರು ಲಭ್ಯವಿರುವ ಅನುದಾನ ಬಳಸಿಕೊಳ್ಳಲು ಕನ್ನಡ, ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಸಲಹೆ
January 7, 2020ಮೈಸೂರು,ಜ.6(ಎಸ್ಪಿಎನ್)-ಅಂತರ ರಾಷ್ಟ್ರೀಯ ವೇದಿಕೆಗಳಲ್ಲಿ ಮೈಸೂರಿನ ಕಲಾವಿದರು ಭಾರತೀಯ ಕಲೆ, ಸಾಹಿತ್ಯ ಮತ್ತು ಪರಂಪರೆಯನ್ನು ಪರಿಚಯಿಸುತ್ತಿ ರುವುದು ಉತ್ತಮ ಸಂಗತಿ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇ ಶಕ ಹನೂರು ಚೆನ್ನಪ್ಪ ಅಭಿಪ್ರಾಯಪಟ್ಟರು. ಮೈಸೂರು ಜೆಎಲ್ಬಿ ರಸ್ತೆಯ ನಾದಬ್ರಹ್ಮ ಸಭಾಂಗಣದಲ್ಲಿ ನಂದನ ಪ್ರದರ್ಶಕ ಕಲೆಗಳ ಕೇಂದ್ರ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಿದ್ದ ಮೂರು ದಿನಗಳ ವಿದ್ವತ್ ಭ್ರಮರ-2020ರ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಕಲಾವಿದರು ಬೇರೆಬೇರೆ ವೇದಿಕೆಗಳಲ್ಲಿ…
ವಿವಿಧ ವಸತಿ ಯೋಜನೆಯ ಫಲಾನುಭವಿಗಳ ಹಣ ನೇರ ಅವರ ಬ್ಯಾಂಕ್ ಖಾತೆಗೇ ಸಂದಾಯ
January 7, 2020ಬೆಂಗಳೂರು, ಜ. 6(ಕೆಎಂಶಿ)- ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ನೇರವಾಗಿ ತಲುಪುವ ಮಾದರಿ ಯಲ್ಲೇ ಇನ್ನುಮುಂದೆ ವಿವಿಧ ವಸತಿ ಯೋಜ ನೆಗಳ ಫಲಾನುಭವಿಗಳ ಹಣವನ್ನು ಅವರ ಖಾತೆಗೆ ಸರ್ಕಾರ ವರ್ಗಾ ವಣೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ. ಪ್ರಧಾನಮಂತ್ರಿಗಳ ಗ್ರಾಮ ಆವಾಸ್ ಯೋಜನೆಯಡಿ ನೀಡಲಾಗುತ್ತಿರುವ ಹಣದ ಪ್ರಮಾಣವನ್ನು 1.20 ಲಕ್ಷ ರೂಪಾಯಿಗಳಿಂದ 2 ಲಕ್ಷ ರೂಪಾಯಿಗಳಿಗೆ, ದೇವರಾಜ ಅರಸು ಹಿಂದುಳಿದ ವರ್ಗ ಗಳ ವಸತಿ ನಿಗಮದ ವತಿಯಿಂದ ನಿರ್ಮಾ ಣವಾಗುತ್ತಿದ್ದ ಮನೆಗಳಿಗೆ…