ಮೈಸೂರು,ಡಿ.27(ಎಸ್ಬಿಡಿ)- ಅನಧಿ ಕೃತ ಬಡಾವಣೆಗಳ ನಿರ್ಮಾಣದ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರುಗಳು ಕೇಳಿ ಬಂದಿವೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಸಂಜೆವರೆಗೂ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಬಳಿಕ ಮಾತನಾಡಿದ ಅವರು, ಮೈಸೂರು ತಾಲೂಕಿನಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿ ಬಂದಿದೆ. ಎಲ್ಲೆಂದರಲ್ಲಿ ಲೇಔಟ್ಗಳು ತಲೆ ಎತ್ತುತ್ತಿವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ,…
ಬಂಡೀಪುರದಲ್ಲಿ ಹೆಣ್ಣು ಚಿರತೆ ಸಾವು
December 28, 2019ಗುಂಡ್ಲುಪೇಟೆ,ಡಿ.27- ಬಂಡೀಪುರ ಅಭಯಾರಣ್ಯದಲ್ಲಿ ಹೆಣ್ಣು ಚಿರತೆ ಸಾವನ್ನ ಪ್ಪಿರುವ ಘಟನೆ ನಡೆದಿದೆ. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಗುಂಡ್ರೆ ವಲಯಕ್ಕೊಳಪಡುವ ಹೆಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿ ಗ್ರಾಮದ ಸಮೀಪ 3 ವರ್ಷ ಪ್ರಾಯದ ಹೆಣ್ಣು ಚಿರತೆಯ ಮೃತದೇಹ ಪತ್ತೆಯಾಗಿದೆ. ಚಿರತೆಯ ಸಾವಿಗೆ ನಿಖರ ತಿಳಿದುಬಂದಿಲ್ಲ. ಸ್ಥಳಕ್ಕೆ ಹೆಡಿಯಾಲ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ಆರ್ಎಫ್ಓ ಶಶಿಧರ್ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಪಶು ವೈದ್ಯ ನಾಗರಾಜು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ.
ಜಾತೀಯತೆ ರಾಜಕಾರಣದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ
December 28, 2019 ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿಷಾದ ಮಹನೀಯರ ಚಿಂತನೆಗಳು ವ್ಯರ್ಥ: ಬೇಸರ ಮೈಸೂರು,ಡಿ.27(ಎಂಟಿವೈ)- ಸಮಾಜ ದಲ್ಲಿ ಆಳವಾಗಿ ಬೇರು ಬಿಟ್ಟಿರುವ ಜಾತಿ ಹಾಗೂ ರಾಜಕಾರಣದ ವ್ಯವಸ್ಥೆಯಿಂದಾಗಿ ಅಸಮಾನತೆ ತಾಂಡವವಾಡುತ್ತಿದೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣಮಂಟಪದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶ್ರೀ ಕನಕದಾಸ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸಂತಶ್ರೇಷ್ಠ, ಭಕ್ತ ಕನಕದಾಸರ 532ನೇ À ಜಯಂತ್ಯು ತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೌತಮ ಬುದ್ಧ,…
ಕೆಲವು ಸಂಸ್ಕೃತ ಗ್ರಂಥಗಳಲ್ಲಿ ವೈಜ್ಞಾನಿಕ ಗ್ರಂಥಗಳಲ್ಲಿ ವೈಜ್ಞಾನಿಕ ರಹಸ್ಯಗಳಿರುವ ಬಗ್ಗೆ ವಿದೇಶಿಯರಿಂದ ಸಂಶೋಧನೆ
December 28, 2019ಹಿರಿಯ ವಿದ್ವಾಂಸ ಡಾ.ಹೆಚ್.ವಿ.ನಾಗರಾಜರಾವ್ ಅಭಿಮತ ಮೈಸೂರು,ಡಿ.27(ಎಸ್ಪಿಎನ್)-ಸಂಸ್ಕೃತ ಪದಗಳು ಎಲ್ಲಾ ದೇಶಿ ಭಾಷೆಗಳ ಮೂಲ ಪದ ಗಳಲ್ಲಿ ಸೇರಿಕೊಂಡಿವೆ. ಇದನ್ನು ಬೇರ್ಪ ಡಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಮೈಸೂರು ವಿವಿ ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ಹಿರಿಯ ಸಂಶೋಧಕರೂ ಆದ ಸಂಸ್ಕೃತ ವಿದ್ವಾಂಸ ಡಾ. ಹೆಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿ(ಸ್ವಾಯತ್ತ)ನ ಪ್ರಥಮ ಬಿ.ಎಸ್ಸಿ ಹಾಗೂ ಬಿಸಿಎ ವಿಭಾಗದ ಸಂಸ್ಕೃತ ಪಠ್ಯಪುಸ್ತಕ `ಕಾವ್ಯ ಭೂಮಿಕಾ-1’ ಮತ್ತು `ಕಾವ್ಯ ಪ್ರಮೋದಃ-1’ ಕೃತಿಗಳನ್ನು ಡಾ. ಹೆಚ್.ವಿ.ನಾಗರಾಜರಾವ್ ಬಿಡುಗಡೆಗೊಳಿಸಿ, ಮಾತನಾಡಿದರು. ಜಗತ್ತಿನ…
ಔಷಧಿ ಸಸ್ಯಗಳ ಸಂಶೋಧನೆ ಫಲ ಪ್ರಯೋಜನಕ್ಕೆ ಬಂದಿಲ್ಲ
December 28, 2019ಮೈಸೂರು,ಡಿ.27(ಎಂಕೆ)- ಔಷಧೀಯ ಸಸ್ಯಗಳ ಕುರಿತು 20 ವರ್ಷಗಳಿಂದ ಸಂಶೋ ಧನೆ ನಡೆಯುತ್ತಿದ್ದು, ಹಲವಾರು ಸಂಶೋ ಧನಾ ಪ್ರಬಂಧಗಳು ಹೊರಬಂದಿವೆ. ಆದರೆ ಇವುಗಳ ಬಗ್ಗೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವಲ್ಲಿ ಇಲಾಖೆಗಳು ಹಿಂದೆ ಬಿದ್ದಿವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ತಿಳಿಸಿದರು. ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಸಮಾರೋಪ ಸಮಾರಂಭ ದಲ್ಲಿ ಮಾತನಾಡಿದ ಅವರು, ಔಷಧಿ ಸಸ್ಯ ಗಳ ಕುರಿತು ಆಯುರ್ವೇದದಲ್ಲಿ ಮಾತ್ರ ವಲ್ಲದೆ ಸಸ್ಯಶಾಸ್ತ್ರ, ಜೀವಶಾಸ್ತ್ರ, ರಾಸಾಯನ…
ಸಿಎಎ, ಎನ್ಆರ್ಸಿಯಿಂದ ಭಾರತದ ಮುಸ್ಲಿಮರು, ದಲಿತರಿಗೆ ಏನೂ ತೊಂದರೆ ಇಲ್ಲ
December 28, 2019ಮೈಸೂರು, ಡಿ.27(ಆರ್ಕೆಬಿ)- ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಮರಿಗಾಗಲೀ, ದಲಿತರಿಗಾಗಲೀ ಯಾವುದೇ ತೊಂದರೆ ಇಲ್ಲ. ಈ ಕಾಯ್ದೆ ಕೇವಲ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಆಫ್ಘಾನಿಸ್ಥಾನದಿಂದ ಭಾರತಕ್ಕೆ ಬಂದಿರುವ ನುಸುಳುಕೋರರಿಗೆ ಮಾತ್ರ ಅನ್ವಯ ಎಂಬುದನ್ನು ಸಿಎಎ, ಎನ್ಆರ್ಸಿ ವಿರೋಧಿಸುತ್ತಿರುವವರು ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿ.ಗಿರಿಧರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕಾ, ಲಂಡನ್, ಆಸ್ಟ್ರೇಲಿಯಾ ಮುಂತಾದ ರಾಷ್ಟ್ರಗಳಲ್ಲಿ ಮುಸ್ಲಿಮರು ಬಾಳುತ್ತಿದ್ದಾರೆ. ಅಲ್ಲಿ ಪೌರತ್ವವನ್ನು ಪಡೆದಿದ್ದಾರೆ. ಅವರನ್ನು ಯಾರೂ ವಾಪಸ್…
ಡಿ.29ರಂದು ವಿಶ್ವಮಾನವ ದಿನಾಚರಣೆ
December 28, 2019ಮೈಸೂರು,ಡಿ.27-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಕುವೆಂಪು ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರ ಯದಲ್ಲಿ ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಯೋಜಿಸಲಾಗಿದೆ. ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಮಕೃಷ್ಣ ಆಶ್ರಮದ ಸ್ವಾಮಿ ಶಿವಕಾಂತಾನಂದ ಮಹಾರಾಜ್ ಅವರು ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಎಲ್.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣಕಾರರಾಗಿ ಸಂಸ್ಕøತಿ ಚಿಂತಕರಾದ ಡಾ.ಗುಬ್ಬಿಗೂಡು…
ಹೆಬ್ಬಾಳದಲ್ಲಿ ನಾಳೆ ಕನಕದಾಸ ಜಯಂತಿ ಕಾರ್ಯಕ್ರಮ
December 28, 2019ಮೈಸೂರು, ಡಿ.27(ಆರ್ಕೆಬಿ)- ಮೈಸೂರಿನ ಹೆಬ್ಬಾಳ ಕನಕದಾಸ ಹಿತರಕ್ಷಣಾ ಸಮಿತಿ ವತಿಯಿಂದ ಡಿ.29ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಕಾಲೇಜು ರಸ್ತೆ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಕನಕದಾಸರ 532ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಮಂಜೇಗೌಡ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮಾಜಿ ಸಚಿವ ಎನ್.ಚಲುವ ರಾಯಸ್ವಾಮಿ ಕನಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಶಾಸಕ ಯತೀಂದ್ರ ಸಿದ್ದರಾಮಯ್ಯ…
ಸುತ್ತೂರು ಶ್ರೀಕ್ಷೇತ್ರದಲ್ಲಿ ನಾಳೆ ಕೆಎಸ್ಆರ್ಟಿಸಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ 9ನೇ ಸಮಾವೇಶ, ಪ್ರತಿಭಾ ಪುರಸ್ಕಾರ
December 28, 2019ಮೈಸೂರು,ಡಿ.27(ಆರ್ಕೆಬಿ)-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಚಾಮ ರಾಜನಗರ ವಿಭಾಗದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಿ.29ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲೆಯ ಸುತ್ತೂರು ಶ್ರೀಕ್ಷೇತ್ರದ ಸಿದ್ದನಂಜ ದೇಶಿಕೇಂದ್ರ ಮಂಗಳ ಮಂಟಪದಲ್ಲಿ ರಾಜ್ಯ ಮಟ್ಟದ 9ನೇ ಸಮಾವೇಶ, ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಂಘದ ಚಾಮರಾಜನಗರ ವಿಭಾಗದ ಅಧ್ಯಕ್ಷ ರಾಜೇಂದ್ರಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ,…
ಮೈಸೂರಲ್ಲಿ ವಿವಿಧೆಡೆ ಸೂರ್ಯಗ್ರಹಣ ವೀಕ್ಷಣೆ
December 27, 2019ಮೈಸೂರು, ಡಿ.26(ಎಂಟಿವೈ)-ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಂಕಣ ಸೂರ್ಯ ಗ್ರಹಣದ ವಿಸ್ಮಯ ದೃಶ್ಯಗಳನ್ನು ವೀಕ್ಷಿಸಲು ಮೈಸೂರು ಸೈನ್ಸ್ ಫೌಂಡೇಷನ್, ಜಿಪಂ, ಜಿಲ್ಲಾಡಳಿತ ಹಾಗೂ ಮೈಸೂರು ವಿವಿ ಸಂಯುಕ್ತಾಶ್ರಯದಲ್ಲಿ ಡಿಸಿ ಕಚೇರಿ ಬಳಿ ಇರುವ ಓವೆಲ್ ಮೈದಾನದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಮೈದಾನಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸೈನ್ಸ್ ಫೌಂಡೇ ಷನ್ ವತಿಯಿಂದ ಸೌರ ಕನ್ನಡಕ ವಿತರಿಸಿ ಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಡ ಲಾಯಿತು. 2200 ವಿದ್ಯಾರ್ಥಿಗಳು ಹಾಗೂ 1500 ಸಾರ್ವಜನಿಕರೂ ಸೇರಿದಂತೆ 3700 ಮಂದಿ ಒಂದೇ ಸ್ಥಳದಲ್ಲಿ…










