ಮೈಸೂರು, ನ.೩(ಆರ್ಕೆ)- ತಿ.ನರಸೀಪುರ ತಾಲೂಕು ಮೂಗೂರು ಬಸ್ ನಿಲ್ದಾಣದ ಬಳಿ ಜಿಂಕೆ ಮಾಂಸ ಮಾರಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ, ಸಂತೇಮರಳ್ಳಿ ಹೋಬಳಿ ಬಾಗಲಿ ಗ್ರಾಮದ ಮೂಗುಶೆಟ್ಟಿ ಅವರ ಮಗ ಶಂಕರ್ (೨೮) ಬಂಧಿತ ಆರೋಪಿ. ಶನಿವರ ಮೂಗೂರು ಬಸ್ ನಿಲ್ದಾಣದ ಬಳಿ ಪ್ಲಾಸ್ಟಿಕ್ ಚೀಲದಲ್ಲಿ ಜಿಂಕೆ ಮಾಂಸ, ಕೊಂಬು, ತಲೆ-ಕಾಲು ಹಾಗೂ ಚರ್ಮ ತುಂಬಿಕೊAಡು ಮಾರಲು ಹೊಂಚು ಹಾಕುತ್ತಿದ್ದ ಆತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ…
ನ.8 ರಂದು ಮುಡಾ ಸಭೆ
November 4, 2019ಮೈಸೂರು, ನ.೩(ಆರ್ಕೆ)- ನವೆಂಬರ್ ೮ರಂದು ಬೆಳಿಗ್ಗೆ ೧೧ ಗಂಟೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಮುಡಾ ಕಚೇರಿ ಸಭಾಂಗಣದಲ್ಲಿ ನಡೆ ಯಲಿದೆ. ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಭೂಮಿ ನೀಡಲು ರೈತರು ನಿರಾಕರಿಸಿರು ವುದರಿಂದ ನೆನೆಗುದಿಗೆ ಬಿದ್ದಿರುವ ಬಲ್ಲಹಳ್ಳಿ ವಸತಿ ಯೋಜನೆ, ಮೈಸೂರಿನ ವಿವಿಧ ಬಡಾವಣೆಗಳಲ್ಲಿ ಲಭ್ಯವಿರುವ ಸಿಎ ನಿವೇಶನಗಳ ಹಂಚಿಕೆ, ಉದ್ದೇಶಿತ ಗುಂಪು ಮನೆ ನಿರ್ಮಾಣ, ಹೊಸ ಐದು ಬಡಾವಣೆಗೆ ಸರ್ಕಾರದಿಂದ ಅನುಮೋದನೆ ಪಡೆಯು ವುದೂ…
ಮೈಸೂರಿನ ರೇಷ್ಮೋದ್ಯಮಕ್ಕೆ ಸಚಿವ ಸೋಮಣ್ಣ ಭೇಟಿ
November 3, 2019ಮೈಸೂರು, ನ.೨(ಆರ್ಕೆ)-ವಸತಿ, ರೇಷ್ಮೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇಂದು ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ರೇಷ್ಮೋ ದ್ಯಮಕ್ಕೆ ಭೇಟಿ ನೀಡಿ, ಅದರ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸಿದರು. ಕೆಎಸ್ಐಸಿ ಆವರಣದಲ್ಲಿರುವ ಕಾರ್ಖಾನೆ ಯಲ್ಲಿ ರೇಷ್ಮೆ ಸೀರೆ, ವಸ್ತç ತಯಾರಿಕೆ ವೀಕ್ಷಿ ಸಿದ ಸಚಿವರು, ಮೈಸೂರು ರೇಷ್ಮೆ ಸೀರೆಗೆ ಜನರಿಂದ ಭಾರೀ ಬೇಡಿಕೆ ಹೆಚ್ಚಾಗಿರುವು ದರಿಂದ ಅದಕ್ಕೆ ತಕ್ಕಂತೆ ಗುಣಮಟ್ಟದ ಸೀರೆ ಗಳನ್ನು ಉತ್ಪಾದಿಸಬೇಕು ಎಂದು ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನಸಾಮಾನ್ಯರು, ಮಧ್ಯಮ ವರ್ಗದವ…
ಸಣ್ಣ ಕೈಗಾರಿಕೆಗಳ ಉಳಿವಿಗೆ ಕೇಂದ್ರ ಸರ್ಕಾರದ `ಉತ್ತೇಜನ’ ಅಗತ್ಯ
November 3, 2019ಮೈಸೂರು, ನ.೨(ಎಂಟಿವೈ)- ಕೇಂದ್ರ ಸರ್ಕಾರದ ಅವೈಜ್ಞಾನಿಕ ನಿಲುವಿನಿಂದಾಗಿ ಆರ್ಥಿಕತೆ ಕುಸಿದಿರುವ ಹಿನ್ನೆಲೆಯಲ್ಲಿ ದೇಶದ ಆಟೋಮೊಬೈಲ್ ಹಾಗೂ ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಇದ ರಿಂದಾಗಿ ಶೇ.೩೦ರಷ್ಟು ಮಂದಿ ಉದ್ಯೋಗ ಕಳೆದುಕೊಳ್ಳು ವಂತಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಆರ್.ರಾಜು ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ತಿಂಗಳಿAದ ಕುಸಿಯುತ್ತಿರುವ ದೇಶದ ಆರ್ಥಿಕ ಪರಿಸ್ಥಿತಿಯಿಂದಾಗಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳ ಮೇಲೆ ದುಷ್ಪರಿ ಣಾಮ ಬೀರಿದೆ. ಆಟೋಮೊಬೈಲ್…
ಕನ್ನಡ ನಮ್ಮ ಜೀವನದ ಭಾಗವಾಗಬೇಕಾದರೆ ಎಲ್ಲರ ಸಹಕಾರ ಅಗತ್ಯ
November 3, 2019ಮೈಸೂರು,ನ.೨-ಕನ್ನಡವನ್ನು ನಮ್ಮ ಜೀವ ನದ ಭಾಗವಾಗಿಸಲು ಮತ್ತು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮೈಸೂರು ಜಿಲ್ಲಾ ಉಸ್ತು ವಾರಿ ಸಚಿವ ವಿ.ಸೋಮಣ್ಣ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಮೈಸೂರಿನ ಅರಮನೆ ಉತ್ತರ ದ್ವಾರ, ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನದ ಎದುರು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಲದೆ ಸಚಿವರು ಕನ್ನಡ ಧ್ವಜಾರೋ ಹಣ ನೆರವೇರಿಸಿ, ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರಾö್ಯನAತರ ಮೈಸೂರು…
ರಾಜ್ಯೋತ್ಸವ ಆಚರಣೆ ಪ್ರಚಾರಕ್ಕಷ್ಟೇ ಸೀಮಿತವಾಗಿದೆ
November 3, 2019ಮೈಸೂರು, ನ.೨-ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ಪ್ರಚಾರಕ್ಕೆ ಸೀಮಿತವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ ಮೇಯರ್ ಪುಷ್ಪಲತಾ ಜಗನ್ನಾಥ್, ಕನ್ನಡ ನೆಲ ಮತ್ತು ಭಾಷೆಗಾಗಿ ಉದ್ದೇಶಪೂರ್ವಕವಾಗಿ ಹಾಗೂ ನಿರಂ ತರವಾಗಿ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದರು. ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಲಾಮಂದಿರದಲ್ಲಿ ಏರ್ಪಡಿಸಿದ್ದ ೬೪ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ…
ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ
November 3, 2019ಮೈಸೂರು,ನ.೨-ಕನ್ನಡಕ್ಕಾಗಿ ಕೈ ಎತ್ತು, ಅದು ಕಲ್ಪವೃಕ್ಷವಾಗುತ್ತದೆ. ಕನ್ನಡಕ್ಕಾಗಿ ಕೊರಳೆತ್ತು ಅದು ಪಾಂಚಜನ್ಯವಾಗುತ್ತದೆ. ಕನ್ನಡಕ್ಕಾಗಿ ಕಿರುಬೆರಳೆತ್ತಿದರೂ ಸಾಕು, ಅದೇ ಗೋವರ್ಧನ ಗಿರಿಯಾಗುತ್ತದೆ. ಅಂತಹ ಶಕ್ತಿ ನಮ್ಮ ಕನ್ನಡ ಭಾಷೆಗಿದೆ ಎಂದು ರಾಮ ಕೃಷ್ಣ ವಿದ್ಯಾ ಸಂಸ್ಥೆಯ ಸಂಸ್ಕೃತ ಶಿಕ್ಷಕಿ ರಾಜಶ್ರೀ ಸುಧೀರ್ ಸೊನ್ನದ್ ತಿಳಿಸಿದರು. ಮೈಸೂರಿನ ರಾಮಕೃಷ್ಣ ನಗರದ ರಾಮ ಕೃಷ್ಣ ವಿದ್ಯಾಕೇಂದ್ರದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತ ನಾಡುತ್ತಾ, ಕನ್ನಡ ರಾಜ್ಯೋತ್ಸವವನ್ನು ಕೇವಲ ನವೆಂಬರ್ನಲ್ಲಿ ಆಚರಿಸದೆ, ಇಡೀ ವರ್ಷ ವೆಲ್ಲಾ…
ತಿಂಗಳಲ್ಲಿ ಮುಡಾ, ಖಾಸಗಿ ಬಡಾವಣೆ ನಿವೇಶನಗಳಿಗೆ ಖಾತೆ ಮಾಡಿ: ನಗರಪಾಲಿಕೆ ಆಯುಕ್ತರಿಗೆ ಸಚಿವ ವಿ.ಸೋಮಣ್ಣ ತಾಕೀತು
November 3, 2019ಮೈಸೂರು ನ.೨(ಎಸ್ಪಿಎನ್)- ಮೈಸೂರು ನಗರದ ರಿಂಗ್ ರೋಡ್(೪೨ ಕಿಮೀ) ವ್ಯಾಪ್ತಿಗೆ ಬರುವ ಮುಡಾ ಮತ್ತು ಖಾಸಗಿ ಬಡಾವಣೆಯ ನಿವೇಶನಗಳಿಗೆ ಇನ್ನೊಂದು ತಿಂಗಳಲ್ಲಿ ಪಾಲಿಕೆ ವತಿಯಿಂದ ಸಾರ್ವಜನಿಕರಿಗೆ ಖಾತೆ ಮಾಡಿಕೊಡಬೇಕು ಎಂದು ವಸತಿ, ರೇಷ್ಮೆ, ತೋಟ ಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನಗರ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಅಧಿಕಾರಿ ಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಮೈಸೂರು ಪ್ರವಾಸೋದ್ಯಮದಲ್ಲಿ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಹೊಂದಿದೆ.ಅದರAತೆ, ಮೈಸೂರು ನಗರ ದಿನೇ ದಿನೆ…
ಬ್ರೇಕ್ ವಿಫಲವಾಗಿ ೫೦ ಅಡಿ ಪ್ರಪಾತಕ್ಕೆ ಇಳಿದ ಕೆಎಸ್ಆರ್ಟಿಸಿ ಬಸ್
November 3, 2019ಮಡಿಕೇರಿ, ನ.೨- ಬ್ರೇಕ್ ವಿಫಲವಾದ ಕೆಎಸ್ ಆರ್ಟಿಸಿ ಬಸ್ ಚವರ್ಲೆಟ್ ಕಾರಿಗೆ ಡಿಕ್ಕಿ ಹೊಡೆದು ಸುಮಾರು ೫೦ ಅಡಿ ಆಳದ ಪ್ರಪಾತಕ್ಕೆ ಇಳಿದ ಘಟನೆ ಮಡಿಕೇರಿ ಹೊರವಲಯದ ಸ್ಯಾಂಡಲ್ಕಾಡ್ ಬಳಿ ನಡೆದಿದೆ. ಈ ಘಟನೆಯಲ್ಲಿ ಬಸ್ನಲ್ಲಿ ಪ್ರಯಾ ಣಿಸುತ್ತಿದ್ದ ೧೦ ಮಂದಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ. ಬಸ್ ಇಳಿದ ಕಾಫಿ ತೋಟದಲ್ಲಿ ಸಂಪೂರ್ಣ ನೀರಿ ನಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯೂ ಇದ್ದು, ಬಸ್ ಬ್ರೇಕ್ ಫೇಲ್ ಆದ ಸಮಯದಲ್ಲೂ ಬಸ್ ಅನ್ನು ಕೆರೆಗೆ ಬೀಳದಂತೆ…
ಮಾಜಿ ಸಚಿವ ವೈಜನಾಥ ಪಾಟೀಲ ನಿಧನ
November 3, 2019ಕಲಬುರ್ಗಿ: ಮಾಜಿ ಸಚಿವ ವೈಜನಾಥ ಪಾಟೀಲ ಬೆಂಗಳೂರಿನ ವೊಕಾರ್ಡ್ ಫೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ ೮೨ ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾ ರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗ ಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಪಾಟೀಲ ನಿಧನರಾಗಿದ್ದಾರೆ. ಮೂಲತಃ ಬೀದರ್ ಜಿಲ್ಲೆಯವರಾಗಿದ್ದ ವೈಜನಾಥ ಪಾಟೀಲ, ಕಲಬುರ್ಗಿಯನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿಸಿ ಕೊಂಡಿದ್ದರು. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ೧೯೯೪ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಜೆಡಿಎಸ್ನಿಂದ ೨೦೦೪ರಲ್ಲಿ ೨ನೇ ಬಾರಿಗೆ…