ಮೈಸೂರು

ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಿ ನಾಳೆ ಕಪ್ಪು ಪಟ್ಟಿ ಪ್ರತಿಭಟನೆ
ಮೈಸೂರು

ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಿ ನಾಳೆ ಕಪ್ಪು ಪಟ್ಟಿ ಪ್ರತಿಭಟನೆ

October 12, 2019

ಮೈಸೂರು, ಅ.11(ಆರ್‍ಕೆಬಿ)-ಮೈಸೂರಿನ ಮಿನಿ ವಿಧಾನಸೌಧದ ಮುಂದೆ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪಿನೆಗೆ ಆಗ್ರಹಿಸಿ ಅ.13ರಂದು ಬೆಳಿಗ್ಗೆ ಮೈಸೂರು ಮಹಾನಗರಪಾಲಿಕೆ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿಭಟನೆಯಲ್ಲಿ ಸಾಹಿತಿ ಡಾ.ಸಿ.ಪಿ.ಕೃಷ್ಣಮೂರ್ತಿ ಇನ್ನಿತರ ಸಾಹಿತಿಗಳು, ಪ್ರಗತಿಪರರು, ದಲಿತ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದರು. ಜಿಲ್ಲಾಡಳಿತದ ವತಿಯಿಂದ ನಾಳೆ (ಅ.13) ಕಲಾಮಂದಿರದಲ್ಲಿ…

ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಮೈಸೂರು

ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

October 12, 2019

ಮೈಸೂರು,ಅ.11- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲನ್ಯಾಯ ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016 ರನ್ವಯ 3 ವರ್ಷಗಳ ಕಾಲಾವಧಿಗಾಗಿ ಮಕ್ಕಳ ಕಲ್ಯಾಣ ಸಮಿತಿಯನ್ನು ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಒಂದು ಸದಸ್ಯತ್ವವು ತೆರವಾಗಿದ್ದು ಸದರಿ ಸಮಿತಿಯ ಸದಸ್ಯತ್ವಕ್ಕೆ 1 ವರ್ಷದ ಅವಧಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ವೆಬ್‍ಸೆಟ್ www.dwcdkar. gov.in ಮೂಲಕ ಅರ್ಜಿ ಪಡೆದು ಅ.22ರಂದು ಸಂಜೆ 5.30 ಗಂಟೆಯೊಳಗೆ ನೋಂದಾ ಯಿತ ಅಂಚೆ ಮೂಲಕ ಅಥವಾ ಸಮಗ್ರ ಮಕ್ಕಳ ರಕ್ಷಣಾ…

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮೈಸೂರು

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

October 11, 2019

ಮೈಸೂರು: ಸ್ವತಂತ್ರ ಭಾರತದ ಪ್ರಜಾ ಪ್ರಭುತ್ವ ವ್ಯವಸ್ಥೆಯೊಂದಿಗೆ ತಮ್ಮ ಸಂಸ್ಥಾನವನ್ನು ಮೊದಲು ವಿಲೀನಗೊಳಿಸಿದ ಕೀರ್ತಿ ಮೈಸೂರು ಮಹಾರಾಜ ಶ್ರೀ ಜಯ ಚಾಮರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬಣ್ಣಿಸಿದರು. ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಅವರು ಗುರು ವಾರ ಅರಮನೆ ದರ್ಬಾರ್ ಹಾಲ್‍ನಲ್ಲಿ ಮೈಸೂರು ಸಂಸ್ಥಾನದ ಕೊನೆಯ ಅರಸ ಶ್ರೀ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತ ನಾಡಿದರು. ಸ್ವತಂತ್ರ ಪೂರ್ವದಲ್ಲಿ ನಮ್ಮ ದೇಶದಲ್ಲಿ ಅನೇಕ ಸಂಸ್ಥಾನಗಳಿದ್ದವು. ಮೈಸೂರು…

ವಿಧಾನಸಭೆಯಲ್ಲಿ 7927 ಕೋಟಿ ರೂ. ಪೂರಕ  ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ
ಮೈಸೂರು

ವಿಧಾನಸಭೆಯಲ್ಲಿ 7927 ಕೋಟಿ ರೂ. ಪೂರಕ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ

October 11, 2019

ಬೆಂಗಳೂರು: 7927.23 ಕೋಟಿ ರೂಪಾಯಿ 2019-20ನೇ ಸಾಲಿನ ಪೂರಕ ಅಂದಾಜಿನ ಎರಡನೇ ಕಂತನ್ನು ಅಂಗೀಕರಿಸುವಂತೆ ಹಣಕಾಸು ಖಾತೆಯನ್ನು ಹೊಂದಿ ರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ದಿಂದ ಅರ್ಹ ರೈತರಿಗೆ ಸಹಾಯ ಧನ ನೀಡಲು 1000 ಕೋಟಿ ರೂ. ಜೊತೆಗೆ 489.14 ಕೋಟಿ ರೂಪಾಯಿ ಮರು ಹೊಂದಾಣಿಕೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಇದರ ಜೊತೆಗೆ ಯೋಜನೆ ಅನುಷ್ಠಾನಕ್ಕಾಗಿ 1500 ಕೋಟಿ ರೂಗಳನ್ನ ಒದಗಿಸಲಾಗಿದೆ….

ಜಾಲಪ್ಪ, ಪರಮೇಶ್ವರ್ ಮೆಡಿಕಲ್ ಕಾಲೇಜ್, ಮನೆಗಳು, ಕಚೇರಿಗಳ ಮೇಲೆ ಐಟಿ ದಾಳಿ
ಮೈಸೂರು

ಜಾಲಪ್ಪ, ಪರಮೇಶ್ವರ್ ಮೆಡಿಕಲ್ ಕಾಲೇಜ್, ಮನೆಗಳು, ಕಚೇರಿಗಳ ಮೇಲೆ ಐಟಿ ದಾಳಿ

October 11, 2019

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹ ಗೊಂಡ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಪ್ರಕಟಣೆ ಗೊಂಡ ಬೆನ್ನಲ್ಲೇ ಕಾಂಗ್ರೆಸ್‍ನ ಹಿರಿಯ ನಾಯಕರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಆರ್.ಎಲ್‍ಜಾಲಪ್ಪ ಅವರ ಶಿಕ್ಷಣ ಸಂಸ್ಥೆ, ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿತೈಷಿಯಾಗಿ, ಅವರ ಎಲ್ಲಾ ಆಗು ಹೋಗುಗಳ ಬಗ್ಗೆ ಹೊಣೆಗಾರಿಕೆ, ಚುನಾ ವಣಾ ವೆಚ್ಚ ಎಲ್ಲವನ್ನು ಜಾಲಪ್ಪ ಭರಿಸುತ್ತಿದ್ದರು. ಅಷ್ಟೇ ಅಲ್ಲ ಅವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ…

ಯಶಸ್ವಿ ಜಂಬೂಸವಾರಿಯ ರೂವಾರಿ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ
ಮೈಸೂರು

ಯಶಸ್ವಿ ಜಂಬೂಸವಾರಿಯ ರೂವಾರಿ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

October 11, 2019

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು, ಯಶಸ್ವಿ ಜಂಬೂ ಸವಾರಿ ರೂವಾರಿಗಳಾಗಿ, ನಂತರ ಅರ ಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಅರ್ಜುನ ನೇತೃತ್ವದ ಗಜಪಡೆ ಗುರುವಾರ ಮಧ್ಯಾಹ್ನ ಸ್ವಸ್ಥಾನಗಳಿಗೆ ಪ್ರಯಾಣ ಬೆಳೆಸಿತು. ದಸರಾದಲ್ಲಿ ಪಾಲ್ಗೊಳ್ಳಲು ವಿವಿಧ ಶಿಬಿರಗಳಿಂದ ಎರಡು ತಂಡಗಳಲ್ಲಿ ಬಂದಿದ್ದ 13 ಆನೆಗಳಲ್ಲಿ ಮೂರು ಆನೆಗಳಾದ ಅಭಿಮನ್ಯು, ಗೋಪಾಲಸ್ವಾಮಿ ಹಾಗೂ ಜಯಪ್ರಕಾಶನನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಚೌಡಳ್ಳಿ ಬಳಿ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆ ಕಾರ್ಯಾ ಚರಣೆಗೆ ಬುಧವಾರವೇ…

ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ
ಮೈಸೂರು

ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ

October 11, 2019

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾ ರದ ವಿರುದ್ಧ ಭರ್ಜರಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮಾತಿನ ಧಾಟಿಯ ಮೂಲಕವೇ ಬಿಜೆಪಿಯಲ್ಲಿ ಕಾಣಿಸಿಕೊಂಡ ಭಿನ್ನ ಮತ ಹಾಗೂ ಅಸಮಾಧಾನವನ್ನು ಕೆಣಕಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸತ್ಯ ಹೇಳುತ್ತಾರೆ. ಅವರು ನನಗೆ ಒಳ್ಳೆ ಸ್ನೇಹಿತ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರನ್ನು ಅಧಿಕಾರದಿಂದ ತೆಗೆಯುವುದಕ್ಕೆ ಇಬ್ಬರು ಕೇಂದ್ರ ಸಚಿವರು ಹೊರಟಿದ್ದಾರೆ ಅಂತ ಯತ್ನಾಳ್ ಹೇಳಿದ್ದಾರೆ. ಪಾಪ ಯತ್ನಾಳ್…

ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ
ಮೈಸೂರು

ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ

October 11, 2019

ಮೈಸೂರು: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಏಕೆಂ ದರೆ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ಅಭಿಪ್ರಾಯಪಟ್ಟರು. ಮೈಸೂರಿನ ಕೆ.ಆರ್.ಆಸ್ಪತ್ರೆಯ ಎಂಎಂಸಿ-ಆರ್‍ಐ ಪೆಥಾಲಜಿ ಸಭಾಂ ಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀ ಲರ ಸಂಘ, ಮೈಸೂರು ಮೆಡಿಕಲ್ ಕಾಲೇಜು…

ಅ.13ರಂದು ಮೈಸೂರಿನಲ್ಲಿ ಕಾರ್ ರೇಸಿಂಗ್
ಮೈಸೂರು

ಅ.13ರಂದು ಮೈಸೂರಿನಲ್ಲಿ ಕಾರ್ ರೇಸಿಂಗ್

October 11, 2019

ಮೈಸೂರು: ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಟೋ ಮೋಟಿವ್ ಸ್ಪೋಟ್ರ್ಸ್ ಕ್ಲಬ್ ಆಫ್ ಮೈಸೂರ್ (ಅಸ್ಕಾಮ್) ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಅ.13ರಂದು ಮೈಸೂರಿ ನಲ್ಲಿ ಗ್ರಾವೆಲ್ ಫೆಸ್ಟ್ ಆಟೋಕ್ರಾಸ್ (ಕಾರ್ ರೇಸಿಂಗ್) ರೇಸ್ ಆಯೋ ಜಿಸಲಾಗಿದೆ ಎಂದು ಅಸ್ಕಾಮ್‍ನ ನಿರ್ದೇಶಕ ಅರುಣ್ ಅರಸ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಲಲಿತ ಮಹಲ್ ಅರಮನೆ ಹೆಲಿಪ್ಯಾಡ್ ಮೈದಾನದಲ್ಲಿ ರೇಸಿಂಗ್ ಆಯೋಜಿಸಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಆರಂಭಗೊಳ್ಳುವ ರೇಸ್, ಸಂಜೆ…

ಅ.13ರಂದು ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ
ಮೈಸೂರು

ಅ.13ರಂದು ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ

October 11, 2019

ಮೈಸೂರು: ಕೆನೈನ್ ಕ್ಲಬ್ ಆಫ್ ಮೈಸೂರು ವತಿಯಿಂದ ಅ.13 ರಂದು ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ 6ನೇ ರಾಷ್ಟ್ರ ಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕ್ಲಬ್‍ನ ಅಧ್ಯಕ್ಷ ಬಿ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಶ್ವಾನ ಸ್ಪರ್ಧೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದು, ಮಾಜಿ ಶಾಸಕ ವಾಸು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ವಿ.ಶ್ರೀನಿವಾಸ ಪ್ರಸಾದ್,…

1 803 804 805 806 807 1,611
Translate »