ಮೈಸೂರು, ಸೆ.13(ಎಸ್ಬಿಡಿ)- ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಸೆ.22ರಿಂದ 27ರೊಳಗೆ ಮನೆ ಮನೆ ದಸರಾ ನಡೆಸುವಂತೆ ಶಾಸಕ ಎಸ್.ಎ. ರಾಮದಾಸ್ ಹೇಳಿದರು. ಶುಕ್ರವಾರ ಕ್ಷೇತ್ರ ವ್ಯಾಪ್ತಿಯ ನಗರಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಕ್ಷೇತ್ರದ ಎಲ್ಲಾ 19 ವಾರ್ಡ್ಗಳಲ್ಲೂ ಸೆ.22ರಿಂದ 27 ರೊಳಗೆ ಮನೆ ಮನೆ ದಸರಾ ಏರ್ಪ ಡಿಸಬೇಕು. ಆಯಾ ವಾರ್ಡ್ನ ಕಾರ್ಪೊರೇಟರ್, ರೆವಿನ್ಯೂ ಇನ್ಸ್ಪೆಕ್ಟರ್ ಹಾಗೂ ಇಂಜಿನಿಯರ್ ಸಮನ್ವಯತೆಯಿಂದ ಕಾರ್ಯಕ್ರಮ ರೂಪಿಸಬೇಕೆಂದು ಸಲಹೆ ನೀಡಿ ದರು. ಮನೆ ಮನೆಗೆ ಕರಪತ್ರ ಹಂಚುವ ಮೂಲಕ ಎಲ್ಲರಿಗೂ ಕಾರ್ಯಕ್ರಮಗಳ…
ತಮ್ಮ 14 ತಿಂಗಳ ಅಧಿಕಾರದ ಬಗ್ಗೆ ಮಾಜಿ ಸಿಎಂಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ
September 14, 2019ಮೈಸೂರು, ಸೆ.13(ಆರ್ಕೆಬಿ)- ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ 14 ತಿಂಗಳ ಅಧಿಕಾರಾವಧಿಯಲ್ಲಿ ಯಾವ ರೀತಿ ಅಧಿಕಾರ ನಡೆಸಿದ್ದರು ಎಂಬ ಬಗ್ಗೆ ತಾಯಿ ಚಾಮುಂಡೇಶ್ವರಿ ಎದುರು ನಿಂತುಕೊಂಡು ಒಮ್ಮೆ ಯೋಚನೆ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ಕುಮಾರ ಸ್ವಾಮಿ ಅವರಿಗೆ ಟಾಂಗ್ ನೀಡಿದರು. ಮೈಸೂರಿನ ಮುಡಾ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯುವಕರಂತೆ ಸುತ್ತಾಡಿದ್ದಾರೆ….
ಕ್ಯಾಂಟೀನ್ ವಿರುದ್ಧ ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ
September 14, 2019ಮೈಸೂರು,ಸೆ.13(ಆರ್ಕೆಬಿ)-ಕ್ಯಾಂಟೀನ್ ಸ್ವಚ್ಛ ವಾಗಿಲ್ಲ. ಗುಣಮಟ್ಟದ ಉಪಾಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಮೈಸೂರು ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಕ್ಯಾಂಟೀನ್ ಬಳಿ ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿನಿ ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕ್ಯಾಂಟೀನ್ ಮುಂದೆ ಜಮಾಯಿಸಿದ ನೂರಾರು ವಿದ್ಯಾರ್ಥಿ ನಿಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಸ್ಥಳಕ್ಕೆ ಶಾಸಕರು ಬರಬೇಕು ಎಂದು ಪಟ್ಟು ಹಿಡಿದರು. ವಿಷಯ ಅರಿತ ಶಾಸಕ ಎಲ್.ನಾಗೇಂದ್ರ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಇನ್ನಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ದೂರುಗಳನ್ನು…
ಇಡಿ, ಸಿಬಿಐ, ಲೋಕಾಯುಕ್ತಗಳಿಗೆ ಹೆಚ್ಚಿನ ಬಲ ನೀಡಲು ಆಗ್ರಹಿಸಿ ಶಿಲ್ಪಿ ಊದುವ ಪ್ರತಿಭಟನೆ
September 14, 2019ಮೈಸೂರು, ಸೆ.13(ಆರ್ಕೆಬಿ)- ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಜಾರಿ ನಿರ್ದೇ ಶನಾಲಯ ಮತ್ತು ಸಿಬಿಐ, ಲೋಕಾಯುಕ್ತ ಗಳಿಗೆ ಹೆಚ್ಚಿನ ಬಲ ನೀಡಿ, ಭ್ರಷ್ಟ ರಾಜ ಕಾರಣಿಗಳು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿಯ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಮೈಸೂರು ಡಿಸಿ ಕಚೇರಿ ಬಳಿ ಶಿಲ್ಪಿಗಳನ್ನು ಊದುವ ಮೂಲಕ ಪ್ರತಿಭಟನೆ ನಡೆಸಿದರು. ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೊಡ್ಡ ಮತ್ತು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಜಾತಿವಾದಿಗಳಿಂದ ಹೋರಾಟವೂ ನಡೆ ದಿದೆ….
ದಸರಾ ಜಂಬೂಸವಾರಿಯಿಂದ ದೂರವುಳಿಯಲಿದೆ ಗರ್ಭಿಣಿ `ವರಲಕ್ಷ್ಮಿ’ಇನ್ನೂ ಒಂದು ವಾರ ಪೌಷ್ಟಿಕ ಆಹಾರ ನೀಡಿ ಆರೈಕೆ ಮಾಡಲು ನಿರ್ಧಾರ
September 14, 2019ಮೈಸೂರು, ಸೆ.13(ಎಂಟಿವೈ)- ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅಂಬಾರಿ ಅರ್ಜುನ ನೇತೃತ್ವದ ಗಜಪಡೆಯೊಂದಿಗೆ ಆಗಮಿಸಿರುವ `ವರಲಕ್ಷ್ಮಿ’ ಗರ್ಭಿಣಿ ಯಾಗಿರುವ ಹಿನ್ನೆಲೆಯಲ್ಲಿ ಜಂಬೂ ಸವಾರಿ ಮೆರವಣಿಗೆಯಿಂದ ದೂರ ವುಳಿಯುವುದು ಖಚಿತವಾಗಿದ್ದು, ಇನ್ನೊಂದು ವಾರ ಪೌಷ್ಟಿಕ ಆಹಾರ ನೀಡಿ ಆರೈಕೆ ಮಾಡಿದ ಬಳಿಕ ಶಿಬಿರಕ್ಕೆ ಕಳಿಸಲಾಗುತ್ತದೆ. ಆನೆಗಳ ಆಯ್ಕೆ ಸಂದರ್ಭದಲ್ಲಿ ಎಲ್ಲಾ ಆನೆಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗಿತ್ತು. ಈ ವೇಳೆ ವರಲಕ್ಷ್ಮಿ ಮೂರ್ನಾಲ್ಕು ತಿಂಗಳ ಗರ್ಭಿಣಿ ಎಂದು ಭಾವಿಸ ಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವರಲಕ್ಷ್ಮಿಗೆ 10 ಅಥವಾ 11 ತಿಂಗಳು…
ರಾಜೇಶ್ ಕೃಷ್ಣನ್ ಸಂಗೀತ `ಸಿರಿ’
September 14, 2019ಮೈಸೂರು,ಸೆ.13 (ವೈಡಿಎಸ್)-ತಂಪಾದ ಇಳಿಸಂಜೆಯ ತುಂತುರು ಮಳೆಯಲ್ಲಿ ಬಣ್ಣ-ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತ ಗೊಂಡಿದ್ದ ವೇದಿಕೆಯಲ್ಲಿ ಗಾಯಕ ರಾಜೇಶ್ ಕೃಷ್ಣನ್ ಅವರ ಗಾಯನ ಸಂಗೀತ ಪ್ರಿಯರನ್ನು ತಲೆದೂಗು ವಂತೆ ಮಾಡಿತು. ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಿರಿ 3ರ ಸಂಭ್ರಮದ ಅಂಗ ವಾಗಿ ಗುರುವಾರ ಸಂಜೆ ಆಯೋಜಿಸಿದ್ದ ಸಂಗೀತ ರಸಸಂಜೆಯಲ್ಲಿ ಹಿನ್ನೆಲೆಗಾಯಕ ರಾಜೇಶ್ ಕೃಷ್ಣ ಅವರ ಸುಮಧುರ ಕಂಠದಲ್ಲಿ ಹೊರಹೊಮ್ಮಿದ ಹಾಡುಗಳು ಸಂಗೀತ ಪ್ರಿಯರಿಗೆ ಮುದ ನೀಡಿದವು. ರಾಜೇಶ್ ಕೃಷ್ಣನ್ ಅವರು ವೇದಿಕೆಗೆ ಆಗಮಿಸು ವುದಕ್ಕೂ ಮುನ್ನ ವಿದ್ಯಾರ್ಥಿಗಳು,…
ಹಿಂದಿಯೇತರ ಭಾಷಿಗರಿಗೆ ಉದ್ಯೋಗ ಸಿಗದಂತೆ ಕೇಂದ್ರದಿಂದ ಪಿತೂರಿ: ಮಾಜಿ ಸಿಎಂ ಸಿದ್ದರಾಮಯ್ಯ
September 14, 2019ಬೆಂಗಳೂರು: ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅವ ಕಾಶ ಕಲ್ಪಿಸದಿರುವ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಹಿಂದಿಯೇತರ ಭಾಷಿಗರಿಗೆ ಬ್ಯಾಂಕ್ ಉದ್ಯೋಗ ಸಿಗದಂತೆ ತಡೆಯುವ ಪಿತೂರಿ ಎಂದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಿಂದ 26 ಬಿಜೆಪಿಯ ಸಂಸದರು ಕೇಂದ್ರಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿಯೂ ಬಿಜೆಪಿಯದ್ದೇ ಸರ್ಕಾರವಿದೆ. ಆದರೂ ಸಹ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲು ಬಿಜೆಪಿ ನಾಯಕರು ವಿಫಲರಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು…
ಪಂಚ ರಾಜ್ಯಗಳ ಜೊತೆ ಕರ್ನಾಟಕಕ್ಕೂಚುನಾವಣೆ ಸಾಧ್ಯತೆ
September 13, 2019ಕೆ.ಆರ್.ಪೇಟೆ,ಸೆ.12(ಶ್ರೀನಿವಾಸ್)-ರಾಜ್ಯದ 17 ಕ್ಷೇತ್ರ ಗಳಿಗೆ ಉಪಚುನಾವಣೆ ನಡೆಯುವ ಬಗ್ಗೆ ಅನುಮಾನ ವಿದ್ದು, ಕೇಂದ್ರ ಸರ್ಕಾರ ಮಹಾರಾಷ್ಟ್ರ, ದೆಹಲಿ, ಜಾರ್ಖಂಡ್ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕ ವಿಧಾನಸಭೆಗೂ ಸಾರ್ವತ್ರಿಕ ಚುನಾ ವಣೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟಿಸಿ ಚುನಾವಣೆ ಎದುರಿಸಲು ಸಿದ್ಧರಾಗಬೇಕು. ಯಾವುದೇ ಚುನಾವಣೆ ನಡೆದರೂ, ಸ್ಥಳೀಯ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಗೆಲ್ಲಿಸಿ ನನ್ನ ಶಕ್ತಿ ಏನೆಂದು ತೋರಿಸುತ್ತೇನೆ. ಪಕ್ಷದ್ರೋಹಿ ನಾರಾಯಣಗೌಡನಿಗೆ ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ…
ಇಡಿ ಮುಂದೆ ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆಗೆ ಹಾಜರು
September 13, 2019ತಂದೆ ಫಾರ್ಮುಲಾ ಅನುಸರಿಸಿದ ಪುತ್ರಿ ಇಂದೂ ವಿಚಾರಣೆಗೆ ಹಾಜರಾಗಲು ಸಮನ್ಸ್ ನವದೆಹಲಿ, ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಇಂದು ದೆಹಲಿಯ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜ ರಾದರು. ಅಧಿಕಾರಿಗಳ ಪ್ರಶ್ನೆಗಳಿಗೆ ತಂದೆಯ ಫಾರ್ಮುಲಾ ಬಳಸಿರುವ ಐಶ್ವರ್ಯಾ ಶಿವಕುಮಾರ್ ಖಡಕ್ ಉತ್ತರ ನೀಡಿ ದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರುವ ಐಶ್ವರ್ಯಾ, ನನಗೆ ಗೊತ್ತಿರುವ ಮತ್ತು ನೆನಪಿನಲ್ಲಿರುವ ವಿಷಯಗಳನ್ನು ಮಾತ್ರ ಹೇಳುತ್ತೇನೆ. ನನಗೆ ತಿಳಿಯದಿರದ ಪ್ರಶ್ನೆಗಳಿಗೆ ದಾಖಲೆ ನೋಡಿ ಮತ್ತು…
ಕಾರಿಗೆ ಲಾರಿ ಡಿಕ್ಕಿ: ಆರ್ಟಿಓ ಬ್ರೇಕ್ ಇನ್ಸ್ಪೆಕ್ಟರ್ ಸಾವು
September 13, 2019ತಿ.ನರಸೀಪುರ, ಸೆ.12(ಎಸ್ಕೆ)- ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಮ ರಾಜನಗರ ಪ್ರಾದೇ ಶಿಕ ಸಾರಿಗೆ ಇಲಾಖೆಯ ಬ್ರೇಕ್ ಇನ್ಸ್ಪೆಕ್ಟರ್ ಸಾವನ್ನಪ್ಪಿ, ಕಾರು ಚಾಲಕ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಸೋಸಲೆ ಬಳಿ ಗುರುವಾರ ಸಂಜೆ ಸಂಭವಿಸಿದೆ. ಮೂಲತಃ ಮಳವಳ್ಳಿ ತಾಲೂಕು ಬ್ಲಫ್ ನಿವಾಸಿಯಾಗಿದ್ದು, ಹಾಲಿ ಮೈಸೂರಿನ ರಾಜೀವ್ನಗರದಲ್ಲಿ ವಾಸವಿದ್ದ ಆರ್ಟಿಓ ಬ್ರೇಕ್ ಇನ್ಸ್ಪೆಕ್ಟರ್ ಅಬ್ದುಲ್ ನಸೀಮ್ (45) ಅಪಘಾತದಲ್ಲಿ ಮೃತಪಟ್ಟವ ರಾಗಿದ್ದು, ಕಾರು ಚಾಲಕ ಮೈಸೂರಿನ ಫಾರುಕ್ ತೀವ್ರವಾಗಿ ಗಾಯಗೊಂಡು, ಕೆ.ಆರ್.ಆಸ್ಪತ್ರೆ ಯಲ್ಲಿ…