ಮೈಸೂರು, ಆ.8(ಪಿಎಂ)-ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗಾಗಿ ವೈಯ ಕ್ತಿಕವಾಗಿ 2 ಲಕ್ಷ ರೂ. ನೀಡುತ್ತಿರುವುದಾಗಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ನೆರವು ನೀಡುವ ಜೊತೆಗೆ ಎಂಕೆಎಸ್ ಬ್ರಿಗೇಡ್ ಹಾಗೂ ಜನಸ್ಪಂದನಾ ಟ್ರಸ್ಟ್ ಸಹಯೋಗ ದಲ್ಲಿ ನೆರೆ ಸಂತ್ರಸ್ತರ ನೆರವಿಗಾಗಿ ಅಗತ್ಯ ಸಾಮಗ್ರಿಗಳನ್ನು ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ. ಸಹಾಯ ಮಾಡಲಿಚ್ಛಿಸುವವರು ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಮಂಟಪಕ್ಕೆ ತಲುಪಿಸಬಹುದು. ವಿವರ ಗಳಿಗೆ ಮೊ.ಸಂ. 9886752274, 9449841010…
ವಿಶ್ವ ಕನ್ನಡ ಸಮ್ಮೇಳನಕ್ಕೆ ಕಿರುತೆರೆ ನಟಿ ಯಮುನಾ ಶ್ರೀನಿಧಿ ಸಾಂಸ್ಕøತಿಕ ರಾಯಭಾರಿ
August 9, 2019ಮೈಸೂರು, ಆ.8(ಪಿಎಂ)- ನಾವಿಕ ಸಂಸ್ಥೆ (ನಾರ್ತ್ ಅಮೆರಿಕ ವಿಶ್ವ ಕನ್ನಡಿಗರ ಆಗರ) ಹಮ್ಮಿಕೊಂಡಿರುವ 5ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ತಮ್ಮನ್ನು ಸಾಂಸ್ಕøತಿಕ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಭರತನಾಟ್ಯ ಕಲಾವಿದೆ, ಸಿನಿಮಾ ಹಾಗೂ ಕಿರುತೆರೆ ನಟಿ ವಿದುಷಿ ಯಮುನಾ ಶ್ರೀನಿಧಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲೇ ಹುಟ್ಟಿ ಬೆಳೆದ ನಾನು 17 ವರ್ಷ ಅಮೇರಿಕದ ಹೊಸ್ಟನ್ ನಗರದಲ್ಲಿ ನೆಲೆಸಿ 700ಕ್ಕೂ ಹೆಚ್ಚು ಮಂದಿಗೆ ಭರತನಾಟ್ಯ ಕಲಿಸಿದ್ದು, ಇದೀಗ ಬೆಂಗಳೂರಿನಲ್ಲಿ…
ಕೊಡಗು, ಹಾಸನದಲ್ಲಿ ಮಳೆ ಆರ್ಭಟ
August 8, 2019ಮಡಿಕೇರಿ/ಹಾಸನ: ಕೊಡಗು ಹಾಗೂ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ರಣಭೀಕರ ಮಳೆ ಮುಂದುವರಿದ್ದು, ಕೊಡಗಿನಲ್ಲಿ ಒಂದೇ ದಿನದಲ್ಲಿ 200 ಮಿ.ಮೀ. ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಕೂಡ ಈ ಪ್ರಮಾಣದ ಮಳೆ ಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಉಭಯ ಜಿಲ್ಲೆಯಾದ್ಯಂತ ಆ.9ರ ಮಧ್ಯ ರಾತ್ರಿಯವರೆಗೂ “ರೆಡ್ ಅಲರ್ಟ್” ಘೋಷಿಸಲಾಗಿದೆ. ಹಾಸನದ ಸಕಲೇಶ ಪುರ, ಅರಕಲಗೂಡು, ಆಲೂರು ಹಾಗೂ ಬೇಲೂರು ತಾಲೂಕಿನ ಕೆಲವೆಡೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಭಾರೀ ಗಾಳಿ ಮಳೆಗೆ ಮಡಿಕೇರಿ ಭಾಗ ಮಂಡಲದ…
ಕೆಆರ್ಎಸ್, ಕಬಿನಿ, ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ
August 8, 2019ಮೈಸೂರು: ಕೇರಳದ ವೈನಾಡು ಮತ್ತು ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಬಿನಿ, ಹೇಮಾವತಿ ಮತ್ತು ಕೆಆರ್ಎಸ್ ಜಲಾ ಶಯದ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಕಬಿನಿಗೆ 25 ಸಾವಿರ ಕ್ಯೂಸೆಕ್ ನೀರು: ಕೇರಳದ ವೈನಾಡು ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾ ಗುತ್ತಿದ್ದು, ಜಲಾಶಯಕ್ಕೆ ಪ್ರಸ್ತುತ 25,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಿದ್ದು, ಸದ್ಯ 2281 ಅಡಿಗಳ ನೀರು ಸಂಗ್ರಹವಿದೆ. ಜಲಾಶಯ ಭರ್ತಿಗೆ ಕೇವಲ 3 ಅಡಿಯಷ್ಟೇ…
ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ
August 8, 2019ನವದೆಹಲಿ: ಬಿಜೆಪಿಯ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ, ಅತ್ಯುತ್ತಮ ವಾಗ್ಮಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಬುಧವಾರ ಸಂಜೆ ಪಂಚಭೂತಗಳಲ್ಲಿ ಲೀನವಾದರು. ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ರಾತ್ರಿ ವಿಧಿವಶರಾಗಿದ್ದರು. ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯಸಂಸ್ಕಾರ ನೆರವೇರಿತು. ಪತಿ ಸ್ವರಾಜ್ ಕೌಶಲ್ ಅಂತಿಮ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಕಂಬನಿ ಮಿಡಿಯುತ್ತಿದ್ದ ಪುತ್ರಿ ಬಾನ್ಸುರಿ ತಂದೆಯ ಜತೆಗಿದ್ದರು. ಸುಷ್ಮಾ ಅಂತ್ಯಕ್ರಿಯೆ ಸಂದರ್ಭ ಪ್ರಧಾನಿ…
ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತ
August 8, 2019ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಬುಧವಾರ ಪರಿಸ್ಥಿತಿ ಶಾಂತವಾಗಿತ್ತು. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾ ಟದ ಪ್ರಕರಣಗಳು ವರದಿಯಾಗಿವೆ. ಕಲ್ಲು ತೂರಾಟ ದಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಉಳಿದಂತೆ ರಾಜಧಾನಿ ಶ್ರೀನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಜನರು ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆಯುತ್ತಿವೆ. ಭದ್ರತೆಯ ದೃಷ್ಟಿಯಿಂದ ಹಲವು ಹೋರಾಟಗಾರರು, ರಾಜಕೀಯ ಮುಖಂಡರು…
ಎಂಸಿಡಿಸಿಸಿ ಬ್ಯಾಂಕ್ ನ 40.75 ಕೋಟಿ ಹಗರಣ: ಬ್ಯಾಂಕ್ನ ಹುಣಸೂರು ಶಾಖೆಯ ಹಿಂದಿನ ಮ್ಯಾನೇಜರ್ ರಾಮಪ್ಪ ಪೂಜಾರ್ ಬಂಧನ
August 8, 2019ಹುಣಸೂರು: ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಬ್ಯಾಂಕ್ನ (ಎಂಸಿ ಡಿಸಿಸಿ) ಹುಣಸೂರು ಮತ್ತು ಬಿಳಿಕೆರೆ ಶಾಖೆಗಳಲ್ಲಿ 40.75 ಕೋಟಿ ರೂ. ದುರುಪ ಯೋಗಪಡಿಸಿಕೊಂಡು ಕಳೆದ 11 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಹುಣಸೂರು ಬ್ಯಾಂಕ್ ಶಾಖೆಯ ಹಿಂದಿನ ವ್ಯವಸ್ಥಾಪಕ ರಾಮಪ್ಪ ಪೂಜಾರ್ನನ್ನು ಸಿಐಡಿ ಪೊಲೀಸರು ಕಳೆದ ಮೂರು ದಿನಗಳ ಹಿಂದೆ ಬೆಂಗ ಳೂರಿನಲ್ಲಿ ಬಂಧಿಸಿದ್ದಾರೆ. ಬಡ ರೈತರಿಗೆ ವಿತರಿಸಬೇಕಾಗಿದ್ದ ಕೋಟ್ಯಾಂತರ ರೂ. ಸಾಲದ ಹಣವನ್ನೇ ದುರುಪಯೋಗ ಪಡಿಸಿಕೊಂಡಿದ್ದ ರಾಮಪ್ಪ ಪೂಜಾರ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿ ಸುತ್ತಾ…
ವಿಶೇಷಚೇತನರಿಗಾಗಿ ಮೈಸೂರಲ್ಲಿ ಪಾರಂಪರಿಕ ನಡಿಗೆ
August 8, 2019ಮೈಸೂರು,ಆ.7(ಆರ್ಕೆ)-ಮೈಸೂ ರಲ್ಲಿ ಇಂದು ವಿಕಲಚೇತನ ವಿದ್ಯಾರ್ಥಿ ಗಳಿಗಾಗಿ ಪಾರಂಪರಿಕ ನಡಿಗೆಯನ್ನು ಆಯೋಜಿಸಲಾಗಿತ್ತು. ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಮಹಾಜನ ಪ್ರಥಮ ದರ್ಜೆ ಕಾಲೇಜಿನ ರೋಟರ್ಯಾಕ್ಟ್ ಕ್ಲಬ್ ಸಹಯೋಗದೊಂದಿಗೆ ಇದೇ ಪ್ರಥಮ ಬಾರಿ ಕಿವುಡ ಮತ್ತು ಮೂಗ ಶಾಲೆಯ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಟ್ಟಡಗಳ ಹಿನ್ನೆಲೆ ತಿಳಿಸಲು ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ಪುರಭವನದ ಬಳಿ ಆರಂಭವಾದ ನಡಿಗೆಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ 7.45…
ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಲು ಆಗ್ರಹ
August 8, 2019ಮೈಸೂರು,ಆ.7(ಆರ್ಕೆಬಿ)-ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಬುಧವಾರ ನಡೆದ ಎಐಡಿಎಸ್ಓ 5ನೇ ಮೈಸೂರು ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ ಸರ್ಕಾರವನ್ನು ಆಗ್ರಹಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಒ ನ ಸದಸ್ಯರು, ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು. ಅವಶ್ಯಕತೆಗೆ ತಕ್ಕಂತೆ ಸರ್ಕಾರಿ ಶಾಲೆಗಳನ್ನು ತೆರೆಯಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅಗತ್ಯವಿರುವಷ್ಟು ಖಾಯಂ ಸಿಬ್ಬಂದಿಯನ್ನು ಒದಗಿಸಿ, ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕು. ವಿದ್ಯಾರ್ಥಿ…
ಕಲಾಮಂದಿರಕ್ಕೆ ಅತ್ಯಾಧುನಿಕ ಸ್ಪರ್ಶ ನೀಡಲು ನಿರ್ಧಾರ
August 8, 2019ಮೈಸೂರು,ಆ.7(ಎಂಕೆ)- ಮೈಸೂರಿನ ಕರ್ನಾಟಕ ಕಲಾಮಂದಿರಕ್ಕೆ ಅತ್ಯಾಧುನಿಕ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಲಾಮಂದಿರ ನಿರ್ವಹಣಾ ಸಮಿತಿ ಸಭೆ ಯಲ್ಲಿ 2019-20ನೇ ಸಾಲಿನ ಸಿಎಸ್ಆರ್ ಯೋಜನೆಯಡಿ 80 ಲಕ್ಷ ರೂ. ವೆಚ್ಚದಲ್ಲಿ ಕಲಾಮಂದಿರ ಹಾಗೂ ಕಿರುರಂಗಮಂದಿರದ ಒಳ ಹಾಗೂ ಹೊರಾಂಗಣವನ್ನು ಮತ್ತಷ್ಟು ವಿನ್ಯಾಸಗೊಳಿಸುವುದರೊಂದಿಗೆ ಶೌಚಾ ಲಯಗಳ ಉನ್ನತೀಕರಣ, ವಿಐಪಿ ಆಸನ ವ್ಯವಸ್ಥೆ, ಕಿರುರಂಗಮಂದಿರದಲ್ಲಿ ಹೆಚ್ಚು ಆಸನಗಳ ಜೊತೆಗೆ ಹವಾನಿಯಂತ್ರಣ (ಎಸಿ) ವ್ಯವಸ್ಥೆ, ಸಿಸಿಟಿವಿ, ಪ್ರತ್ಯೇಕ ಜನರೇಟರ್ ಅಳವಡಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ವೇದಿಕೆಗೆ ಸಾಗುವ ಮಾರ್ಗದಲ್ಲಿ…










