ಬೆಂಗಳೂರು, ಜು. 26-ಆದಾಯ ತೆರಿಗೆಗೆ ಸಂಬಂಧಿಸಿದಂತೆ ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಹಾಸನ ಸಂಸದ ಅವರ ಆಯ್ಕೆಯನ್ನು ಅಸಿಂಧುಗೊಳಿಸ ಬೇಕು ಎಂದು ಕೋರಿ ಬಿಜೆಪಿ ಅಭ್ಯರ್ಥಿ ಎ.ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ…
ಐಎಂಎ ಹಗರಣ: ಜಿಲ್ಲಾಧಿಕಾರಿ ಸೇರಿ ಮೂವರಿಗೆ ಜಾಮೀನು
July 27, 2019ಬೆಂಗಳೂರು,ಜು.26: ಐಎಂಎ ಹಗರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಪ್ರಮುಖ ಸರ್ಕಾರಿ ಅಧಿಕಾರಿಗಳಿಗೆ ಇಂದು ಜಾಮೀನು ದೊರೆತಿದೆ. ಇದರಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳೂ ಸೇರಿದ್ದಾರೆ. ಐಎಂಎ ಪ್ರಕರಣದಲ್ಲಿ ಒಂದೂವರೆ ಕೋಟಿ ಲಂಚ ಸ್ವೀಕರಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಬೆಂಗಳೂರು ನಗರ ಡಿಸಿ ವಿಜಯ್ ಶಂಕರ್, 4 ಕೋಟಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಸಿ ನಾಗರಾಜು ಮತ್ತು ಮತ್ತೊಬ್ಬ ಅಧಿಕಾರಿಗೆ ಜಾಮೀನು ದೊರೆತಿದೆ. ಆದರೆ ಜಾಮೀನು ನೀಡುವಂತೆ ಅರ್ಜಿ ಹಾಕಿದ್ದ ಐಎಂಎಯ ಕ್ಲರ್ಕ್ ಹನೀಫ್ ಅಫ್ಜರ್ ಅವರಿಗೆ…
ಅತೃಪ್ತರ ಮೇಲೆ ಸ್ಪೀಕರ್ ಮೊದಲ ಬಾಂಬ್: ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ,ಕೆಪಿಜೆಪಿಯ ಆರ್.ಶಂಕರ್
July 26, 2019ಬೆಂಗಳೂರು, ಜು.25(ಎಸಿಪಿ)- ರಾಣೆ ಬೆನ್ನೂರು ಕ್ಷೇತ್ರದಿಂದ ಕರ್ನಾಟಕ ಪ್ರಜ್ಞಾ ವಂತ ಜನತಾ ಪಾರ್ಟಿ (ಕೆಪಿಜೆಪಿ) ಶಾಸಕರಾಗಿ ಆಯ್ಕೆಯಾಗಿದ್ದ ಆರ್. ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಮತ್ತು ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ವಿಧಾನಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ವಿಧಾನ ಸಭಾಧ್ಯಕ್ಷ ರಮೇಶ್ಕುಮಾರ್ ಇಂದು ತೀರ್ಪು ನೀಡಿದ್ದಾರೆ. ಇಂದು ಸಂಜೆ ತುರ್ತು ಸುದ್ದಿಗೋಷ್ಠಿಯಲ್ಲಿ ತಮ್ಮ ತೀರ್ಪನ್ನು ಪ್ರಕಟಿಸಿದ ಅವರು, ಇನ್ನುಳಿದಂತೆ ಜೆಡಿಎಸ್ನ ಮೂವರು ಹಾಗೂ ಕಾಂಗ್ರೆಸ್ನ 10 ಶಾಸಕರ ರಾಜೀನಾಮೆ ಹಾಗೂ ಅನರ್ಹತೆ…
ಮಧ್ಯಂತರ ಚುನಾವಣೆಗೆಸಿದ್ಧರಾಗಿ: ಅಮಿತ್ ಷಾ
July 26, 2019ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚನೆ ಅನುಮಾನ. ರಾಷ್ಟ್ರಪತಿ ಆಡಳಿತ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಸರ್ಕಾರ ರಚನೆಗೆ ನಿಮ್ಮ ಬಳಿ ಮ್ಯಾಜಿಕ್ ಸಂಖ್ಯೆ ಇಲ್ಲ. ಅಲ್ಲಿನ ವಿಧಾನಸಭಾಧ್ಯಕ್ಷರು ಅತೃಪ್ತ 15 ಶಾಸಕರ ರಾಜೀನಾಮೆ ಇತ್ಯರ್ಥಗೊಳ್ಳುವವರೆಗೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಬಗ್ಗೆ…
ಜು.30ರೊಳಗೆ ಸರ್ಕಾರ ರಚಿಸದಿದ್ದರೆ ಮಧ್ಯಂತರ ಚುನಾವಣೆ ಖಚಿತ
July 26, 2019ಬೆಂಗಳೂರು, ಜು.25- ಜುಲೈ 30 ರೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡದಿದ್ದರೆ ಮಧ್ಯಂತರ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದಾರೆ. ಆಪರೇಷನ್ ಕಮಲ ದಿಂದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಇಂದು ಮಧ್ಯಾಹ್ನ ಕಾಂಗ್ರೆಸ್ ಮುಖಂಡರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಬಿ.ಕೆ.ಹರಿಪ್ರಸಾದ್, ವೆಂಕಟರಮಣಯ್ಯ, ಮಾಜಿ ಸಂಸದ ಧ್ರುವನಾರಾಯಣ್, ಕೃಷ್ಣಪ್ಪ,…
ಕುಮಾರಸ್ವಾಮಿ ಸಂಪರ್ಕಿಸಿದ ಬಿಜೆಪಿ ವರಿಷ್ಠರು
July 26, 2019ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚಿ ಸಲು ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ಬಿಜೆಪಿ ವರಿಷ್ಠರು ಇದೀಗ ಹಂಗಾಮಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ, ನಮ್ಮ ಜೊತೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಪಕ್ಷದ ರಾಷ್ಟ್ರೀಯ ಹಿರಿಯ ನಾಯಕರೊಬ್ಬರು ದೂರವಾಣಿ ಮೂಲಕ ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ, ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಸುಮಾರು 12 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು. ನಿಮ್ಮ ಸರ್ಕಾರವನ್ನು ತೆಗೆಯ ಬೇಕೆಂಬ ಉದ್ದೇಶ ನಮ್ಮದಾಗಿರಲಿಲ್ಲ. ನಮಗೆ ಕಾಂಗ್ರೆಸ್ ಮುಖ್ಯ ಗುರಿಯಾಗಿತ್ತು. ಇದೀಗ ನಮ್ಮ ಗುರಿ…
ಜುಲೈ 31ರ ನಂತರ ಸರ್ಕಾರ ಸ್ತಬ್ಧ
July 26, 2019ಬೆಂಗಳೂರು, ಜು.25(ಕೆಎಂಶಿ)-ಧನ ವಿನಿಯೋಗ ಮಸೂದೆ ಇದೇ 31ರೊಳಗಾಗಿ ಅಂಗೀಕಾರಗೊಳ್ಳದೆ ಇದ್ದರೆ, ಸರ್ಕಾರ ಸ್ತಬ್ಧಗೊಳ್ಳುತ್ತದೆ ಎಂಬ ಆತಂಕವನ್ನು ವಿಧಾನಸಭಾ ಧ್ಯಕ್ಷ ರಮೇಶ್ಕುಮಾರ್ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧನ ವಿನಿಯೋಗ ಮಸೂದೆ ಅಂಗೀಕಾರಗೊಳ್ಳದೆ ಇದ್ದರೆ, ಸರ್ಕಾರಿ ನೌಕರರಿಗೆ ವೇತನ ನೀಡುವುದು ಸೇರಿದಂತೆ ಹಲವಾರು ಕಾರ್ಯಗಳಿಗೆ ಅಡೆತಡೆ ಉಂಟಾಗುತ್ತದೆ. ಯಾವುದೇ ಸರ್ಕಾರ ಬಂದರೂ ಸರಿ ಮೊದಲು ಅಧಿವೇಶನ ಕರೆದು ಧನವಿನಿಯೋಗ ಮಸೂದೆಯನ್ನು ಪಾಸ್ ಮಾಡಿ ಕೊಳ್ಳಬೇಕು ಎಂದು ನಾನು ಸಲಹೆ ನೀಡಿದ್ದೇನೆ. ಈ ರೀತಿಯ ಅನಿವಾರ್ಯ ಪರಿಸ್ಥಿತಿ ಬಂದೊದಗಿರುವುದು ವಿಷಾದನೀಯ…
ಕೆಆರ್ಎಸ್ ಅಣೆಕಟ್ಟೆಗೆ ಟೆಲಿಮೆಟ್ರಿಕ್ವಾಟರ್ ಗೇಜ್ ಅಳವಡಿಕೆ
July 26, 2019ಮೈಸೂರು, ಜು.25(ಆರ್ಕೆ)- ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಗೆ ಟೆಲಿಮೆಟ್ರಿಕ್ ವಾಟರ್ ಗೇಜ್ ಉಪಕರಣ ಅಳವಡಿಸಲಾಗಿದೆ. ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ, ಒಳಹರಿವು ಮತ್ತು ಹೊರ ಹರಿವಿನ ನಿಖರ ಮಾಹಿತಿಯನ್ನು ಅಧಿಕಾರಿ ಗಳು ನವದೆಹಲಿಯಲ್ಲೇ ಕುಳಿತು ಈ ಟೆಲಿ ಮೆಟ್ರಿಕ್ ವಾಟರ್ ಗೇಜ್ ಉಪಕರಣದಿಂದ ಆನ್ಲೈನ್ ಮೂಲಕ ತಿಳಿಯಬಹುದಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಆಂತರಿಕ ಸಮಿತಿ ಸದಸ್ಯರ ನಿಯೋಗವು ಅಣೆಕಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಒಂದು ವಾರದಲ್ಲಿ ಕೆಆರ್ಎಸ್ ಮತ್ತು ಹಾರಂಗಿ ಜಲಾಶಯ ಗಳ…
ಕ್ಷಯ ಮುಕ್ತ ಜಿಲ್ಲೆ ನಿರ್ಮಾಣ; ಆರೋಗ್ಯ ಇಲಾಖೆ ಪಣ
July 26, 2019ಮೈಸೂರು,ಜು.25- ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ (ಆರ್ಎನ್ಟಿಸಿಪಿ) ಕಾರ್ಯಕ್ರಮದಡಿ 2035ರ ವೇಳೆಗೆ ಮೈಸೂರು ಜಿಲ್ಲೆಯನ್ನು `ಕ್ಷಯ ಮುಕ್ತ’ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾ ಗಿದ್ದು, 628 ತಂಡಗಳು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕುತ್ತಿವೆ. ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಯಿಂದಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಜನರು ನಿರ್ಲಕ್ಷಿಸುತ್ತಿದ್ದಾರೆ. ಪರಿಣಾಮ ವರ್ಷದಿಂದ ವರ್ಷಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿ ರುವ ಆರೋಗ್ಯ ಇಲಾಖೆ ಆರಂಭಿಕ ಹಂತ ದಲ್ಲಿಯೇ…
ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ಸಮಿತಿ ಸದಸ್ಯರ ಭೇಟಿ
July 26, 2019ಮೈಸೂರು,ಜೂ.25(ಎಂಟಿವೈ)- ಮೈಸೂರಿನ ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ಸಮಿತಿ ಸದಸ್ಯರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಕಾಲೇಜಿಗೆ ಆಗಮಿಸಿದ ನ್ಯಾಕ್ ಸಮಿತಿಯ ಅಧ್ಯಕ್ಷೆ ಮುಂಗರ್ ವಿಶ್ವ ವಿದ್ಯಾನಿಲ ಯದ ಉಪ ಕುಲಪತಿ ಪ್ರೊ.ಕುಸುಮ ಕುಮಾರಿ, ಸಮಿತಿಯ ಸಂಯೋಜಕಿ ಡೂನ್ ವಿಶ್ವವಿದ್ಯಾನಿಲಯದ ಪ್ರೊ.ಕುಸುಮ ಅರುಣಾಚಲಂ ಮತ್ತು ಸಮಿತಿಯ ಸದಸ್ಯ ಕೇರಳಾದ ಕೋಜಿಕೊಡ್ನ ಫರೂಕ್ ಕಾಲೇಜಿನ ಪ್ರಾಂಶುಪಾಲ ಇ.ಪಿ.ಇಂಬಿಚ್ಚಿಕೋಯ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿ ಆತ್ಮೀಯವಾಗಿ ಬರಮಾಡಿಕೊಂಡಿತು. ಎರಡು ದಿನಗಳ ಕಾಲ ಕಾಲೇಜಿಗೆ ಭೇಟಿ ನೀಡಿದ್ದ ನ್ಯಾಕ್ ಸಮಿತಿ…










