ಮೈಸೂರು, ಜೂ.27(ಪಿಎಂ)- ಹೈಬ್ರಿಡ್ ಮತ್ತು ಕುಲಾಂತರಿ ಬೀಜಗಳಿಗೆ ಬದಲಾಗಿ ನಾಡಿನ ಸಾಂಪ್ರದಾಯಿಕ ತಳಿಗಳಿಗೆ ಉತ್ತೇಜನ ನೀಡುವ ನಿಟ್ಟಿ ನಲ್ಲಿ ಸಹಜ ಸಮೃದ್ಧ ಬಳಗ, ನಬಾರ್ಡ್, ಕೃಷಿ ಇಲಾಖೆ ಸಂಯುಕ್ತಾಶ್ರ ಯದಲ್ಲಿ ಜೂ.28 ರಿಂದ 30ರವರೆಗೆ ಮೂರು ದಿನಗಳ `ಮುಂಗಾರು ಬೀಜ ಮೇಳ’ ಆಯೋಜಿಸಲಾಗಿದೆ. ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಈ ಬೀಜ ಮೇಳ ನಡೆಯಲಿದ್ದು, ರಾಜ್ಯದ 30ಕ್ಕೂ ಹೆಚ್ಚು ಬೀಜ ಸಂರಕ್ಷಕರ ಗುಂಪುಗಳು ಇದರಲ್ಲಿ ಪಾಲ್ಗೊ ಳ್ಳಲಿವೆ. ದೇಸಿ ಭತ್ತದ 600ಕ್ಕೂ ಹೆಚ್ಚ್ಚಿನ ತಳಿಗಳ ಪ್ರದರ್ಶನ ದೊಂದಿಗೆ…
ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
June 28, 2019ಮೈಸೂರು, ಜೂ.27- ಎನ್.ಆರ್ ಮೊಹಲ್ಲಾ ವಿಭಾಗ ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ಜೂ.28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ 66/11 ಕೆವಿ ದೊಡ್ಡ ಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರಗಳಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ಸರಬರಾಜು ವ್ಯತ್ಯಯವಾಗುವುದು. ಈ ಸಂಬಂಧ ರಾಮಾನುಜ ರಸ್ತೆ, ಹೊಸ ಬಂಡಿಕೇರಿ, ಜೆಎಸ್ಎಸ್ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ಸಬರ್ಬ್ ಬಸ್ ನಿಲ್ದಾಣ, ನಜರ್ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತಮುತ್ತ, ಸರ್ಕಾರಿ ಅತಿಥಿಗೃಹ ಸುತ್ತಮುತ್ತ,…
ಬೆಂಗಳೂರಲ್ಲಿ ಮೈಸೂರು ಮೂಲದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಸೆರೆ
June 28, 2019ಮೈಸೂರು, ಜೂ.27(ಆರ್ಕೆ)-ಮಗುವಿಗೆ ಶಾಲೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೈಸೂರು ಮೂಲದ ಸಂಘಟನೆಯೊಂ ದರ ರಾಜ್ಯಾಧ್ಯಕ್ಷನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬುಧ ವಾರ ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಡರ ಹಳ್ಳಿಯಲ್ಲಿರುವ ಡಿ-ಗ್ರೂಪ್ ಲೇಔಟ್ ನಿವಾಸಿ ಯಾದ ಕನ್ನಡ ಸಿರಿ ಸಂಘಟನೆ ರಾಜ್ಯಾ ಧ್ಯಕ್ಷ ಎಂ.ಆನಂದಕುಮಾರ್ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೂಲತಃ ಮೈಸೂರಿನವನಾದ ಆನಂದಕುಮಾರ್, ಕನ್ನಡ ಸಂಘಟನೆ ಕಟ್ಟಿ ಕೊಂಡು ರಾಜ್ಯಾದ್ಯಂತ ಓಡಾಡಿ ಸಾಮಾಜಿಕ ಸೇವಾ ಕಾರ್ಯಗಳ…
ಡಿಸೆಂಬರ್ ಗೆ ದೋಸ್ತಿ ಖತಂ?
June 27, 2019ಬೆಂಗಳೂರು, ಜೂ. 26 (ಕೆಎಂಶಿ)-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಡಿಸೆಂಬರ್ನಲ್ಲಿ ಅಂತ್ಯಗೊಳಿಸಿ, ಮಧ್ಯಂತರ ಚುನಾವಣೆಗೆ ತೆರಳಲು ರಾಜ್ಯ ಪ್ರದೇಶ ಕಾಂಗ್ರೆಸ್ ಮುಂದಾಗಿದೆ. ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್, ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಾಯಕತ್ವದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷ ಸಂಘಟನೆ ಕುರಿತಂತೆ ಇಂದು ನಡೆದ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಪೂರ್ಣ ಅಧಿಕಾರಾವಧಿ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್…
ದೆಹಲಿ, ಕೇರಳ ಮಾದರಿ ರಾಜ್ಯದ ಸರ್ಕಾರಿ ಶಾಲೆ ಅಭಿವೃದ್ಧಿ
June 27, 2019ಬೆಂಗಳೂರು, ಜೂನ್ 26(ಕೆಎಂಶಿ)- ರಾಜ್ಯದ ಸರ್ಕಾರಿ ಶಾಲೆಗಳನ್ನು ದೆಹಲಿ ಹಾಗೂ ಕೇರಳ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಇಲಾಖೆ ಅಧಿಕಾರ ವಹಿಸಿಕೊಂಡ ಎರಡು ದಿನಗಳಲ್ಲೇ ಅಧಿಕಾರಿಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ, ಸುದ್ದಿಗಾರರಿಗೆ ಇಂದು ಮಾಹಿತಿ ನೀಡಿ ದರು. ಎರಡು ರಾಜ್ಯಗಳ ಮಾದರಿ ಶಾಲೆ ಗಳ ಕಾರ್ಯ ವೈಖರಿಯನ್ನು ಪರಿಶೀಲಿ ಸಲು ನಾನೇ ಖುದ್ದಾಗಿ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಶಾಲೆಗಳು ರಾಷ್ಟ್ರಕ್ಕೆ…
ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!
June 27, 2019ಕರೇಗುಡ್ಡ (ರಾಯಚೂರು), ಜೂ. 26-ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ ಅವರ ಮೇಲೆ ಸಿಎಂ ಸಿಟ್ಟಿನಿಂದ ರೊಚ್ಚಿಗೆದ್ದ ಘಟನೆ ಬುಧವಾರ ನಡೆದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ‘ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ…
ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ
June 27, 2019ಕರೀಗುಡ್ಡ: ದೂರದ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಜನೆಯನ್ನು ಇಲ್ಲಿ ಮಾಡಿದರೆ ಏನು ಪ್ರಯೋಜನವಿಲ್ಲ. ಭಜನೆ ಮಾಡಲು ದೆಹಲಿಗೆ ಹೋಗಲು ಬಯಸುವ ವರಿಗೆ ರೈಲಿನಲ್ಲಿ ತಾವೇ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಮಾನ್ವಿ ತಾಲೂಕಿನ ಕರೀಗುಡ್ಡದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಮುಂದೆ ಮೋದಿ ಭಜನೆ ಮಾಡಿದರೆ ಏನಾಗುತ್ತದೆ. ನಿಮಗೆ ಅಷ್ಟೊಂದು ಇಷ್ಟವಿದ್ದರೆ ನೀವೇ ಮೋದಿ ಬಳಿಗೆ ಹೋಗಿ, ಹೋಗಲು ಸಾಧ್ಯವಿಲ್ಲ ಎಂದಾದರೆ ರೈಲು ವ್ಯವಸ್ಥೆ ಮಾಡಿಕೊಡುತ್ತೇನೆ. ಇಲ್ಲವಾದಲ್ಲಿ…
ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ
June 27, 2019ರಾಯಚೂರು: ವೃದ್ಧಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸ ಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯ ಕ್ರಮ ಉದ್ಘಾಟನೆ ಮಾಡಿ ಮಾತನಾ ಡಿದ ಸಿಎಂ ಕುಮಾರಸ್ವಾಮಿ ಅವರು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ. ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600 ಮಾಸಾಶನವನ್ನು 1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರ…
ಮೈಸೂರಲ್ಲಿ ಶಾಲಾ ಮಕ್ಕಳ ಸಾಗಿಸುವ ವಾಹನ ಚಾಲಕರ ಪ್ರತಿಭಟನೆ
June 27, 2019ಮೈಸೂರು: ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ವಿರುದ್ಧ ತಪಾಸಣೆ ಮಾಡುತ್ತಿರುವ ಸಂಚಾರ ಪೊಲೀಸರ ಕ್ರಮ ಖಂಡಿಸಿ 500ಕ್ಕೂ ಹೆಚ್ಚು ಚಾಲಕರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯ ಓವಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಪಘಾತಗಳು ಹಾಗೂ ಸಾವು-ನೋವುಗಳನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಕಳೆದ ಒಂದು ವಾರ ದಿಂದ ಮೈಸೂರು ನಗರದಾದ್ಯಂತ ಕಾರ್ಯಾ ಚರಣೆ ನಡೆಸಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಸಂಖ್ಯೆ ಯಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಆಟೋ ಹಾಗೂ ಮಾರುತಿ ಓಮ್ನಿ…
ಆಟೋಗಳಲ್ಲಿ 5 ಶಾಲಾ ಮಕ್ಕಳಿಗೆ ಮಾತ್ರ ಅವಕಾಶ
June 27, 2019ಮೈಸೂರು: ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಆಟೋರಿಕ್ಷಾ ಮತ್ತು ವ್ಯಾನ್ಗಳ ಚಾಲ ಕರು ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಮಕ್ಕಳನ್ನು ಸುರಕ್ಷಿತ ವಾಗಿ ಕರೆದೊಯ್ಯಬೇಕು. 5ಕ್ಕಿಂತ ಹೆಚ್ಚು ಮಕ್ಕಳನ್ನು ಆಟೋಗಳಲ್ಲಿ ಕರೆದೊಯ್ಯುವಂತಿಲ್ಲ. ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ದು ಕಾನೂನು ಉಲ್ಲಂಘಿಸುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡದ ಜೊತೆಗೆ ಚಾಲಕರ ಚಾಲನಾ ಪರವಾನಗಿ ಪತ್ರವನ್ನು ಅಮಾನತುಗೊಳಿಸಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಆಟೋ ಚಾಲಕರಿಗೆ ಎಚ್ಚರಿಸಿದರು. ಮೈಸೂರು ನಗರ ಪೊಲೀಸ್ ಆಯು ಕ್ತರ…










