ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೊಳ ಗಾದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಇದೀಗ ಅಧಿಕಾರ ಉಳಿಸಿಕೊಳ್ಳಲು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದೆ. ಚುನಾವಣಾ ಫಲಿತಾಂಶ ಪ್ರಕಟ ಗೊಳ್ಳುತ್ತಿದ್ದಂತೆ ಕಾಂಗ್ರೆಸ್ನ ಕೆಲವು ಭಿನ್ನಮತೀಯ ಶಾಸಕರು ಬಿಜೆಪಿಗೆ ವಲಸೆ ಹೋಗಲು ಮುಂದಾಗಿರುವುದನ್ನು ತಪ್ಪಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆ ಜೊತೆಗೆ ಕೆಲವು ಪ್ರಮುಖ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಮಾಡಲಿದ್ದಾರೆ. ಕುಮಾರಸ್ವಾಮಿ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ತಮ್ಮ ಪಕ್ಷದ ಪಾಲಿನ ಎರಡು ಸಚಿವ ಸ್ಥಾನ ಸೇರಿದಂತೆ ಕೆಲವು ಅಧಿ ಕಾರವನ್ನು…
ಸಂಪುಟ ಪುನರ್ರಚನೆ ಇಲ್ಲ, ವಿಸ್ತರಣೆ ಮಾತ್ರ
May 28, 2019ಮೈಸೂರು: ಕಾಂಗ್ರೆಸ್ನ ಯಾವ ಸಚಿವರನ್ನೂ ಸಂಪುಟದಿಂದ ಕೈಬಿಡುವುದಿಲ್ಲ. ಖಾಲಿಯಿರುವ 3 ಸ್ಥಾನವನ್ನಷ್ಟೇ ತುಂಬಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಪುನರ್ರಚನೆ ಮಾಡುವುದಿಲ್ಲ. ಖಾಲಿಯಿರುವ 3 ಸ್ಥಾನ ತುಂಬುವುದಕ್ಕೆ ಕ್ರಮ ಕೈಗೊಳ್ಳಲಾ ಗಿದೆ. ಸಚಿವ ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಸ್ಥಾನ ಹಾಗೂ ಜೆಡಿಎಸ್ ಕೋಟಾದಲ್ಲಿ ಖಾಲಿಯಿರುವ 2 ಸ್ಥಾನವನ್ನು ತುಂಬಲಾಗುತ್ತಿದೆ….
ಮುಕ್ತ ವಿವಿ 2011-12, 2012-13ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ
May 28, 2019ಮೈಸೂರು: ಯುಜಿಸಿ ಮಾನ್ಯತೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮತ್ತೆ ಮಾನ್ಯತೆ ಸಿಕ್ಕಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳು ಮುಗಿ ಬೀಳುತ್ತಿದ್ದಾರೆ. ಅತಂತ್ರ ಸ್ಥಿತಿಯಲ್ಲಿದ್ದ 2011-12, 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸ ಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದ್ದಾರೆ. ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಿಂದ…
ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯದ ಜಲಾಶಯಗಳ ಪರಿಶೀಲನೆ
May 28, 2019ಮೈಸೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಜೂನ್ 4 ರಿಂದ 24 ರವರೆಗೆ ಕಾವೇರಿ ನದಿ ಪಾತ್ರದ ನಾಲ್ಕು ರಾಜ್ಯಗಳ ಅಣೆಕಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು. ಜೂನ್ 4 ಮತ್ತು 5 ರಂದು ಕೃಷ್ಣರಾಜಸಾಗರ ಅಣೆಕಟ್ಟೆ, 7 ರಿಂದ 9 ರವರೆಗೆ ತಮಿಳುನಾಡಿನ ಮೆಟ್ಟೂರು ಜಲಾಶಯ, ಭವಾನಿ ಹಾಗೂ ಅಮರಾವತಿ ಜಲಾಶಯ, ಜೂನ್ 9 ರಿಂದ 10 ರವರೆಗೆ ಪುದುಚೇರಿ ಮತ್ತು ಪಾಂಡಿಚೇರಿ, ಜೂನ್ 17 ರಿಂದ 20 ರವರೆಗೆ…
ಪಾಲಿಕೆ ಅಧಿಕಾರಿಗಳು ವಶಪಡಿಸಿಕೊಂಡ ವಾಹನವೇ ನಾಪತ್ತೆ
May 28, 2019ಮೈಸೂರು: ನಗರ ಪಾಲಿಕೆ ಆವರಣದಲ್ಲಿದ್ದ ವಾಹನವೊಂದು ಇದ್ದಕ್ಕಿದ್ದಂತೆ ನಾಪತ್ತೆ ಯಾಗಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ಮೇಯರ್ ಪುಷ್ಪಲತಾ ಜಗನ್ನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರಪಾಲಿಕೆ ಅನುಮತಿ ಪಡೆಯದೆ ಅನಧಿಕೃತ ವಾಗಿ ವಿದ್ಯುತ್ ಕಂಬಗಳಿಗೆ ಟೆಲಿಕಾಂ ನೆಟ್ವರ್ಕ್ ಕೇಬಲ್ ಅಳವಡಿಸುತ್ತಿದ್ದ ಆರೋಪದಡಿ ಏ.30ರಂದು 4ನೇ ವಾರ್ಡ್ನಲ್ಲಿ ಕೇಬಲ್ ಸಹಿತ ವಶಪಡಿಸಿಕೊಳ್ಳ ಲಾಗಿದ್ದ ಜೀಪ್ ಮಾದರಿ ಬೊಲೆರೋ ವಾಹನ 3 ದಿನಗಳ ಹಿಂದೆ ನಾಪತ್ತೆಯಾಗಿದೆ. ವಲಯ ಕಚೇರಿ 5ರ ಸಹಾಯಕ ಆಯುಕ್ತ ಮಹೇಶ್,…
ಭಗವಂತನ ಧ್ಯಾನದಿಂದ ಮಾನಸಿಕ ನೆಮ್ಮದಿ
May 28, 2019ಮೈಸೂರು: ಭಗವಂತನ ಧ್ಯಾನದಿಂದ ಮಾನಸಿಕ ನೆಮ್ಮದಿ ಪಡೆದುಕೊಳ್ಳಬಹುದು. ಆದ್ದರಿಂದ ಪ್ರತಿ ಯೊಬ್ಬರೂ ಮಾನಸಿಕ ನೆಮ್ಮದಿಗಾಗಿ ಶ್ರೀ ಕೃಷ್ಣದೇವರನ್ನು ಪ್ರಾರ್ಥಿಸೋಣ ಎಂದು ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು. ಮೈಸೂರು ಸರಸ್ವತಿಪುರಂ ಶ್ರೀಕೃಷ್ಣ ಧಾಮ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ ರಜತ ಮಹೋತ್ಸವ ಸಂಭ್ರ ಮದ 3ನೇ ದಿನದ ವಿವಿಧ ಕ್ಷೇತ್ರದ ಸಾಧಕ ರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ 25 ವರ್ಷಗಳ ಹಿಂದೆ ಕರಾ ವಳಿಯ ಶ್ರೀ ಕೃಷ್ಣ ಭಕ್ತರು…
ಗಂಡು ಮಗುವಿಗೆ ಜನ್ಮ ನೀಡಿ ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ ಮೊಮ್ಮಗಳು ಸಾವು
May 28, 2019ಮೈಸೂರು: ಕೇರಳದ ಮಾಜಿ ರಾಜ್ಯಪಾಲ ಬಿ. ರಾಚಯ್ಯನವರ ಮೊಮ್ಮಗಳು ಹಾಗೂ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿಯವರ ಸಹೋದರಿಯ ಪುತ್ರಿ ಸುಹಾ ಸಿನಿ (30) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ನಿವೃತ್ತ ಕೆಎಎಸ್ ಅಧಿಕಾರಿ ಪುಟ್ಟಮಾದಯ್ಯ ಮತ್ತು ಶ್ರೀಮತಿ ಉಮಾ ದಂಪತಿಯ ಪುತ್ರಿಯಾದ ಇವರನ್ನು ಚೊಚ್ಚಲ ಹೆರಿಗೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಂದರವಾದ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಸುಹಾಸಿನಿ ಅವರು ಮೃತಪಟ್ಟಿದ್ದಾರೆ. ಮಗು ಆರೋಗ್ಯವಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಇಂದು…
ದೇವರಾಜ ಅರಸು ರಸ್ತೆಯಲ್ಲಿ ವಾಹನ ನಿಲುಗಡೆ ಸಮಸ್ಯೆ ಸಂಬಂಧ ಪೊಲೀಸ್ ಕಮೀಷ್ನರ್ ಮಹತ್ವದ ಸಭೆ
May 28, 2019ಮೈಸೂರು: ಮೈಸೂರಿನ ದೇವರಾಜ ಅರಸು ರಸ್ತೆ ಯಲ್ಲಿ ಉಂಟಾಗಿರುವ ವಾಹನ ನಿಲುಗಡೆ ಸಮಸ್ಯೆ ನಿವಾರಣೆಗೆ ಪೊಲೀಸರು ಹೊಸ ತಂತ್ರ ಅನುಸರಿಸಲು ಮುಂದಾಗಿದ್ದಾರೆ. ಈ ಸಂಬಂಧ ನಜರ್ಬಾದ್ನ ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂ ಗಣದಲ್ಲಿ ಇಂದು ಸಂಚಾರ ವಿಭಾಗದ ಎಸಿಪಿ ಜಿ.ಎನ್. ಮೋಹನ್, ಸಂಚಾರ ಠಾಣೆ ಇನ್ಸ್ಪೆಕ್ಟರ್ಸ್ ಹಾಗೂ ದೇವರಾಜ ಠಾಣೆ ಇನ್ಸ್ಪೆಕ್ಟರ್ಗಳೊಂದಿಗೆ ಸಭೆ ನಡೆ ಸಿದ ಪೊಲೀಸ್ ಆಯುಕ್ತ ಕೆ.ಟಿ. ಬಾಲ ಕೃಷ್ಣ ಅವರು, ಟ್ರಾಫಿಕ್ ಸಮಸ್ಯೆ ಬಗೆಹರಿ ಸಲು ಅನುಸರಿಸುವ ಹೊಸ ತಂತ್ರ ಕುರಿತು…
ಅಪಘಾತದಲ್ಲಿ ಗಾಯಗೊಂಡಿದ್ದ ಪೈಲ್ವಾನ್ ಪ್ರದೀಪ್ ಸಾವು
May 28, 2019ಮೈಸೂರು: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಆದರ್ಶ ಬಡಾವಣೆ ನಿವಾಸಿ ಪೈಲ್ವಾನ್ ಪ್ರದೀಪ್ ಅಲಿಯಾಸ್ ಪಲ್ಲಿ(36) ಮೃತಪಟ್ಟವ ರಾಗಿದ್ದು, ಕಳೆದ ಶನಿವಾರ ರಾತ್ರಿ ಶ್ರೀರಂಗಪಟ್ಟಣದಲ್ಲಿ ಮದುವೆ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ರಿಂಗ್ ರೋಡ್ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು, ಪತ್ನಿ ದ್ರಾಕ್ಷಾ ಯಿಣಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ…
ಮರು ಮೌಲ್ಯಮಾಪನದಿಂದ ಎಸ್ಎಸ್ಎಲ್ಸಿಯಲ್ಲಿ ಹೆಚ್ಚಾದ 8 ಅಂಕ
May 28, 2019ಮೈಸೂರು: ಮರು ಮೌಲ್ಯಮಾಪನದಿಂದಾಗಿ ಮೈಸೂರಿನ ವಿದ್ಯಾರ್ಥಿ ಯೊಬ್ಬಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8 ಹೆಚ್ಚುವರಿ ಅಂಕ ಲಭಿಸಿದೆ. ಫಲಿತಾಂಶ ಪ್ರಕಟವಾದಾಗ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿನಿ ಮಂದಾರ ಜಗದೀಶ್, ಕನ್ನಡದಲ್ಲಿ 129, ಇಂಗ್ಲಿಷ್ ಹಾಗೂ ಗಣಿತದಲ್ಲಿ ಶೇ.100, ಕನ್ನಡ ಹಾಗೂ ವಿಜ್ಞಾನದಲ್ಲಿ ತಲಾ 99, ಸಮಾಜ ವಿಜ್ಞಾನದಲ್ಲಿ 89 ಅಂಕ ಬಂದಿತ್ತು. ಅತೀ ಕಡಿಮೆ ಅಂಕ ಬಂದಿದ್ದ ಸಮಾಜ ವಿಜ್ಞಾನ ಉತ್ತರ ಪತ್ರಿಕೆಯ ಫೋಟೋ ಪ್ರತಿ ತರಿಸಿಕೊಂಡು, ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಮರು ಮೌಲ್ಯ ಮಾಪನದ…










