ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ಮಕಾಡೆ ಮಲಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಂಸದ ಜಿ.ಎಸ್. ಬಸವ ರಾಜು ವಿರುದ್ಧ ಸೋಲನನುಭವಿಸಿದ್ದಾರೆ, ಆರಂಭಿಕ ಎಣಿಕೆ ಪ್ರಕ್ರಿಯೆಯಲ್ಲಿ ಮುನ್ನಡೆ ಸಾಧಿಸಿದ್ದ ದೇವೇಗೌಡರು ನಂತರ ನಿರಂತರ ಹಿನ್ನಡೆಗೆ ಬಂದು ಸೋಲನನುಭವಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಒಂದು ಬಾರಿಯೂ ಮುನ್ನಡೆ ಸಾಧಿಸದೇ ಎದುರಾಳಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ವಿರುದ್ಧ…
ಜನತಾ ಜನಾರ್ದನರ ವಿಜಯ: ಮೋದಿ
May 24, 2019ನವದೆಹಲಿ: ಪ್ರಜಾಪ್ರಭುತ್ವದ ಈ ಹಬ್ಬ ಭಾರತ ಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೇ ಉತ್ತಮ ಮಾದರಿ. ಇಂಥದೊಂದು ಜನಸಮುದಾಯದ ಹಬ್ಬವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಜನತಾ ಜನಾರ್ದನರಿಗೆ ನಮೋ ನಮಃ. ಇದು ನಿಜವಾಗಿ ಜನತಾ ಜನಾರ್ದನರ ವಿಜಯ, ಇದು ಲೋಕತಂತ್ರದ ಜಯ… ಅಭೂತಪೂರ್ವ ಗೆಲುವಿನಿಂದ ಹರ್ಷಚಿತ್ತರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಹಾಗೂ ಎನ್ಡಿಎ ಮೈತ್ರಿಕೂಟದ ಗೆಲುವನ್ನು ಹೀಗೆ ಬಹಳ ವೈಶಿಷ್ಟ್ಯಪೂರ್ಣವಾಗಿ ಬಣ್ಣಿಸಿದರು. ನಮ್ಮ ಈ ವಿಜಯೋತ್ಸವದಲ್ಲಿ ಭಾಗಿಯಾಗಲೆಂದೇ ವರುಣ ಮಳೆ ಸುರಿಸುತ್ತಿದ್ದಾನೆ ಎಂದರು. ಲೋಕಸಭಾ ಚುನಾವಣೆಯ ವಿಜಯೋತ್ಸವವನ್ನು ಗುರುವಾರ…
ಮೈಸೂರು-ಕೊಡಗಿನಿಂದ ಪ್ರತಾಪ್ ಸಿಂಹ, ಮಂಡ್ಯದಿಂದ ಸುಮಲತಾ ಅಂಬರೀಶ್, ಚಾ.ನಗರದಿಂದ ಶ್ರೀನಿವಾಸಪ್ರಸಾದ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಜಯಭೇರಿ
May 24, 2019ಮೈಸೂರು: ಮೈಸೂರು-ಕೊಡಗು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಕ್ಷೇತ್ರಗಳ ಪೈಕಿ ಬಿಜೆಪಿ 2 ಸ್ಥಾನಗಳನ್ನು ಪಡೆದಿದ್ದರೆ, ಜೆಡಿಎಸ್ 1 ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಮತ್ತೊಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ಪ್ರತಾಪ್ ಸಿಂಹ ಭಾರೀ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಪುನರಾಯ್ಕೆ ಆಗಿದ್ದಾರೆ. ಈ ಕ್ಷೇತ್ರದಲ್ಲಿ ಚಲಾವಣೆ ಯಾದ 13,18,103 ಮತಗಳ ಪೈಕಿ ಪ್ರತಾಪ್ ಸಿಂಹ 6,88,974 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ…
ಮೋದಿ, ಅಮಿತ್ ಶಾ ದಾಖಲೆ ಅಂತರದ ಗೆಲುವು
May 24, 2019ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮ ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೋದಿ ಅವರು ಪ್ರತಿಸ್ಪರ್ಧಿ ಎಸ್ಪಿ ಹಾಗೂ ಬಿಎಸ್ಪಿ ಮೈತ್ರಿ ಕೂಟದ ಶಾಲಿನಿ ಯಾದವ್ ವಿರುದ್ಧ 4,79,505 ಮತಗಳ ಭಾರೀ ಅಂತರದಿಂದ ಜಯ ಪಡೆದಿದ್ದಾರೆ. ಮೋದಿಗೆ 6,74,664 ಮತ ದಕ್ಕಿದ್ದರೆ, ಶಾಲಿನಿಗೆ ಕೇವಲ 1,95,159 ಮತ ಪಡೆದಿದ್ದಾರೆ. ಇನ್ನು ಗುಜರಾತ್ನ ಗಾಂಧಿನಗರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…
ಅಪ್ಪ, ಮಕ್ಕಳು ಸೇರಿ ಕಾಂಗ್ರೆಸ್ ಹೆಸ್ರಿಲ್ಲದಂತೆ ಮಾಡ್ತಾರೆ…!
May 24, 2019ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಬೆನ್ನಲ್ಲೇ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್. ಯಡಿಯೂರಪ್ಪ ಅವರು ಈ ಹಿಂದೆ ಕಲಾಪದಲ್ಲಿ ಹೇಳಿದ ಭವಿಷ್ಯದ ವಿಡಿಯೋ ವೈರಲ್ ಆಗಿದೆ. ಕಲಾಪದ ವೇಳೆ ಮಾತನಾಡಿದ ಬಿಎಸ್ವೈ, ಶಿವಕುಮಾರ್ ಅವರೇ ನೀವು ನಾಳೆ ಪಶ್ಚತ್ತಾಪಪಡುವವರಿದ್ದೀರಿ. ಯಾವುದೋ ಮಾಡಬಾರದಂತಹ ಅಕ್ಷಮ್ಯ ಅಪರಾಧ ಮಾಡಿ ಎಲ್ಲರನ್ನು ರಕ್ಷಣೆ ಮಾಡಿ ಈ ನಾಡಿನ ಜನರ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡಿದಂತಹ ವ್ಯಕ್ತಿಯನ್ನು ಮುಖ್ಯ ಮಂತ್ರಿಯನ್ನಾಗಿ ಕೂರಿಸಲು ನೀವು ರಕ್ಷಣೆ ಕೊಟ್ಟಿದ್ದೀರಿ. ಇದರ…
ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ, ಮೋದಿಗೆ ಅಭಿನಂದನೆ: ಸಿಎಂ ಕುಮಾರಸ್ವಾಮಿ
May 24, 2019ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಿನ್ನಡೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಫಲಿತಾಂಶ ಅನಿರೀಕ್ಷಿತ ಎಂದಿದ್ದಾರೆ. ಈ ಫಲಿತಾಂಶ ವನ್ನು ಗೌರವಿಸುತ್ತೇನೆ, ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ. ರಾಜ್ಯದ 28 ಲೋಕಸಭಾ ಹಾಗೂ ಕುಂದಗೋಳ, ಚಿಂಚೋಳಿ ಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಶುಭಾಶಯ ಕೋರಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು-ಸೋಲುಗಳನ್ನು ಕಂಡಿದೆ….
ಎಣಿಕಾ ಕೇಂದ್ರದತ್ತ ಸುಳಿಯದ ಜೆಡಿಎಸ್, ಮಿತ್ರ ಪಕ್ಷದೆಡೆಗಿನ ಮುನಿಸು ಮತ್ತೆ ಬಹಿರಂಗ
May 24, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ವೇಳೆ ಮೈತ್ರಿ ಪಕ್ಷವಾದ ಜೆಡಿಎಸ್ ಮತ ಎಣಿಕಾ ಕೇಂದ್ರದಿಂದ ದೂರ ಉಳಿದಿತ್ತು. ಚುನಾವಣೆಗೆ ಮುನ್ನವೇ ಮೈತ್ರಿಯನ್ನು ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಒಪ್ಪಲು ನಿರಾಕರಿಸಿದ್ದ ಜೆಡಿಎಸ್ ಎರಡೂ ಪಕ್ಷಗಳ ವರಿಷ್ಠರ ಸೂಚನೆ ಮೇರೆಗೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೇಲ್ನೋಟಕ್ಕೆ ಒಗ್ಗಟ್ಟಿನ ಮಂತ್ರ ಜಪಿಸಿತ್ತು. ಬಳಿಕ ಎರಡೂ ಪಕ್ಷಗಳ ಮುಖಂಡರು ಜಂಟಿಯಾಗಿ ಸಭೆ, ಸಮಾರಂಭ ನಡೆಸಿ ಪ್ರಚಾರ ಮಾಡಿದ್ದರು. ಅದರಲ್ಲಿಯೂ ವೈಮನಸ್ಸನ್ನು ದೂರ ಸರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ…
ಸದ್ದು ಗದ್ದಲವಿಲ್ಲದೇ ವಧು-ವರರು ಸಪ್ತಪದಿ ತುಳಿದರು!
May 24, 2019ಮೈಸೂರು: ಮದುವೆ ಎಂದರೆ ಸಾಕು, ಸಂಭ್ರಮ-ಸಡಗರ ಕಣ್ಮುಂದೆ ತೆರೆದುಕೊಳ್ಳುತ್ತದೆ. ಆದರೆ ಆ ವಿವಾಹ ಮಹೋತ್ಸವದಲ್ಲಿ ಇರಬೇಕಾದಷ್ಟು ಸಂಭ್ರಮವೇ ಇರಲಿಲ್ಲ. ಸದ್ದು ಗದ್ದಲವಿಲ್ಲದೇ ವಧು-ವರರು ಸಪ್ತ ಪದಿ ತುಳಿದರು. ಹೌದು, ಪೊಲೀಸ್ ಬಿಗಿ ಬಂದೋಬಸ್ತ್ ಹಿನ್ನೆಲೆಯಲ್ಲಿ ಆ ವಿವಾಹ ಮಹೋತ್ಸವದಲ್ಲಿ ಮದುವೆ ಸಂಭ್ರ ಮವೇ ಮರೆಯಾಗಿತ್ತು! ಅರೇ ಮದುವೆ ಗೇಕೆ? ಅಷ್ಟು ಬಿಗಿ ಪೊಲೀಸ್ ಬಂದೋ ಬಸ್ತ್ ಎಂದು ಅಚ್ಚರಿಗೊಳ್ಳಬೇಡಿ. ಇದು ಮತ ಎಣಿಕೆಯ ಎಫೆಕ್ಟ್! ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಕಲ್ಪಿಸಿದ್ದ ಪೊಲೀಸ್ ಬಂದೋಬಸ್ತ್…
ಬಿಜೆಪಿ ಜಯಭೇರಿ: ಶಾಸಕ ರಾಮದಾಸ್ ಕೃತಜ್ಞತೆ
May 24, 2019ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಗೆ ಕಾರಣಕರ್ತರಾದವರಿಗೆ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ. ರಾಮದಾಸ್ ಕೃತಜ್ಞತೆ ಸಲ್ಲಿಸಿದ್ದಾರೆ. ಬಿಜೆಪಿಗೆ ಅಭೂತಪೂರ್ವ ಬಹುಮತ ನೀಡುವುದರೊಂದಿಗೆ ಚೌಕಿದಾರ್ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಯಾಗಿ ಭಾರತಾಂಬೆಯ ಸೇವೆ ಮಾಡಲು ಜನ ಆಶೀರ್ವದಿಸಿದ್ದಾರೆ. ವರ್ಷದ ಹಿಂದೆ ಇದೇ ದಿನ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಾಷ್ಟ್ರದ ಅನೇಕ ರಾಜಕೀಯ ನಾಯಕರು ಭಾಗಿಯಾಗಿ `ಮಹಾಘಟಬಂಧನ್’ ರೂಪಿಸಿಕೊಂಡು ಬಿಜೆಪಿ ಮಣಿಸುವ ಸಂಕಲ್ಪ ಮಾಡಿದ್ದರು. ಆದರೆ ಇಂದು ಮೋದಿ ಅಲೆಯಲ್ಲಿ `ಮಹಾ…
ರಾಜಕೀಯ ಆಸಕ್ತರ ತುದಿಗಾಲಲ್ಲಿ ನಿಲ್ಲಿಸಿದ್ದ ಮತ ಎಣಿಕೆ
May 24, 2019ಮೈಸೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಎರಡು ಜಿಲ್ಲೆಗಳ ಜನ ರನ್ನು ಮಾತ್ರವಲ್ಲದೆ, ಚುನಾವಣಾ ಕರ್ತವ್ಯನಿರತ ಸಿಬ್ಬಂದಿಗಳೂ ತುದಿಗಾಲಲ್ಲಿ ನಿಲ್ಲುವಂತೆ ಮಾಡಿತ್ತು. ಮತ ಎಣಿಕೆ ಕೇಂದ್ರದ ಸಿಬ್ಬಂದಿಯೂ ಲೋಕ ಸಮರದ ಫಲಿ ತಾಂಶ ವರದಿ ನೋಡಲು ತವಕಿಸಿದರು. ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ನಡೆದ ಮತ ಎಣಿಕೆ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರ ಎದೆ ಬಡಿತ ಹೆಚ್ಚುವಂತೆ ಮಾಡಿತ್ತು. ವಿವಿಧ ಸಂಸ್ಥೆಗಳು…










