ಮೈಸೂರು: ಡಿಟಿಎಸ್ ಫೌಂಡೇಷನ್ ವತಿಯಿಂದ ರಾಮಾನುಜ ರಸ್ತೆ ಯಲ್ಲಿರುವ ಕಾರ್ಯ ಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಫೌಂಡೇಷನ್ ಅಧ್ಯಕ್ಷ ಡಿ.ಟಿ.ಪ್ರಕಾಶ್ ನೇತೃತ್ವದಲ್ಲಿ ನರೇಂದ್ರ ಮೋದಿಯವರ ಹೆಸರಿನಲ್ಲಿ ವಿಶೇಷಪೂಜೆ ಸಲ್ಲಿಸಿ, ಅವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿ ಎಂದು ಪ್ರಾರ್ಥಿಸಲಾಯಿತು. ಇದೇ ವೇಳೆ ಮಾತನಾಡಿದ ಪ್ರಕಾಶ್, ನರೇಂದ್ರಮೋದಿಯವರ 5 ವರ್ಷದ ಆಡಳಿತ ಜನ ಸಾಮಾನ್ಯರಿಗೆ ಅತ್ಯಂತ ತೃಪ್ತಿದಾಯಕವಾಗಿದ್ದು ಮೋದಿಯವರು ಪ್ರಧಾನ ಮಂತ್ರಿಗಳಾಗಿ ಸುಭದ್ರ ಸರ್ಕಾರ ನೀಡಿ ದೇಶವನ್ನು ಮುನ್ನಡೆಸಿ ನಮ್ಮ ದೇಶವನ್ನು ವಿಶ್ವದಲ್ಲೇ ನಂ.1 ಆಗಿ ಮಾಡುವತ್ತ ಹೆಜ್ಜೆ ಹಾಕಿದ್ದಾರೆ ಅವರಿಗೆ 5…
ಬಡ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ಸಿಗದೆ ಸಂಕಷ್ಟ ಸ್ಥಿತಿ
May 23, 2019ಮೈಸೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ ರಾಜ್ಯ ಸರ್ಕಾ ರದ ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡು ವುದನ್ನು ಸ್ಥಗಿತಗೊಳಿಸಿರುವುದರಿಂದ ಬಡ ರೋಗಿ ಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳ ಪರವಾಗಿ ಮಾತನಾ ಡಿದ ಜಿ.ಎಂ.ರಘು, ಈ ಹಿಂದೆ ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದರೆ ಸುಮಾರು…
ವಾಸ್ತುಗಿಂತ ವಾತಾವರಣಕ್ಕೆ ಅನುಗುಣವಾಗಿ ಕಟ್ಟಡ ನಿರ್ಮಾಣ ಅಗತ್ಯ
May 23, 2019ಮೈಸೂರು: ವಾಸ್ತು ಗಿಂತ ವಾತಾವರಣಕ್ಕೆ ಅನುಗುಣವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುವುದು ಅಗತ್ಯವಾಗಿದೆ ಎಂದು ವಾಸ್ತುಶಿಲ್ಪಿ(ಆರ್ಕಿ ಟೆಕ್ಚರ್) ಜಿ.ಕೆ.ಸುಧೀಂದ್ರ ಹೇಳಿದರು. ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಇನ್ಸ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ಬುಧವಾರ ಹಮ್ಮಿ ಕೊಂಡಿದ್ದ ‘ಇಂದಿನ ದಿನದಲ್ಲಿ ವಾಸ್ತು ಶಿಲ್ಪಿಯ ಪಾತ್ರ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ಇಂಜಿನಿಯರ್, ಕಂಟ್ರಾಕ್ಟರ್, ಬಿಲ್ಡರ್ಗಿಂತ ಮೊದಲು ಆರ್ಕಿಟೆಕ್ಚರ್ನ ಅವಶ್ಯಕತೆ ಹೆಚ್ಚಾಗಿರುತ್ತದೆ. ಏಕೆಂದರೆ ಕಟ್ಟಡದ ವಿನ್ಯಾಸ ಮೊದಲು ನಿರ್ಣಯವಾಗಬೇಕು. ವಿನ್ಯಾಸವಿಲ್ಲದೆ ನಿರ್ಮಾಣ ಕಾರ್ಯ ಪ್ರಾರಂಭಿಸಿದರೆ ಸಾಕಷ್ಟು ಸಮಸ್ಯೆಗಳನ್ನು…
ಲೋಕಸಭಾ ಚುನಾವಣಾ ಮತ ಎಣಿಕೆಗೆ ರಾಜ್ಯದಲ್ಲಿ ಸರ್ವ ಸಿದ್ಧತೆ: ನಾಳೆ ಸಂಜೆ 6ರೊಳಗೆ ಫಲಿತಾಂಶ
May 22, 2019ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೇ 23ರಂದು ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ವಿವಿಪ್ಯಾಟ್ ರಸೀತಿ ಎಣಿಕೆ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆ ಸುಮಾರು ನಾಲ್ಕು ಗಂಟೆಗಳ ಕಾಲ ವಿಳಂಬವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ರಾಜ್ಯದಲ್ಲಿ ಒಟ್ಟು 28 ಮತ ಎಣಿಕಾ ಕೇಂದ್ರಗಳಿದ್ದು, 28 ಚುನಾವಣಾಧಿಕಾರಿಗಳು, 258 ಸಹಾಯಕ ಚುನಾವಣಾಧಿಕಾರಿಗಳು ಸೇರಿ 11 ಸಾವಿರದಷ್ಟು ಚುನಾವಣಾ ಸಿಬ್ಬಂದಿಯನ್ನು ಮತ ಎಣಿಕೆಗೆ ನಿಯೋಜಿಸಲಾಗಿದೆ. 28…
ಇವಿಎಂ ಮತಗಳ ಜೊತೆ ಶೇ.100 ವಿವಿ ಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ ‘ಸುಪ್ರೀಂ’ನಿಂದ ವಜಾ
May 22, 2019ನವದೆಹಲಿ: ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಗುರುವಾರ ಘೋಷಣೆಯಾಗಲಿದ್ದು, ಈ ಮಧ್ಯೆ ಮತ ಎಣಿಕೆ ಸಮಯದಲ್ಲಿ ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆಯಾಗಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ. ತಂತ್ರಜ್ಞರ ಗುಂಪೊಂದು ಚುನಾವಣಾ ಮತ ಎಣಿಕೆ ವೇಳೆ ಶೇ. 100ರಷ್ಟೂ ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆ ಆಗ ಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಛ ನ್ಯಾಯಾಲಯದ ರಜಾ ಕಾಲದ ಪೀಠ ಮನವಿಯನ್ನು…
ಎಣಿಕೆಗೂ ಮುನ್ನ ವಿವಿ ಪ್ಯಾಟ್ ಪರಿಶೀಲನೆಗೆ 22 ಪ್ರತಿಪಕ್ಷಗಳಿಂದ ಆಯೋಗಕ್ಕೆ ಮನವಿ
May 22, 2019ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎಗೆ ಸ್ಪಷ್ಟ ಬಹುಮತ ದೊರೆ ಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ ಮತ್ತಷ್ಟು ಹೆಚ್ಚಾಗಿದ್ದು, ಮಂಗಳವಾರ ಮತ್ತೆ ಚುನಾ ವಣಾ ಆಯೋಗದ ಕದ ತಟ್ಟಿವೆ. ಇಂದು ದೆಹಲಿಯಲ್ಲಿ ಸಭೆ ಸೇರಿದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜ ವಾದಿ ಪಕ್ಷ, ಆಮ್ ಆದ್ಮಿ, ಸಿಪಿಐ-ಸಿಪಿಐ(ಎಂ), ಡಿಎಂಕೆ, ಎನ್ಸಿಪಿ ಸೇರಿ ದಂತೆ 22 ಪ್ರತಿಪಕ್ಷಗಳ ನಾಯಕರು, ಶೇ.50ರಷ್ಟು ವಿವಿ ಪ್ಯಾಟ್ಗಳನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ….
‘ಸುವಿಧಾ’ ಆ್ಯಪ್ನಲ್ಲಿ ಫಲಿತಾಂಶ ಅಪ್ಲೋಡ್
May 22, 2019ಮೈಸೂರು: ನಡೆಯಲಿರುವ ಮೈಸೂರು-ಕೊಡಗು ಲೋಕಸಭಾ ಚುನಾವಣೆ ಮತ ಎಣಿಕೆಯ ಆಯಾ ಸುತ್ತಿನ ಫಲಿತಾಂಶದ ಮಾಹಿತಿಯನ್ನು ‘ಸುವಿಧಾ’ ಸಾಫ್ಟ್ವೇರ್ ಆ್ಯಪ್ನಲ್ಲಿ ಆಗಿಂದಾಗ್ಗೆ ಅಪ್ಲೋಡ್ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಯಾದ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ. ಮೈಸೂರಿನ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕಾ ಕೇಂದ್ರಕ್ಕೆ ಇಂದು ಭೇಟಿ ನೀಡಿ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದ ಅವರು, ಭದ್ರತಾ ವ್ಯವಸ್ಥೆಯನ್ನು ವೀಕ್ಷಿಸಿದರು. ಇದೇ ಮೊದಲ ಬಾರಿ ಭಾರತ ಚುನಾವಣಾ ಆಯೋಗವು…
ದುರಹಂಕಾರಿ ಸಿದ್ದರಾಮಯ್ಯ ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಫೂನ್ ಉಸ್ತುವಾರಿ ವೇಣುಗೋಪಾಲ್: ಶಾಸಕ ರೋಷನ್ ಬೇಗ್
May 22, 2019ಇವರಿಂದ ಕಾಂಗ್ರೆಸ್ ರಾಜ್ಯದಲ್ಲಿ ಉಳಿದೀತೇ… ಬೆಂಗಳೂರು: ದುರಹಂಕಾರಿ ಸಿದ್ದರಾಮಯ್ಯ, ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಬಫೂನ್ ಉಸ್ತುವಾರಿ ವೇಣುಗೋಪಾಲ್ ಇಂತಹವರಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಳಿದೀತೇ ಎಂದು ಆ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವರೂ ಆದ ಹಾಲಿ ಶಾಸಕ ರೋಷನ್ ಬೇಗ್ ತಮ್ಮ ನಾಯಕರ ವಿರುದ್ಧ ಇಂದಿಲ್ಲಿ ಕೆಂಡಕಾರಿದ್ದಾರೆ. ಬೇಗ್ ಹೇಳಿಕೆ ಹೊರಬೀಳುತ್ತಿದ್ದಂತೆ ಕೆಪಿಸಿಸಿ ಅವರಿಗೆ ನೋಟೀಸ್ ನೀಡಿದೆ. ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತ…
ಪ್ರಸಕ್ತ ಶೈಕ್ಷಣಿಕ ವರ್ಷವೇ ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ
May 22, 2019ಬೆಂಗಳೂರು: ಸಾಹಿತಿಗಳು, ಕನ್ನಡ ಹೋರಾಟಗಾರರ ವಿರೋಧದ ನಡುವೆ ಸರ್ಕಾರ ರಾಜ್ಯಾದ್ಯಂತ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭಿಸಲು ಇಂದಿಲ್ಲಿ ಆದೇಶ ಹೊರಡಿಸಿದೆ. ಆಂಗ್ಲ ಮಾಧ್ಯಮ ಶಾಲೆಯ ಜೊತೆ ಜೊತೆಯಲ್ಲೇ 100 ಪಬ್ಲಿಕ್ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳ ಪ್ರಾರಂಭಕ್ಕೂ ಅಧಿಸೂಚನೆ ಹೊರಡಿಸಿದೆ. ಆಂಗ್ಲ ಶಾಲೆಗಳ ಮಾದರಿಯಲ್ಲೇ ಮಕ್ಕಳಿಗೆ ಪೂರ್ವ ಪ್ರಾಥಮಿಕ (ನರ್ಸರಿ) ಶಾಲೆಯೂ ಈ ವರ್ಷದಿಂದಲೇ ಆರಂಭ ವಾಗಲಿದೆ. ರಾಜ್ಯದ 176 ವಿಧಾನಸಭಾ ಕ್ಷೇತ್ರಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತಲಿವೆ….
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಮತ ಎಣಿಕೆಗೆ ಕ್ಷಣಗಣನೆ
May 22, 2019ಮೈಸೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಿಸಲು ಸರ್ವ ರೀತಿ ಸಜ್ಜಾಗಿವೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಮೇ 23ರಂದು ಪಡು ವಾರಹಳ್ಳಿ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿ ನಲ್ಲಿ ನಡೆಯಲಿದ್ದು, ಈಗಾಗಲೇ…










